ಪರಿಸರ ದಿನವೂ ಕುಶಾಲನಗರದ ಸಂತೆಯೂ


Team Udayavani, Jun 9, 2019, 6:00 AM IST

c-2

ಸಾಂದರ್ಭಿಕ ಚಿತ್ರ

ಅಮ್ಮ ಇವತ್ತು ಬೆಂಡೆಕಾಯಿ ಪಲ್ಯ ಎಷ್ಟು ರುಚಿಯಾಗಿದೆ ಯಾಕೆ?” ಎಂದು ಕೇಳಿದ.
“”ನಮ್ಮ ತೋಟದ್ದು ಕಣೋ. ಏನೂ ತರಕಾರಿ ಮನೆಯಲ್ಲಿ ಇಲ್ಲ ಅಂತ ಇದ್ದ ಬಂಡೆಕಾಯಿಯನ್ನು ಕಿತ್ತು ಪಲ್ಯ ಮಾಡಿದೆ, ಬೆಂಡೆಕಾಯಿ ತಾಜಾ ಆಗಿತ್ತಲ್ಲ ಅದಕ್ಕೆ ಅಷ್ಟು ರುಚಿ.”
“”ಅಮ್ಮ, ನಾವು ತುಂಬಾ ಬೆಂಡೆಕಾಯಿ ಗಿಡ ಹಾಕೋಣ” ಅಂದ ಮಗ.

ನಾವು ಕೊಡಗಿನ ಕುಶಾಲನಗರದಲ್ಲಿ ಇದ್ದಾಗ ಮನೆ ಹಿಂದೆ ಸ್ನಾನದ ನೀರಿಗೆ ಬಾಳೆಗಿಡ, ಸೊಪ್ಪು , ಪಪ್ಪಾಯಿ ಗಿಡ ಬೆಳೆದಿದ್ದೆವು. ಸೊಪ್ಪಿನ ಪಲ್ಯ ಎಷ್ಟು ರುಚಿ ಇರುತ್ತಿತ್ತು! ಅಮ್ಮ ಇವತ್ತು ಪಲ್ಯ ತುಂಬಾ ಚೆನ್ನಾಗಿದೆ ಎಂದು ಕೈ ನೆಕ್ಕಿದರೆ, ಅಮ್ಮ ಹೇಳುತ್ತಿದ್ದಳು, “”ಇದು ಇದು ಧರ್ಮರಾಯನ ತೋಟದ್ದು , ಹಾಲಕ್ಕಿ ಬೆಳೆಸಿದ್ದು” ಅಂತ ಹೇಳುತ್ತಿದ್ದಳು. “ಪಪ್ಪಾಯಿ’ ಅಂತ ಮುಖ ಸಿಂಡರಿಸುತ್ತಿದ್ದ ನಾವು ನಮ್ಮನೆ ಪಪ್ಪಾಯಿ ಹಣ್ಣನ್ನು ತಿಂದು ಊಟ ಬಿಡುತ್ತಿದ್ದೆವು. ಆ ಪಪ್ಪಾಯಿ ಹಣ್ಣಿಗೆ ಅಂತಹ‌ ಚಂದದ ಪರಿಮಳ ಇರುತ್ತಿತ್ತು.

ಅದು ಯಾವಾಗಲೂ ಅಷ್ಟೇ, ನಮ್ಮ ತೋಟದಲ್ಲಿ ಬೆಳೆದ ತಾಜಾ ತರಕಾರಿ, ಹಣ್ಣಿನ ರುಚಿ ಬೇರೆನೇ. ಅದರೊಂದಿಗೆ ಭಾವನಾತ್ಮಕ ಸಂಬಂಧ ಇರುವುದರಿಂದ ನಾವು ಬೆಳೆದದ್ದು ತಿನ್ನುವ ಸುಖವೇ ಬೇರೆ. ಅರ್ಜೆಂಟಿಗೆ ತರಕಾರಿ ಇಲ್ಲದಾಗ ಮಾಡುವ ಕರಿಬೇವಿನ, ದೊಡ್ಡಿಪತ್ರೆ ಎಲೆಯ ಚಟ್ನಿ, ಹಾಗಲಕಾಯಿ ಗೊಜ್ಜು, ಪಡವಲಕಾಯಿ, ಅವರೇಕಾಯಿ ಪಲ್ಯದ ರುಚಿ ಬಣ್ಣಿಸಲು ಅಸಾಧ್ಯ. ಮನೆಯಲ್ಲಿ ಬಳಸುವ ನಿರುಪಯುಕ್ತ ನೀರಿನ ಸದ್ಬಳಕೆ ಕೂಡ ಚೆನ್ನಾಗಿ ಆಗುತ್ತದೆ.

ನಾನು ಮೂವತ್ತು ವರ್ಷದ ಹಿಂದಿನ ಕುಶಾಲನಗರದ ಸಂತೆ ವಿಷಯ ಹೇಳುತ್ತಿದ್ದೇನೆ. ಅಲ್ಲಿ ಬುಧವಾರ ಸಂತೆ. ಏನು ಸಂತೆ, ಅದು ಒಂದು ಎಕರೆ ಜಾಗದಲ್ಲಿ ! ಎಷ್ಟು ವಿವಿಧ ತಾಜಾ ಸೊಪ್ಪು! ದಂಟಿನ ಸೊಪ್ಪು , ಮೆಂತೆ ಸೊಪ್ಪು, ಸಬ್ಸಿಗೆ ಸೊಪ್ಪು, ಸೌತೆಕಾಯಿಯಲ್ಲಿ ವೆರೈಟಿ, ಮರಗೆಣಸಿನಲ್ಲಿ ಬೇರೆ ಬೇರೆ ಆಕಾರ, ಕೆಂಪು-ಬಿಳಿ ಗೆಣಸು, ಬದನೆಕಾಯಿಯಲ್ಲಿ ನೀಲಿ, ಬಿಳಿ, ಉದ್ದನೆಯದು, ಗುಂಡದು, ಅವರೆಕಾಯಿ, ಬೀನ್ಸ್‌ನಲ್ಲಿ ವೈವಿಧ್ಯ ಬೇಕಾ? ಬಣ್ಣಬಣ್ಣದ ಕಾಳು. ವಿವಿಧ ಬಾಳೆಹಣ್ಣು , ಕಿತ್ತಲೆ ಹಣ್ಣು , ಹಲಸಿನ ಹಣ್ಣು, ಮಾವಿನ ಹಣ್ಣು , ಅದೇನು ಸಂತೆ. ತರಕಾರಿ ಆರಿಸಲು ಒಳ್ಳೆಯ ಅನುಭವ ಬೇಕು. ನಾನು ಮತ್ತು ನನ್ನ ತಂಗಿ ಅಷ್ಟು ಇಷ್ಟಪಟ್ಟು ಅಮ್ಮನ ಸೆರಗು ಹಿಡಿದುಕೊಂಡು ಸಂತೆಗೆ ಹೋಗುತ್ತಿದ್ದೆವು.

ಮದುವೆಯಾಗಿ ರಾಯಚೂರಿನ ಮಾನ್ವಿಗೆ ಬಂದ ಮೇಲೆ ಅದೇ ಸಂತೆಗೆ ಹೋಗುವ ಚಟ ಆರಂಭವಾಯಿತು. ಮಾನ್ವಿಯಲ್ಲಿ ಬುಧವಾರ ಸಂತೆ ಇರುತ್ತದೆ. ಇಲ್ಲಿನ ಸಂತೆ ನೋಡಿ ಹೌಹಾರಿದೆ. ಸಂತೆ ಒಂದೇ ಲೈನ್‌! ಅದೇ ಬದನೆಕಾಯಿ, ಮೆಣಸಿನಕಾಯಿ, ಚೌಳೆಕಾಯಿ ಮತ್ತು ಪುಂಡೆಪಲ್ಯ. ತಲೆ ಕೆಟ್ಟು ಹೋಗುತ್ತಿತ್ತು. ಇಲ್ಲಿಯ ಜನಗಳು ಇದನ್ನೇ ತಿನ್ನುವುದರಿಂದ ಅವರಿಗೆ ಇಷ್ಟೇ ಸಾಕು. ಇತ್ತೀಚೆಗೆ ಮಾನ್ವಿಯ ಸಂತೆ ಹಿಗ್ಗಿಕೊಂಡಿದೆ. ವಿವಿಧ ಸೊಪ್ಪು-ಹಣ್ಣು ದೊರೆಯುತ್ತದೆ. ಆದರೂ ಕುಶಾಲನಗರದ ಸಂತೆಯ ಚೆಂದ ಬೇರೆನೇ!

ಮೊನ್ನೆ ಜೂನ್‌ 5ರಂದು ಪರಿಸರ ದಿನ ಆಚರಿಸಿದೆವು. ಕಾಡು ಬೆಳೆಸದಿದ್ದರೂ ಪರವಾಗಿಲ್ಲ , ನಾವು ತಿನ್ನುವ ಹಣ್ಣು , ತರಕಾರಿ, ಹೂವನ್ನು ಸಾಧ್ಯವಾದಷ್ಟು ನಾವೇ ಮನೆ ಸುತ್ತ ಬೆಳೆಸುವುದು ಅತೀ ಅವಶ್ಯ. ಮನೆಬಳಕೆ ಆದ ನಿರುಪಯುಕ್ತ ನೀರನ್ನು ಚರಂಡಿಗೆ ಬಿಡದೆ, ಸುತ್ತಲಿನ ಗಿಡಗಳಿಗೆ ಹರಿಸೋಣ. ಮನೆಯ ಸುತ್ತಲೂ ಪರಿಸರ ಜೀವಂತವಾಗಿಡುವುದು ಒಂದು ಬಗೆಯ ಜೀವನಪ್ರೀತಿಯೇ.

ಎಸ್‌. ಬಿ. ಅನುರಾಧಾ

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day: ರಂಗದಿಂದಷ್ಟು ದೂರ…

World Theatre Day: ರಂಗದಿಂದಷ್ಟು ದೂರ…

Bhuvaneshwari hegde: ಓದುಗರ ಅಭಿರುಚಿಯ ಮಟ್ಟ ಹೆಚ್ಚಿಸುವ  ಹೊಣೆ ಬರಹಗಾರರ ಮೇಲಿದೆ…

Bhuvaneshwari hegde: ಓದುಗರ ಅಭಿರುಚಿಯ ಮಟ್ಟ ಹೆಚ್ಚಿಸುವ  ಹೊಣೆ ಬರಹಗಾರರ ಮೇಲಿದೆ…

Girish Kasaravalli: ತೆರೆ ಸರಿಯುವ ಮುನ್ನ…!

Girish Kasaravalli: ತೆರೆ ಸರಿಯುವ ಮುನ್ನ…!

Holi celebration: ಹೋಳಿ ಎಂಬ ಬಣ್ಣದೋಕುಳಿ!

Holi celebration: ಹೋಳಿ ಎಂಬ ಬಣ್ಣದೋಕುಳಿ!

13

World Sparrow Day: ಮತ್ತೆ ಮನೆಗೆ ಮರಳಲಿ ಗುಬ್ಬಚ್ಚಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.