ಶ್ರುತಿ ಪ್ರಕಾಶಮಾನ‌


Team Udayavani, Nov 4, 2018, 6:00 AM IST

w-1.jpg

ಕನ್ನಡ ಚಿತ್ರರಂಗಕ್ಕೂ ಶ್ರುತಿ ಎಂಬ ಹೆಸರಿಗೂ ಮೊದಲಿನಿಂದಲೂ ಒಂದು ನಂಟಿದೆ. ಅದರಲ್ಲೂ ಇತ್ತೀಚೆಗೆ ಈ ಹೆಸರು ಚಿತ್ರರಂಗದಲ್ಲಿ ದೊಡ್ಡ ಸಂಚಲನಕ್ಕೆ ಕಾರಣವಾಗಿರೋದು ನಿಮಗೆ ಗೊತ್ತಿರಬಹುದು. ಈಗ ಇಲ್ಲಿ ಹೇಳುತ್ತಿರುವುದು ಶ್ರುತಿ ಪ್ರಕಾಶ್‌ ಎಂಬ ಚೆಲುವೆಯ ಬಗ್ಗೆ. ಕಳೆದ ಬಾರಿ ಬಿಗ್‌ಬಾಸ್‌ ಕನ್ನಡ ಆವೃತ್ತಿಯನ್ನು ನೋಡಿದವರಿಗೆ ಈ ಶ್ರುತಿ ಪ್ರಕಾಶ್‌ ಎಂಬ ಸುಂದರಿಯ ಬಗ್ಗೆ ಖಂಡಿತ ಗೊತ್ತಿರುತ್ತದೆ. ಕಳೆದ ಬಿಗ್‌ಬಾಸ್‌ ಆವೃತ್ತಿಯ ಸ್ಪರ್ಧಿಗಳಲ್ಲಿ ಒಬ್ಬರಾಗಿ ಬಿಗ್‌ಬಾಸ್‌ ಮನೆಯನ್ನು ಪ್ರವೇಶಿಸಿದ್ದ ಶ್ರುತಿ ಸುಮಾರು 90ಕ್ಕೂ ಹೆಚ್ಚು ದಿನಗಳ ಕಾಲ ಬಿಗ್‌ಬಾಸ್‌ ಮನೆಯಲ್ಲಿದ್ದು ನೋಡುಗರನ್ನು ರಂಜಿಸಿದ್ದರು. ತನ್ನ ಅರೆಬರೆ ಕನ್ನಡ, ಸೊಗಸಾದ ಧ್ವನಿ, ಅದಕ್ಕೊಪ್ಪುವ ಸೌಂದರ್ಯ, ಜೊತೆಗೆ ಬುದ್ಧಿವಂತಿಕೆಯಿಂದ ಕಿರುತೆರೆ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದ ಶ್ರುತಿ ಪ್ರಕಾಶ್‌, ನಿರೀಕ್ಷೆಯಂತೆ ಬಿಗ್‌ಬಾಸ್‌ ಮನೆಯಿಂದ ಹೊರಬರುತ್ತಿದ್ದಂತೆ ನಿಧಾನವಾಗಿ ಚಿತ್ರರಂಗದತ್ತ ಮುಖ ಮಾಡಿದ್ದಾರೆ. 

ಸದ್ಯ ಲಂಡನ್‌ನಲ್ಲಿ ಲಂಬೋದರ ಎಂಬ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿರುವ ಶ್ರುತಿ ಪ್ರಕಾಶ್‌, ಈ ಚಿತ್ರದಲ್ಲಿ ಇಂದಿನ ಜಮಾನಾದ ಪ್ರಾಕ್ಟಿಕಲ್‌ ಹುಡುಗಿಯ ಗೆಟಪ್‌ನಲ್ಲಿ ಬಿಗ್‌ಸ್ಕ್ರೀನ್‌ ಮೇಲೆ ಬರಲು ತಯಾರಿ ನಡೆಸುತ್ತಿದ್ದಾರೆ. ಅದರ ಹಿಂದೆಯೇ ದಯಾಳ್‌ ಪದ್ಮನಾಭನ್‌ ನಿರ್ದೇಶನದ ಚಿತ್ರವೊಂದರಲ್ಲೂ ಶ್ರುತಿ ಅಭಿನಯಿಸುತ್ತಿದ್ದಾರೆ. ಇನ್ನು ಎರಡು-ಮೂರು ಕನ್ನಡದ ಚಿತ್ರಗಳಲ್ಲಿ  ಶ್ರುತಿ ಪ್ರಕಾಶ್‌ ನಾಯಕಿಯಾಗಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದರೂ, ಅದ್ಯಾವುದೂ ಇನ್ನೂ ಖಚಿತವಾಗಿಲ್ಲ. ಚಿತ್ರರಂಗದಲ್ಲಿ ಅವಕಾಶಗಳು ಬರುತ್ತಿರುವುದರ ಬಗ್ಗೆ ಮಾತನಾಡುವ ಶ್ರುತಿ ಪ್ರಕಾಶ್‌, “”ಸಿನಿಮಾ ದಲ್ಲಿ ನಟಿಸಬೇಕು, ನಟಿಯಾಗಬೇಕು ಎಂಬ ಆಸೆ ನನಗೆ ಇರಲಿಲ್ಲ. ಆದ್ರೆ ಬಿಗ್‌ಬಾಸ್‌ ಮುಗಿಸಿ ಹೊರಬರುತ್ತಿದ್ದಂತೆ, ಒಂದಷ್ಟು ಸಿನಿಮಾಗಳ ಆಫ‌ರ್ ಬರೋದಕ್ಕೆ ಶುರುವಾದವು. ಒಳ್ಳೆಯ ಕಥೆ, ಒಳ್ಳೆಯ ಪಾತ್ರಗಳು ಇದ್ದಿದ್ದರಿಂದ ಮನೆಯಲ್ಲೂ ಕೂಡ ಎಲ್ಲರೂ ನನಗೆ ಬೆಂಬಲವಾಗಿ ನಿಂತರು. ಹಾಗಾಗಿ ಸದ್ಯಕ್ಕೆ ಎರಡು-ಮೂರು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದೇನೆ. ಮುಂದೆ ಅಭಿನಯವನ್ನೇ ಕೆರಿಯರ್‌ ಆಗಿ ತೆಗೆದುಕೊಳ್ಳಬೇಕೋ…, ಅಥವಾ ನನ್ನ ನೆಚ್ಚಿನ ಸಂಗೀತ ಕ್ಷೇತ್ರದಲ್ಲೇ ಮುಂದುವರೆಯಬೇಕೋ…, ಎಂಬ ಬಗ್ಗೆ ಇನ್ನೂ ನಿರ್ಧರಿಸಿಲ್ಲ” ಎನ್ನುವ ಶ್ರುತಿ ಪ್ರಕಾಶ್‌, “”ನನಗೆ ಒಪ್ಪುವ ಪಾತ್ರಗಳು, ಚಿತ್ರಗಳು ಸಿಗುವವರೆಗೂ ಮಾಡುತ್ತೇನೆ. ಆದರೆ, ನಾನಾಗಿಯೇ ಚಿತ್ರಗಳನ್ನು ಹುಡುಕಿಕೊಂಡು ಹೋಗುವುದಿಲ್ಲ” ಎನ್ನುತ್ತಾರೆ. 

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.