ನೀಲಕುರಂಜಿ ಪುಷ್ಪೋತ್ಸವ


Team Udayavani, Oct 29, 2017, 6:20 AM IST

flower.jpg

1934ರಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀಯವರು ಸಂಡೂರಿಗೆ ಭೇಟಿ ನೀಡಿದಾಗ ಅಲ್ಲಿನ ನಿಸರ್ಗ ಸೌಂದರ್ಯವನ್ನು ಕಂಡು SEE SANDUR IN SEPTEMBER ಎಂದು ಉದ್ಗರಿಸಿದ್ದರು. ಇದು ನಿಜ. ಗಣಿಗಾರಿಕೆಯ ಅವಿರತ ದಾಳಿಯ ಮಧ್ಯದಲ್ಲೂ ಅಲ್ಲಲ್ಲಿ ಈ ಸೌಂದರ್ಯ ಕಂಗೊಳಿಸುತ್ತದೆ. ಸಂಡೂರು ಬಳ್ಳಾರಿಯ ಕಾಶ್ಮೀರವೇ ಸರಿ. ಈ ದೈವದತ್ತ‌ ಸ್ಕಂದಸಿರಿಯ ನಾಡಿನಲ್ಲಿ ಅಳಿದುಳಿದ ಪರ್ವತ ಶ್ರೇಣಿಯಲ್ಲಿ ಅನೇಕ ಜೀವ ವೈವಿಧ್ಯ ಅಡಗಿದೆ. ಪ್ರಾಚೀನ ಕಾಲದ ಕುಮಾರಸ್ವಾಮಿ ದೇವಸ್ಥಾನವಿರುವ ಶ್ರೀಸ್ವಾಮಿಮಲೈ ಬೆಟ್ಟ ಶ್ರೇಣಿಯಲ್ಲಿ 12 ವರ್ಷಕ್ಕೊಮ್ಮೆ ಅರಳುವ ಅಪರೂಪದ ನೀಲಕುರಂಜಿ ಹೂ ಅರಳಿದೆ. ಬಳ್ಳಾರಿಯ ಜೀವ ವೈವಿಧ್ಯ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಪನಮೇಶಲು ನೇತೃತ್ವದಲ್ಲಿ ಡಾ| ಅರವಿಂದ ಪಾಟೀಲ, ನಿಜಗುಣಸ್ವಾಮಿ, ವಿದ್ಯಾಧರಸ್ವಾಮಿಯವರೊಳಗೊಂಡ ನಮ್ಮ ತಂಡ ಮುಂಜಾನೆ ಎತ್ತರವಾದ ಪ್ರದೇಶಕ್ಕೆ ಹೋದಾಗ ಇಬ್ಬನಿಯ ನಡುವೆ ಫೋಟೋಗ್ರಫಿ ಮಾಡಲು ಸಾಹಸಪಡ ಬೇಕಾಯಿತು. ಸ್ವಲ್ಪ ಹೊತ್ತಿನಲ್ಲಿ ಇಬ್ಬನಿ ಕರಗಿ ಸುಂದರವಾದ ಬೆಟ್ಟ ಶ್ರೇಣಿ ಯಲ್ಲಿ ನೀಲ ಸುಂದರಿಯು ಬೀಸುವ ತಂಗಾಳಿಗೆ ಬಳುಕುತ್ತಾ ನಮ್ಮನ್ನು ಕೈ ಬೀಸಿ ಕರೆದಳು.

ನೀಲಕುರಂಜಿಯು ಹೊರನೋಟಕ್ಕೆ ತೀರಾ ಸಾಮಾನ್ಯವಾದ ಸಣ್ಣ ಕುರುಚಲು ಸಸ್ಯ, 1300ರಿಂದ 2400 ಮೀಟರ್‌ ಎತ್ತರದ ಬೆಟ್ಟ ಶ್ರೇಣಿಗಳ ಕಣಿವೆಗಳಲ್ಲಿ ಬೆಳೆಯುತ್ತದೆ. 30ರಿಂದ 60 ಸೆಂ.ಮೀ. ಎತ್ತರ ಬೆಳೆಯುವ ಈ ಪೊದರು ಸಸ್ಯವನ್ನು ವೈಜ್ಞಾನಿಕವಾಗಿ ಸ್ಟ್ರೋಬಿಲ್ಯಾಂಥಸ್‌ ಕುಂತಿಯಾನ ಎಂದು ಕರೆದು ಅಕಾಂಥೇಸೀ ಸಸ್ಯ ಕುಟುಂಬಕ್ಕೆ ಸೇರಿಸಲಾಗಿದೆ. 

ಲಕ್ಷಾಂತರ ವರ್ಷಗಳಿಂದ ತನ್ನ ಜೈವಿಕ ಗಡಿಯಾರಕ್ಕೆ ಅನುಸಾರವಾಗಿ ಪ್ರತಿ ಹನ್ನೆರಡು ವರ್ಷಗಳಿಗೊಮ್ಮೆ ನೀಲ ಕುರಂಜಿಯ ಹೂ ತಳೆಯುತ್ತಿದ್ದರೂ ನಮಗೆಲ್ಲ ಈ ಅಚ್ಚರಿಯ ವಿವರಗಳು ತಿಳಿದು ಬಂದಿದ್ದು ಕಳೆದ 150 ವರ್ಷಗಳಿಂದೀಚೆಗೆ. ಹತ್ತೂಂಬತ್ತನೇ ಶತಮಾನದಲ್ಲಿ ಗಾರ್ಟೆçಡ್‌ ಡೇನಿಯಲ್‌ ನೀಸ್‌ವಾನ್‌ ಎಸೆನ್ಬೆಕ್‌ ಎಂಬುವರು ಈ ಹೂವನ್ನು ಪ್ರಥಮವಾಗಿ ಗುರುತಿಸಿದರಾದರೂ, ರಾಬರ್ಟ್‌ ವೈಟ್‌ ಮತ್ತು ಕ್ಯಾಪಟ್‌° ಬೆಡ್ಡೋಮ್‌ ಎಂಬ ಸಸ್ಯ ವಿಜ್ಞಾನಿಗಳ ಅವಿರತ ಪರಿಶ್ರಮದಿಂದ 1826ರಿಂದ 1934ರವರೆಗಿನ ನೀಲಕುರಂಜಿಯ ಪುಷ್ಪಧಾರಣೆ ಹತ್ತು ವೈಜ್ಞಾನಿಕ ವಿವರಣೆಗಳನ್ನು “ಬಾಂಬೆ ನ್ಯಾಚುರಲ್‌ ಹಿಸ್ಟರಿ ಸೊಸೈಟಿಯ’ ಸಂಶೋಧನಾ ಪತ್ರಿಕೆಯಲ್ಲಿ ಡಾ| ಮಾರಿಸನ್‌ ಎಂಬ ಸಸ್ಯವಿಜ್ಞಾನಿ ದಾಖಲಿಸಿ¨ªಾರೆ. 

ಕುರಂಜಿ ಹೂವು 250 ಜಾತಿಗಳಲ್ಲಿ ಕಂಡುಬರುತ್ತವೆ. ಅವುಗಳಲ್ಲಿ 46 ಜಾತಿಯವು ಭಾರತದಲ್ಲಿ ಕಂಡು ಬರುತ್ತವೆ. ಸಾಮಾನ್ಯವಾಗಿ 12 ವರ್ಷಗಳಿಗೊಮ್ಮೆ ಅರಳುವ ಈ ಹೂವಿನ ಕೆಲವು ಜಾತಿಗಳು 12 ವರ್ಷಗಳ ಬದಲಿಗೆ 16 ವರ್ಷಗಳಿಗೊಮ್ಮೆ ಅರಳುತ್ತವೆ. ದೀರ್ಘ‌ ಕಾಲಕ್ಕೊಮ್ಮೆ ಅರಳುವ ಈ ತೆರನಾದ ಹೂವುಗಳನ್ನು “ಪಿಲಿಟೆಸಿಯಲ್ಸ್‌’ ಎನ್ನುವರು. ಸಂಡೂರಿನ ಈ ಪರ್ವತ ಶ್ರೇಣಿಯಲ್ಲಿ ಈ ನೀಲಿ ಪುಷ್ಪವು ಈಗ ಅರಳಿ ನಿಂತಿದೆ. ಹೂವುಗಳು ಜೇನ್ನೊಣ, ದುಂಬಿಗಳನ್ನು ಆಕರ್ಷಿಸಿ ಪರಾಗಸ್ಪರ್ಶಗೊಂಡು ತದನಂತರ ಹೂಗಳು ಬಾಡಿ ನೆಲಕ್ಕೆ ಉರುಳುತ್ತವೆ. ಆಗ ತೆನೆಗಳಲ್ಲಿ ಬೀಜಗಳು ಫ‌ಲಿತಗೊಳ್ಳುತ್ತವೆ.  

ನೀಲಕುರಂಜಿ ಯೌವನದ ಪರಿಶುದ್ಧ ಪ್ರೇಮದ ಪ್ರತೀಕವೂ ಆಗಿದೆ, ತಮಿಳು ನಾಡಿನ ನೀಲಗಿರಿ, ಪಳನಿ, ಅಣ್ಣಾಮಲೈಗಳನ್ನು ಒಳಗೊಂಡಂತೆ ನೀಲ ಕುರಿಂಜ ಪ್ರದೇಶದ ಒಡೆಯನೇ ಮುರುಗ, ಬೆಟ್ಟಗಾಡಿನ ತರುಣಿ “ವಲ್ಲಿ’ ಯನ್ನು ಮುರುಗ ವರಿಸಿದಾಗ ನೀಲಕುರಿಂಜಿಯ ಹಾರವನ್ನು ಧರಿಸಿದ್ದನಂತೆ. ಕೊಡೈಕೆನಾಲ್‌ನಲ್ಲಿ ಮುರುಗನೇ ಆರಾಧ್ಯ ದೈವವಾದ “ಕುರಿಂಜಿ ಆಂಡವರ್‌’ ದೇವಸ್ಥಾನವಿದೆ.

– ಶಶಿಧರಸ್ವಾಮಿ ಆರ್‌. ಹಿರೆಮಠ ಕದರಮಂಡಲಗಿ

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.