ಬಹಳ ದೊಡ್ಡ ಜನ ಸಂಜನ


Team Udayavani, Jun 9, 2019, 6:00 AM IST

c-1

ಕನ್ನಡ ಚಿತ್ರರಂಗದಲ್ಲಿ ಸಂಜನಾ ಗಲ್ರಾನಿ, ಸಂಜನಾ ಗಾಂಧಿ, ಸಂಜನಾ ಬುರ್ಲಿ ಹೀಗೆ ಸಂಜನಾ ಎಂಬ ಹೆಸರಿನಿಂದ ಶುರುವಾಗುವ ಹಲವು ನಾಯಕ ನಟಿಯರನ್ನು ನೋಡಿದ್ದೀರಿ. ಈಗ ಇದೇ ಸಂಜನಾ ಎನ್ನುವ ಹೆಸರಿನಲ್ಲಿರುವ ನಾಯಕಿಯರ ಸಾಲಿಗೆ ಮತ್ತೂಂದು ಹೆಸರು ಸೇರ್ಪಡೆಯಾಗುತ್ತಿದೆ. ಅವರೇ ಸಂಜನಾ ಆನಂದ್‌.

ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾದ ಕೆಮಿಸ್ಟ್ರಿ ಆಫ್ ಕರಿಯಪ್ಪ ಕಾಮಿಡಿ ಚಿತ್ರ ನಿಮಗೆ ನೆನಪಿರಬಹುದು. ಈ ಚಿತ್ರದಲ್ಲಿ ನಾಯಕ ನಟಿಯಾಗಿ ಬೆಳ್ಳಿತೆರೆಗೆ ಪರಿಚಯವಾದ ಹುಡುಗಿಯೇ ಸಂಜನಾ ಆನಂದ್‌. ಅಭಿನಯಿಸಿದ್ದು ಒಂದೇ ಚಿತ್ರವಾದರೂ ಆ ಚಿತ್ರ ಸಂಜನಾ ಆನಂದ್‌ಗೆ ಸಾಕಷ್ಟು ಹೆಸರು ಮತ್ತು ಜನಪ್ರಿಯತೆಯನ್ನು ತಂದುಕೊಟ್ಟಿತು. ಇನ್ನು ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರ ಕೂಡ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತವ ಮುನ್ನುಗ್ಗುತ್ತಿದೆ. ಇತ್ತೀಚೆಗೆ ಕೆಮಿಸ್ಟ್ರಿ ಆಫ್ ಕರಿಯಪ್ಪ ಯಶಸ್ವಿಯಾಗಿ 75 ದಿನಗಳ ಪ್ರದರ್ಶನವನ್ನು ಪೂರ್ಣಗೊಳಿಸಿದೆ. ಇದರ ನಡುವೆಯೇ ಚಿತ್ರದಲ್ಲಿ ಭಾಗಿಯಾದ ಕಲಾವಿದರು, ತಂತ್ರಜ್ಞರಿಗೂ ಚಿತ್ರರಂಗದಲ್ಲಿ ನಿಧಾನವಾಗಿ ಒಳ್ಳೆಯ ಆಫ‌ರ್ ಬರುತ್ತಿವೆ. ಅದರಲ್ಲೂ ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರದ ನಾಯಕ ನಟಿ ಸಂಜನಾ ಆನಂದ್‌ ಚಿತ್ರರಂಗದಲ್ಲಿ ಭರ್ಜರಿಯಾಗಿಯೇ ಡಿಮ್ಯಾಂಡ್‌ ಪಡೆದುಕೊಳ್ಳುತ್ತಿದ್ದಾರೆ. ಸಂಜನಾ ನಾಯಕಿಯಾಗಿ ಅಭಿನಯಿಸುತ್ತಿರುವ ಮುಂಬರುವ ಸಾಲು ಸಾಲು ಚಿತ್ರಗಳು ಒಂದರ ಹಿಂದೊಂದರಂತೆ ಅನೌನ್ಸ್‌ ಆಗುತ್ತಿದೆ.

ಸದ್ಯ ಕೆ. ಪಿ. ಶ್ರೀಕಾಂತ್‌ ನಿರ್ಮಾಣದಲ್ಲಿ ನಟ ದುನಿಯಾ ವಿಜಯ್‌ ನಿರ್ದೇಶಿಸಿ, ನಟಿಸುತ್ತಿರುವ ಸಲಗ ಚಿತ್ರಕ್ಕೆ ಸಂಜನಾ ಆನಂದ್‌ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಅದ್ದೂರಿಯಾಗಿ ನೆರವೇರಿದ್ದು, ಜೂನ್‌ ಎರಡನೇ ವಾರದಿಂದ ಸಲಗ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಇದರೊಂದಿಗೆ ಕಿರುತೆರೆಯ ಲಕ್ಷ್ಮೀ ಬಾರಮ್ಮ ಧಾರಾವಾಹಿಯ ಖ್ಯಾತಿಯ ನಟ ಚಂದು ಅಭಿನಯದ ಕುಷ್ಕಾ ಚಿತ್ರದಲ್ಲೂ ಸಂಜನಾ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರೀಕರಣ ಕೂಡ ಆರಂಭವಾಗಿದೆ. ಇದರೊಂದಿಗೆ ಚಿರಂಜೀವಿ ಸರ್ಜಾ ಅಭಿನಯದ ಹೊಸಚಿತ್ರ ಕ್ಷತ್ರಿಯಕ್ಕೂ ಸಂಜನಾ ಆನಂದ್‌ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರೊಂದಿಗೆ ಇನ್ನೂ ಹೆಸರಿಡದ ಮೂರ್‍ನಾಲ್ಕು ಚಿತ್ರಗಳಿಗೆ ಕೂಡ ನಾಯಕಿಯಾಗಿ ಸಂಜನಾ ಆನಂದ್‌ ಹೆಸರು ಕೇಳಿ ಬರುತ್ತಿದ್ದು, ಆ ಚಿತ್ರಗಳ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.

ಒಟ್ಟಾರೆ ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿ ಪ್ರೇಕ್ಷಕರ ಮತ್ತು ಚಿತ್ರರಂಗದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುವ ಅಪ್ಪಟ ಕನ್ನಡದ ಹುಡುಗಿ ಸಂಜನಾ ಆನಂದ್‌, ಕನ್ನಡ ಚಿತ್ರ ರಂಗದಲ್ಲಿ ಇನ್ನಷ್ಟು ಬೆಳೆಯಲಿ ಅನ್ನೋದು ಕನ್ನಡ ಸಿನಿ ಪ್ರಿಯರ ಆಶಯ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.