ಕಿರಿಕ್‌ ಹುಡುಗಿಯ ಲೆಕ್ಕ ಇಲ್ಲ ಪಕ್ಕಾ


Team Udayavani, Jan 26, 2020, 4:51 AM IST

ras-1

ಅದೇನೋ ಗೊತ್ತಿಲ್ಲ ಕಿರಿಕ್‌ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ನಟಿ ರಶ್ಮಿಕಾ ಮಂದಣ್ಣ ಆರಂಭದಿಂದಲೂ ತಮ್ಮ ಸಿನಿಮಾಗಳಿಗಿಂತ, ಬೇರೆ ಬೇರೆ ವಿಷಯಗಳಿಗೆ ಸುದ್ದಿಯಾಗಿದ್ದೇ ಹೆಚ್ಚು. ನಟ ಕಂ ನಿರ್ದೇಶಕ ರಕ್ಷಿತ್‌ ಶೆಟ್ಟಿ ಜೊತೆಗಿನ ಬ್ರೇಕಪ್‌, ಅದಾದ ಬಳಿಕ ತೆಲುಗಿನಲ್ಲಿ ನಟ ವಿಜಯ ದೇವರಕೊಂಡ ಜೊತೆಗಿನ ಗಾಸಿಪ್‌, ಸಂಭಾವನೆ ವಿಚಾರದಲ್ಲಿ ನಿರ್ಮಾಪಕರ ಜೊತೆ ಕ್ಯಾತೆ ತೆಗೆದಿದ್ದು, ಕೆಲ ಚಿತ್ರಗಳ ಚಿತ್ರೀಕರಣಕ್ಕೆ ಚಿತ್ರತಂಡದ ಜೊತೆ ಸರಿಯಾಗಿ ಸಹಕರಿಸದಿರುವುದು, “ಕನ್ನಡ ಬರಲ್ಲ’ ಅಂಥ ಸಂದರ್ಶನದಲ್ಲಿ ಹೇಳಿಕೆ ನೀಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದು, ಹೀಗೆ ಸದ್ಯ ಚಿತ್ರರಂಗದಲ್ಲಿ ಅನೇಕರಿಂದ ಕಿರಿಕ್‌ ಹುಡುಗಿ ಅಂತಾನೇ ಕರೆಸಿಕೊಳ್ಳುತ್ತಿರುವ ರಶ್ಮಿಕಾ ಮಂದಣ್ಣ, ಇದೀಗ ಐಟಿ ವಿಷಯಕ್ಕೆ ಮತ್ತೆ ಕಳೆದ ಕೆಲ ದಿನಗಳಿಂದ ಸುದ್ದಿಯಾಗಿದ್ದಾರೆ.

ಕನ್ನಡದ ಜೊತೆ ತೆಲುಗು ಚಿತ್ರರಂಗದಲ್ಲೂ ಸ್ಟಾರ್‌ ನಟಿಯಾಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ, ಕೆಲ ದಿನಗಳ ಹಿಂದಷ್ಟೇ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, “ತಾನು ಪಡೆಯುತ್ತಿರುವ ಸಂಭಾವನೇ ತೀರಾ ಕಡಿಮೆಯಿದ್ದು, ನನ್ನ ಬಳಿ ಉಳಿತಾಯದ ಹಣವೇ ಇಲ್ಲ’ ಎಂದು ಹೇಳಿಕೆ ನೀಡಿ ಅನೇಕರ ಹುಬ್ಬೇರುವಂತೆ ಮಾಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಆದಾಯ ತೆರಿಗೆ ಇಲಾಖೆ ರಶ್ಮಿಕಾ ಮಂದಣ್ಣ ಅವರ ನಿವಾಸ ಮತ್ತು ಅವರ ಕುಟುಂಬದ ಒಡೆತನದಲ್ಲಿರುವ ಕಟ್ಟಡಗಳ ಮೇಲೆ ಲಗ್ಗೆ ಇಟ್ಟಿದೆ. ಸುಮಾರು ಒಂದಿಡೀ ದಿನ ರಶ್ಮಿಕಾ ಮಂದಣ್ಣ ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಆಸ್ತಿ-ಪಾಸ್ತಿ, ಆದಾಯದ ಮೂಲಗಳ ಮಾಹಿತಿಯನ್ನು ಕಲೆ ಹಾಕಿರುವ ಆದಾಯ ತೆರಿಗೆ ಅಧಿಕಾರಿಗಳು, ಒಂದಷ್ಟು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡು ಮುಂದಿನ ವಿಚಾರಣೆಗೆ ಹಾಜರಾಗುವಂತೆ ರಶ್ಮಿಕಾ ಮತ್ತು ತಂದೆ ಮದನ್‌ ಮಂದಣ್ಣ ಅವರಿಗೆ ಸಮನ್ಸ್‌ ನೀಡಿ ತೆರಳಿದ್ದರು.

ಅದರಂತೆ ಮೈಸೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಯ ಕಚೇರಿಗೆ ಆಗಮಿಸಿದ ರಶ್ಮಿಕಾ ಅವರನ್ನು ಅಧಿಕಾರಿಗಳು 3 ಗಂಟೆಗಳ ಕಾಲ ಸುದೀರ್ಘ‌ ವಿಚಾರಣೆಗೆ ಒಳಪಡಿಸಿದ್ದಾರೆ. ಬಳಿಕ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅಗತ್ಯ ಇದ್ದಲ್ಲಿ ಮತ್ತೆ ವಿಚಾರಣೆಗೆ ಆಗಮಿಸಬೇಕು ಎನ್ನುವ ಸೂಚನೆಯೊಂದಿಗೆ ಕಳುಹಿಸಿದ್ದಾರೆ. ಮೂಲಗಳ ಪ್ರಕಾರ ರಶ್ಮಿಕಾ ಮಂದಣ್ಣ ತೋರಿಸಿರುವ ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿಯನ್ನು ಹೊಂದಿದ್ದಾರೆ ಎನ್ನಲಾಗುತ್ತಿದ್ದು, ಸದ್ಯದ ಮಟ್ಟಿಗೆ ಇದು ರಶ್ಮಿಕಾಗೆ ತೂಗುಕತ್ತಿಯಾದಂತಿರುವುದು ಸುಳ್ಳಲ್ಲ. ಒಟ್ಟಾರೆ ರಶ್ಮಿಕಾ ಮಂದಣ್ಣ ಆದಾಯ ವಿಷಯದಲ್ಲಿ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ್ದಾರಾ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.