ನಾಗನಿಗೇಕೆ ಪೂಜೆ? ಭಾವ ಬಂಧ ಬೆಸೆಯುವ ನಾಗರಪಂಚಮಿ


Team Udayavani, Jul 26, 2017, 6:05 AM IST

naga-panchami.jpg

ನಾಳೆ ನಾಗರ ಪಂಚಮಿಯ ಸಡಗರ. ಹಾವುಗಳು ಅಂಕುಡೊಂಕಾಗಿ ಸಾಗುವಂತೆ ಮಹಿಳೆಯ ಮನಸ್ಸು ಕೂಡ ಹಾಗೆಯೇ ಚಲಿಸುವಂಥದ್ದು. ಅದಕ್ಕೇ ಸ್ತ್ರೀಗೆ ನಾಗನ ಮೇಲೆ ವಿಶೇಷ ಭಕ್ತಿ… 

ಆಷಾಡ ಮಾಸ ಕಳೆದು ಶ್ರಾವಣ ಬಂತೆಂದರೆ ಹಬ್ಬಗಳದ್ದೇ ಸಾಲು  ಸಾಲು. ಅದರಲ್ಲಿ ಆರಂಭದ ಸಂಭ್ರಮವೇ “ನಾಗರಪಂಚಮಿ’ಯದ್ದು. ಕುಟುಂಬದ ನೆಮ್ಮದಿ, ಆರೋಗ್ಯ, ಸಂತಾನ ಲಾಭ ಮೊದಲಾದ ಉದ್ದೇಶದಿಂದ ನಾಗರಪಂಚಮಿಗೆ ಸ್ತ್ರೀಯರು ಹೆಚ್ಚು ಆದ್ಯತೆ ನೀಡುತ್ತಾರೆ. ವರ್ಷ ಋತುವಿನ ಶ್ರಾವಣ ಮಾಸದ ತುಂತುರು ಹನಿಯಿಂದ ಭೂಮಿ ತಾಯಿಯು ತನ್ನ  ದಾಹವನ್ನು ತೀರಿಸಿಕೊಂಡು, ಮೈ ತುಂಬಾ ಹಸಿರನ್ನುಟ್ಟ ಸುಂದರಿಯಂತೆ ಈ  ಹಬ್ಬಕ್ಕೆ ಸಿಂಗಾರಗೊಂಡಿರುತ್ತದೆ.

ಹಾವುಗಳು ಅಂಕುಡೊಂಕಾಗಿ ಸಾಗುವಂತೆ ಮಹಿಳೆಯ ಮನಸ್ಸು ಕೂಡ ಹಾಗೆಯೇ ಚಲಿಸುವಂಥದ್ದು. ಅದಕ್ಕೇ ಆಕೆಗೆ ನಾಗನ ಮೇಲೆ ಭಕ್ತಿಯೂ ಅಧಿಕ. ಅಂದು ನಾಗನ ಆರಾಧನೆಗೆ ಹುತ್ತದ ಮಣ್ಣು, ಹುಲಿಕಡ್ಡಿ, ಹುಣಸೆಕಾಯಿ, ಅರಳು, ತಂಬಿಟ್ಟು, ಅಕ್ಕಿಹಿಟ್ಟು, ಎಳ್ಳುಂಡೆ ಮುಂತಾದುವುಗಳ ತಯಾರಿ ಜೋರಾಗಿಯೇ ಸಾಗುತ್ತದೆ. ಹುಲಿಕಡ್ಡಿಯಿಂದ ಚಿಕ್ಕದಾಗಿ ಚಪ್ಪರವನ್ನು ನಿರ್ಮಿಸಿ, ಅದರಡಿಯಲ್ಲಿ ಹುತ್ತದ ಮಣ್ಣಿನಿಂದ ತಯಾರಿಸಿದಂಥ ನಾಗನನ್ನು ಪ್ರತಿಷ್ಠಾಪಿಸಿ, ಹಸಿ ಅಕ್ಕಿಹಿಟ್ಟಿನಿಂದ ಸಿದ್ಧಪಡಿಸಿದ ತೊಟ್ಟಿಲಿನಂಥ ಬಟ್ಟಲನ್ನು ಇಟ್ಟು ಅರಿಶಿನದಲ್ಲಿ ನೆನೆಸಿ ತೆಗೆದಂಥ ಹಳದಿ ಗೆಜ್ಜೆ ವಸ್ತ್ರಗಳನ್ನು ನಾಗಪ್ಪನಿಗೆ ಅರ್ಪಿಸುವುದು ವಾಡಿಕೆ. ಇದನ್ನು ಚಾಚೂ ತಪ್ಪದೇ ಮಾಡುವ ಕಾಯಕ ಮನೆಯೊಡತಿಯದ್ದು. 

ನಾಗರಪಂಚಮಿ ಬಾಂಧವ್ಯವನ್ನೂ ಬೆಸೆಯುವ ಹಬ್ಬ. ಪ್ರೀತಿಯ ತಂಗಿಗೆ ಅಣ್ಣನು ಉಡುಗೊರೆ ನೀಡಲು ಇದೊಂದು ಸುಸಂದರ್ಭ. ಅಣ್ಣ ತನ್ನ ಕೈಯಲ್ಲಾದ ಉಡುಗೊರೆಯನ್ನು ಕೊಟ್ಟು, ತಂಗಿಯ ಮೊಗದ ಖುಷಿಯಲ್ಲಿ ಕಂಡು ಹಿಗ್ಗುತ್ತಾನೆ. ಇಬ್ಬರ ಸಂಬಂಧ ಇನ್ನಷ್ಟು ಗಟ್ಟಿಯಾಗುವುದು ಈ ಉಡುಗೊರೆಯ ವಿಶೇಷ.

ಸರ್ಪರಾಜನೇ ಸಂಜೀವಿನಿ ತಂದ!
ಹಿಂದೆ ಪಾಂಡ್ಯ ದೇಶದಲ್ಲಿ ವೇದಶರ್ಮನೆಂಬ ಬ್ರಾಹ್ಮಣನಿದ್ದನು. ಆತನಿಗೆ ಎಂಟು ಗಂಡುಮಕ್ಕಳು ಹಾಗೂ ಒಬ್ಬಳೇ ಮಗಳು. ಅವಳ ಹೆಸರು ಸುಶೀಲೆ. ಒಮ್ಮೆ ಗರುಡ ರಾಜನಿಗೆ ಹೆದರಿ ನಾಗರ ಹಾವೊಂದು ಸುಶೀಲೆಯ ಮನೆಯನ್ನು ಹೊಕ್ಕಿತು. ಸದ್ಗುಣೆಯಾದ ಸುಶೀಲೆ ಆ ಹಾವನ್ನು ಸಲಹಿದಳು. ಸಂತುಷ್ಟಗೊಂಡ ಹಾವು ಪ್ರತಿದಿನ ಒಂದು ತೂಕ ಚಿನ್ನ ತಂದುಕೊಡುತ್ತಿತ್ತು. ಇದರಿಂದ ಮನೆಯ ಬಡತನ ನಿರ್ಮೂಲವಾಯಿತು. ದುರದೃಷ್ಟವಶಾತ್‌ ಸುಶೀಲೆಯ ಅಣ್ಣಂದಿರಿಗೆ ಹಾವಿನ ವಿಚಾರ ತಿಳಿದು, ಅದನ್ನು ಕೊಲ್ಲಲು ಮುಂದಾಗುತ್ತಾರೆ. ರೋಷಗೊಂಡ ಹಾವು ಎಲ್ಲರನ್ನೂ ಕಚ್ಚಿಬಿಡುತ್ತದೆ.

ಇದರಿಂದ ನೊಂದ ಸುಶೀಲೆ, ಶ್ರೀಮನ್ನಾರಾಯಣನ ಮೊರೆ ಹೋಗುತ್ತಾಳೆ. “ಸರ್ಪರಾಜನೇ, ಸಂಜೀವಿನಿ ರಸ ತಂದು ಬ್ರಾಹ್ಮಣನ ಮಕ್ಕಳನ್ನು ಬದುಕಿಸು’ ಎಂದು ನಾರಾಯಣನ ಸೂಚನೆ ಮೇರೆಗೆ ನಾಗರಾಜನು ಬ್ರಾಹ್ಮಣನ ಪುತ್ರರನ್ನು ಬದುಕಿಸಿ, ಆ ಕನ್ಯೆಗೆ ಅಪರಿಮಿತ ಸಂಪತ್ತು ಕೊಟ್ಟನಂತೆ. ಅಂದಿನಿಂದಲೂ ನಾಗಪೂಜೆಗೆ ವಿಶೇಷ ಮಹತ್ವ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿವಸ ನಾಗ ಪೂಜೆ ಮಾಡಿದರೆ ಸರ್ವಪಾಪ ಪರಿಹಾರವಾಗುತ್ತದೆ ಎಂಬ ನಂಬಿಕೆಯಿದೆ.

– ಭಾಗ್ಯ ನಂಜುಂಡಸ್ವಾಮಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.