ಕನ್ನಡಕ್ಕೆ ಸಯೇಷಾ ಪದಾರ್ಪಣೆ


Team Udayavani, Mar 22, 2020, 4:27 AM IST

ಕನ್ನಡಕ್ಕೆ ಸಯೇಷಾ ಪದಾರ್ಪಣೆ

ಕನ್ನಡ ಚಿತ್ರರಂಗಕ್ಕೆ ನಾಯಕ ನಟಿಯರಾಗಿ ಪರಭಾಷಾ ಕಲಾವಿದರ ಆಗಮನವಾಗುವುದು ಹೊಸದೇನಲ್ಲ. ಪರಭಾಷಾ ನಟಿಯರನ್ನು ಕರೆತಂದು, ಇಲ್ಲಿ ಅವರಿಗೆ ಸಾಕಷ್ಟು ಹೆಸರು, ಜನಪ್ರಿಯತೆ ಗಳಿಸಲು ಅವಕಾಶ ಕಲ್ಪಿಸುವುದುಂಟು. ಈಗಾಗಲೇ ಪ್ರತಿವರ್ಷ ಇಂತಹ ಹತ್ತಾರು ನಟಿಯರು ಪರಭಾಷೆಯಿಂದ ಕನ್ನಡಕ್ಕೆ ಬಂದು ಮಿಂಚಿ ಇಲ್ಲೇ ಸೆಟಲ್‌ ಆಗುವುದು ಅಥವಾ ವಾಪಾಸ್‌ ಹೋಗುವುದು ನಡೆದುಕೊಂಡೇ ಬರುತ್ತಿದೆ. ಈ ವರ್ಷ ಈ ಸಾಲಿಗೆ ಮತ್ತೂಬ್ಬ ತಮಿಳಿನ ಜನಪ್ರಿಯ ನಟಿಯ ಹೆಸರು ಸೇರ್ಪಡೆಯಾಗುತ್ತಿದೆ. ಅವರೇ ಸಯೇಷಾ ಸೈಗಲ್‌.

2015ರಲ್ಲಿ ತೆರೆಕಂಡ ತೆಲುಗಿನ ಅಖಿಲ್‌ ಚಿತ್ರದ ಮೂಲಕ ನಾಯಕ ನಟಿಯಾಗಿ ಬೆಳ್ಳಿತೆರೆಗೆ ಪರಿಚಯವಾದ ನಟಿ ಸಯೇಷಾ ಸೈಗಲ್‌, ನಂತರ ಶಿವಾಯ್‌ ಚಿತ್ರದ ಮೂಲಕ ಬಾಲಿವುಡ್‌ಗೂ ಅಡಿಯಿಟ್ಟ ಚೆಲುವೆ. ಅದಾದ ನಂತರ ತಮಿಳು ಚಿತ್ರರಂಗದತ್ತ ಮುಖಮಾಡಿದ ಸಯೇಷಾ ಸೈಗಲ್‌, ವನಮಗನ್‌, ಕುದಾಯಿಕುಟ್ಟಿ ಸಿಂಘಂ, ಜುಂಗಾ, ಘಜಿನಿಕಾಂತ್‌, ಕಾಪ್ಪಾನ್‌ ಮೊದಲಾದ ಚಿತ್ರಗಳಲ್ಲಿ ಅಭಿನಯಿಸಿ ನೆಲೆಯನ್ನು ತಮಿಳಿನಲ್ಲಿ ಭದ್ರಪಡಿಸಿಕೊಂಡಾಕೆ. ಸದ್ಯ ಸಯೇಷಾ ತಮಿಳಿನಲ್ಲಿ ಟೆಡ್ಡಿ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಈ ಚಿತ್ರ ಕೂಡ ಈ ವರ್ಷದ ಕೊನೆಗೆ ತೆರೆಗೆ ಬರುವ ಸಾಧ್ಯತೆ ಇದೆ.

ಇವೆಲ್ಲದರ ನಡುವೆ ಸಯೇಷಾ ಸೈಗಲ್‌ ಎನ್ನುವ ಈ ಚೆಲುವೆ ಈಗ ಕನ್ನಡ ಚಿತ್ರರಂಗಕ್ಕೂ ಎಂಟ್ರಿಯಾಗುತ್ತಿದ್ದಾರೆ. ಹೌದು, ಸಯೇಷಾ ಸೈಗಲ್‌ ಶೀಘ್ರದಲ್ಲಿಯೇ ಯುವರತ್ನ ಚಿತ್ರದ ಮೂಲಕ ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ. ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಅಭಿನಯದ ಯುವರತ್ನ ಚಿತ್ರದಲ್ಲಿ ನಾಯಕ ನಟಿಯಾಗಿ ಕಾಣಿಸಿಕೊಂಡಿರುವ ಸಯೇಷಾ ಸೈಗಲ್‌, ಕನ್ನಡ ಚಿತ್ರರಂಗದಲ್ಲೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇತ್ತೀಚೆಗಷ್ಟೇ ಪುನೀತ್‌ ರಾಜಕುಮಾರ್‌ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಯುವರತ್ನ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಇದರಲ್ಲಿ ಅವರು ಹೋಮ್ಲಿ ಲುಕ್‌ನಲ್ಲಿ ಗಮನ ಸೆಳೆಯುತ್ತಿದ್ದಾರೆ.

ಇನ್ನು ಮೊದಲ ಬಾರಿ ಕನ್ನಡ ಚಿತ್ರರಂಗಕ್ಕೆ ಪ್ರವೇಶವಾಗುತ್ತಿರುವುದರ ಬಗ್ಗೆ ಮಾತನಾಡುವ ಅವರು, “ದಕ್ಷಿಣ ಭಾರತದಲ್ಲಿ ಈಗಾಗಲೇ ತೆಲುಗು, ತಮಿಳು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಇಲ್ಲಿರುವ ಇನ್ನೊಂದು ದೊಡ್ಡ ಚಿತ್ರರಂಗದ ಕನ್ನಡದಲ್ಲೂ ಅಭಿನಯಿಸಬೇಕು ಎಂಬ ಆಸೆಯಿತ್ತು. ಆ ಆಸೆ ಈಗ ಈಡೇರುತ್ತಿದೆ. ಮೊದಲ ಬಾರಿಗೆ ಕನ್ನಡದಲ್ಲಿ ಪುನೀತ್‌ ರಾಜಕುಮಾರ್‌ ಅವರಂಥ ಬಿಗ್‌ ಸ್ಟಾರ್‌ ಜೊತೆಗೆ ಕನ್ನಡದಲ್ಲಿ ನಟಿಸಲು ಅವಕಾಶ ಸಿಕ್ಕಿದ್ದಕ್ಕೆ ನಾನು ಲಕ್ಕಿ ಎಂದೇ ಭಾವಿಸುತ್ತೇನೆ. ಇಡೀ ಚಿತ್ರತಂಡದ ಜೊತೆ ಯುವರತ್ನ ಸಿನಿಮಾದಲ್ಲಿ ಕೆಲಸ ಮಾಡಿದ್ದು ಒಂದೊಳ್ಳೆ ಅನುಭವ ಕೊಟ್ಟಿದೆ. ಆದಷ್ಟು ಬೇಗ ಕನ್ನಡದ ಸ್ಕ್ರೀನ್‌ನಲ್ಲಿ ನಾನು ಹೇಗೆ ಕಾಣುತ್ತೇನೆ ಎಂದು ನೋಡುವ ಕುತೂಹಲ ನನಗೂ ಇದೆ. ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಈ ಸಿನಿಮಾ ಮತ್ತು ನನ್ನ ಪಾತ್ರ ಎರಡೂ ಇಷ್ಟವಾಗುತ್ತದೆ’ ಎಂದು ಭರವಸೆಯ ಮಾತುಗಳನ್ನಾಡುತ್ತಾರೆ.

“ಇನ್ನು ಮುಂದಿನ ದಿನಗಳಲ್ಲಿ ಕನ್ನಡದಲ್ಲಿ ಮತ್ತಷ್ಟು ಅವಕಾಶಗಳು ಬಂದರೆ ಅಭಿನಯಿಸುತ್ತೀರಾ’ ಎಂಬ ಪ್ರಶ್ನೆಗೆ ಉತ್ತರಿಸುವ ಸಯೇಷಾ, “ನಾನೊಬ್ಬಳು ಕಲಾವಿದೆ. ನನಗೆ ಅಭಿನಯ ಮತ್ತು ನನ್ನ ಪಾತ್ರಗಳು ಮುಖ್ಯವೇ ಹೊರತು ಯಾವುದೇ ಭಾಷೆಯಲ್ಲ. ಹಾಗಾಗಿ ತೆಲುಗು, ತಮಿಳು, ಕನ್ನಡ ಹೀಗೆ ಯಾವುದೇ ಭಾಷೆಯ ಸಿನಿಮಾಗಳಿರಲಿ, ಅಲ್ಲಿ ಒಳ್ಳೆಯ ಸಬ್ಜೆಕ್ಟ್ ಮತ್ತು ನನಗೆ ಒಪ್ಪುವಂಥ ಪಾತ್ರಗಳಿದ್ದರೆ, ಖಂಡಿತ ಅಭಿನಯಿ ಸುತ್ತೇನೆ’ ಎನ್ನುತ್ತಾರೆ.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Guru Purnima Spcl: ವೈಎನ್‌ಪಿ ಎಂಬ ಅಪರೂಪದ ಶಿಕ್ಷಕರು

Guru Purnima Spcl: ವೈಎನ್‌ಪಿ ಎಂಬ ಅಪರೂಪದ ಶಿಕ್ಷಕರು

13

Guru Purnima Spcl: ತಾಯಿ ಜನ್ಮ ಕೊಟ್ಟಳು, ಗುರು ಪುನರ್ಜನ್ಮಕೊಟ್ಟರು!

Guru Purnima: ಅವರ ಜೀವನವೇ ನನಗೊಂದು ಸಂದೇಶ

Guru Purnima: ಅವರ ಜೀವನವೇ ನನಗೊಂದು ಸಂದೇಶ

Guru Purnima Spcl: ಅರಿವೆಂಬ ಗುರುವು ಗುರುವೆಂಬ ಅರಿವು

Guru Purnima Spcl: ಅರಿವೆಂಬ ಗುರುವು ಗುರುವೆಂಬ ಅರಿವು

Guru Purnima Spcl: ಅಮ್ಮ, ರಾಜ್‌, ವಿಷ್ಣು ನನ್ನ ಗುರುಗಳು!

Guru Purnima Spcl: ಅಮ್ಮ, ರಾಜ್‌, ವಿಷ್ಣು ನನ್ನ ಗುರುಗಳು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.