ಚಂದನವನಕ್ಕೆ ರಂಗು ತಂದ ರವೀನಾ…


Team Udayavani, Feb 16, 2020, 4:35 AM IST

rav-1

ಬಾಲಿವುಡ್‌ ನಟಿ ರವೀನಾ ಟಂಡನ್‌ ಮತ್ತೆ ಕನ್ನಡ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಈಗ ನಿಜವಾಗಿದೆ. ಕಳೆದ ಕೆಲ ತಿಂಗಳಿನಿಂದ ರವೀನಾ ಟಂಡನ್‌ ಕನ್ನಡದ ಕೆಜಿಎಫ್ 2 ಸಿನಿಮಾದಲ್ಲಿ ನಟಿಸುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದರೂ ಆ ಸುದ್ದಿ ದೃಢಪಟ್ಟಿರಲಿಲ್ಲ. ಈಗ ಸ್ವತಃ ಕೆಜಿಎಫ್ 2 ಸಿನಿಮಾದ ನಿರ್ದೇಶಕ ಪ್ರಶಾಂತ್‌ ನೀಲ್‌ ಅವರೇ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ಇನ್ನು ಚಿತ್ರರಂಗದ ಮೂಲಗಳ ಪ್ರಕಾರ, ಕೆಜಿಎಫ್ 2 ಚಿತ್ರದ ಕಥೆಯಲ್ಲಿ ಬರಲಿರುವ ಪ್ರಮುಖ ಪಾತ್ರವೊಂದಕ್ಕೆ ಬಾಲಿವುಡ್‌ ನಟಿ ರವೀನಾ ಟಂಡನ್‌ ಬಣ್ಣ ಹಚ್ಚಲಿದ್ದು, 1970-80 ಕಾಲಘಟ್ಟದ ಪ್ರಧಾನಮಂತ್ರಿ ಪಾತ್ರದಲ್ಲಿ ರವೀನಾ ನಟಿಸಲಿದ್ದಾರೆ. “ಕೆಜಿಎಫ್-1′ ರಲ್ಲಿ ಇದರ ಸಣ್ಣ ಝಲಕ್‌ ಮಾತ್ರ ತೋರಿಸಲಾಗಿದ್ದು, “ಕೆಜಿಎಫ್-2′ ರಲ್ಲಿ ಈ ಪಾತ್ರ ಬರಲಿದೆ. ರವೀನಾ ಅದರಲ್ಲಿ ರಮಿಕಾ ಸೇನ್‌ ಎನ್ನುವ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಅಂದಹಾಗೆ, 1999ರಲ್ಲಿ ಉಪೇಂದ್ರ ನಟಿಸಿ, ನಿರ್ದೇಶಿಸಿದ್ದ ಉಪೇಂದ್ರ ಚಿತ್ರದಲ್ಲಿ ರವೀನಾ ಟಂಡನ್‌ ಅಭಿನಯಿಸಿದ್ದರು. ಇದೇ ರವೀನಾ ಅವರ ಮೊದಲ ಹಾಗೂ ಕೊನೆಯ ಕನ್ನಡ ಸಿನಿಮಾವಾಗಿದೆ. ಅದಾದ ಬಳಿಕ ಸುಮಾರು 20 ವರ್ಷಗಳ ನಂತರ ರವೀನಾ ಟಂಡನ್‌ ಮತ್ತೆ ಕನ್ನಡಕ್ಕೆ ಬರಲು ಕಾರಣವಾಗಿದ್ದು, “ಕೆಜಿಎಫ್’ ಚಿತ್ರದ ಹಿಂದಿನ ವ್ಯವಹಾರದ ಲೆಕ್ಕಾಚಾರ ಎನ್ನಲಾಗುತ್ತಿದೆ. “ಕೆಜಿಎಫ್-1′ ಚಿತ್ರವನ್ನು ಬಾಲಿವುಡ್‌ನ‌ಲ್ಲಿ ರವೀನಾ ಟಂಡನ್‌ ಪತಿ ಅನಿಲ್‌ ತಡಾನಿ ವಿತರಣೆ ಮಾಡಿದ್ದರು. ಇನ್ನು ಸ್ವತಃ ರವೀನಾ ಕೂಡ ಆ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ಎರಡನೇ ಭಾಗವನ್ನ ಕೂಡ ರವೀನಾ ಟಂಡನ್‌ ಪತಿ ಅನಿಲ್‌ ತಡಾನಿ ತಮ್ಮದೇ ಪ್ರೊಡಕ್ಷನ್‌ ವಿತರಣೆ ಮಾಡುತ್ತಿದ್ದು, ಹೀಗಾಗಿ ಮತ್ತೆ ಕನ್ನಡ ಚಿತ್ರದಲ್ಲಿ ನಟಿಸುವ ಮನಸ್ಸು ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಸದ್ಯ ಚಿತ್ರತಂಡವನ್ನು ಸೇರಿಕೊಂಡಿರುವ ರವೀನಾ ಟಂಡನ್‌ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ನಿರ್ದೇಶಕ ಪ್ರಶಾಂತ್‌ ನೀಲ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ರವೀನಾ ಟಂಡನ್‌ ಜೊತೆಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ. ಇಡೀ ಚಿತ್ರತಂಡದ ಪರವಾಗಿ ರವೀನಾ ಅವರನ್ನು ಸ್ವಾಗತಿಸಿದ್ದಾರೆ.

ರವೀನಾ ಟಂಡನ್‌ ಪಾತ್ರದ ಮೇಲೆ ನಿರೀಕ್ಷೆ ಹೆಚ್ಚಾಗಿದ್ದು, ಎರಡು ದಶಕಗಳ ನಂತರ ಸ್ಯಾಂಡಲ್‌ವುಡ್‌ಗೆ ರೀ-ಎಂಟ್ರಿ ಕೊಡುತ್ತಿರುವ ರವೀನಾ ಟಂಡನ್‌ ಅವರನ್ನು ಇಂದಿನ ಕನ್ನಡ ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಅನ್ನೋದು “ಕೆಜಿಎಫ್-2′ ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.