ಅವಲಕ್ಕಿ ಪವಲಕ್ಕಿ…


Team Udayavani, Jan 29, 2020, 4:00 AM IST

shu-9

ಬೆಳಗ್ಗಿನ ತಿಂಡಿಗಾಗಲಿ, ಸಂಜೆಯ ಸ್ನ್ಯಾಕ್ಸ್‌ಗೆ ಆಗಲಿ, ಅವಲಕ್ಕಿಯನ್ನು ಧಾರಾಳವಾಗಿ ಅವಲಂಬಿಸಬಹುದು. ಯಾಕಂದ್ರೆ, ಇದು ತಯಾರಿಸೋಕೆ ಸುಲಭವಷ್ಟೇ ಅಲ್ಲದೆ, ರುಚಿಕಟ್ಟಾಗಿಯೂ ಇರುತ್ತದೆ. ಅವಲಕ್ಕಿಯನ್ನು ಬಳಸಿ ಯಾವುದೇ ತಿಂಡಿಯನ್ನಾದರೂ ಅರ್ಧ ಗಂಟೆಯೊಳಗೆ ಮಾಡಿ ಮುಗಿಸಬಹುದು. ಚಿತ್ರಾನ್ನ, ಉಪ್ಪಿಟ್ಟು ಬಾತ್‌ ಮಾತ್ರವಲ್ಲ; ಕೆಲವು ಸಿಹಿ ತಿನಿಸುಗಳನ್ನೂ ತಯಾರಿಸಬಹುದು.

1. ಹಯಗ್ರೀವ
ಬೇಕಾಗುವ ಸಾಮಗ್ರಿ: ಅವಲಕ್ಕಿ- 1 ಕಪ್‌, ಕಡಲೆಬೇಳೆ-1 ಕಪ್‌, ತೆಂಗಿನತುರಿ- 1/4 ಕಪ್‌, ಬೆಲ್ಲದ ತುರಿ- 2 ಕಪ್‌ (ಸಿಹಿಗೆ ಅನುಸಾರ ) ತುಪ್ಪ, ಏಲಕ್ಕಿ ಪುಡಿ,ದ್ರಾಕ್ಷಿ, ಗೋಡಂಬಿ, ಚಿಟಿಕೆಯಷ್ಟು ಪಚ್ಚ ಕರ್ಪೂರ.

ಮಾಡುವ ವಿಧಾನ: ಅವಲಕ್ಕಿ ಹಾಗೂ ಕಡಲೇಬೇಳೆಯನ್ನು ಒಟ್ಟಿಗೆ ಬೇಯಿಸಿಕೊಳ್ಳಿ. ದಪ್ಪ ತಳದ ಪಾತ್ರೆಯಲ್ಲಿ ದ್ರಾಕ್ಷಿ, ಗೋಡಂಬಿ ಹಾಕಿ ತುಪ್ಪದಲ್ಲಿ ಹುರಿದು, ತೆಗೆದಿಡಿ. ಅದೇ ಜಿಡ್ಡಿಗೆ ಬೆಲ್ಲ, ಸ್ವಲ್ಪ ನೀರು ಹಾಕಿ, ಕರಗಿಸಿ. ಬೆಲ್ಲ ಪೂರ್ತಿಯಾಗಿ ಕರಗಿದಾಗ ತೆಂಗಿನತುರಿ ಹಾಕಿ ಬಾಡಿಸಿ, ಹಿಂದೆಯೇ ಬೆಂದ ಅವಲಕ್ಕಿ, ಕಡಲೇಬೇಳೆಯನ್ನು ಹಾಕಿ ಸಣ್ಣ ಉರಿಯಲ್ಲಿ ಹತ್ತು ನಿಮಿಷ ಕುದಿಸಿ. ನಂತರ ಹುರಿದ ದ್ರಾಕ್ಷಿ, ಗೋಡಂಬಿ, ಪಚ್ಚಕರ್ಪೂರ, ಏಲಕ್ಕಿ ಪುಡಿ ಹಾಕಿ ಮಿಶ್ರಣ ಮಾಡಿ, ಉರಿ ಆರಿಸಿ ತಣಿಸಿ.

2. ಉಂಡೆ
ಬೇಕಾಗುವ ಸಾಮಗ್ರಿ: ಅವಲಕ್ಕಿ – 1 ಕಪ್‌, ಹುರಿಗಡಲೆ- 1/4 ಕಪ್‌, ಒಣಕೊಬ್ಬರಿ ತುರಿ- 1/4 ಕಪ್‌, ಬೆಲ್ಲದ ತುರಿ- 1 ಕಪ್‌ ಹಾಗೂ ತುಪ್ಪ.

ಮಾಡುವ ವಿಧಾನ: ಅವಲಕ್ಕಿ ಮತ್ತು ಹುರಿಗಡಲೆಯನ್ನು ಬೇರೆಬೇರೆಯಾಗಿ ನುಣ್ಣಗೆ ಪುಡಿ ಮಾಡಿಕೊಳ್ಳಿ. ಬಾಣಲೆಗೆ ತುಪ್ಪ ಹಾಕಿ ಅದು ಕರಗುತ್ತಲೇ ಬೆಲ್ಲದ ತುರಿ, ಕೊಬ್ಬರಿ ತುರಿ ಹಾಕಿ ಐದು ನಿಮಿಷ ಹುರಿಯಿರಿ. ನಂತರ ಅವಲಕ್ಕಿ ಮತ್ತು ಹುರಿಗಡಲೆ ಪುಡಿ ಹಾಕಿ ಚೆನ್ನಾಗಿ ಮಗುಚಿ. ಅಗತ್ಯವಿದ್ದರೆ ಮೇಲು¤ಪ್ಪ ಹಾಕಿರಿ. ಆ ಮಿಶ್ರಣ ಪಾತ್ರೆ ಬಿಟ್ಟು ಬರುವಾಗ ಉರಿ ನಂದಿಸಿ, ಬಿಸಿ ಇರುವಾಗಲೇ ಸಣ್ಣಸಣ್ಣ ಉಂಡೆಗಳನ್ನಾಗಿ ಕಟ್ಟಿ.

3. ಸಜ್ಜಿಗೆ
ಬೇಕಾಗುವ ಸಾಮಗ್ರಿ: ಅವಲಕ್ಕಿ – 1 ಕಪ್‌, ಸಕ್ಕರೆ- 1 ಕಪ್‌, ತುಪ್ಪ, ಏಲಕ್ಕಿ ಪುಡಿ, ದ್ರಾಕ್ಷಿ, ಗೋಡಂಬಿ.

ಮಾಡುವ ವಿಧಾನ: ಅವಲಕ್ಕಿಯನ್ನು ತರಿತರಿಯಾಗಿ ಪುಡಿ ಮಾಡಿಕೊಳ್ಳಿ. ಬಾಣಲೆಗೆ ತುಪ್ಪ ಹಾಕಿ ದ್ರಾಕ್ಷಿ, ಗೋಡಂಬಿಯನ್ನು ಹುರಿದು, ಅವಲಕ್ಕಿ ತರಿ ಮತ್ತು ಸಕ್ಕರೆಯನ್ನು ಒಟ್ಟಿಗೆ ಹಾಕಿ ಸ್ವಲ್ಪ ಹುರಿಯಿರಿ. ಅದಕ್ಕೆ ಏಲಕ್ಕಿ ಪುಡಿ ಸೇರಿಸಿ, ಎರಡು ಕಪ್‌ ನೀರು ಹಾಕಿ ಮಿಶ್ರಣ ಮಾಡಿ, ಬಾಣಲೆ ಮುಚ್ಚಿಟ್ಟು ಐದು ನಿಮಿಷ ಬೇಯಿಸಿದರೆ ಸಜ್ಜಿಗೆ ರೆಡಿ.

4. ಬರ್ಫಿ
ಬೇಕಾಗುವ ಸಾಮಗ್ರಿ: ಅವಲಕ್ಕಿ- 1 ಕಪ್‌, ತೆಂಗಿನತುರಿ- 1/2 ಕಪ್‌, ಬೆಲ್ಲದ ತುರಿ- 1 ಕಪ್‌, ತುಪ್ಪ.

ಮಾಡುವ ವಿಧಾನ: ಅವಲಕ್ಕಿಯನ್ನು ಮಿಕ್ಸಿಯಲ್ಲಿ ಹಾಕಿ ನುಣ್ಣಗೆ ಪುಡಿ ಮಾಡಿಕೊಳ್ಳಿ. ದಪ್ಪ ತಳದ ಬಾಣಲೆಯಲ್ಲಿ ಬೆಲ್ಲ ಕರಗಿಸಿ,ಅವಲಕ್ಕಿ ಪುಡಿ, ತೆಂಗಿನತುರಿ, ತುಪ್ಪ ಹಾಕಿ ಸಣ್ಣ ಉರಿಯಲ್ಲಿ ಕೈಯಾಡಿಸುತ್ತಿರಿ. ಮಿಶ್ರಣ ಪಾತ್ರೆ ಬಿಟ್ಟು ಬರುತ್ತಿದ್ದಂತೆ ತುಪ್ಪದ ಜಿಡ್ಡು ಸವರಿದ ತಟ್ಟೆಗೆ ಸುರಿದು, ನಂತರ ಬೇಕಾದ ಆಕಾರಕ್ಕೆ ಕತ್ತರಿಸಿ.

-ಕೆ.ವಿ.ರಾಜಲಕ್ಷ್ಮಿ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.