ಆ ಕನ್ನಡ ಇ ಕನ್ನಡ‌


Team Udayavani, Feb 9, 2020, 5:02 AM IST

Saptha-Kannada

ನೀವು ಏನೇ ಹೇಳಿ, ಪುಸ್ತಕದಲ್ಲಿ ಓದುವ ಖುಷಿ ಈ ಮೊಬೈಲ್‌ನಲ್ಲಿ, ಕಂಪ್ಯೂಟನರ್‌ನಲ್ಲಿ ಬರೋದಿಲ್ಲ’ ಈ ಮಾತನ್ನು ಸರ್ವೇಸಾಮಾನ್ಯವಾಗಿ ಎಲ್ಲರೂ ಆಡಿಯೇ ಆಡುತ್ತಾರೆ. ನಿಜ. ಕಥೆಯನ್ನಾಗಲಿ, ಕಾದಂಬರಿಯನ್ನಾಗಲಿ ಪುಸ್ತಕದಲ್ಲಿ ಓದುವ ಮಜಾವೇ ಬೇರೆ. ಒಂದು ಕೈಯಲ್ಲಿ ಪುಸ್ತಕವನ್ನು ಹಿಡಿದು, ಇನ್ನೊಂದು ಕೈಯನ್ನು ತಲೆಗಾನಿಸಿಕೊಂಡು ಸಾಕ್ಷಾತ್‌ ಶ್ರೀಮನ್ನಾರಾಯಣನ ಶೈಲಿಯಲ್ಲಿ ಪವಡಿಸಿ ಓದುತ್ತಿದ್ದರೆ ಅಂದಿನ ಕುವೆಂಪು, ಕಾರಂತ, ಬೇಂದ್ರೆ, ತೇಜಸ್ವಿಯವರಿಂದ ಹಿಡಿದು ಇಂದಿನ ಕಾಯ್ಕಿಣಿ, ಭೈರಪ್ಪ, ಜೋಗಿ, ಎಚ್ಚೆಸ್ವಿಯವರ ತನಕ ಎಲ್ಲರೂ ಕಣ್ಮುಂದೆಯೇ ಪ್ರತ್ಯಕ್ಷವಾಗಿ ಕಥೆ ಹೇಳಿದಂತೆ, ಕವನ ವಾಚಿಸಿದಂತೆ ರಸವತ್ತಾಗಿರುತ್ತದೆ.

ವಿನಾಯಕ ಅರಳುಸುರಳಿ ; [email protected]

ಜೊತೆಗೊಂದು ಲೋಟ ಕಾಫಿಯಿದ್ದರಂತೂ ಆ ಸ್ವಾದವೇ ಬೇರೆ! ಒಂದೊಂದು ಪುಟ ಮುಂದಕ್ಕೆ ಹೋದಾಗಲೂ ಹಾಯಿದೋಣಿಯಲ್ಲಿ ಒಂದೊಂದು ಮೈಲು ಮುಂದೆ ತೇಲಿದಂತಿರುತ್ತದೆ. ಪುಸ್ತಕದ ಭೌತಿಕ ಸ್ಪರ್ಶ, ಪುಟಗಳ ಘಮಗಳೆಲ್ಲ ಮಿಶ್ರಿತವಾಗಿ ಕೊಡುವ ಅನುಭೂತಿ ಮೊಬೈಲ್‌, ಕಂಪ್ಯೂಟರ್‌ಗಳ ಪರದೆಯಲ್ಲಿ ಸಿಗುವುದಿಲ್ಲ.

ಆದರೆ, ಆಫೀಸು-ಟ್ರಾಫಿಕ್ಕು-ಮನೆಗಳ ನಡುವೆ ಹರಿದು ಹಂಚಿಹೋಗಿರುವ ಇಂದಿನ ಭಾಗ್‌ ದೌಡ್‌ ಬರೀ ಜೀವನದಲ್ಲಿ ಪುಸ್ತಕವನ್ನು ಕೊಂಡೊಯ್ಯುವ ತಾಳ್ಮೆ ಯಾರಿಗಿದೆ? ಹೇಳಿಕೇಳಿ ಇದು ಟ್ವೆಂಟಿ-ಟ್ವೆಂಟಿ ಕಾಲ. ಎಲ್ಲವೂ ಚುಟುಕಾಗಿ, ಸ್ವಾದಭರಿತವಾಗಿ, ಇಷ್ಟೇ ಇಷ್ಟಿರಬೇಕೆಂದು ಬಯಸುವ ‘ಚಿಕ್ಕ ಹಾಗೂ ಚೊಕ್ಕ’ದ ಕಾಲಘಟ್ಟವಿದು.

ಆಫೀಸಿನಲ್ಲಿ ಬಾಸ್‌ ಎದ್ದುಹೋದಾಗ, ಟ್ರಾಫಿಕ್ಕಿನಲ್ಲಿ ಸಿಲುಕಿ ಚಲನೆಯೆಂಬ ಚಲನೆಯೇ ಕಾಣೆಯಾದಾಗ, ಬಸ್ಸಿನಲ್ಲಿ ನಿಂತು ನೇತಾಡುತ್ತಿರುವಾಗ… ಇಂತಹ ಕಿರು ಘಳಿಗೆಗಳಲ್ಲಿಯೇ ಓದು, ಬರಹ ಮುಂತಾದ ಸದಭಿರುಚಿಯ ಕೈಂಕರ್ಯಗಳು ಜರುಗಬೇಕು. ಹೀಗೆ ಆಗಾಗ ಕಿರು ವಿರಾಮ ದೊರೆತಾಗಲೆಲ್ಲ ಇಂತಿಂಥ ದಪ್ಪದ ಪುಸ್ತಕವನ್ನು ಹೊರತೆರೆದು ಓದಲು ಸಾಧ್ಯವೆ? ಖಂಡಿತ ಇಲ್ಲ! ಅದಕ್ಕಿರುವ ಏಕೈಕ ಸಾಧನ ಮೊಬೈಲ್.

ಇಂದಿನ ಬಿಡುವುರಹಿತ, ಒತ್ತಡಭರಿತ ಜೀವನದಲ್ಲಿ ಓದು-ಬರಹಗಳು ಮರೆಯಾಗಬಾರದೆಂದೇ ಮನುಷ್ಯ ಅವನ್ನು ಸದಾ ತನ್ನೊಂದಿಗಿರುವ ಮೊಬೈಲ್ – ಕಂಪ್ಯೂಟರ್‌ಗಳೊಳಗೆ ಸೇರಿಸಿಕೊಂಡಿದ್ದಾನೆ. ಓದು-ಬರಹಗಳು ಬ್ಲಾಗ್‌, ಸೋಶಿಯಲ್‌ ಮೀಡಿಯಾ, ಪಿಡಿಎಫ್ ಮುಂತಾದ ಆಧುನಿಕ ಅವತಾರಗಳನ್ನು ತಾಳಿ ಮತ್ತೆ ಮನುಷ್ಯನ ಅಂತರಂಗ ಸೇರಿಕೊಂಡಿವೆ. ಆದರೆ, ಇಷ್ಟೇ ಇಷ್ಟಿರುವ ಮೊಬೈಲ್‌ಗ‌ಳಿಂದಾದ ದುಷ್ಪರಿಣಾಮವೆಂದರೆ ಅವು ನಮ್ಮ ತಾಳ್ಮೆಯನ್ನೂ ತಮ್ಮ ಗಾತ್ರಕ್ಕೇ ಕುಗ್ಗಿಸಿರುವುದು.

ಎಲ್ಲವೂ ಚಿಕ್ಕ ಹಾಗೂ ಚೊಕ್ಕದಾಗಿರಬೇಕು, ಇಡೀ ಭಗವದ್ಗೀತೆಯೇ ನಾಲ್ಕು ಸಾಲಿನಲ್ಲಿ ಮುಗಿದುಹೋಗಬೇಕು, ಮಹಾಕಾವ್ಯಗಳೂ ಟೀ ವಿರಾಮದಲ್ಲಿ ಸಿಗುವ ಐದು ನಿಮಿಷದ ಬಿಡುವಿನಲ್ಲಿ ಓದುವಂತಿರಬೇಕು ಎಂಬ ಗಡಿಬಿಡಿಯೇ ಎಲ್ಲರಲ್ಲೂ. ಮುನ್ನೂರು ಪುಟದ ಪುಸ್ತಕವೊಂದನ್ನು ಹಿಡಿದಾಗ ಮನಸ್ಸಿನಲ್ಲಿದ್ದ ತಾಳ್ಮೆಯನ್ನು ಮೂರೂವರೆ ಇಂಚಿನ ಮೊಬೈಲ್‌ ಸದ್ದಿಲ್ಲದಂತೆ ನುಂಗುತ್ತಿರುವುದು ಅದನ್ನು ಕಂಡುಹಿಡಿದವನಾಣೆಗೂ ಸತ್ಯ!

ಜಗತ್ತಿನ ಹಲವಾರು ಭಾಷೆಗಳಂತೆ ಕನ್ನಡವೂ “ಇ’ ಮಾಧ್ಯಮಕ್ಕೆ ಹೊಂದಿಕೊಳ್ಳುತ್ತಿದೆ. ಇದನ್ನು, ಒಂದಾನೊಂದು ಕಾಲದಲ್ಲಿ ತಾಳೆಗರಿಯಲ್ಲಿದ್ದ ಲಿಪಿಯು ಪುಸ್ತಕ ಮಾಧ್ಯಮಕ್ಕೆ ತೇರ್ಗಡೆಯಾದ ಬೆಳವಣಿಗೆಗೆ ಹೋಲಿಸುವಂತಿಲ್ಲವಾದರೂ ಇಂದಿನ ಕಾಲಮಾನಕ್ಕಿದು ಸೂಕ್ತ ಬೆಳವಣಿಗೆಯೇ. ಯಾವ ಭಾಷೆ ಮನುಷ್ಯನ ಭಾವನೆಗಳ ಹರಿವಿನ ಮಾಧ್ಯಮವಾಗಿರುತ್ತದೋ ಆ ಭಾಷೆ ನಿರಂತರವಾಗಿರುತ್ತದೆ.

ನಾವು ‘ಊಟ ಆಯ್ತಾ, ತಿಂಡಿ ಆಯ್ತಾ?’ ಗಳಿಂದ ಹಿಡಿದು ತತ್‌ಕ್ಷಣಕ್ಕೆ ಹೊಳೆವ ಯೋಚೆನೆಗಳ ತನಕ ಎಲ್ಲವನ್ನೂ ಕನ್ನಡದಲ್ಲೇ ಟೈಪಿಸಿ ಸೋಶಿಯಲ್‌ ಮೀಡಿಯಾದಲ್ಲೋ, ಮತ್ತೆಲ್ಲೋ ಸಂಭಾಷಿಸುತ್ತೇವೆ, ಅಂಟಿಸುತ್ತೇವೆ. ಅಷ್ಟರಮಟ್ಟಿಗೆ ಅದು ನಮ್ಮೊಳಗೆ ನಿರಂತರವಾಗಿದೆ.

ತೀರಾ ಪುಸ್ತಕವನ್ನೇ ತೆರೆಯದವರು ಸಹಾ ಮೊಬೈಲ್‌ನಲ್ಲಿ ಕಣ್ಣಿಗೆಟಕುವ ಬರಹಗಳೊಳಗೆ ಸಣ್ಣಗೊಂದು ಸುತ್ತು ಅಡ್ಡಾಡುತ್ತಾರೆ.
ಇನ್ನು ಪುಸ್ತಕದ ‘ಸ್ವಾದ’ವನ್ನರಿತವರು ಎರಡೂ ಮಾಧ್ಯಮಗಳಲ್ಲಿ ಓದಿಗೆ ತೊಡಗುತ್ತಾರೆ. ಹೀಗೆ “ಇ’ ಅವತರಣಿಕೆಯು ಕನ್ನಡದ ಹರಿವಿಗೆ ಹೊಸದಾದ ಉಪನದಿಯಂತಾಗಿದೆ.

ಇತ್ತೀಚೆಗೆ ಕನ್ನಡದ ಬಹಳ ಹಳೆಯ ಮಾಸಿಕ ಪತ್ರಿಕೆಯೊಂದು 1960-70ರ ದಶಕದ ಸಂಚಿಕೆಗಳೂ ಸೇರಿದಂತೆ ತನ್ನ ಅನೇಕ ಹಳೆಯ ಸಂಚಿಕೆಗಳ ಸ್ಕ್ಯಾನ್‌ ಪ್ರತಿಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿತು. ತೆರೆದೋದಿದವರಿಗೆ ಅವು ಆ ಕಾಲಘಟ್ಟವನ್ನು ಮರುಸೃಷ್ಟಿಸುವ ಪಳೆಯುಳಿಕೆಗಳಂತೆ ಭಾಸವಾಗುತ್ತವೆ. ಅಲ್ಲದೆ, ಮರುಮುದ್ರಣ ಕಾಣದ ಅದೆಷ್ಟೋ ಹಳೆಯ ಕೃತಿಗಳ ಪಿಡಿಎಫ್ ಪ್ರತಿಗಳು ದೇಹ ನಶಿಸಿದ ಮೇಲೂ ಉಳಿದ ಆತ್ಮಗಳಂತೆ ಅಂತರ್ಜಾಲದಲ್ಲಿ ಕುಳಿತಿವೆ.

ಇವೆಲ್ಲ ಸಾಧ್ಯವಾಗಿರುವುದು “ಇ’ ಮಾಧ್ಯಮದಿಂದ. ಹೀಗೆ ಮನುಷ್ಯ ತನ್ನ ಹೃದಯಕ್ಕೆ ತೀರಾ ಹತ್ತಿರದಲ್ಲಿಟ್ಟುಕೊಳ್ಳುವ ಮೊಬೈಲ್‌ನೊಳಗಿನಿಂದ ಕನ್ನಡವು ಚಿಗುರೊಡೆದಿರುವುದು ಸ್ವಾಗತಾರ್ಹವೇ. ಆದರೆ, ಪುಸ್ತಕಗಳು ದೂರಮಾಡಬಾರದಷ್ಟು ಅನಿವಾರ್ಯವಾದ ವ್ಯಕ್ತಿತ್ವದ ಅಂಗಗಳು. ಎರಡರಲ್ಲೂ ಇರುವುದು ಅಕ್ಷರಗಳೇ ಆದರೂ ಎರಡೂ ಉಂಟುಮಾಡುವ ಅನುಭೂತಿ ವಿಭಿನ್ನವಾದುದು. ತಮ್ಮತಮ್ಮ ಮಿತಿಯಲ್ಲೇ ಮನುಷ್ಯನ ವ್ಯಕ್ತಿತ್ವಕ್ಕೆ ನಿರಂತರ ಕಾವು ಕೊಡುತ್ತ ಈ ಎರಡೂ ಕವಲುಗಳೂ ಕನ್ನಡದ ಹೆಮ್ಮರವನ್ನು ಮತ್ತಷ್ಟು ಹಬ್ಬಿಸುತ್ತಿವೆ.

ಟಾಪ್ ನ್ಯೂಸ್

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.