ಬಾಲಿವುಡ್‌ ಬಾನಿನಲ್ಲಿ ಶ್ರದ್ಧಾ ನಕ್ಷತ್ರ 


Team Udayavani, Feb 17, 2019, 12:30 AM IST

1.jpg

ಆಪರೇಷನ್‌ ಅಲಮೇಲಮ್ಮ ಚಿತ್ರದ ಮೂಲಕ ಚಂದನವನದಲ್ಲಿ ಭರವಸೆ ಮೂಡಿಸಿದ್ದ ನಟಿ ಶ್ರದ್ಧಾ ಶ್ರೀನಾಥ್‌, ನಂತರ ಕನ್ನಡಕ್ಕಿಂತ ತಮಿಳು, ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲಿ ಹೆಚ್ಚು ಬೇಡಿಕೆ ಪಡೆದುಕೊಂಡಾಕೆ. ಆಪರೇಷನ್‌ ಅಲಮೇಲಮ್ಮ ಚಿತ್ರದ ನಂತರ ದಿ ವಿಲನ್‌ ಚಿತ್ರದ ಹಾಡೊಂದರಲ್ಲಿ ಶ್ರದ್ಧಾ ಹೆಜ್ಜೆ ಹಾಕಿದ್ದು ಬಿಟ್ಟರೆ ಯಾವ ಕನ್ನಡ ಚಿತ್ರದಲ್ಲೂ ಕಾಣಿಸಿಕೊಂಡಿಲ್ಲ. ಇವೆಲ್ಲದರ ನಡುವೆ ಶ್ರದ್ಧಾ ಅಭಿನಯಿಸಿದ್ದ ಬೇರೆ ಭಾಷೆಯ ಎರಡು-ಮೂರು ಚಿತ್ರಗಳು ತೆರೆಕಂಡು ಬಾಕ್ಸಾಫೀಸ್‌ನಲ್ಲಿ ಕೂಡ ಹಿಟ್‌ ಆಗಿದ್ದರಿಂದ, ಶ್ರದ್ಧಾಗೆ ಸಹಜವಾಗಿಯೇ ಪರಭಾಷೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ಈಗ ಶ್ರದ್ಧಾ ಶ್ರೀನಾಥ್‌ ಅಭಿನಯಿಸಿರುವ ಚೊಚ್ಚಲ ಹಿಂದಿ ಚಿತ್ರ ಕೂಡ ತೆರೆಗೆ ಬರುವುದಕ್ಕೆ ರೆಡಿಯಾಗಿದೆ. 

ಹೌದು, ಶ್ರದ್ಧಾ ಶ್ರೀನಾಥ್‌ ಅಭಿನಯಿಸಿರುವ ಚೊಚ್ಚಲ ಹಿಂದಿ ಚಿತ್ರ ಮಿಲನ್‌ ಟಾಕೀಸ್‌ ತೆರೆಗೆ ಬರುವ ಅಂತಿಮ ಹಂತದ ತಯಾರಿಯಲ್ಲಿದೆ. ಇತ್ತೀಚೆಗಷ್ಟೇ ಮಿಲನ್‌ ಟಾಕೀಸ್‌ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಸಿನಿಪ್ರಿಯರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ ಕೂಡ ಸದ್ಯ ಭರದಿಂದ ಚಿತ್ರದ ಪ್ರಮೋಷನ್‌ ಕೆಲಸಗಳಲ್ಲಿ ನಿರತವಾಗಿದ್ದು, ಮಿಲನ್‌ ಟಾಕೀಸ್‌  ಮುಂಬರುವ ಮಾರ್ಚ್‌ 15ರಂದು ತೆರೆಗೆ ಬರುತ್ತಿದೆ. 

ಇನ್ನು ಶ್ರದ್ಧಾಗೆ ಕೂಡ ತಮ್ಮ ಮೊದಲ ಹಿಂದಿ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆಯಂತೆ. ಈ ಬಗ್ಗೆ ಮಾತನಾಡುವ ಶ್ರದ್ಧಾ, ನಾನು ಕಲಾವಿದೆಯಾಗುತ್ತೇನೆ ಎಂದು ಯಾವತ್ತೂ ಅಂದುಕೊಂಡಿರಲಿಲ್ಲ. ಸಿಕ್ಕ ಅವಕಾಶವೊಂದು ಕನ್ನಡ ಚಿತ್ರರಂಗ ನನ್ನನ್ನು ಕಲಾವಿದೆಯಾಗಿ ಗುರುತಿಸಿತು. ಅದಾದ ನಂತರ ತಮಿಳು, ತೆಲುಗು ಚಿತ್ರರಂಗದಲ್ಲೂ ಒಳ್ಳೆಯ ಅವಕಾಶಗಳು ಸಿಕ್ಕಿತು. ಈಗ ಬಾಲಿವುಡ್‌ನ‌ಲ್ಲಿ ಒಳ್ಳೆಯ ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ನನ್ನನ್ನು ನಾನು ಸಾಬೀತುಪಡಿಸಿಕೊಳ್ಳಬೇಕಾಗಿದೆ. ಸದ್ಯ ಅಭಿನಯವನ್ನೇ ನನ್ನ ಕೆರಿಯರ್‌ ಆಗಿ ತೆಗೆದುಕೊಂಡಿರುವುದರಿಂದ, ಮಿಲನ್‌ ಟಾಕೀಸ್‌ ಚಿತ್ರ ಸಹಜವಾಗಿಯೇ ನನ್ನ ಸಿನಿ ಕೆರಿಯರ್‌ನ ಟರ್ನಿಂಗ್‌ ಪಾಯಿಂಟ್‌ ಎನ್ನಬಹುದು. ಅತ್ಯಂತ ವೃತ್ತಿಪರವಾಗಿ ಚಿತ್ರ ಮೂಡಿಬಂದಿರುವುದರಿಂದ ಆಡಿಯನ್ಸ್‌ಗೂ ಚಿತ್ರ ಇಷ್ಟವಾಗುವುದೆಂಬ ನಂಬಿಕೆ ಇದೆ ಎನ್ನುತ್ತಾರೆ.  

ಅಂದ ಹಾಗೆ, ಮಿಲನ್‌ ಟಾಕೀಸ್‌ ಚಿತ್ರದಲ್ಲಿ ಶ್ರದ್ಧಾ ಶ್ರೀನಾಥ್‌ ನಾಯಕ ಅಲಿ ಫೈಜಲ್‌ ಅವರಿಗೆ ನಾಯಕಿಯಾಗಿ ನಟಿಸಿ¨ªಾರೆ. ಉಳಿದಂತೆ ರೀಚಾ ಸಿನ್ಹಾ, ಆಶುತೋಷ್‌ ರಾಣ, ಸಂಜಯ್‌ ಮಿಶ್ರಾ, ಯಶ್‌ಪಾಲ್‌ ಶರ್ಮ, ಜಯ್‌ ಪಟೇಲ್‌, ಸಿಕಂದರ್‌ ಖೇರ್‌ ಮೊದಲಾದ ಕಲಾವಿದರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಏಕ್ತಾ ಕಪೂರ್‌ ನಿರ್ಮಾಣದ ಈ ಚಿತ್ರವನ್ನು ಟಿಗ್‌ಮಾಂಶು ಧೂಲಿಯಾ ನಿರ್ದೇಶನ ಮಾಡಿದ್ದಾರೆ. 

ಇವೆಲ್ಲದರ ಜೊತೆ ದಕ್ಷಿಣ ಭಾರತ ಚಿತ್ರರಂಗದಲ್ಲೂ ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸುತ್ತಿರುವ ಶ್ರದ್ಧಾ, ಸತೀಶ್‌ ನೀನಾಸಂ ಅಭಿನಯದ ಗೋದ್ರಾ, ಶಿವರಾಜ್‌ ಕುಮಾರ್‌ ಅಭಿನಯದ ರುಸ್ತುಂ, ತಮಿಳಿನಲ್ಲಿ ಅಜಿತ್‌ ಜೊತೆ ಪಿಂಕ್‌ ಚಿತ್ರದ ರೀಮೇಕ್‌, ನಾನಿ ಜೊತೆ ಜೆರ್ಸಿ, ಮಾರ ಮತ್ತು ಕೆ13 ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಒಟ್ಟಾರೆ ದಕ್ಷಿಣದಿಂದ ಉತ್ತರಕ್ಕೆ ಸಿನಿಪ್ರಯಾಣ ಆರಂಭಿಸಿರುವ ಶ್ರದ್ಧಾ ಶ್ರೀನಾಥ್‌ ಬಾಲಿವುಡ್‌ ಅಂಗಳದಲ್ಲಿ ಎಷ್ಟರ ಮಟ್ಟಿಗೆ ಕಮಾಲ್‌ ಮಾಡಲಿದ್ದಾರೆ ಅನ್ನೋದು ಇನ್ನೊಂದು ತಿಂಗಳಲ್ಲಿ ಗೊತ್ತಾಗಲಿದೆ. 

ಟಾಪ್ ನ್ಯೂಸ್

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.