ಚಂದನವನದಲ್ಲಿ ಪದ್ಮಾವತಿ ಕಲ್ಯಾಣವು


Team Udayavani, Aug 25, 2019, 5:00 AM IST

1

ಕನ್ನಡ ಚಿತ್ರರಂಗದಲ್ಲಿ ಕಳೆದ ಒಂದು ವಾರದಿಂದ ಜೋರಾಗಿ ಹರಿದಾಡುತ್ತಿರುವ ಹೆಸರು ನಟಿ ರಮ್ಯಾ ಅವರದ್ದು. ಹಾಗಾದರೆ, ಕನ್ನಡದಲ್ಲಿ ನಟಿ ರಮ್ಯಾ ಮತ್ತೆ ಯಾವುದಾದ್ರೂ ಹೊಸ ಸಿನಿಮಾ ಮಾಡುತ್ತಿದ್ದಾರಾ ಅಥವಾ ಮತ್ತೆ ರಾಜಕಾರಣದಲ್ಲಿ ಮುನ್ನೆಲೆಗೆ ಬರುತ್ತಾರಾ ಅಂದ್ರೆ ವಿಷಯ ಅದ್ಯಾವುದೂ ಅಲ್ಲ. ರಮ್ಯಾ ಅವರ ಹೆಸರು ಸದ್ಯಕ್ಕೆ ಸದ್ದು ಮಾಡುತ್ತಿರುವುದು ಅವರ ಮದುವೆಯ ವಿಷಯದಲ್ಲಿ.

ಹೌದು, ವಾರದ ಹಿಂದಷ್ಟೇ ಸ್ಯಾಂಡಲ್‌ವುಡ್‌ನ‌ “ಪದ್ಮಾವತಿ’ ರಮ್ಯಾ ಸದ್ದಿಲ್ಲದೆ ಮದುವೆಯಾಗುತ್ತಿದ್ದಾರೆ, ಹಳೆ ಬಾಯ್‌ಫ್ರೆಂಡ್‌ ರಾಫೆಲ್‌ ಜೊತೆಗೆ ರಮ್ಯಾ ಮದುವೆ ನಿಗದಿಯಾಗಿದ್ದು, ದುಬೈನಲ್ಲಿ ಈ ಜೋಡಿ ವಿವಾಹ ನಡೆಯುತ್ತಿದೆ ಎನ್ನುವ ಮಾತು ಹರಡಿದೆ. ಯಾರು ಈ ಸುದ್ದಿ ಹಬ್ಬಿಸಿದರೋ.., ಏನೋ ಗೊತ್ತಿಲ್ಲ. ಆದರೆ, ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಜೋರಾಗಿ ಹರಡಿದರೂ, ರಮ್ಯಾ ಮಾತ್ರ ಈ ಯಾವ ವಿಷಯಕ್ಕೂ ಪ್ರತಿಕ್ರಿಯಿಸಿಲ್ಲ.

ಇನ್ನು ರಮ್ಯಾ ಮದುವೆ ವಿಷಯ ಜೋರಾಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ರಮ್ಯಾ ತಾಯಿ ರಂಜಿತಾ, “ರಮ್ಯಾ ಮದುವೆ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು. ಆಕೆ ಮದುವೆ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಮದುವೆ ಮಾಡುವಾಗ ಎಲ್ಲರಿಗೂ ಹೇಳಿಯೇ ಮಾಡುತ್ತೇವೆ. ನಾವೇನು ಕದ್ದುಮುಚ್ಚಿ ಮದುವೆ ಮಾಡುವುದಿಲ್ಲ. ಈಗ ಸುಮ್ಮನೆ ಸುಳ್ಳು ಸುದ್ದಿ ಹರಿದಾಡುತ್ತಿದೆ ಅಷ್ಟೇ’ ಎಂದು ಖಾರವಾಗಿ ಹೇಳಿದ್ದಾರೆ.

ಅಲ್ಲದೆ, ರಮ್ಯಾ ತಮ್ಮ ಮಾಜಿ ಪ್ರಿಯಕರ ರಾಫೆಲ್‌ ಜೊತೆಗೆಯೇ ಮದುವೆ ಆಗುತ್ತಾರೆ ಎನ್ನುವ ಸುದ್ದಿಯನ್ನು ತಳ್ಳಿ ಹಾಕಿರುವ ರಮ್ಯಾ ಅವರ ತಾಯಿ ರಂಜಿತಾ, “ರಮ್ಯಾ ಹಾಗೂ ರಾಫೆಲ್‌ ಇಬ್ಬರು ಬ್ರೇಕ್‌ ಅಪ್‌ ಮಾಡಿಕೊಂಡಿದ್ದಾರೆ. ಆದರೆ, ಈಗಲೂ ಇಬ್ಬರ ನಡುವೆ ಸ್ನೇಹ ಇದೆ. ರಾಫೆಲ್‌ ಕುಟುಂಬ ಹಾಗೂ ನಾವು ಫ್ಯಾಮಿಲಿ ಫ್ರೆಂಡ್ಸ್ ಆಗಿದ್ದೇವೆ. ಈಗಲೂ, ಫೋನ್‌ ಮಾಡುತ್ತಾ ಇರುತ್ತಾರೆ’ ಎಂದಿದ್ದಾರೆ.

ಇನ್ನು ರಮ್ಯಾ ಹಾಗೂ ರಾಫೆಲ್‌ ನಡುವೆ ಬ್ರೇಕ್‌ಅಪ್‌ ಆಗಿದೆ ಎಂದಿರುವ ರಂಜಿತಾ, ರಮ್ಯಾ ಮತ್ತು ರಾಫೆಲ್‌ ಬೇರೆ ಬೇರೆ ಆಗಲು ಮುಖ್ಯ ಕಾರಣ ಕೆಲಸದ ಒತ್ತಡ ಕಾರಣ ಎಂದಿದ್ದಾರೆ. ಈಗಾಗಲೇ ರಮ್ಯಾ ರಾಜಕೀಯದಲ್ಲಿ, ರಾಫೆಲ್‌ ಬ್ಯುಸಿನೆಸ್‌ನಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ ಪರಸ್ಪರ ಸಮಯ ನೀಡಲಾಗುತ್ತಿಲ್ಲ. ಅಲ್ಲದೆ, ರಮ್ಯಾಗೆ ವಿದೇಶಕ್ಕೆ ಹೋಗಲು ಇಷ್ಟವಿಲ್ಲ, ರಾಫೆಲ್‌ ಭಾರತದಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಇಬ್ಬರು ಸಹಮತದಿಂದ ಬ್ರೇಕ್‌ಅಪ್‌ ಮಾಡಿಕೊಂಡಿದ್ದಾರೆ ಎಂದಿದ್ದಾರೆ.

ಆದರೆ ಇದ್ಯಾವುದರ ಬಗ್ಗೆಯೂ ತುಟಿಬಿಚ್ಚದ ರಮ್ಯಾ, ಸದ್ಯ ದೆಹಲಿಯಲ್ಲಿ ಇದ್ದು, ಸ್ನೇಹಿತರ ಹಾಗೂ ಮಾಧ್ಯಮದವರು ಸೇರಿದಂತೆ ಯಾರ ಜೊತೆಗೆ ಸಂಪರ್ಕದಲ್ಲಿ ಇಲ್ಲ. ಅಲ್ಲದೆ ಮದುವೆಯಾಗು ಎಂದು ಒತ್ತಾಯ ಮಾಡಿದ್ದಕ್ಕೆ ತಾಯಿ ಜೊತೆಗೂ ಮಾತು ಬಿಟ್ಟಿದ್ದಾರೆ ಎನ್ನಲಾಗುತ್ತಿದೆ. ಒಟ್ಟಾರೆ ಸ್ಯಾಂಡಲ್‌ವುಡ್‌ನ‌ಲ್ಲಿ ಪದ್ಮಾವತಿ ಕಲ್ಯಾಣ ಒಂದಷ್ಟು ಸದ್ದು ಮಾಡಿದ್ದಂತೂ ಸುಳ್ಳಲ್ಲ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Holidays: ಹ್ಯಾಪಿ ಹಾಲಿಡೇಸ್‌!

Holidays: ಹ್ಯಾಪಿ ಹಾಲಿಡೇಸ್‌!

5

ಅರಳುವ ಹೂವುಗಳೆ ಆಲಿಸಿರಿ: ಪರ್ಸೆಂಟೇಜಿಗಿಂತ ಬದುಕು ದೊಡ್ಡದು!

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.