ಬದುಕು ಮಾಯೆಯ ಆಟ : ಮಂಜಮ್ಮ ಜೋಗತಿಯ ಕಲಾ ಪಯಣ


Team Udayavani, Mar 3, 2021, 7:11 PM IST

ಬದುಕು ಮಾಯೆಯ ಆಟ : ಮಂಜಮ್ಮ ಜೋಗತಿಯ ಕಲಾ ಪಯಣ

ಹುಟ್ಟಿದ್ದು ಮಂಜುನಾಥ ಆಗಿ, ಬೆಳೆದಿದ್ದು ಮಂಜಮ್ಮನಾಗಿ. ಆಮೇಲೆ ಹೊಟ್ಟೆಪಾಡಿಗಾಗಿ ಕೈಗೊಂಡ ಕಲಾ ವೃತ್ತಿಯೇ ಇವರನ್ನು ಮಂಜಮ್ಮ ಜೋಗತಿಯನ್ನಾಗಿ ರೂಪಿಸಿತು. ಅವರು ಈಗ ಕರ್ನಾಟಕ ಜಾನಪದ ಅಕಾಡೆಮಿಯ ಅದ್ಯಕ್ಷೆಯೂ ಹೌದು. ಉತ್ತರ ಕರ್ನಾಟಕದ ಭಾಗದಲ್ಲಿ ಈಗಲೂ ಉಳಿದುಕೊಂಡು ಬಂದಿರುವ . ಜೋಗತಿ’ ಕಲಾ ಪ್ರಕಾರದ ಪ್ರಮುಖ ರಾಯಭಾರಿಯೂ ಹೌದು.

ಜೋಗತಿ ನೃತ್ಯ ಪರಂಪರೆಯ ಉಳಿವಿಗೆ ಹೋರಾಡಿದ ಆಕೆಯ ಸಾಧನೆಯ ಹಿಂದೆ ಕಲ್ಲು ಮುಳ್ಳುಗಳ ಹಾದಿಯಿದೆ. ಮಂಜುನಾಥ ಶೆಟ್ಟಿ,ಮಂಜಮ್ಮ ಜೋಗತಿಯಾದ ಕಥನವೇ ಸೋಜಿಗದ್ದು. ಮಂಗಳಮುಖೀಯೆಂದು ಧೈರ್ಯದಿಂದ ಬದುಕುಕಟ್ಟಿಕೊಂಡ ಮಂಜಮ್ಮ, ನನಗೆ ಆತ್ಮವಿಶ್ವಾಸವಿದೆ. ಮುಂದೊಂದು ದಿನ ಈ ಮಂಗಳಮುಖಿಯೂ ಸಮಾಜದ ಮುಖ್ಯವಾಹಿನಿಯಲ್ಲಿ ಎಲ್ಲರಂತೆ ಗೌರವಯುತವಾದ ದಾರಿಯಲ್ಲಿಯೇ ಮುನ್ನಡೆಯುತ್ತಾಳೆ ಎಂದು ತನ್ನ 17ನೇ ವಯಸ್ಸಿನಲ್ಲೇ ಭವಿಷ್ಯ ನುಡಿದಿದ್ದರು.

ಉರುಳಾದ ಕರಳು ಸಂಬಂಧ :

ಮಂಜುನಾಥ ನಾಗಿದ್ದ ಮಂಜಮ್ಮನ ಜನ್ಮಭೂಮಿ ಬಳ್ಳಾರಿ ಜಿಲ್ಲೆ ಕಲ್ಲುಕಂಬ. ಈಗ ಕರ್ಮಭೂಮಿ ಮರಿಯಮ್ಮನ ಹಳ್ಳಿ. ತಂದೆ ಹನುಮಂತಪ್ಪ ಶೆಟ್ಟಿ, ತಾಯಿ ಜಯಲಕ್ಷ್ಮೀ. ತಂದೆ ಕಂಪ್ಲಿ ಶುಗರ್‌ಫ್ಯಾಕ್ಟರಿಯಲ್ಲಿ ಉದ್ಯೋಗಿ. ಆರು ಎಕರೆ ಜಮೀನು ಅಥವಾ ವ್ಯಾಪಾರ -ಈ ಎರಡರಲ್ಲಿ ಯಾವುದನ್ನುಆಯ್ಕೆ ಮಾಡಿಕೊಂಡರೂ ತಂದೆ-ತಾಯಿಗೆ ಒಪ್ಪಿಗೆ ಇತ್ತು. ಆದರೆ, ತಾನು ಹುಡುಗನಾಗಿ ದುಡಿಯಲಾರೆ, ಹುಡುಗಿಯಂತೆ ನೃತ್ಯ ಮಾಡುವೆ ಎಂದಾಗ ಯಾರೂ ಒಪ್ಪಲಿಲ್ಲ. ಎಸ್‌ಎಸ್‌ಎಲ್‌ಸಿ ಮುಗಿದ ಮೇಲೆ ದೇಹದ ಚಿತ್ರ ಬದಲಾದಂತೆ ಮನೆಯ ಚಿತ್ರವೂ ಬದಲಾಯಿತು. ಹೆಣ್ಣಂತೆ ಇರುವುದನ್ನು ಸಹಿಸದ ಸಮಾಜ ಗೇಲಿ ಮಾಡಿತು. ಕುಟುಂಬದವರು ಕಂಬಕ್ಕೆ ಕಟ್ಟಿ ಹೊಡೆದರು. ಸಂಬಂಧಕ್ಕೆ ಬೇಲಿ ಹಾಕಿದರು. ದುಡಿಯಲೆಂದು ಹಚ್ಚಿದರು. ಅಣ್ಣನೊಂದಿಗೆ ಕಿರಾಣಿ ಅಂಗಡಿ ಕೆಲಸಕ್ಕೆ ಕೂಡಿಸಿದರು. ಸ್ವತಃ ಜೋಗಪ್ಪನಾಗಿದ್ದ ಸೋದರ ಮಾವ ಬುದ್ದಿ ಕಲಿಸಲು ಮನಬಂದಂತೆ ಒದ್ದರೂ ಹೆಣ್ಣಿನ ನಡೆ ನುಡಿ ನಿಲ್ಲಲಿಲ್ಲ. ಕೊನೆಗೆ ಹುಲಿಗೆಮ್ಮ ದೇವಸ್ಥಾನದಲ್ಲಿ ಪೂಜಾರಿಯಿಂದ ಸೀರೆ, ಬಳೆ ತೊಡಿಸಿ, ಮುತ್ತು ಕಟ್ಟಿಸಿದರೂ ಮನೆಯಲ್ಲಿ ಮಾತ್ರ ಪರಕೀಯಭಾವ ಕೊಲ್ಲತೊಡಗಿತು.

ನೆರೆಹೊರೆಯಲ್ಲಿ ಉರಿಗಣ್ಣಿಗೆ ತುತ್ತಾಗಿ ಬದುಕುವುದು ಕಷ್ಟ. ಆದರೆ ಮಂಗಳಮುಖೀ ವೇಷ ಕಳಚಿದರೆ ಹೋಗುವಂಥದ್ದಲ್ಲ ಎಂಬುದು ಮನವರಿಕೆಯಾಯಿತು. ಮನೆ – ಮನ ಎರಡನ್ನೂಎದುರಿಸಲಾಗದೇ ಸಾಯಲು ನಿರ್ಧರಿಸಿ ವಿಷ ಕುಡಿದರೆ ಇನ್ನಷ್ಟು ಸಂಕಟ ತಂದಿತು. ದಾವಣಗೆರೆ ಆಸ್ಪತ್ರೆಯಲ್ಲಿ ಸಾಯದೇ ಬದುಕಿದ್ದೂ ಪವಾಡ. 45 ದಿನಗಳಾದರೂ ತಂದೆ, ಅಮ್ಮ, ತಮ್ಮ, ತಂಗಿ ಯಾರೂನೋಡಲು ಬರಲಿಲ್ಲ. ಆಗ ಇವರೇನು ಮಾಡಿದರು ಗೊತ್ತೇ? ತುಂಬಿದ ತಂಬಿಗೆ ಹೊತ್ತು ಕುಣಿತ ಶುರು

ಮಾಡಿದರು. ಆಸ್ಪತ್ರೆಯ ವಾರ್ಡನ್, ರೋಗಿಗಳು ಖುಷಿಯಾಗಿ ಹತ್ತಿಪ್ಪತ್ತು ಪೈಸೆ ಭಿಕ್ಷೆ ಹಾಕಿದರು. ತಪ್ಪೋ ಒಪ್ಪೋ ಕುಣಿದರೆ ಹೊಟ್ಟೆ ತುಂಬುತ್ತದೆ ಎಂಬ ಭಾವ ಬಲಿತು ಬಂತು, ಕಾಲಿಗೆ ಗೆಜ್ಜೆ ಕಟ್ಟಿದರು.

ಗುರುವಾಗಿ ಉಡಿತುಂಬಿದ ಕಾಳವ್ವ :

ಕೊಡ ಹೊತ್ತು ಕುಣಿದರೆ ಹೊಟ್ಟೆ ತುಂಬುವುದಿಲ್ಲ ಅನ್ನಿಸಿದಾಗ ಇಡ್ಲಿ ಮಾರಿಯಾಯಿತು. ಟ್ಯೂಶನ್‌ಹೇಳಿಯಾಯಿತು. ದೇವರ ಗುಡಿ ಸಾರಿಸಿ, ದೀಪ ಹಚ್ಚಿ ನೈವೇದ್ಯ ಸಿಗುವುದೆಂದು ಕಾದಿದ್ದೂ ಆಯಿತು. ಒಂದು ದಿನದ ಊಟಕ್ಕೂ ಗತಿ ಇಲ್ಲವಾದಾಗ ಆಸರೆಗೆ ಸಿಕ್ಕಿದ್ದು, ಮರಿಯಮ್ಮನ ಹಳ್ಳಿಯ ಕಾಳವ್ವ ಜೋಗತಿ,

ಆಕೆ ಜಾನಪದ ಜೋಗತಿ ನೃತ್ಯದ ರೇಣುಕಾ ಯಲ್ಲಮ್ಮ ಕಥನ ಗೀತದ ಪ್ರಸಿದ್ಧ ಕಲಾವಿದೆ. ತನ್ನ ನಂತರ ಈ ಕಲೆಯನ್ನು ಉಳಿಸಿ ಬೆಳೆಸುವಉತ್ತರಾಧಿಕಾರಿಗೆ ಹುಡುಕುತ್ತಿರುವಾಗಲೇ ಮಂಜಮ್ಮಜೋಗತಿ ನೃತ್ಯ ಕಂಡು ಮನೆಗೆ ಕರೆದುಕೊಂಡು ಹೋದಳು.

ಕಲಿಯುವ, ಸಾಧಿಸುವ ಹಂಬಲ:

ಜಾತ್ರೆ ಉತ್ಸವ, ಹಬ್ಬ, ಸಮ್ಮೇಳನ, ಸಮಾವೇಶ.. ಎಲ್ಲೇ ಇದ್ದರೂ ಎಲ್ಲಮ್ಮನ ಕೊಡ ಹೊತ್ತು ಕೈ ಬಿಟ್ಟು ಕುಣಿದು ಜಾನಪದ ಜೋಗತಿಯ ಕಲೆ ಕರಗತಮಾಡಿಕೊಂಡರು. ಸುಮಧುರವಾಗಿ ಹಾಡುವಜಾನಪದ ಚೌಡಕಿ ಪದಗಳು ಜನಮನಸೂರೆಗೊಂಡವು. ಎಲ್ಲಮ್ಮನ ಚರಿತೆಗೆ ಜಾನಪದನಾಟಕ ರೂಪ ಕೊಟ್ಟು ನಿರ್ದೇಶಿಸಿದ್ದು, ಮಂಜಮ್ಮ ಜೋಗತಿಯೇ. ರೇಣುಕಾ ಪಾತ್ರ, ಗೌಡಶಾನಿ, ಕಾಮಧೇನು, ಪರಶುರಾಮ ಪಾತ್ರ ನಿರ್ವಹಣೆಹೆಸರು ತಂದಿವೆ. ಈಚೆಗಷ್ಟೇ ಮಂಜಮ್ಮಜೋಗತಿಯವರ ಆತ್ಮಕಥೆ ಕುರಿತು ಎರ ಡು ಪುಸ್ತಕಗಳು ಪ್ರಕಟವಾಗಿವೆ. ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ರಾಜ್ಯದ ಹಲವಾರು ಸಂಘ ಸಂಸ್ಥೆಗಳ ಪ್ರಶಸ್ತಿಗಳು ಮಂಜಮ್ಮ ಅವರಿಗೆ ಒಲಿದುಬಂದಿವೆ.

ರಂಗಭೂಮಿ ಕಲಾವಿದೆ …

ಮಂಗಳಮುಖಿ, ದೇವಿಯ ಪಾತ್ರ ನಿರ್ವಹಿಸಬಾರದೆಂದು ಗೌಡರಹಳ್ಳಿಯಲ್ಲಿ ಅಪಮಾನ ಮಾಡುತ್ತಾರೆ. ಆಗ ಮರಿಯಮ್ಮನಳ್ಳಿ ರಂಗ ಕಲಾವಿದೆ ಡಾ. ನಾಗರತ್ನಮ್ಮ, ಮೋಹಿನಿ ಭಸ್ಮಾಸುರದಲ್ಲಿಮಂಜ ಮ್ಮ ನಿಂದ, ಭಸ್ಮಾಸುರನ ಪಾತ್ರ ಮಾಡಿಸಿದರು. ಅದೇ ಮಂಗಳಮುಖೀಯರ ರಂಗ ಪ್ರವೇಶಕ್ಕೆ ಮುನ್ನುಡಿ. ಪೌರಾಣಿಕ ಪಾತ್ರಗಳಾದ ಕೀಚಕ, ಭಸ್ಮಾಸುರ,ತಾರಾಸುರ, ಬಯಲಾಟದ ಪಾತ್ರಗಳಲ್ಲಿ ಮಂಜಮ್ಮ ವೇಷ ತೊಟ್ಟರೆ ಇಡೀರಂಗಸ್ಥಳವೇ ನಡುಗುತ್ತದೆ. ಭಿಕ್ಷೆ, ಲೈಂಗಿಕ ವೃತ್ತಿಯನ್ನು ತೊರೆದು ಸಾಂಸ್ಕೃತಿಕ ಹಾದಿಯಲ್ಲಿ ಬದುಕು ಕಟ್ಟಿಕೊಳ್ಳಲು ಸಿದ್ಧವಿದ್ಧ 15-20 ಮಂಗಳಮುಖಿಯರೊಳಗೊಂಡ ರಂಗ ತಂಡ ಕಟ್ಟಿದ್ದಾರೆ ಮಂಜಮ್ಮ.

 

ವಿದ್ಯಾಶ್ರೀ ಗಾಣಿಗೇರ, ವಿಜಯಪುರ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.