ಆಹಾ, ಆಂಧ್ರ ಚಟ್ನಿ


Team Udayavani, Jun 19, 2019, 5:00 AM IST

v-8

ಆಂಧ್ರದ ಜೊತೆಗೆ ಗಡಿಯನ್ನು ಹಂಚಿಕೊಂಡಿರುವ ಕರ್ನಾಟಕ, ಅಲ್ಲಿನ ಆಹಾರಶೈಲಿಗೂ ಮಾರು ಹೋಗಿರುವುದು ಸುಳ್ಳಲ್ಲ. ಅದಕ್ಕೆ ಸಾಕ್ಷಿ ನಮ್ಮಲ್ಲಿರುವ ಆಂಧ್ರಶೈಲಿಯ ಹೋಟೆಲ್‌ಗ‌ಳು. ಆಂಧ್ರದ ಅಡಿಗೆ ಖಾರದಲ್ಲೂ, ರುಚಿಯಲ್ಲೂ ಒಂದು ಕೈ ಮಿಗಿಲು. ಅದರಲ್ಲೂ ಅಲ್ಲಿನ ವೈವಿಧ್ಯಮಯ ಚಟ್ನಿಗಳನ್ನು ನೀವೊಮ್ಮೆ ಸವಿಯಲೇಬೇಕು. ಅದಕ್ಕೆಂದೇ ಈ ರೆಸಿಪಿಗಳು…

1. ಗೊಂಗುರ (ಪುಂಡಿ ಸೊಪ್ಪು) ಚಟ್ನಿ: (ಗೊಂಗುರವನ್ನು ಕನ್ನಡದಲ್ಲಿ ಪುಂಡಿ ಸೊಪ್ಪು ಎನ್ನುತ್ತಾರೆ)
ಬೇಕಾಗುವ ಸಾಮಗ್ರಿ: ಪುಂಡಿ ಸೊಪ್ಪು- ಅರ್ಧ ಕೆ.ಜಿ., ಹಸಿರುಮೆಣಸು- 10, ಎಣ್ಣೆ, ಸಾಸಿವೆ, ಉಪ್ಪು, ಇಂಗು, ಕರಿಬೇವಿನಸೊಪ್ಪು.

ಮಾಡುವ ವಿಧಾನ: ಪುಂಡಿ ಸೊಪ್ಪನ್ನು ಚೆನ್ನಾಗಿ ತೊಳೆದು, ಬಾಣಲೆಯಲ್ಲಿ ಸೊಪ್ಪು ಮುಳುಗುವವರೆಗೂ ನೀರು ಹಾಕಿ ಮುಚ್ಚಳ ಮುಚ್ಚಿ ಚೆನ್ನಾಗಿ ಬೇಯಿಸಿ. ನಂತರ ಸೊಪ್ಪು ಬಸಿದು, ನೀರನ್ನು ಚೆಲ್ಲಿ. ಬಸಿದ ಸೊಪ್ಪಿನ ಜೊತೆಗೆ ಹಸಿರುಮೆಣಸು (ಬೇಕಿದ್ದರೆ ಮಧ್ಯಮ ಗಾತ್ರದ ಬೆಳ್ಳುಳ್ಳಿ ಹಾಕಬಹುದು), ಉಪ್ಪು ಹಾಕಿ ನುಣ್ಣಗೆ ರುಬ್ಬಿರಿ. ಬಾಣಲೆಯಲ್ಲಿ ಎಣ್ಣೆ ಹಾಕಿ, ಸಾಸಿವೆ, ಕರಿಬೇವು, ಇಂಗು ಹಾಕಿ ಒಗ್ಗರಣೆ ಮಾಡಿಕೊಂಡು, ರುಬ್ಬಿದ ಪುಂಡಿಸೊಪ್ಪನ್ನು ಹಾಕಿ ಕೈ ಆಡಿಸಿ. (ಹಸಿರುಮೆಣಸಿನ ಬದಲು ಕೆಂಪು ಮೆಣಸನ್ನೂ ಬಳಸಬಹುದು)

2. ಬದನೆಕಾಯಿ ಚಟ್ನಿ
ಬೇಕಾಗುವ ಸಾಮಗ್ರಿ: ಗುಂಡು ಬದನೆಕಾಯಿ-10, ಈರುಳ್ಳಿ- 3, ಹಸಿರು ಮೆಣಸಿನಕಾಯಿ-10, ಹುಣಸೆ ಹಣ್ಣು, ಕಡಲೆಕಾಯಿ ಎಣ್ಣೆ, ಸಾಸಿವೆ, ಕರಿಬೇವಿನಸೊಪ್ಪು, ಉಪ್ಪು.

ಮಾಡುವ ವಿಧಾನ: ಬದನೆಕಾಯಿ ಹಾಗೂ ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಳ್ಳಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ, ಬದನೆಕಾಯಿ, ಈರುಳ್ಳಿ, ಹಸಿಮೆಣಸು ಹಾಗೂ ಹುಣಸೆ ಹಣ್ಣು ಹಾಕಿ ಕಂದು ಬಣ್ಣ ಬರುವವರೆಗೆ ಬಾಡಿಸಿ, ಆರಲು ಬಿಡಿ. ನಂತರ ಎಲ್ಲವನ್ನೂ ಮಿಕ್ಸಿಗೆ ಹಾಕಿ ನುಣ್ಣಗೆ ರುಬ್ಬಿ. ಇದಕ್ಕೆ ಸಾಸಿವೆ, ಕರಿಬೇವು ಹಾಗೂ ಇಂಗಿನ ಒಗ್ಗರಣೆ ಕೊಟ್ಟರೆ ಬದನೆಕಾಯಿ ಚಟ್ನಿ ತಯಾರು.

3. ಟೊಮೇಟೊಕಾಯಿ ಚಟ್ನಿ
ಬೇಕಾಗುವ ಸಾಮಗ್ರಿ: ಟೊಮೇಟೊಕಾಯಿ (ಹಸಿರು ಬಣ್ಣದ್ದು)-10, ಈರುಳ್ಳಿ- 3, ಹಸಿಮೆಣಸಿನಕಾಯಿ -10, ಹುಣಸೆ ಹಣ್ಣು, ಎಣ್ಣೆ, ಸಾಸಿವೆ, ಕರಿಬೇವು, ಉಪ್ಪು.

ಮಾಡುವ ವಿಧಾನ: ಟೊಮೇಟೊ ಹಾಗೂ ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಳ್ಳಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ, ಅದಕ್ಕೆ ಕತ್ತರಿಸಿದ ಟೊಮೇಟೊ,ಈರುಳ್ಳಿ, ಹಸಿಮೆಣಸು ಹಾಗೂ ಹುಣಸೆಹಣ್ಣನ್ನು ಹಾಕಿ, ಈರುಳ್ಳಿ ಕಂದು ಬಣ್ಣಕ್ಕೆ ಬರುವವರೆಗೆ ಬಾಡಿಸಿ, ಆರಿಸಿ. ಆರಿದ ಮಿಶ್ರಣವನ್ನು ಮಿಕ್ಸಿಗೆ ಹಾಕಿ, ಉಪ್ಪು ಸೇರಿಸಿ ನುಣ್ಣಗೆ ರುಬ್ಬಿ, ಸಾಸಿವೆ, ಕರಿಬೇವು ಹಾಗೂ ಇಂಗಿನ ಒಗ್ಗರಣೆ ಕೊಟ್ಟರೆ ಟೊಮೇಟೊ ಚಟ್ನಿ ರೆಡಿ. (ಬೇಕಾದರೆ ರುಬ್ಬುವಾಗ ನಾಲ್ಕೈದು ಎಸಳು ಬೆಳ್ಳುಳ್ಳಿ ಹಾಕಬಹುದು)

4. ಹಸಿರುಮೆಣಸಿನ ತೊಕ್ಕು
ಬೇಕಾಗುವ ಸಾಮಗ್ರಿ: ಶೇಂಗಾ ಎಣ್ಣೆ- ಅರ್ಧ ಬಟ್ಟಲು, ಸಾಸಿವೆ, ಉದ್ದಿನಬೇಳೆ – 100 ಗ್ರಾಂ, ಬೆಲ್ಲ- 50 ಗ್ರಾಂ, ಹಸಿಮೆಣಸು-ಅರ್ಧ ಕೆ.ಜಿ., ಇಂಗು, ಹುಣಸೆಹಣ್ಣು.

ಮಾಡುವ ವಿಧಾನ: ಹಸಿಮೆಣಸಿನ ಕಾಯಿಗಳನ್ನು ಚೆನ್ನಾಗಿ ತೊಳೆದು, ನೀರು ಬಸಿಯಿರಿ. ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ, ಉದ್ದಿನಬೇಳೆಯನ್ನು ಕಂದು ಬಣ್ಣಕ್ಕೆ ಬರುವವರೆಗೆ ಹುರಿದು ತೆಗೆದಿಟ್ಟುಕೊಳ್ಳಿ. ಈಗ ಬಾಣಲೆಗೆ ಮತ್ತೆ ಸ್ವಲ್ಪ ಎಣ್ಣೆ ಹಾಕಿ ಹಸಿಮೆಣಸು ಹಾಕಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಬಾಡಿಸಿ. ಇದು ಆರಿದ ಮೇಲೆ ಮಿಕ್ಸಿ ಜಾರ್‌ನಲ್ಲಿ ಮೊದಲು ಹುರಿದ ಉದ್ದಿನಬೇಳೆಯನ್ನು ಸಣ್ಣಗೆ ಪುಡಿ ಮಾಡಿ. ಅದಕ್ಕೆ ಬಾಡಿಸಿದ ಹಸಿಮೆಣಸು, ಹುಣಸೆಹಣ್ಣು ಹಾಗೂ ಬೆಲ್ಲ ಹಾಕಿ ನುಣ್ಣಗೆ ರುಬ್ಬಿ. ಅದಕ್ಕೆ ಇಂಗು-ಸಾಸಿವೆಯ ಒಗ್ಗರಣೆ ಕೊಡಿ. ತಣ್ಣಗಾದ ಮೇಲೆ ತೇವವಿಲ್ಲದ ಡಬ್ಬಿಯಲ್ಲಿ ಹಾಕಿಟ್ಟರೆ ವಾರಗಟ್ಟಲೆ ಉಪಯೋಗಿಸಬಹುದು. ಮೊಸರಿನೊಂದಿಗೆ ಬೆರೆಸಿ, ಅಕ್ಕಿ, ರೊಟ್ಟಿ, ದೋಸೆ, ಚಪಾತಿ, ಜೊತೆಗೆ ಸವಿಯಬಹುದು.

-ಪ್ರಕಾಶ್‌ ಕೆ.ನಾಡಿಗ್‌, ತುಮಕೂರು

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.