ಸಂಯುಕ್ತಾ ಕಿರಿಕ್‌


Team Udayavani, Oct 6, 2019, 5:34 AM IST

samyukta

ಕಿರಿಕ್‌ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ನಟಿ ಸಂಯುಕ್ತಾ ಹೆಗ್ಡೆ, ಆ ಚಿತ್ರದ ನಂತರ ತನ್ನ ಪಾತ್ರಗಳು, ಅಭಿನಯಕ್ಕಿಂತ ಹೆಚ್ಚಾಗಿ ಅನಗತ್ಯ ವಾದ-ವಿವಾದಗಳಿಗೆ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಬಹುಶಃ ಇದರಿಂದಾಗಿಯೇ ಇರಬೇಕು, ಕಿರಿಕ್‌ ಪಾರ್ಟಿ ಚಿತ್ರದ ಮೂಲಕ ಮಿಂಚಿದ್ದ ನಟಿಗೆ ಚಿತ್ರರಂಗದ ಮಂದಿ “ಕಿರಿಕ್‌ ಹುಡುಗಿ’ ಅಂತಾನೇ ಕರೆಯೋದಕ್ಕೆ ಶುರು ಮಾಡಿದ್ದಾರೆ. ಈಗ ಸಂಯುಕ್ತಾ ಹೆಗ್ಡೆ ಮತ್ತೆ ಸುದ್ದಿಯಲ್ಲಿದ್ದಾರೆ. ಅದು ಕೂಡ ಎಂದಿನಂತೆ ಬೇರೆಯದೇ ವಿಷಯಕ್ಕೆ.

ಹೌದು, ಇತ್ತೀಚೆಗಷ್ಟೇ ಸಂಯುಕ್ತಾ ಹೆಗ್ಡೆ ತಮಿಳಿನಲ್ಲಿ ಅಭಿನಯಿಸಿರುವ ಪಪ್ಪಿ ಚಿತ್ರದ ಫ‌ಸ್ಟ್‌ ಟ್ರೇಲರ್‌ ಬಿಡುಗಡೆಯಾಗಿದೆ. ಸದ್ಯ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಈ ಟ್ರೇಲರ್‌ನಲ್ಲಿ, ಸಂಯುಕ್ತಾ ಸಖತ್‌ ಬೋಲ್ಡ್‌ ಆ್ಯಂಡ್‌ ಬ್ಯೂಟಿಫ‌ುಲ್‌ ಆಗಿ ಕಾಣಿಸಿಕೊಂಡಿ¨ªಾರೆ. ಅಷ್ಟೇ ಆಗಿದ್ದರೆ ಪರವಾಗಿರಲಿಲ್ಲ, ಟ್ರೇಲರ್‌ನಲ್ಲಿ ಬರುವ ದೃಶ್ಯವೊಂದರಲ್ಲಿ ಸಂಯುಕ್ತಾ ಹೆಗ್ಡೆ, ಚಿತ್ರದ ನಾಯಕ ವರುಣ್‌ ಜೊತೆ ಲಿಪ್‌ ಲಾಕ್‌ ಕೂಡ ಮಾಡಿದ್ದಾರೆ.

ಪಪ್ಪಿ ಚಿತ್ರದ ಫ‌ಸ್ಟ್‌ ಟ್ರೇಲರ್‌ಬಿಡುಗಡೆಯಾಗುತ್ತಿದ್ದಂತೆ, ಸಂಯುಕ್ತಾ ಹೆಗ್ಡೆ ಮತ್ತು ವರುಣ್‌ ಲಿಪ್‌ ಲಾಕ್‌ ದೃಶ್ಯಗಳು, ಸುದ್ದಿಗಳೇ ಸೋಶಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಅದರಲ್ಲೂ ಕನ್ನಡದ ಸಿನಿಪ್ರಿಯರು ಸಂಯುಕ್ತಾ ಹೆಗ್ಡೆ

ವಿರುದ್ದ ಹರಿಹಾಯುತ್ತಿದ್ದಾರೆ. ಈ ಹಿಂದೆ ಸಂಯುಕ್ತಾ ಕನ್ನಡದಲ್ಲಿ ಮೈ ನೇಮ್‌ ಈಸ್‌ ರಾಜ್‌ ಸಿನಿಮಾದಲ್ಲಿ ಅಭಿನಯಿಸಬೇಕಿತ್ತು. ಆದರೆ ಚಿತ್ರದಲ್ಲಿ ಚುಂಬನದ ದೃಶ್ಯಗಳು ಇವೆ ಎಂಬ ಕಾರಣದಿಂದ ಆ ಚಿತ್ರವನ್ನು ರಿಜೆಕ್ಟ್ ಮಾಡಿದ್ದರು.

ಅಲ್ಲದೆ ಕನ್ನಡದ ಇನ್ನೂ ಸುಮಾರು ಮೂರು-ನಾಲ್ಕು ಚಿತ್ರಗಳಲ್ಲಿ ರೊಮ್ಯಾಂಟಿಕ್‌ ದೃಶ್ಯಗಳಿವೆ ಎಂಬ ಕಾರಣಕ್ಕಾಗಿ ಅಭಿನಯಿಸಲು ನಿರಾಕರಿಸಿದ್ದರು. ಈ ವಿಷಯ ಕನ್ನಡ ಚಿತ್ರರಂಗದಲ್ಲೂ ಸಾಕಷ್ಟು ಸುದ್ದಿಯಾಗಿತ್ತು. ಕನ್ನಡ ಚಿತ್ರರಂಗದಲ್ಲೂ ಅನೇಕರು ಸಂಯುಕ್ತಾ ನಿಲುವಿಗೆ ಬೆಂಬಲ ನೀಡಿದ್ದರು. ಆದರೆ ಇದೆಲ್ಲ ನಡೆದು ಕೇವಲ ವರ್ಷದೊಳಗೆ, ಸಂಯುಕ್ತಾ ತಮಿಳು ಚಿತ್ರದಲ್ಲಿ ಇಂಥದ್ದೇ ದೃಶ್ಯಗಳಲ್ಲಿ ಕಾಣಿಸಿಕೊಂಡಿರುವುದು ಅನೇಕರ ಕಣ್ಣು ಕೆಂಪಾಗುವಂತೆ ಮಾಡಿದೆ.

ಇದೆಲ್ಲದರ ನಡುವೆ ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲೂ ಹಾಟ್‌ ಫೋಟೋಗಳನ್ನು ಅಪ್ಲೋಡ್‌ ಮಾಡುತ್ತಿರುವ ಸಂಯುಕ್ತಾ ಹೆಗ್ಡೆ, ಬೇರೆ ಚಿತ್ರರಂಗದಲ್ಲಿ ಮೈ ಚಳಿ ಬಿಟ್ಟು ಅಭಿನಯಿಸುತ್ತಾರೆ. ಆದರೆ, ಕನ್ನಡ ಚಿತ್ರಗಳ ಬಗ್ಗೆ ಕನ್ನಡ ಚಿತ್ರಗಳ ಬಗ್ಗೆ ಇಲ್ಲ-ಸಲ್ಲದ ಕ್ಯಾತೆ, ತಂಟೆ-ತಕರಾರು ಮಾಡುತ್ತಾರೆ. ತನ್ನನ್ನು ನಟಿಯಾಗಿ ಪರಿಚಯಿಸಿದ ಕನ್ನಡ ಚಿತ್ರರಂಗದ ಬಗ್ಗೆಯೇಸಂಯುಕ್ತಾ ಹೆಗ್ಡೆಗೆ ತಾತ್ಸಾರದ ಮನೋಭಾವವಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅದರೆ ಇದ್ಯಾವುದಕ್ಕೂ ಕ್ಯಾರೆ ಎನ್ನದ ಸಂಯುಕ್ತಾ ಮಾತ್ರವಾಗಿ ಆರಾಮಾಗಿ ತಾನಾಯಿತು, ತನ್ನ ಕಿರಿಕ್‌ ಕೆಲಸಗಳಾಯಿತು ಎನ್ನುವಂತೆ ಇದ್ದಾರೆ. ಅಂದ ಹಾಗೆ, ಸದ್ಯ ಪಪ್ಪಿ ಚಿತ್ರದ ಫ‌ಸ್ಟ್‌ ಟ್ರೇಲರ್‌ಗೆ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದ್ದು, ಚಿತ್ರ ಮುಂದಿನ ತಿಂಗಳು ತಮಿಳಿನಲ್ಲಿ ತೆರೆಗೆಬರುತ್ತಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.