ಬಳೆ ಬೇಕೇನವ್ವಾ ಬಳೇ…


Team Udayavani, Jul 31, 2019, 5:00 AM IST

7

ಕೈಗಳಿಗೆ ಶೃಂಗಾರವು ಘಲ್ಲೆಂದರೆ ಸಂಗೀತವು...

ಹೆಣ್ಮಕ್ಕಳ ಪಾಲಿಗೆ ಗಾಜಿನ ಬಳೆ ಕೇವಲ ಆಭರಣವಷ್ಟೇ ಅಗಿರಲಿಲ್ಲ. ಆಕೆಗೆ ಅದು ತವರನ್ನು ನೆನಪಿಸುವ ತುಣುಕು, ಗಂಡನ ಪ್ರೀತಿಯ ಸಂಕೇತ, ಅಣ್ಣನ ಶ್ರೀರಕ್ಷೆ ಹಾಗೂ ಹೆಣ್ತನದ ಒಂದು ಭಾಗವೇ ಆಗಿತ್ತು. ಈಗ ಕಾಲ ಬದಲಾಗಿದೆ. ಬಳೆಯ ಜಾಗವನ್ನು ಬ್ರೇಸ್‌ಲೆಟ್‌ಗಳು ಆಕ್ರಮಿಸಿವೆ. ಆದರೂ, ಬಳೆಯ ಸದ್ದಿನ ಅನುರಣಕ್ಕೆ ಹೆಣ್ಣಿನ ಮನ ಮುದಗೊಳ್ಳುತ್ತದೆ…

ಅಮ್ಮ ತನ್ನ ಪಾಡಿಗೆ ತಾನು ಯಾವುದೋ ಹಾಡನ್ನು ಗುನುಗುತ್ತಾ, ಅಡುಗೆ ಮನೆಯಲ್ಲಿದ್ದಾಗ ಆಕೆಯ ಹಾಡಿಗೆ ಸಾಥ್‌ ಕೊಡುವುದು ಬಳೆಯ ಸದ್ದು. ಆಕೆ ಗಡಿಬಿಡಿಯಲ್ಲಿ ಕೆಲಸ ಮಾಡುತ್ತಿರುವಾಗ, ಕೈ ತುಂಬಾ ನಲಿಯುವ ಗಾಜಿನ ಬಳೆಗಳು ಕಿಣಕಿಣ ಸದ್ದು ಮಾಡೋದನ್ನು ಕೇಳ್ಳೋಕೇ ಚಂದ. ಬಳೆಯ ಸದ್ದಿನಿಂದಲೇ ಅಮ್ಮ ಎಲ್ಲಿದ್ದಾಳೆ, ಯಾವ ಕೆಲಸ ಮಾಡುತ್ತಿದ್ದಾಳೆ ಅಂತ ಹೇಳಿ ಬಿಡಬಹುದು.

ನನಗೆ ಬಳೆಗಳ ಮೇಲೆ ಮೋಹ ಬೆಳೆದಿದ್ದು ಅಮ್ಮನಿಂದಲೇ. ಬಳೆ ಅಂದರೆ, ಕಣ್ಣರಳಿಸದ ಹುಡುಗಿ ಇರಲು ಸಾಧ್ಯವೇ? ಅದರಲ್ಲೂ, ಹೃದಯಕ್ಕೆ ಹತ್ತಿರದವರು ಕೊಡಿಸಿದ ಬಳೆ ಗಾಜಿನದ್ದೇ ಆದರೂ ಅದನ್ನು ಚಿನ್ನದಂತೆ ಕಾಪಾಡುವವರಿದ್ದಾರೆ. ಅಪ್ಪ ಕೊಡಿಸಿದ ಬಳೆ, ತವರಿನಿಂದ ಅಣ್ಣ ಕಳಿಸಿದ ಬಳೆ, ಗಂಡ ಪ್ರೀತಿಯಿಂದ ಕೈಗೆ ಇಡಿಸಿದ ಬಳೆ…ಹೀಗೆ ಪೆಟ್ಟಿಗೆಯೊಳಗೆ ಪ್ರೀತಿಯ ತುಣುಕುಗಳು ಬಳೆಯಾಗಿ ಬೆಚ್ಚಗೆ ಕೂತಿರುತ್ತವೆ.

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಬಳೆ ಅನ್ನುವುದು, ಕೇವಲ ಒಂದು ಆಭರಣವಲ್ಲ. ಅದು ಸಾಂಸ್ಕೃತಿಕ, ಧಾರ್ಮಿಕ ಪರಂಪರೆಯೊಂದಿಗೆ ಬೆರೆತು ಹೋಗಿರುವ ಒಂದು ಅಂಶ. ಬಹಳ ಹಿಂದಿನಿಂದಲೂ, ಎಲ್ಲ ಧರ್ಮದ ಮಹಿಳೆಯರೂ ಬಳೆ ಧರಿಸುತ್ತಾರೆ. ದಕ್ಷಿಣ ಭಾರತದಲ್ಲಿ ಹಸಿರು ಗಾಜಿನ ಹಾಗೂ ಬಂಗಾರದ ಬಳೆಗಳನ್ನು ಮಂಗಳಕರವೆಂದರೆ, ಉತ್ತರ ಭಾರತದಲ್ಲಿ ಕೆಂಪು ಮತ್ತು ಹಸಿರು ಬಳೆಗಳನ್ನು ಶುಭವೆಂದು ಧರಿಸುತ್ತಾರೆ. ಮೆಹೆಂಜೊದಾರೋ ನಾಗರಿಕತೆಯ ಕಾಲದಲ್ಲೂ ಜನರು, ತಾಮ್ರ ಮತ್ತು ಕಂಚಿನ ಬಳೆಗಳನ್ನು ಧರಿಸುತ್ತಿದ್ದರೆಂಬುದಕ್ಕೆ ಆಧಾರಗಳು ಸಿಕ್ಕಿವೆ.

ಬಳೆಗಾರ ಚೆನ್ನಯ್ಯ…
ಹಿಂದೆಲ್ಲಾ, ಕೈಗೆ ಬಳೆ ಇಡಿಸಿಕೊಳ್ಳುವುದು ಒಂದು ಸಂಭ್ರಮದ ವಿಚಾರವಾಗಿತ್ತು. ಮನೆಯಲ್ಲಿ ಎಷ್ಟೇ ಕಡುಬಡತನವಿದ್ದರೂ ಹೆಣ್ಣುಮಕ್ಕಳ ಕೈಯಲ್ಲಿ ಸದಾ ಗಾಜಿನ ಬಳೆಗಳು ರಾರಾಜಿಸುತ್ತಿದ್ದವು. ಈಗಿನಂತೆ, ಬೆಳಗ್ಗೆ ಬಳೆ ಧರಿಸಿ, ಸಂಜೆ ಅದನ್ನು ತೆಗೆದಿಡುವ ಪದ್ಧತಿಯಿರಲಿಲ್ಲ. ಒಂದು ಬಾರಿ ಕೈಗೆ ಬಳೆ ಇಡಿಸಿಕೊಂಡರೆ, ಅದು ಒಡೆಯುವವರೆಗೂ ಕೈಯಲ್ಲೇ ಇರುತ್ತಿತ್ತು. ಊರಿನ ಸಂತೆಯಲ್ಲಿ, ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ಇರುತ್ತಿದ್ದ ಬಳೆಗಾರ/ ಬಳೆಗಾರ್ತಿಯ ಸುತ್ತ ಹೆಂಗಳೆಯರ ಗುಂಪುಗಟ್ಟಿರುತ್ತಿದ್ದರು. ಎಲ್ಲರಿಗೂ, ಹಸಿರು, ಕೆಂಪು ಬಳೆಗಳಿಂದ ಕೈ ಅಲಂಕರಿಸಿಕೊಳ್ಳುವ ತವಕ. ಸರದಿಯಲ್ಲಿ ಕಾದು, ಅವನಿಗೆ ಕೈ ನೀಡಿ, ನೋವಾಗದಂತೆ ಬಳೆ ಇಡಿಸಿಕೊಳ್ಳುವುದೇ ಹೆಣ್ಮಕ್ಕಳ ಪಾಲಿಗೆ ಜಾತ್ರೆಗಿಂತಲೂ ದೊಡ್ಡ ಸಂಭ್ರಮ.

ಇನ್ನು, ಮನೆಮನೆಗೆ ಬರುವ ಬಳೆಗಾರರು ಕೇವಲ ಬಳೆ ಮಾರುವವರಷ್ಟೇ ಆಗಿರಲಿಲ್ಲ, ಊರೂರಿನ ನಡುವೆ ಸಂಬಂಧ ಬೆಳೆಸುವ ವಕ್ತಾರರೂ ಆಗಿದ್ದರು. ಬಳೆಗಾರ ತಾನು ಊರೊಳಗಡೆ ಬರುವುದನ್ನು ಹೆಂಗಳೆಯರು ಗುರುತಿಸಲೆಂದು, “ಬಳೆ ಬೇಕವ್ವಾ ಬಳೆ, ಅಂದಚೆಂದದ ಬಳೆ, ಬಳೆ ಬೇಕವ್ವಾ ಬಳೆ’ ಎಂದು ಹೆಗಲಿಗೆ ಬಳೆಗಳ ಗೊಂಚಲನ್ನು ನೇತು ಹಾಕಿಕೊಂಡು ಬರುತ್ತಿದ್ದ. ಮಾಡುತ್ತಿದ್ದ ಕೆಲಸವನ್ನೆಲ್ಲ ಅರ್ಧಕ್ಕೇ ಬಿಟ್ಟು, ಹೆಂಗಳೆಯರು ಬಳೆ ಕೊಳ್ಳಲು ಓಡುತ್ತಿದ್ದರು. ಆತನ ಕೂಗು ಕೇಳಿಸುತ್ತಿದ್ದಂತೆಯೇ ಮನೆಯ ಅಂಗಳದಲ್ಲಿ ಚಾಪೆ ಹಾಸಿ, ಪಕ್ಕದಲ್ಲಿ ಕುಡಿಯಲು ಬಿಂದಿಗೆ ನೀರಿಟ್ಟು, ಬೀದಿಯ ಹೆಂಗಸರೆಲ್ಲಾ ಕೂಡುತ್ತಿದ್ದರು. ಬಳೆ ತೊಡಿಸಿ ಕೊಳ್ಳುವವರೆಗೆ ಎಲ್ಲಾ ಸೇರಿ, “ಭಾಗ್ಯದ ಬಳೆಗಾರ ಹೋಗಿ ಬಾ ನನ್ನ ತವರಿಗೆ’ ಎಂದು ಹಾಡು ಹೇಳುತ್ತಾ, ಬಳೆಗಾರನಿಂದ ಯಕ್ಕಾ-ತಂಗಿ, ಯವ್ವಾ-ಮಗಳ! ಎಂದು ಹೇಳಿಸಿಕೊಂಡು ಖುಷಿ ಪಡುತ್ತಿದ್ದರು. ಅಂಚೆ, ದೂರವಾಣಿಗಳ ಕಾಲಕ್ಕಿಂತಲೂ ಮೊದಲು, ತವರೂರಿನ ಸಮಾಚಾರವನ್ನು ಬಿತ್ತರಿಸುವವನೂ ಬಳೆಗಾರನೇ ಆಗಿದ್ದ.

ಬದಲಾದ ಬಳೆಗಳು
ಕಾಲ ಕಳೆದಂತೆ ಬಳೆಯ ವಿನ್ಯಾಸ, ಸ್ವರೂಪ ಬದಲಾಯಿತು. ಗಾಜಿನ ಬಳೆಗಳ ಬದಲು, ವಿವಿಧ ಲೋಹಗಳ ಬಳೆಗಳು ಮಾರುಕಟ್ಟೆಗೆ ಬಂದವು. ಕೈ ತುಂಬಾ ಗಾಜಿನ ಬಳೆ ಧರಿಸುವ ಸಂಪ್ರದಾಯ ಮರೆಯಾಗಿ, ಬ್ರೇಸ್‌ಲೆಟ್‌ನ ಟ್ರೆಂಡ್‌ ಶುರುವಾಯಿತು. ಮಣಿ, ಪಂಚಲೋಹ, ಬಂಗಾರ, ಬೆಳ್ಳಿ, ಪಚ್ಚೆ, ತಾಮ್ರ, ಗಾಜು, ಲೆದರ್‌, ದಂತ, ಮರ ಹೀಗೆ ಅನೇಕ ವಸ್ತುಗಳಿಂದ ತಯಾರಿಸಲ್ಪಟ್ಟ ಆಕರ್ಷಕ ಬಳೆ ಮತ್ತು ಬ್ರೇಸ್‌ಲೆಟ್‌ಗಳು ತರುಣಿಯರ ಮನ ಸೆಳೆದವು.

ಕಿಣಿಕಿಣಿ ಕಿರಿಕಿರಿ
ಗಾಜಿನ ಬಳೆ ಧರಿಸಿ ಕೆಲಸ ಮಾಡೋಕಾಗುತ್ತಾ? ಅದರ ಕಿಣಿ ಕಿಣಿ ಸದ್ದಿನಿಂದ ಆಫೀಸಲ್ಲಿ ಎಲ್ಲರಿಗೂ ಡಿಸ್ಟರ್ಬ್ ಆಗುತ್ತೆ, ಗಾಜು ಒಡೆದು, ಕೈಗೆ ಗಾಯವಾಗಬಹುದು… ಎಂಬಿತ್ಯಾದಿ ಕಾರಣಗಳಿಂದ ಇಂದಿನ ಯುವತಿಯರು ಫ್ಯಾನ್ಸಿ ಬಳೆಗಳಿಗೆ ಜೈ ಅಂದಿದ್ದಾರೆ. ಕೆಲಸಕ್ಕೆ, ಕಾಲೇಜಿಗೆ ಹೋಗುವಾಗ ಒಂದು ಕೈಗೆ ವಾಚ್‌ ಹಾಗೂ ಇನ್ನೊಂದು ಕೈಗೆ ದಪ್ಪನೆಯ ಬಳೆ ಅಥವಾ ಬ್ರೇಸ್‌ಲೆಟ್‌ ಸಾಕು. ಗಾಜಿನ ಬಳೆ ಏನಿದ್ದರೂ, ಹಬ್ಬ ಹರಿದಿನಗಳಲ್ಲಿ, ಮದುವೆ ಇನ್ನಿತರ ಸಮಾರಂಭಗಳಲ್ಲಿ ಧರಿಸುವುದಕ್ಕೆ ಸರಿ ಅನ್ನೋದು ಅವರ ಅಭಿಪ್ರಾಯ.

ಹಲವು ನಂಬಿಕೆಗಳು
ಸ್ತ್ರೀ ಕುಲದ ಶುಭ ಸಂಕೇತಗಳಾದ ಬಳೆಗಳನ್ನು ಲಕ್ಷ್ಮೀ ದೇವಿಯ ಸ್ವರೂಪವೆಂದು ಕರೆಯುತ್ತಾರೆ. ಬಳೆಯ ಸದ್ದಿನಿಂದ ಮನೆಯಲ್ಲಿನ ನಕಾರಾತ್ಮಕತೆ ದೂರಾಗಿ, ಸಕಾರಾತ್ಮಕ ಶಕ್ತಿ ತುಂಬಿಕೊಳ್ಳುತ್ತದಂತೆ. ಕೆಂಪು ಬಳೆ ಶಕ್ತಿಯ ಸಂಕೇತವಾದರೆ, ಹಸಿರು ಬಳೆ ಯಶಸ್ಸು ಮತ್ತು ಸಮೃದ್ಧಿಯ ಬಿಂಬಗಳಾಗಿವೆ. ನೀಲಿ ಬಳೆ ಬುದ್ಧಿವಂತಿಕೆ, ಹಳದಿ ಸಂತೋಷವನ್ನು ಮತ್ತು ಬಿಳಿ ಹೊಸ ಪರ್ವವನ್ನು ಸೂಚಿಸುತ್ತದೆ.

ವಿಶ್ವ ಮೆಚ್ಚಿದ ಬಳೆ
ಬಳೆಯನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ, ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಬಾಂಗ್ಲಾ ದೇಶಗಳ ಮಹಿಳೆಯರೂ ಧರಿಸುತ್ತಾರೆ. ಬೇರೆ ಬೇರೆ ಪ್ರದೇಶಗಳ ಬಳೆಯ ಬಣ್ಣ, ವಿನ್ಯಾಸ, ಆಕಾರ, ಸಂಪ್ರದಾಯದಲ್ಲಿ ಭಿನ್ನತೆ ಇದೆ. ಪಂಜಾಬ್‌ನಲ್ಲಿ ಸಿಖ್‌ ಮಹಿಳೆಯರು ಕೆಂಪು ಬಣ್ಣದ ಪ್ಲಾಸ್ಟಿಕ್‌ ಹಾಗೂ ದಂತದ ಬಳೆಗಳನ್ನು ಧರಿಸುತ್ತಾರೆ. ರಾಜಸ್ಥಾನದಲ್ಲಿ, ಕೆಂಪು ಮತ್ತು ಹಸಿರು ಬಳೆಗಳನ್ನು ಮದುವೆ ಸಮಾರಂಭದಲ್ಲಿ ತೊಡುತ್ತಾರೆ. ಪತಿಯ ಶ್ರೇಯಸ್ಸಿಗೆ ತಮ್ಮ ಜೀವನದ ಕೊನೆಯವರೆಗೂ ದಂತದ ಬಳೆಗಳನ್ನು ಹಾಕಿಕೊಳ್ಳುವುದು ಅಲ್ಲಿನ ವಾಡಿಕೆ. ಬಳೆ, ಮುತ್ತೈದೆತನದ ಸಂಕೇತ ಎನ್ನುವುದು ಎಲ್ಲೆಡೆ ಇರುವ ನಂಬಿಕೆ.

– ಮಹಾನಂದಾ ಚಿಕ್ಕೋಡಿ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.