ನಾಯಕಿ, ಗಾಯಕಿ ಮೇಘನಾ ಈಗ ನಿರ್ಮಾಪಕಿ


Team Udayavani, May 5, 2019, 6:00 AM IST

1

ಸಾಮಾನ್ಯವಾಗಿ ಚಿತ್ರರಂಗದಲ್ಲಿ ವಿವಾಹದ ಬಳಿಕ ನಾಯಕ ನಟಿಯರು ತೆರೆಮರೆಗೆ ಸರಿಯುತ್ತಾರೆ, ಚಿತ್ರರಂಗಕ್ಕೆ ಬಹುತೇಕರು ಗುಡ್‌ ಬೈ ಹೇಳುತ್ತಾರೆ ಅನ್ನೋದು ಚಾಲ್ತಿಯಲ್ಲಿರುವ ಮಾತು. ಆದರೆ ಇದಕ್ಕೆ ಅಪವಾದ ಎಂಬಂತೆ ಕೆಲವು ನಟಿಯರು ವಿವಾಹದ ಬಳಿಕವೂ ಚಿತ್ರರಂಗದ ಬೇರೆ ಬೇರೆ ವಿಭಾಗಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಕ್ರಿಯರಾಗುತ್ತಾರೆ. ಅಂತಹ ನಟಿಯರ ಸಾಲಿಗೆ ಈಗ ಮೇಘನಾ ರಾಜ್‌ ಹೆಸರು ಸೇರ್ಪಡೆಯಾಗುತ್ತಿದೆ.

ಹೌದು, ಚಿತ್ರರಂಗದಲ್ಲಿ ಬಾಲನಟಿಯಾಗಿ ಪ್ರವೇಶ ಪಡೆದು ಬಳಿಕ ನಾಯಕ ನಟಿಯಾಗಿ ಬಡ್ತಿ ಪಡೆದು ಕನ್ನಡ, ತಮಿಳು ಚಿತ್ರರಂಗ ಎರಡರಲ್ಲೂ ಗುರುತಿಸಿಕೊಂಡಿದ್ದ ಮೇಘನಾ ರಾಜ್‌, ಮದುವೆಯ ಬಳಿಕ ಯಾವ ಚಿತ್ರಗಳಿಗೂ ಬಣ್ಣ ಹಚ್ಚಿರಲಿಲ್ಲ. ಅದಾದ ಬಳಿಕ ಎಂಎಂಸಿಹೆಚ್‌, ಸಿಂಗ ಸೇರಿದಂತೆ ಕೆಲವು ಚಿತ್ರದ ಗೀತೆಗಳಿಗೆ ಧ್ವನಿಯಾಗುವ ಮೂಲಕ ಗಾಯಕಿಯಾಗಿಯೂ ಮೇಘನಾ ಸೈ ಎನಿಸಿಕೊಂಡಿದ್ದರು . ಇದೀಗ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿರುವ ಮೇಘನಾ ಸಿನಿಮಾ ನಿರ್ಮಾಣದತ್ತ ಮುಖ ಮಾಡಿದ್ದಾರೆ. ಮೇಘನಾ ಪುಟಾಣಿ ಪಂಟರ್ ಎಂಬ ಹೆಸರಿನ ಮಕ್ಕಳ ಚಿತ್ರವನ್ನು “ಮೇಘನಾ ಕ್ರಿಯೇಷನ್ಸ್‌’ ಬ್ಯಾನರ್‌ ಮೂಲಕ ನಿರ್ಮಿಸುತ್ತಿದ್ದು, ಇಲ್ಲಿಯವರೆಗೆ ನಾಯಕಿಯಾಗಿ, ಗಾಯಕಿಯಾಗಿ ಪರಿಚಿತರಾಗಿದ್ದ ಮೇಘನಾ ಈಗ ನಿರ್ಮಾಪಕಿಯಾಗುತ್ತಿದ್ದಾರೆ.

ತಮ್ಮ ಚೊಚ್ಚಲ ನಿರ್ಮಾಣದ ಚಿತ್ರದ ಬಗ್ಗೆ ಮತ್ತು ನಿರ್ಮಾಪಕಿ ಆಗುತ್ತಿರುವುದರ ಬಗ್ಗೆ ಮಾತನಾಡುವ ಮೇಘನಾ ರಾಜ್‌, “”ಪುಟಾಣಿ ಪಂಟರ್ ಚಿತ್ರದ ಹೆಸರೇ ಹೇಳುವಂತೆ ಇದೊಂದು ಮಕ್ಕಳ ಚಿತ್ರ. ಮೊದಲಿನಿಂದಲೂ ಚಿತ್ರ ನಿರ್ಮಾಣದ ಬಗ್ಗೆ ಆಸಕ್ತಿಯಿತ್ತು. ಈಗ ಆ ಕನಸು ನನಸಾಗುತ್ತಿದೆ. ನಾನು ಮಾಡುವ ಚಿತ್ರ ಮೊದಲು ನನಗೆ ಇಷ್ಟವಾಗಬೇಕು ನಂತರ ಅದು ಪ್ರೇಕ್ಷಕರಿಗೆ ಇಷ್ಟವಾಗುತ್ತದೆ. ಹಾಗಾಗಿ ನನಗೆ ಇಷ್ಟವಾಗುವ ಒಂದೊಳ್ಳೆ ಕಥೆಯನ್ನು ಆಯ್ಕೆ ಮಾಡಿಕೊಂಡು ಈ ಚಿತ್ರವನ್ನು ನಿರ್ಮಿಸಲು ಮುಂದಾದೆ’ ಎನ್ನುತ್ತಾರೆ.

ಇನ್ನು ಮೇಘನಾ ನಿರ್ಮಾಣದ ಈ ಚಿತ್ರವನ್ನು ಬೆನಕ ಪವನ್‌ ನಿರ್ದೇಶಿಸುತ್ತಿದ್ದು, “ಕನ್ನಡದ ಪ್ರೇಕ್ಷಕರ ಮುಂದೆ ಇಡೀ ಫ್ಯಾಮಿಲಿ ಕುಳಿತು ನೋಡುವಂಥ ಸದಭಿರುಚಿಯ ಚಿತ್ರವನ್ನು ಕೊಡಲು ನಮ್ಮ ತಂಡ ತಯಾರಿ ಮಾಡಿಕೊಂಡಿದೆ’ ಎಂಬ ಭರವಸೆಯನ್ನು ವ್ಯಕ್ತಪಡಿಸುತ್ತಾರೆ.

ಸದ್ಯ ಮೇಘನಾ ರಾಜ್‌ ನಿರ್ಮಾಣದ ಚೊಚ್ಚಲ ಚಿತ್ರದ ಚಿತ್ರೀಕರಣ ಆರಂಭ ವಾಗಿದ್ದು, ಎಲ್ಲಾ ಅಂದುಕೊಂಡಂತೆ ನಡೆದರೆ, ಈ ವರ್ಷ ಅಂತ್ಯದೊಳಗೆ ಮೇಘನಾ ಪ್ರೊಡಕ್ಷನ್‌ನ ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ. ನಾಯಕಿಯಾಗಿ, ಗಾಯಕಿಯಾಗಿ ಸೈ ಎನಿಸಿಕೊಂಡಿರುವ ಮೇಘನಾ ರಾಜ್‌ ನಿರ್ಮಾಪಕಿಯಾಗಿಯೂ ಸೈ ಎನಿಸಿಕೊಳ್ಳುತ್ತಾರಾ ಅನ್ನೋದು ಪುಟಾಣಿ ಪಂಟರ್ ಬಿಡುಗಡೆಯಾದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day: ರಂಗದಿಂದಷ್ಟು ದೂರ…

World Theatre Day: ರಂಗದಿಂದಷ್ಟು ದೂರ…

Bhuvaneshwari hegde: ಓದುಗರ ಅಭಿರುಚಿಯ ಮಟ್ಟ ಹೆಚ್ಚಿಸುವ  ಹೊಣೆ ಬರಹಗಾರರ ಮೇಲಿದೆ…

Bhuvaneshwari hegde: ಓದುಗರ ಅಭಿರುಚಿಯ ಮಟ್ಟ ಹೆಚ್ಚಿಸುವ  ಹೊಣೆ ಬರಹಗಾರರ ಮೇಲಿದೆ…

Girish Kasaravalli: ತೆರೆ ಸರಿಯುವ ಮುನ್ನ…!

Girish Kasaravalli: ತೆರೆ ಸರಿಯುವ ಮುನ್ನ…!

Holi celebration: ಹೋಳಿ ಎಂಬ ಬಣ್ಣದೋಕುಳಿ!

Holi celebration: ಹೋಳಿ ಎಂಬ ಬಣ್ಣದೋಕುಳಿ!

13

World Sparrow Day: ಮತ್ತೆ ಮನೆಗೆ ಮರಳಲಿ ಗುಬ್ಬಚ್ಚಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.