ರಾಧಿಕೆ ಮನೋಹರೆ!


Team Udayavani, Mar 3, 2019, 12:30 AM IST

v-64.jpg

ರಂಗಿತರಂಗ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಯವಾದ ಚೆಲುವೆ ರಾಧಿಕಾ ಚೇತನ್‌. ಮೊದಲ ಚಿತ್ರದಲ್ಲೇ ತನ್ನ ವಿಭಿನ್ನ ಅಭಿನಯದ ಮೂಲಕ ಕನ್ನಡ ಚಿತ್ರಪ್ರಿಯರಿಗೆ ಇಷ್ಟವಾದ ರಾಧಿಕಾ ಚೇತನ್‌, ಕನ್ನಡದ ಕ್ಲಾಸ್‌ ಪಾತ್ರಗಳಿಗೆ ಹೇಳಿ ಮಾಡಿಸಿದ ನಟಿ ಎಂಬುದು ಚಿತ್ರರಂಗದ ಅನೇಕ ನಿರ್ದೇಶಕರು, ನಿರ್ಮಾಪಕರ ಒಕ್ಕೊರಲ ಅಭಿಪ್ರಾಯ. ರಂಗಿತರಂಗ ಚಿತ್ರದ ಬಳಿಕ ರಾಧಿಕಾ ಚೇತನ್‌ಗೆ ಬಹುದೊಡ್ಡ ಹೆಸರು ತಂದುಕೊಟ್ಟಿದ್ದು 2016ರಲ್ಲಿ ತೆರೆಕಂಡ ಯೂ-ಟರ್ನ್ ಚಿತ್ರ. ಈ ಚಿತ್ರದ ಅಭಿನಯಕ್ಕಾಗಿ ಸೌಥ್‌ ಇಂಡಿಯನ್‌ ಇಂಟರ್‌ನ್ಯಾಷನಲ್‌ ಮೂವೀ ಅವಾರ್ಡ್‌ (ಪೋಷಕ ಪಾತ್ರ), ಐಐಎಫ್ಎ ಉತ್ಸವಂ ಅವಾರ್ಡ್‌ (ಪೋಷಕ ಪಾತ್ರ)ಗಳು ರಾಧಿಕಾಗೆ ಒಲಿದು ಬಂದವು. ಬಳಿಕ ಟಿ. ಎನ್‌. ಸೀತಾರಾಮ್‌ ನಿರ್ದೇಶನದ ಕಾಫಿತೋಟ, ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ, ಅಸತೋಮ ಸದ್ಗಮಯ ಚಿತ್ರಗಳಲ್ಲಿ ರಾಧಿಕಾ ಚೇತನ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡರು. ಈ ಚಿತ್ರಗಳು ಬಾಕ್ಸಾಫೀಸ್‌ನಲ್ಲಿ ಅಷ್ಟಾಗಿ ಸದ್ದು ಮಾಡದಿದ್ದರೂ, ಚಿತ್ರದಲ್ಲಿ ರಾಧಿಕಾ ಅವರ ಅಭಿನಯದ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಯಿತು.

ಚಿತ್ರರಂಗಕ್ಕೂ ಮೊದಲು ರಾಧಿಕಾ ಚೇತನ್‌ ಅವರ ನಂಟು, ಒಡನಾಟ ಇದ್ದಿದ್ದು ರಂಗಭೂಮಿಯಲ್ಲಿ. ಕಾಲೇಜು ದಿನಗಳಲ್ಲೇ ವಿ ಮೂವ್‌ ಥಿಯೇಟರ್‌ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ರಾಧಿಕಾ ಅಲ್ಲಿಂದಲೇ ಬಣ್ಣದ ಲೋಕದ ನಂಟನ್ನೂ ಬೆಳೆಸಿಕೊಂಡರು. ಹಾಗಾಗಿಯೇ ಇಂದಿಗೂ ಅಭಿನಯದ ವಿಷಯಕ್ಕೆ ಬಂದಾಗ ನನ್ನ ಮೊದಲ ಆದ್ಯತೆ ರಂಗಭೂಮಿಯ ಕಡೆಗೆ ಎನ್ನುವ ರಾಧಿಕಾ, “ಚಿತ್ರರಂಗಕ್ಕಿಂತಲೂ ಹೆಚ್ಚಾಗಿ ರಂಗಭೂಮಿಯಲ್ಲಿ ಸಾಕಷ್ಟು ಪ್ರಯೋಗಶೀಲತೆ ಮತ್ತು ಸೃಜನಶೀಲತೆಗೆ ಪ್ರಾಮುಖ್ಯ ಇರುತ್ತದೆ. ಅಲ್ಲಿ ಕಲಿಕೆಗೆ ಹೆಚ್ಚು ಅವಕಾಶವಿರುತ್ತದೆ. ಆದರೆ ಚಿತ್ರರಂಗದಲ್ಲಿ ಕಲಾವಿದರ ವ್ಯಾಪ್ತಿ ಕಿರಿದಾಗಿರುತ್ತದೆ’ ಎನ್ನುತ್ತಾರೆ.

ಬ್ಯಾಂಗ್‌(ಳೂರು), ದಿಲ್‌ ಸೇ, ನೆವರ್‌ ಎಂಡ್‌ ಸೇರಿದಂತೆ ಕೆಲ ಕಿರುಚಿತ್ರಗಳಲ್ಲೂ ಅಭಿನಯಿಸಿರುವ ರಾಧಿಕಾ ಚೇತನ್‌, ಚಿತ್ರರಂಗದಲ್ಲಿ ನಟಿಯಾಗಿ ಮಾತ್ರವಲ್ಲದೆ ಇತರ ಹಲವು ಕ್ಷೇತ್ರಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕಥಕ್‌ ನೃತ್ಯದಲ್ಲಿ ಪ್ರಾವೀಣ್ಯ ಪಡೆದಿರುವ ರಾಧಿಕಾ ಹಲವು ಕಾರ್ಯಕ್ರಮಗಳನ್ನು ಪ್ರದರ್ಶಿಸಿದ್ದಾರೆ. ಜೊತೆಗೆ ರೂಪದರ್ಶಿಯಾಗಿ ಹಲವು ಜಾಹೀರಾತುಗಳಲ್ಲೂ ಆಗಾಗ್ಗೆ ಕಾಣಿಸಿಕೊಳ್ಳುತ್ತಿರುತ್ತಾರೆ. ಬೆಂಗಳೂರಿನಲ್ಲಿರುವ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಕೇಂದ್ರದಲ್ಲಿ ಯೋಗ ತರಬೇತುದಾರರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಇದಲ್ಲದೆ ಆಗಾಗ್ಗೆ ಅನೇಕ ಸಾಮಾಜಿಕ ಚಟುವಟಿಕೆಗಳಲ್ಲೂ ರಾಧಿಕಾ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ.

ಸದ್ಯ ರಾಧಿಕಾ ಚೇತನ್‌ ಇನ್ನೂ ಹೆಸರಿಡದ ಎರಡು-ಮೂರು ಚಿತ್ರಗಳಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದು, ಆ ಚಿತ್ರದ ಪಾತ್ರಗಳು ಅದರ ಬಗೆಗಿನ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಹೊರಬೀಳಬೇಕಿದೆ. 

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.