ಮೌನ ಮೋಹಿ ರುಮ್ಸ್


Team Udayavani, May 7, 2017, 3:45 AM IST

SAPT-2.jpg

ತನ್ನೊಡಲ ಮೇಲಿನ ಪ್ರಾಕೃತಿಕ ಸೌಂದರ್ಯದಿಂದಲೇ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುವ ಹಿಮಾಚಲ ಪ್ರದೇಶದಲ್ಲಿದ್ದೂ, ಪ್ರವಾಸಿ ಸ್ಥಳವಾಗೇನು ಗುರುತಿಸಿಕೊಳ್ಳದ ರುಮ್ಸ್ ಎಂಬ ಹೆಸರಿನ ಊರು ನಮ್ಮ ಕಣ್ಣಿಗೆ ಕಟ್ಟಿಕೊಡುವ ತರಹೇವಾರಿ ದೃಶ್ಯಗಳ ಮೂಲಕವೇ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತದೆ. ಹಮಾr ಪಾಸ್‌ಗೆ ಚಾರಣ ಕೈಗೊಳ್ಳಲು ದೇಶದ ವಿವಿಧೆಡೆಯಿಂದ ಆಗಮಿಸುವ ಚಾರಣಿಗರನ್ನು ಮೊದಲೇ ಬರಮಾಡಿಕೊಳ್ಳುವ ರುಮ್ಸ್ ಗ್ರಾಮ, ಹಾಗೆ ಬರುವವರನ್ನು ಮುದಗೊಳಿಸದೆ ಬೀಳ್ಕೊಡಲಾರದು.

ನಡಿಗೆಯನ್ನೇ ನೆಚ್ಚಿಕೊಂಡವರೆ ಹೆಚ್ಚಿರುವ ಈ ಊರಿನ ಕಡಿದಾದ ರಸ್ತೆಗಳಲ್ಲಿ ವಾಹನಗಳು ಕಾಣಸಿಗುವುದೇ ಅಪರೂಪ. ಎಲ್ಲೆಂದರಲ್ಲಿ ಕಣ್ಣಿಗೆ ಬೀಳುವ ಸೇಬಿನ ಮರಗಳಲ್ಲಿನ ಹಣ್ಣುಗಳಷ್ಟೆ ಸುಂದರವಾಗಿರುವ ಅಲ್ಲಿನ ಜನರೂ ನೆನಪಿನಲ್ಲಿ ಉಳಿಯುವ ಚಿತ್ರಗಳಾಗುತ್ತಾರೆ.

ಸೇಬಿನ ಮರಗಳಂತೆ ಅಲ್ಲಲ್ಲಿ ಗಾಂಜಾ ಗಿಡಗಳು ಕೂಡ ಎದುರುಗೊಳ್ಳುತ್ತವೆ. ಅಪರೂಪಕ್ಕೊಮ್ಮೆಯಾದರೂ ಅಮಲಿನ ಮಹಲಿನಲ್ಲಿ ತೇಲಿಯೇ ಬಿಡೋಣವೆಂದುಕೊಳ್ಳುವ ಕೆಲವು ಚಾರಣಿಗರು, ಹಮಾr ಪಾಸ್‌ ಹಾದಿ ಹಿಡಿಯುವ ಮುನ್ನ ಗಾಂಜಾ ಹೊಗೆ ಹೀರಿ ಹಿಮಾಚಲದ ಚಳಿಗೆ ತತ್ತರಿಸುವ ಮೈ ಬೆಚ್ಚಗಾಗಿಸಿಕೊಳ್ಳುತ್ತಾರೆ. ಸ್ಥಳೀಯರೇನು ಪೊಲೀಸರ ಕಣ್ತಪ್ಪಿಸಿ ಗಾಂಜಾ ಗಿಡಗಳನ್ನು ಬೆಳೆಯುವ ಉಸಾಬರಿಗೆ ಹೋಗುವುದಿಲ್ಲ. ನಮ್ಮಲ್ಲಿ ಕಳೆ ಗಿಡಗಳು ಬೆಳೆಯುವಂತೆ ಇಲ್ಲಿ ಗಾಂಜಾ ಗಿಡಗಳು ತಮ್ಮ ಪಾಡಿಗೆ ತಾವು ಬೆಳೆದು ನಿಲ್ಲುತ್ತವಂತೆ. ಆಗಾಗ ಪೊಲೀಸರು ಕೂಡ ತಮ್ಮ ಕೈಲಾಗುವಷ್ಟು ಗಾಂಜಾ ಗಿಡಗಳನ್ನು ನಾಶ ಮಾಡುತ್ತಾರಂತೆ. 

ಪ್ರವಾಸಿ ಸ್ಥಳವೆಂಬ ಹಣೆಪಟ್ಟಿ ಹೊತ್ತುಕೊಂಡಿರದ ಕಾರಣ ರುಮುವಿನಲ್ಲಿ ಪ್ರವಾಸಿಗರು ಅಪೇಕ್ಷಿಸುವ ಯಾವ ಮೂಲಭೂತ ಸೌಲಭ್ಯಗಳೂ ದೊರೆಯಲಾರವು. ಹಮಾrಪಾಸ್‌ಗೆ ತೆರಳುವ ಚಾರಣಿಗರಿಗೆ ಮಾರ್ಗದರ್ಶಿಗಳಾಗಿ ದುಡಿಯುವ ಇಲ್ಲಿನ ಕೆಲ ಸ್ಥಳೀಯರು, ತಮ್ಮ ಮನೆಗಳಲ್ಲಿ ಕೆಲಕಾಲ ವಿಶ್ರಮಿಸಲು ಅನುವು ಮಾಡಿಕೊಡುತ್ತಾರೆ.

ರುಮ್ಸ್ ಗ್ರಾಮದಲ್ಲಿ ಕಣ್ಣಾಡಿಸಿದಲ್ಲೆಲ್ಲ ಕಾಣಸಿಗುವ ಗಿರಿ ಕಂದರಗಳು, ಮಂಜು ಮತ್ತು ಸೂರ್ಯನ ದೆಸೆಯಿಂದ ಹೊದ್ದುಕೊಳ್ಳುವ ನಾನಾ ರೂಪಗಳು ಅವಿಸ್ಮರಣೀಯ. ಕುಲು ಜಿಲ್ಲೆಗೆ ಸೇರುವ ರುಮ್ಸ್ ಗ್ರಾಮ, ಜಿಲ್ಲಾ ಕೇಂದ್ರದಿಂದ 21 ಕಿ.ಮೀ. ದೂರದಲ್ಲಿದೆ. ರುಮ್ಸ್ ತಲುಪಲು ಶಿಮ್ಲಾದಿಂದ 131 ಕಿ.ಮೀ. ಪಯಣಿಸಬೇಕಾಗುತ್ತದೆ.

ಎಚ್‌.ಕೆ. ಶರತ್‌
ಚಿತ್ರ: ನಿಖೀಲ್‌ ಪಿ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.