ಪಾರುಲ್‌ ಬಟರ್‌ಫ್ಲೈ ಕನಸು


Team Udayavani, Oct 7, 2018, 6:00 AM IST

1.jpg

ಪಾರುಲ್‌ ಯಾದವ್‌ ಅವರ ಸಿನೆಮಾ ಬಿಡುಗಡೆಯಾಗಿ ಎರಡು ವರ್ಷ ಕಳೆದಿದೆ. ಜೆಸ್ಸಿ  ನಂತರ ಪಾರುಲ್‌ ನಟನೆಯ ಯಾವ ಕನ್ನಡ ಚಿತ್ರವೂ ಬಿಡುಗಡೆಯಾಗಿರಲಲ್ಲ. ಈಗ ಪಾರುಲ್‌ ದೊಡ್ಡ ಮಟ್ಟದಲ್ಲಿ ಕನ್ನಡಕ್ಕೆ ಬರಲು ಸಿದ್ಧರಾಗಿದ್ದಾರೆ. ಅದು ಬಟರ್‌ಫ್ಲೈ ಮೂಲಕ. ಪಾರುಲ್‌ ಯಾದವ್‌ ಬಟರ್‌ಫ್ಲೈ ಎಂಬ ಸಿನೆಮಾ ಒಪ್ಪಿಕೊಂಡಿರೋದು ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. ಹಿಂದಿಯಲ್ಲಿ ಯಶಸ್ಸು ಕಂಡ ಕ್ವೀನ್‌ ಚಿತ್ರದ ರೀಮೇಕ್‌ ಇದಾಗಿದ್ದು, ಕಂಗನಾ ಮಾಡಿದ ಪಾತ್ರವನ್ನು ಪಾರುಲ್‌ ಮಾಡುತ್ತಿದ್ದಾರೆ. ಬಟರ್‌ಫ್ಲೈ ಚಿತ್ರದ ಮೇಲೆ ಪಾರುಲ್‌ಗೆ ಸಿಕ್ಕಾಪಟ್ಟೆ ಪ್ರೀತಿ. ಅದಕ್ಕೆ ಎರಡು ಕಾರಣ. ಮೊದಲನೆಯದಾಗಿ ತುಂಬಾ ಭಿನ್ನವಾದ ಪಾತ್ರ ಪಾರುಲ್‌ಗೆ ಸಿಕ್ಕಿರುವುದು ಒಂದಾದರೆ, ಪಾರುಲ್‌ ಈ ಚಿತ್ರದ ಸಹ ನಿರ್ಮಾಪಕಿ ಕೂಡ. ಈ ಎಲ್ಲಾ ಕಾರಣಗಳಿಂದ ಪಾರುಲ್‌ ತಮ್ಮೆಲ್ಲ ಕೆಲಸಗಳನ್ನು ಬದಿಗೊತ್ತಿ ಬಟರ್‌ಫ್ಲೈಗೆ ಸಮಯ ನೀಡಿದ್ದಾರೆ. 

ಎಲ್ಲಾ ಓಕೆ, ಪಾರುಲ್‌ ಬಟರ್‌ಫ್ಲೈ ಬಿಟ್ಟು ಬೇರೆ ಯಾವ ಸಿನೆಮಾವೂ ಯಾಕೆ ಒಪ್ಪಿಕೊಳ್ಳಲಿಲ್ಲ ಎಂದು ನೀವು ಕೇಳಬಹುದು. ಪಾರುಲ್‌ ಈ ಸಿನೆಮಾ ಒಪ್ಪಿಕೊಳ್ಳುವಾಗಲೇ ಒಂದು ವಿಚಾರದಲ್ಲಿ ಪಕ್ಕಾ ಆಗಿದ್ದರಂತೆ. ಅದು ಬೇರೆ ಸಿನೆಮಾಗಳಿಗೆ ತೊಂದರೆ ಆಗಬಾರದೆಂದು. “ನಾನು ಯಾವುದಾದರೂ ಬೇರೆ ಸಿನೆಮಾವನ್ನು ಒಪ್ಪಿಕೊಂಡರೆ ಅವರು ಕೇಳಿದಾಗ ಡೇಟ್ಸ್‌ ಕೊಡಬೇಕು, ಶೂಟಿಂಗ್‌ಗೆ ಹೋಗಬೇಕು. ಇಲ್ಲದಿದ್ದರೆ ಅವರಿಗೆ ತೊಂದರೆಯಾಗುತ್ತದೆ. ನನ್ನಿಂದ ಯಾರೂ ತೊಂದರೆ ಅನುಭವಿಸೋದು ನನಗೆ ಇಷ್ಟವಿಲ್ಲ. ಆ ಕಾರಣದಿಂದಲೇ ಬಟರ್‌ಫ್ಲೈ ಮುಗಿಯುವವರೆಗೆ ಯಾವ ಚಿತ್ರವನ್ನು ಒಪ್ಪಿಕೊಳ್ಳಲಿಲ್ಲ’ ಎನ್ನುವುದು ಪಾರುಲ್‌ ಕೊಡುವ ಸ್ಪಷ್ಟನೆ.

ಬಟರ್‌ಫ್ಲೈ ಚಿತ್ರದಲ್ಲಿ ಪಾರುಲ್‌, ಪಾರ್ವತಿ ಎಂಬ ಪಾತ್ರ ಮಾಡಿದ್ದಾರೆ. ಗೋಕರ್ಣದ ಹುಡುಗಿಯಾಗಿ ಕಾಣಿಸಿಕೊಂಡಿರುವ ಪಾರುಲ್‌ಗೆ, ಈ ಚಿತ್ರ ಅದ್ಭುತ ಅನುಭವ ನೀಡಿತಂತೆ. ಇವತ್ತಿನ ಕಾಲದ ಎಲ್ಲಾ ಹೆಣ್ಣುಮಕ್ಕಳ ಪ್ರತೀಕವಾಗಿ ಪಾರ್ವತಿ ಪಾತ್ರ ಕಾಣಿಸಿಕೊಳ್ಳಲಿದೆ ಎಂಬುದು ಪಾರುಲ್‌ ಮಾತು. ಆರಂಭದಲ್ಲಿ ಈ ಚಿತ್ರವನ್ನು ಕನ್ನಡಕ್ಕೆ ತರುವಾಗ ತಾನು ನಾಯಕಿಯಾಗುತ್ತೇನೆಂಬುದು ಪಾರುಲ್‌ಗೆ ಗೊತ್ತಿರಲಿಲ್ಲವಂತೆ. ಆದರೆ, ನಿರ್ದೇಶಕ ರಮೇಶ್‌ ಅರವಿಂದ್‌ ಹಾಗೂ ತಂಡ ಹೇಳಿದ ಮೇಲೆ ನಟಿಸಲು ಒಪ್ಪಿದರಂತೆ ಪಾರುಲ್‌. ಸದ್ಯ ಪಾರುಲ್‌ ಬಟರ್‌ಫ್ಲೈ ಧ್ಯಾನದಲ್ಲಿದ್ದಾರೆ. ಇದೇ ತಿಂಗಳು ಚಿತ್ರದ ಪೋಸ್ಟರ್‌ ಬಿಡುಗಡೆಯಾಗಲಿದೆ. ಆ ನಂತರ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಲಿದೆ.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.