ಬಾಳೆದಿಂಡಿನ ಸವಿರುಚಿ


Team Udayavani, Feb 26, 2020, 5:00 AM IST

cha-9

ಬಾಳೆದಿಂಡನ್ನು ಅಡುಗೆಯಲ್ಲಿ ಬಳಸುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದರಲ್ಲಿ ಅತ್ಯಧಿಕ ನಾರಿನಂಶವಿದ್ದು, ಮಲಬದ್ಧತೆ ನಿವಾರಣೆಗೆ ಸಹಕಾರಿ. ಬಾಳೆದಿಂಡಿನಲ್ಲಿ ವಿಟಮಿನ್‌ ಬಿ6 ಇರುವುದರಿಂದ ರಕ್ತದಲ್ಲಿ ಹಿಮೋಗ್ಲೋಬಿನ್‌ ಅನ್ನು ಹೆಚ್ಚಿಸುತ್ತದೆ. ದಿಂಡನ್ನು ಬಳಸಿ ಮೊಸರು ಬಜ್ಜಿ, ಕೋಸಂಬರಿ, ಪಲ್ಯ ಮುಂತಾದ ಅಡುಗೆಗಳನ್ನು ಮಾಡಬಹುದಾಗಿದೆ.

1. ಮೊಸರುಬಜ್ಜಿ
ಬೇಕಾಗುವ ಪದಾರ್ಥ: ಬಾಳೆದಿಂಡು ಹೆಚ್ಚಿದ್ದು- 1 ಕಪ್‌, ಮೊಸರು- 2 ಕಪ್‌, ಹಸಿಮೆಣಸಿನಕಾಯಿ- 3, ಉದ್ದಿನಬೇಳೆ- 1 ಚಮಚ, ಸಾಸಿವೆ- ಅರ್ಧ ಚಮಚ, ಕರಿಬೇವು- 6, ರುಚಿಗೆ ಉಪ್ಪು, ಒಗ್ಗರಣೆಗೆ ಎಣ್ಣೆ- 2 ಚಮಚ.

ಮಾಡುವ ವಿಧಾನ: ಬಾಳೆದಿಂಡಿನ ಸಿಪ್ಪೆ ತೆಗೆದು, ಸಣ್ಣಗೆ ಹೆಚ್ಚಿಕೊಳ್ಳಿ. ಇದನ್ನು ಮೊಸರಿಗೆ ಹಾಕಿಡಿ. ಬಾಣಲೆಗೆ ಎಣ್ಣೆ ಹಾಕಿ ಸಾಸಿವೆ, ಉದ್ದಿನಬೇಳೆ, ಕರಿಬೇವು ಹಾಕಿ ಒಗ್ಗರಣೆ ಕೊಡಿ. ಇದನ್ನು ಬಾಳೆದಿಂಡು ಹಾಕಿದ ಮೊಸರಿಗೆ ಹಾಕಿ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಕೂಡಿಸಿ.

2. ಪಲ್ಯ
ಬೇಕಾಗುವ ಪದಾರ್ಥ: ಹೆಚ್ಚಿದ ಬಾಳೆದಿಂಡು- 2 ಕಪ್‌, ಕೊತ್ತಂಬರಿ ಸೊಪ್ಪು- ಅರ್ಧ ಕಪ್‌, ಕರಿಬೇವು, ಕಾಯಿತುರಿ- ಅರ್ಧ ಕಪ್‌, ಸಾಸಿವೆ, ಉದ್ದಿನಬೇಳೆ, ಹಸಿಮೆಣಸಿನಕಾಯಿ- 5, ಅರಿಶಿಣ, ಎಣ್ಣೆ- 3 ಚಮಚ.

ಮಾಡುವ ವಿಧಾನ: ಬಾಳೆದಿಂಡಿನ ಸಿಪ್ಪೆ ತೆಗೆದು ಸಣ್ಣಗೆ ಹೆಚ್ಚಿಕೊಂಡು ನೀರಿನಲ್ಲಿ ಹಾಕಿಡಿ. ಒಂದು ಬಾಣಲೆಗೆ ಎಣ್ಣೆ ಹಾಕಿ ಸಾಸಿವೆ, ಉದ್ದಿನಬೇಳೆ ಹಾಕಿ ಒಗ್ಗರಣೆ ಮಾಡಿ. ಇದಕ್ಕೆ ಹೆಚ್ಚಿದ ಹಸಿಮೆಣಸಿನಕಾಯಿ, ಬಾಳೆದಿಂಡು, ಅರಿಶಿನ ಹಾಕಿ ಕೂಡಿಸಿ. ಇದಕ್ಕೆ ಒಂದು ಕಪ್‌ ನೀರು, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಕೂಡಿಸಿ ಹದವಾಗಿ ಬೇಯಿಸಿ. ಬೆಂದ ನಂತರ ಕೊತ್ತಂಬರಿ ಸೊಪ್ಪು, ಕಾಯಿತುರಿ ಹಾಕಿ 2 ನಿಮಿಷ ಬೇಯಿಸಿ.

3. ಗೊಜ್ಜು
ಬೇಕಾಗುವ ಪದಾರ್ಥ: ಬಾಳೆದಿಂಡು- 2 ಕಪ್‌, ಕಡಲೆಕಾಳು- 1 ಕಪ್‌, ಜೀರಿಗೆ- 1 ಚಮಚ, ಧನಿಯ- 2 ಚಮಚ, ಅಚ್ಚ ಖಾರದಪುಡಿ- 1 ಚಮಚ, ಈರುಳ್ಳಿ-2, ಕರಿಬೇವು, ಹಸಿಮೆಣಸಿನಕಾಯಿ-2, ಕೊತ್ತಂಬರಿ ಸೊಪ್ಪು, ರುಚಿಗೆ ಉಪ್ಪು. ಎಣ್ಣೆ- ಅರ್ಧ ಕಪ್‌.

ಮಾಡುವ ವಿಧಾನ: ರಾತ್ರಿ ಕಡಲೆಕಾಳನ್ನು ನೀರಿನಲ್ಲಿ ನೆನೆಸಿ, ಬೆಳಗ್ಗೆ ಕುಕ್ಕರ್‌ನಲ್ಲಿ 2 ವಿಷಲ್‌ ಕೂಗಿಸಿ. ಇದು ಆರಿದ ನಂತರ ಹೆಚ್ಚಿದ ಬಾಳೆದಿಂಡು, ಉಪ್ಪು ಹಾಕಿ ಮತ್ತೂಂದು ವಿಷಲ್‌ ಕೂಗಿಸಿ. ಒಂದು ಬಾಣಲೆಗೆ 2 ಚಮಚ ಎಣ್ಣೆ ಹಾಕಿ ಧನಿಯವನ್ನು ಘಮ್ಮೆನ್ನುವವರೆಗೆ ಹುರಿಯಿರಿ. ನಂತರ ಅದೇ ಬಾಣಲೆಗೆ ಜೀರಿಗೆ, ಕರಿಬೇವು ಹಾಕಿ ಹುರಿಯಿರಿ. ಹೆಚ್ಚಿದ ಈರುಳ್ಳಿ ಹಾಕಿ ಹೊಂಬಣ್ಣ ಬರುವವರೆಗೆ ಫ್ರೆç ಮಾಡಿ. ಮಿಕ್ಸಿ ಜಾರ್‌ನಲ್ಲಿ ಹುರಿದ ಧನಿಯ, ಜೀರಿಗೆ- ಕರಿಬೇವು, ಕಾಯಿತುರಿ ಹಾಕಿ ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿ. ಇದನ್ನು ಕುಕ್ಕರ್‌ಗೆ ಹಾಕಿ ಕುದಿಯಲು ಇಡಿ. ಅಚ್ಚಖಾರದಪುಡಿ, ಉಪ್ಪು ಬೇಕಿದ್ದಲ್ಲಿ ಸೇರಿಸಿ ಕುದಿಸಿ. ಇದನ್ನು ಹೆಚ್ಚಿದ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ.

4. ಚಾಟ್‌
ಬೇಕಾಗುವ ಪದಾರ್ಥ: ಬಾಳೆದಿಂಡು ಸಣ್ಣಗೆ ಹೆಚ್ಚಿದ್ದು- 2 ಕಪ್‌, ಹೆಚ್ಚಿದ ಈರುಳ್ಳಿ- 1 ಕಪ್‌, ಹೆಚ್ಚಿದ ಟೊಮೇಟೊ- ಅರ್ಧ ಕಪ್‌, ಕೊತ್ತಂಬರಿ ಸೊಪ್ಪು- ಅರ್ಧ ಕಪ್‌, ಗರಂ ಮಸಾಲ- ಅರ್ಧ ಚಮಚ, ಅಚ್ಚಖಾರದಪುಡಿ- 2 ಚಮಚ, ಚಾಟ್‌ ಮಸಾಲ- ಅರ್ಧ ಚಮಚ, ಉಪ್ಪು- ರುಚಿಗೆ, ಸೇವ್‌- ಅರ್ಧ ಕಪ್‌, ಕ್ಯಾರೆಟ್‌ ತುರಿ- ಅರ್ಧ ಕಪ್‌.

ಮಾಡುವ ವಿಧಾನ: ಹೆಚ್ಚಿದ ಬಾಳೆದಿಂಡು, ಈರುಳ್ಳಿ, ಟೊಮೇಟೊ, ಕೊತ್ತಂಬರಿ ಸೊಪ್ಪನ್ನು ಕೂಡಿಸಿ. ಅದಕ್ಕೆ ಗರಂ ಮಸಾಲ, ಅಚ್ಚಖಾರದಪುಡಿ, ಚಾಟ್‌ ಮಸಾಲ, ಸೇವ್‌ ಹಾಕಿ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಸರ್ವ್‌ ಮಾಡಿ. ಸಂಜೆಗೆ ಕಾಫಿ ಜೊತೆಗೆ ಸವಿಯಲು ಚೆನ್ನಾಗಿರುತ್ತದೆ.

- ಶ್ರುತಿ ಕೆ. ಎಸ್‌.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.