ಚಂದನವನಕ್ಕೆ ಕಣ್ಸನ್ನೆ ಸುಂದರಿ


Team Udayavani, Jun 2, 2019, 6:00 AM IST

c-2

ಸಾಮಾನ್ಯವಾಗಿ ಯಾವುದೇ ಚಿತ್ರ ಬಿಡುಗಡೆಯಾದ ನಂತರ ಅದರಲ್ಲಿ ಅಭಿನಯಿಸಿರುವ ನಾಯಕ, ನಾಯಕಿ, ನಿರ್ದೇಶಕರು ಜನಪ್ರಿಯವಾಗುವುದು, ಬಹುಬೇಡಿಕೆ ಪಡೆದುಕೊಳ್ಳುವುದು ಚಿತ್ರರಂಗದಲ್ಲಿ ಸರ್ವೇಸಾಮಾನ್ಯ. ಆದರೆ, ಚಿತ್ರದ ಕೇವಲ ಒಂದೇ ಒಂದು ದೃಶ್ಯ ತುಣುಕಿನ ಮೂಲಕವೇ ಸ್ಟಾರ್‌ ಆಗೋದು ಅಂದ್ರೆ ಅದು ಸಾಮಾನ್ಯದ ಮಾತಲ್ಲ. ಹೀಗಿರುವಾಗ, ಕೇವಲ ಕ್ಷಣಮಾತ್ರದ ತನ್ನ ಕಣ್ಸನ್ನೆ ಮೂಲಕವೇ ರಾತ್ರಿ-ಬೆಳಗಾಗುವುದರೊಳಗೆ ಜನಪ್ರಿಯವಾದ ಹುಡುಗಿ ಪ್ರಿಯಾ ಪ್ರಕಾಶ್‌ ವಾರಿಯರ್‌.

ತನ್ನ ಮೊದಲ ಚಿತ್ರ ಒರು ಆಡರ್‌ ಲವ್‌ ಬಿಡುಗಡೆಗೂ ಮೊದಲೇ ಸಾಕಷ್ಟು ಬೇಡಿಕೆ ಪಡೆದುಕೊಂಡ ಪ್ರಿಯಾ ವಾರಿಯರ್‌ ಕನ್ನಡ ಚಿತ್ರದಲ್ಲೂ ಅಭಿನಯಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಒರು ಆಡರ್‌ ಲವ್‌ ಚಿತ್ರ ಹೇಳಿಕೊಳ್ಳುವ ಮಟ್ಟಿಗೆ ಯಶಸ್ವಿಯಾಗದಿದ್ದರೂ, ಪ್ರಿಯಾ ವಾರಿಯರ್‌ಗೆ ಇದ್ದ ಡಿಮ್ಯಾಂಡ್‌ ಅಂತೂ ಕಿಂಚಿತ್ತೂ ಕಡಿಮೆಯಾಗಿಲ್ಲ. ಮಲೆಯಾಳದ ಜೊತೆಗೆ ಹಿಂದಿ, ತಮಿಳು, ತೆಲುಗು, ಕನ್ನಡಕ್ಕೂ ಪ್ರಿಯಾಳನ್ನು ಕರೆತರುವ ಪ್ರಯತ್ನ ನಡೆಯುತ್ತಲೇ ಇದೆ. ಸದ್ಯ ಬಾಲಿವುಡ್‌ನ‌ಲ್ಲಿ ಶ್ರೀದೇವಿ ಬಂಗ್ಲೋ ಚಿತ್ರದಲ್ಲಿ ಅಭಿನಯಿಸುವ ಮೂಲಕ ಅಕೌಂಟ್‌ ಓಪನ್‌ ಮಾಡಿರುವ ಪ್ರಿಯಾ, ತಮಿಳು, ತೆಲುಗು ಚಿತ್ರಗಳಲ್ಲೂ ಅಭಿನಯಿಸಲು ಉತ್ಸುಕರಾಗಿದ್ದಾರೆ ಎನ್ನಲಾಗುತ್ತಿದೆ.

ಇವೆಲ್ಲದರ ನಡುವೆ ಕಳೆದ ಒಂದೂವರೆ ವರ್ಷದಿಂದ ಪ್ರಿಯಾ ವಾರಿಯರ್‌ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ, ಈಗ ಇದಕ್ಕೆ ಪೂರಕ ಎನ್ನುವಂತೆ ಈ ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ಹೊರಬಂದಿದೆ.

ಕನ್ನಡ ಚಿತ್ರರಂಗದಲ್ಲಿ ಸಂಭಾಷಣೆಕಾರರಾಗಿ, ಸಹಸ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ರಘು ಕೋವಿ ಹೊಸ ಸಿನಿಮಾ ಮಾಡುತ್ತಿದ್ದು, ಈ ಚಿತ್ರಕ್ಕೆ ನಾಯಕಿಯಾಗಿ ಪ್ರಿಯಾ ಪ್ರಕಾಶ್‌ ಅವರನ್ನು ಕರೆತರುವ ಪ್ಲಾನ್‌ ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೆ ಪ್ರಿಯಾ ಪ್ರಕಾಶ್‌ ಜೊತೆ ಮಾತುಕತೆ ಕೂಡ ಮಾಡಿರುವ ರಘು ಆ್ಯಂಡ್‌ ಟೀಮ್‌ ಪ್ರಿಯಾಗೆ ಚಿತ್ರದ ಕಥೆ ಮತ್ತು ಪಾತ್ರಗಳ ಬಗ್ಗೆ ವಿವರಿಸಿ¨ªಾರಂತೆ. ಇನ್ನು ಕಥೆ ಕೇಳಿ ಪ್ರಿಯಾ ತುಂಬಾ ಖುಷಿಯಾಗಿದ್ದು, ಶೀಘ್ರದಲ್ಲೆ ಪ್ರಿಯಾ ಕಡೆಯಿಂದ ಗ್ರೀನ್‌ ಸಿಗ್ನಲ್‌ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಅಂದ ಹಾಗೆ, ಲವ್‌ ಸ್ಟೋರಿ ಆಧಾರಿತವಾಗಿರುವ ಈ ಚಿತ್ರದಲ್ಲಿ ಪ್ರಿಯಾ ವಾರಿಯರ್‌ಗೆ ಜೋಡಿಯಾಗಿ ಸ್ಯಾಂಡಲ್‌ವುಡ್‌ ನಟರೊಬ್ಬರ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುವ ಪ್ಲಾನ್‌ ನಡೆಯುತ್ತಿದೆಯಂತೆ. ಎಲ್ಲವು ಅಂದುಕೊಂಡಂತೆ ಆದರೆ ಸಿನಿಮಾ ಆಗಸ್ಟ್‌ ನಲ್ಲಿ ಸೆಟ್ಟೇರುವ ಸಾಧ್ಯತೆ ಇದೆ. ಈ ಹಿಂದೆ ಕಿಲ್ಲಿಂಗ್‌ ವೀರಪ್ಪನ್‌ ಚಿತ್ರವನ್ನು ನಿರ್ಮಿಸಿದ್ದ ನಿರ್ಮಾಪಕರಲ್ಲಿ ಒಬ್ಬರಾಗಿದ್ದ ಬಿ. ಎಸ್‌. ಸುಧೀಂದ್ರ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಕನ್ನಡದ ಜೊತೆಗೆ ತಮಿಳು, ತೆಲುಗು ಮತ್ತು ಮಲಯಾಳದಲ್ಲಿ ಚಿತ್ರವನ್ನು ರಿಲೀಸ್‌ ಮಾಡುವ ಪ್ಲಾನ್‌ನಲ್ಲಿದೆ ಚಿತ್ರತಂಡ. ಒಟ್ಟಾರೆ ಪ್ರಿಯಾ ವಾರಿಯರ್‌ ನಿಜಕ್ಕೂ ಕನ್ನಡಕ್ಕೆ ಬರುತ್ತಾಳಾ ಅನ್ನೋದು ಕೆಲ ದಿನಗಳಲ್ಲೇ ಗೊತ್ತಾಗಲಿದೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.