ರೋಮ್‌ ದೇಶದ ಕತೆ: ಸಿಂಹದ ಸಹಾಯ


Team Udayavani, Dec 8, 2019, 4:12 AM IST

sd-5

ಆ್ಯಂಡ್ರೋಕ್ಲಿಫ್ ಎಂಬ ರೈತನಿದ್ದ. ಅವನು ಶ್ರಮಪಟ್ಟು ದುಡಿದು ಬಂಜರು ಭೂಮಿಯಲ್ಲಿ ಕೃಷಿ ಮಾಡಿದ್ದ. ಹಲವಾರು ಹಣ್ಣುಗಳ ಮರಗಳನ್ನು ಬೆಳೆಸಿ ಕೈತುಂಬ ಫ‌ಸಲು ಕೊಯ್ಯುತ್ತಿದ್ದ. ಬೆಳೆದುದು ಎಲ್ಲವನ್ನೂ ತಾನೊಬ್ಬನೇ ತಿನ್ನಬೇಕೆಂಬ ದುರಾಸೆ ಅವನಿಗಿರಲಿಲ್ಲ. ತನ್ನ ತೋಟದ ಬಳಿಯ ದಾರಿಯಲ್ಲಿ ಹೋಗುವವರು ಹಸಿವು, ಬಾಯಾರಿಕೆಗಳಿಂದ ಬಳಲಿರುವುದು ಕಂಡರೆ ತೋಟದ ಒಳಗೆ ಬರುವಂತೆ ಕರೆಯುತ್ತಿದ್ದ. ಹೊಟ್ಟೆ ತುಂಬ ಹಣ್ಣುಗಳನ್ನು ತಿನ್ನಲು ಕೊಟ್ಟು ಸಂತೃಪ್ತಿಪಡಿಸಿ ಕಳುಹಿಸುತ್ತಿದ್ದ.

ಒಂದು ದಿನ ಹೊಸಬನೊಬ್ಬ ರೈತನ ಮನೆಗೆ ಬಂದ. “”ನನ್ನ ಪರಿಚಯವಾಯಿತೆ? ನಾನು ಬಹು ವರ್ಷಗಳ ಹಿಂದೆ ಮನೆ ಬಿಟ್ಟುಹೋದ ನಿನ್ನ ಹಿರಿಯಣ್ಣ. ನಿನಗೆ ನೆನಪಿದೆಯೆ?” ಎಂದು ಕೇಳಿದ. “”ಇಲ್ಲವಲ್ಲ, ನನ್ನ ಅಪ್ಪ, ಅಮ್ಮ ಇಬ್ಬರೂ ಈಗ ಜೀವಂತವಾಗಿಲ್ಲ. ಅವರು ನನಗೊಬ್ಬ ಅಣ್ಣನಿದ್ದಾನೆಂದು ಹೇಳಿದ ನೆನಪಿಲ್ಲ. ಏನೇ ಇರಲಿ, ಅಣ್ಣ ಎಂದು ಹೇಳಿದೆಯಲ್ಲವೆ! ತುಂಬ ಸಂತೋಷವಾಯಿತು. ಬಾ, ನನ್ನೊಂದಿಗೆ ಮನೆಗೆ ಹೋಗಿ ಆರಾಮವಾಗಿ ಊಟ ಮಾಡಿ ಮಾತನಾಡೋಣ. ಮುಂದೆ ನನ್ನ ಜೊತೆಗೇ ನೀನೂ ಇರಬಹುದು” ಎಂದು ಕರೆದ.

“”ನಾನು ನಿನ್ನ ಔತಣ ಸ್ವೀಕರಿಸಲು ಬಂದಿಲ್ಲ. ನೀನು ಈಗ ಸುಖವಾಗಿ ಫ‌ಸಲು ಮಾರಾಟ ಮಾಡಿಕೊಂಡು ಕೈತುಂಬ ಹಣ ಸಂಪಾದಿಸುತ್ತಿರುವೆಯಲ್ಲ, ಈ ತೋಟದ ಹಕ್ಕಿನ ವಿಚಾರ ಮಾತನಾಡಲು ಬಂದಿದ್ದೇನೆ. ಇದು ನಮ್ಮ ಅಪ್ಪ ಬೆಳೆದಿರುವ ತೋಟ. ಇದರಲ್ಲಿ ನನಗೆ ಅರ್ಧ ತೋಟದ ಮೇಲೆ ಹಕ್ಕಿದೆ. ಈಗಲೇ ಬಿಟ್ಟುಕೊಡು” ಎಂದು ಬಂದವನು ಕೇಳಿದ.

“”ಬಿಟ್ಟುಕೊಡು ಎಂದು ಹಕ್ಕಿನಿಂದ ಕೇಳಲು ಇದು ನಿನ್ನ ಶ್ರಮದಲ್ಲಿ ಬೆಳೆದ ತೋಟವಲ್ಲ. ಏನೂ ಬೆಳೆಯದ ಬಂಜರು ನೆಲದಲ್ಲಿ ನನ್ನ ಬೆವರಿಳಿಸಿ ಮರಗಳನ್ನು ಬೆಳೆದಿದ್ದೇನೆ. ನಾನೊಬ್ಬನೇ ಇದರಲ್ಲಿ ಬೆಳೆದ ಹಣ್ಣುಗಳನ್ನು ತಿನ್ನುವುದಲ್ಲ, ಹಕ್ಕಿಗಳಿಗೆ, ಪ್ರಾಣಿಗಳಿಗೆ, ಹಸಿದು ಬಂದವರಿಗೆ ಕೊಟ್ಟುಬಿಡುತ್ತೇನೆ. ಮಿಕ್ಕುಳಿದುದನ್ನು ಮಾತ್ರ ಮಾರಾಟ ಮಾಡುತ್ತೇನೆ. ನಿನಗೂ ಬೇಕಿದ್ದರೆ ದಿನಕ್ಕೊಂದು ಬುಟ್ಟಿ ಹಣ್ಣು ಉಚಿತವಾಗಿ ಕೊಡುತ್ತೇನೆ, ಬಂದು ತೆಗೆದುಕೊಂಡು ಹೋಗು” ಎಂದು ರೈತ ಹೇಳಿದ.

ಆದರೆ ಬಂದವನು ಭೂಮಿಯಲ್ಲಿ ಭಾಗವೇ ಬೇಕೆಂದು ಹಟ ಹಿಡಿದ. “”ನನ್ನ ಪಾಲಿನ ತೋಟವನ್ನು ಬಿಟ್ಟುಕೊಡದಿದ್ದರೆ ಸುಮ್ಮನೆ ಇರುವುದಿಲ್ಲ. ನಾಳೆ ರಾಜನ ಬಳಿಗೆ ಹೋಗಿ ದೂರು ಕೊಡುತ್ತೇನೆ. ನೀನು ವಿಚಾರಣೆಗಾಗಿ ರಾಜ ಸಭೆಗೆ ಬರಬೇಕಾಗುತ್ತದೆ” ಎಂದು ಎಚ್ಚರಿಸಿದ. ಆದರೂ ರೈತ ಬಗ್ಗಲಿಲ್ಲ. “”ದೊರೆಗಳು ಕರುಣಾಳುಗಳು. ಸತ್ಯವಂತರಿಗೆ ನ್ಯಾಯ ಕೊಡಲು ಎಂದಿಗೂ ತಪ್ಪುವುದಿಲ್ಲ. ನನ್ನ ದುಡಿಮೆಯನ್ನು ಅವರು ಖಂಡಿತ ಗುರುತಿಸುತ್ತಾರೆ” ಎಂದು ವಿಶ್ವಾಸದಿಂದ ಹೇಳಿದ. ಬಂದವನು ಹೊರಟುಹೋದ.

ಮರುದಿನ ಇನ್ನೊಬ್ಬ ವ್ಯಕ್ತಿ ರೈತನ ಮನೆಗೆ ಬಂದ. “”ನಾನು ರಾಜನ ಸಭೆಯಿಂದ ಬಂದಿದ್ದೇನೆ. ನೀನು ನಿನ್ನ ದಾಯಾದಿಗೆ ಸೇರಿದ ಭಾಗವನ್ನು ಕೊಡುವುದಕ್ಕೆ ನಿರಾಕರಿಸಿರುವ ಬಗ್ಗೆ ನಿನ್ನ ಮೇಲೆ ದೂರು ಕೊಟ್ಟಿದ್ದಾನೆ. ವಿಚಾರಣೆಗಾಗಿ ನೀನು ನನ್ನೊಂದಿಗೆ ರಾಜನ ಸನ್ನಿಧಿಗೆ ಹೊರಟು ಬರಬೇಕು” ಎಂದು ಕರೆದ. ರೈತ ಧೈರ್ಯದಿಂದ ಅವನ ಜೊತೆಗೆ ಹೊರಟುಬಂದ. ಕಾಡುದಾರಿಯಲ್ಲಿ ತುಂಬ ಮುಂದೆ ಬಂದಾಗ ಆ ವ್ಯಕ್ತಿಯು ದೊಡ್ಡ ಸಂಕೋಲೆಯಿಂದ ರೈತನ ಕೈಕಾಲುಗಳನ್ನು ಬಂಧಿಸಿದ.

ರೈತನಿಗೆ ಅಚ್ಚರಿಯಾಯಿತು. “”ಅಣ್ಣ, ನಾನು ನಿನ್ನ ಜೊತೆಗೇ ಬರುತ್ತಿದ್ದೇನಲ್ಲ. ಸುಮ್ಮನೆ ಯಾಕೆ ನನ್ನನ್ನು ಸಂಕೋಲೆಯಿಂದ ಬಂಧಿಸುತ್ತಿರುವೆ?” ಎಂದು ಪ್ರಶ್ನಿಸಿದ. ವ್ಯಕ್ತಿಯು ಗಹಗಹಿಸಿ ನಕ್ಕ. “”ನಿನಗೆ ಮಾತ್ರ ಸಂಕೋಲೆ ತೊಡಿಸಿಲ್ಲ. ನೋಡು ಅವರೆಲ್ಲರನ್ನೂ” ಎಂದು ಕೈತೋರಿಸಿದ. ಆ ಕಡೆಗೆ ನೋಡಿದಾಗ ನೂರಾರು ಜನರು ಅವನಂತೆಯೇ ಸಂಕೋಲೆಯಿಂದ ಬಂಧಿತರಾಗಿರುವುದು ಕಾಣಿಸಿತು. “”ಏನು, ಇವರೆಲ್ಲರೂ ನನ್ನ ಹಾಗೆ ದಾಯಾದಿಗೆ ಭಾಗ ಕೊಡದ ಅಪರಾಧ ಮಾಡಿದವರೆ?” ಎಂದು ರೈತ ಬೆರಗಾಗಿ ಕೇಳಿದ.

ವ್ಯಕ್ತಿ ಇನ್ನಷ್ಟು ಜೋರಾಗಿ ನಕ್ಕ. “”ಶುದ್ಧ ಅಮಾಯಕ ನೀನು. ನಿನ್ನಂತಹ ಅಮಾಯಕರೇ ನನಗೆ ಸಂಪತ್ತು ತರುವವರು. ನಾನು ಗುಲಾಮರ ವ್ಯಾಪಾರಿ. ನಿನ್ನ ಬಳಿಗೆ ದಾಯಾದಿಯಂತೆ ನಟಿಸುತ್ತ ಬಂದವನು ನನ್ನ ಸಹಚರ. ದೇಹದಲ್ಲಿ ದುಡಿಯಲು ಕಸುವಿರುವವರನ್ನು ಯಾವುದಾದರೂ ಒಂದು ವಿಧದಿಂದ ಮೋಸಪಡಿಸಿ ನಮ್ಮ ಜೊತೆಗೆ ಬರುವ ಹಾಗೆ ಮಾಡುತ್ತೇವೆ. ಒಮ್ಮೆ ಬಂದವರು ಜೀವಮಾನವಿಡೀ ತಪ್ಪಿಸಿಕೊಳ್ಳದಂತೆ ಸಂಕೋಲೆಯಿಂದ ಬಂಧಿಸಿ ರಾಜನ ಬಳಿಗೆ ಕರೆದೊಯ್ಯುತ್ತೇವೆ. ನಿಮ್ಮನ್ನು ತನ್ನ ಅರಮನೆಯ ಕೆಲಸಕ್ಕೆ ತೊಡಗಿಸಿ ರಾಜನು ಪ್ರತಿಯಾಗಿ ನಮಗೆ ಮೂಟೆ ತುಂಬ ಚಿನ್ನದ ನಾಣ್ಯಗಳನ್ನು ಕೊಡುತ್ತಾನೆ. ಇದು ನಮ್ಮ ವ್ಯಾಪಾರದ ಗುಟ್ಟು” ಎಂದು ಹೇಳಿದ.

ಎಲ್ಲ ಗುಲಾಮರ ಜೊತೆಗೆ ರೈತನನ್ನೂ ನಡೆಸಿಕೊಂಡು ವ್ಯಾಪಾರಿಯು ರಾಜನ ಸನ್ನಿಧಿಗೆ ತಲುಪಿದ. “”ಎಷ್ಟೊಂದು ಜನರನ್ನು ಕರೆತಂದಿರುವೆ! ನನಗೆ ತುಂಬ ಸಂತೋಷವಾಗಿದೆ. ಪ್ರತಿಯೊಬ್ಬ ಗುಲಾಮನ ಬಂಧನವನ್ನು ಕಳಚಿಬಿಡು. ಅವರನ್ನು ನೋಡಿದ ಬಳಿಕ ಯೋಗ್ಯತೆಗೆ ತಕ್ಕಂತೆ ಬೆಲೆಯನ್ನು ನಿರ್ಧರಿಸುತ್ತೇನೆ” ಎಂದು ರಾಜನು ಹೇಳಿದ. ವ್ಯಾಪಾರಿಯು ಗುಲಾಮರ ಸಂಕೋಲೆಗಳನ್ನು ತೆಗೆದುಹಾಕಿದ.

ಮರುಕ್ಷಣವೇ ರೈತನು ಮಿಂಚಿನ ವೇಗದಲ್ಲಿ ಎಲ್ಲರ ನಡುವಿನಿಂದ ತಪ್ಪಿಸಿಕೊಂಡು ಹೊರಗೆ ಓಡತೊಡಗಿದ. ವ್ಯಾಪಾರಿಯು, “”ದೊರೆಯೇ, ಅವನನ್ನು ತಪ್ಪಿಸಿಕೊಳ್ಳಲು ಬಿಡಬೇಡಿ. ಆ ಗುಲಾಮ ತುಂಬ ಚಾಲಾಕಿಯಾಗಿದ್ದಾನೆ. ಯುದ್ಧ ಸಂದರ್ಭದಲ್ಲಿ ಅವನಂತಹ ವೇಗದ ಓಟಗಾರರು ನಿಮ್ಮಲ್ಲಿದ್ದರೆ ತುಂಬ ಸಹಾಯವಾಗುತ್ತದೆ. ಅಶ್ವದಳದ ಸೈನಿಕರನ್ನು ಕಳುಹಿಸಿ ಅವನನ್ನು ಹುಡುಕಿಸಿ ಕರೆತರಲು ಹೇಳಿ” ಎಂದು ಕೇಳಿಕೊಂಡ. ರಾಜನು ಕೂಡಲೇ ಸೈನಿಕರಿಗೆ ಆಜ್ಞೆ ಮಾಡಿದ.

ರೈತನು ತಪ್ಪಿಸಿಕೊಂಡು ಕಾಡು ಸೇರಿದ. ಹಸಿವು, ಬಾಯಾರಿಕೆಗಳಿಂದ ಒಂದು ಹೆಜ್ಜೆಯನ್ನೂ ಮುಂದಿಡಲಾಗದೆ ಒಂದೆಡೆ ಕುಳಿತುಕೊಂಡಿರುವಾಗ ಒಂದು ಸಿಂಹವು ಕುಂಟುತ್ತ ಅವನ ಬಳಿಗೆ ಬಂದಿತು. ಎದ್ದು ಓಡಲು ಶಕ್ತಿಯಿಲ್ಲದ ರೈತ, “”ಬಾ, ನನ್ನನ್ನು ಕೊಂದು ತಿಂದುಬಿಡು. ರಾಜನ ಬಳಿ ಗುಲಾಮನಾಗಿ ಜೀವನವಿಡೀ ದುಡಿಯುವ ಬದಲು ತಕ್ಷಣ ಸಾವು ಬಂದರೆ ನನಗೂ ಒಳ್ಳೆಯದು. ನಿನ್ನ ಹಸಿವು ನೀಗಿಸಿದ ಪುಣ್ಯವಾದರೂ ಸಿಗುತ್ತದೆ” ಎಂದು ಅದನ್ನು ಕರೆದ. ಆದರೆ ಸಿಂಹ ಅವನ ಮೇಲೆ ನೆಗೆಯಲಿಲ್ಲ. ಬಳಿಗೆ ಬಂದು ಮುಂಗಾಲನ್ನೆತ್ತಿ ಮೌನವಾಗಿ ನಿಂತುಕೊಂಡಿತು.

ರೈತ ಸಿಂಹದ ಮುಂಗಾಲನ್ನು ನೋಡಿದ. ಒಂದು ದೊಡ್ಡ ಮುಳ್ಳು ಚುಚ್ಚಿಕೊಂಡು ಗಾಯದಲ್ಲಿ ಕೀವು ಆಗಿತ್ತು. ಸಿಂಹವು ನರಳುತ್ತಿತ್ತು. ರೈತನಿಗೆ ಅದರ ನೋವು ಅರ್ಥವಾಯಿತು. ಉಪಾಯದಿಂದ ಸಿಂಹದ ಕಾಲಿಗೆ ಚುಚ್ಚಿಕೊಂಡಿರುವ ಮುಳ್ಳನ್ನು ಹೊರಗೆ ತೆಗೆದ. ಸನಿಹವಿದ್ದ ಬಳ್ಳಿ, ಸೊಪ್ಪುಗಳನ್ನು ತಂದು ಅರೆದು ಗಾಯಕ್ಕೆ ಲೇಪಿಸಿದ. ನೋವು ಶಮನವಾದ ಬಳಿಕ ಸಿಂಹ ಹೊರಟುಹೋಯಿತು. ಅಷ್ಟರಲ್ಲಿ ರಾಜನ ಭಟರು ಕುದುರೆಯ ಮೇಲೇರಿಕೊಂಡು ಅಲ್ಲಿಗೆ ಬಂದರು. ಸುಲಭವಾಗಿ ರೈತನನ್ನು ಹಿಡಿದು ಬಂಧಿಸಿ ರಾಜನ ಬಳಿಗೆ ಕರೆದೊಯ್ದರು.

ರೈತನನ್ನು ನೋಡಿ ರಾಜನು ಕೋಪದಿಂದ, “”ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ತಪ್ಪಿಗೆ ಕ್ಷಮೆಯೇ ಇಲ್ಲವೆಂಬುದು ನಿನಗೆ ಗೊತ್ತಿದೆಯೇ? ನಿನ್ನನ್ನು ಒಂದು ಸಿಂಹಕ್ಕೆ ಆಹಾರವಾಗಿ ಕೊಡುವುದೇ ಅಪರಾಧಕ್ಕೆ ತಕ್ಕ ದಂಡನೆ. ನೀನು ಅನುಭವಿಸುವ ನೋವು ಇತರ ಗುಲಾಮರಿಗೂ ಪಾಠವಾಗಬೇಕು” ಎಂದು ಹೇಳಿ ಭಟರೊಂದಿಗೆ ಕಾಡಿನಿಂದ ಒಂದು ಸಿಂಹವನ್ನು ಹಿಡಿದು ತರಲು ಆಜ್ಞಾಪಿಸಿದ. ಭಟರು ಕಾಡಿಗೆ ಹೋದರು. ಒಂದು ಬೋನಿನಲ್ಲಿ ಸಿಂಹವನ್ನು ಹಿಡಿದು ತಂದರು.

ಸಿಂಹದ ಬೋನಿನೊಳಗೆ ರೈತನನ್ನು ತಳ್ಳಿದರು. ಸಿಂಹವು ಗರ್ಜಿಸುತ್ತ ರೈತನೆಡೆಗೆ ಹಾರಿತು. ಆದರೆ ಅವನ ಸಮೀಪ ಹೋದ ಕೂಡಲೇ ಸಾಕಿದ ನಾಯಿಯ ಹಾಗೆ ಬಾಲ ಅಲ್ಲಾಡಿಸಿತು. ಅವನ ತೊಡೆಯ ಮೇಲೆ ತಲೆಯಿರಿಸಿ ಸುಮ್ಮನೆ ಮಲಗಿಕೊಂಡಿತು. ರಾಜನಿಗೆ ಆಶ್ಚರ್ಯವಾಯಿತು. ಕ್ರೂರವಾದ ಸಿಂಹವೊಂದು ಇವನ ಮುಂದೆ ಹೀಗೆ ವರ್ತಿಸಬೇಕಾದರೆ ಇವನೊಬ್ಬ ಮಹಾತ್ಮನಿರಬಹುದು ಅಥವಾ ಮಾಂತ್ರಿಕನಿರಬಹುದು ಎಂದು ಅವನಿಗನಿಸಿ ಗೂಡಿನಿಂದ ಹೊರಗೆ ಕರೆತರಲು ಆಜ್ಞೆ ಮಾಡಿದ. ಬಳಿಗೆ ಕರೆದು ವಿಚಾರಿಸಿದ.

ರೈತನು, “”ದೊರೆಯೇ, ನಾನು ಮಾಟಗಾರನೂ ಅಲ್ಲ, ಮಹಾತ್ಮನೂ ಅಲ್ಲ. ಒಬ್ಬ ಸಾಮಾನ್ಯನಾದ ರೈತ. ಸಿಂಹವು ತಾನು ಮನುಷ್ಯನಂತೆ ಕೃತಘ್ನನಲ್ಲ, ಮೋಸಗಾರನಲ್ಲ ಎಂದು ತೋರಿಸಿಕೊಡಲು ತನ್ನ ಕ್ರೌರ್ಯವನ್ನು ತ್ಯಜಿಸಿದೆ” ಎಂದು ವಿನಯದಿಂದ ನಿವೇದಿಸಿದ.

ರಾಜನು ಹುಬ್ಬೇರಿಸಿದ. “”ನಿನ್ನ ಮಾತು ನನಗೆ ಅರ್ಥವಾಗಲಿಲ್ಲ. ಏನು ವಿಷಯ ನಡೆದಿದೆ ಎಂಬುದನ್ನು ಒಂದೂ ಬಿಡದೆ ವಿವರಿಸು” ಎಂದು ಹೇಳಿದ. ರೈತನು ತನ್ನನ್ನು ಕರೆತಂದಿರುವ ವ್ಯಾಪಾರಿಯತ್ತ ಬೆರಳು ತೋರಿಸಿದ. ಅವನು ಮಾಡಿದ ಮೋಸವನ್ನೂ ವಿವರಿಸಿದ. “”ಮನುಷ್ಯ ತನ್ನ ಲಾಭಕ್ಕಾಗಿ ಏನು ಬೇಕಾದರೂ ಮಾಡುತ್ತಾನೆ. ಆದರೆ ಮೃಗಗಳು ಹಸಿವಿಗಾಗಿ ಮಾತ್ರ ಕೊಲ್ಲುತ್ತವೆ. ಉಪಕಾರವನ್ನು ಸ್ಮರಿಸಿಕೊಳ್ಳುತ್ತವೆ” ಎಂದು ನಡೆದ ಕತೆಯನ್ನು ಹೇಳಿದ.

ರಾಜನು, “”ಈ ರೈತನ ಒಳ್ಳೆಯ ಗುಣಕ್ಕೆ ಮೆಚ್ಚಿಕೊಂಡಿದ್ದೇನೆ. ಅವನಿಗೆ ಹೊರುವಷ್ಟು ಚಿನ್ನದ ನಾಣ್ಯಗಳನ್ನು ಕೊಟ್ಟು ಕಳುಹಿಸಿ. ಮೋಸಗಾರನಾದ ವ್ಯಾಪಾರಿಯು ಕರೆತಂದ ಎಲ್ಲರಿಗೂ ಗುಲಾಮಗಿರಿಯಿಂದ ವಿಮೋಚನೆ ನೀಡಿ. ವ್ಯಾಪಾರಿಯನ್ನು ಸಿಂಹದ ಬೋನಿನೊಳಗೆ ದೂಡಿ ಅದಕ್ಕೆ ಆಹಾರವಾಗಲು ಕಳುಹಿಸಿ” ಎಂದು ಹೇಳಿದ.

ಪ. ರಾಮಕೃಷ್ಣ ಶಾಸ್ತ್ರಿ

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day: ರಂಗದಿಂದಷ್ಟು ದೂರ…

World Theatre Day: ರಂಗದಿಂದಷ್ಟು ದೂರ…

Bhuvaneshwari hegde: ಓದುಗರ ಅಭಿರುಚಿಯ ಮಟ್ಟ ಹೆಚ್ಚಿಸುವ  ಹೊಣೆ ಬರಹಗಾರರ ಮೇಲಿದೆ…

Bhuvaneshwari hegde: ಓದುಗರ ಅಭಿರುಚಿಯ ಮಟ್ಟ ಹೆಚ್ಚಿಸುವ  ಹೊಣೆ ಬರಹಗಾರರ ಮೇಲಿದೆ…

Girish Kasaravalli: ತೆರೆ ಸರಿಯುವ ಮುನ್ನ…!

Girish Kasaravalli: ತೆರೆ ಸರಿಯುವ ಮುನ್ನ…!

Holi celebration: ಹೋಳಿ ಎಂಬ ಬಣ್ಣದೋಕುಳಿ!

Holi celebration: ಹೋಳಿ ಎಂಬ ಬಣ್ಣದೋಕುಳಿ!

13

World Sparrow Day: ಮತ್ತೆ ಮನೆಗೆ ಮರಳಲಿ ಗುಬ್ಬಚ್ಚಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.