ಬದಲಾಯ್ತು ಬಾಡಿಗೆ ತಾಯ್ತನ ಕಾಯ್ದೆ


Team Udayavani, Mar 25, 2020, 4:29 AM IST

ಬದಲಾಯ್ತು ಬಾಡಿಗೆ ತಾಯ್ತನ ಕಾಯ್ದೆ

ಬಾಡಿಗೆ ತಾಯ್ತನ ನಮ್ಮ ದೇಶಕ್ಕೆ ಹೊಸದೇನಲ್ಲ. ಆರೋಗ್ಯ ಸಂಬಂಧಿ ಸಮಸ್ಯೆ ಹೊಂದಿರುವವರು ಹಾಗೂ ನವಮಾಸ ಗರ್ಭ ಹೊತ್ತು ಪ್ರಸವೋತ್ತರ ವಿಶ್ರಾಂತಿಗೆ ಸಮಯದ ಕೊರತೆ ಎದುರಿಸುತ್ತಿರುವ ಸೆಲೆಬ್ರಿಟಿಗಳು ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆಯುತ್ತಾರೆ. ಅಮೀರ್‌ ಖಾನ್‌, ಶಾರುಖ್‌ ಖಾನ್‌, ಕರಣ್‌ ಜೋಹರ್‌ ಅಷ್ಟೇ ಅಲ್ಲದೆ, ಇತ್ತೀಚೆಗೆ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಕೂಡ ಇದೇ ರೀತಿ ಹೆಣ್ಣು ಮಗುವಿಗೆ ತಾಯಿಯಾಗಿರುವುದು ಗೊತ್ತೇ ಇದೆ.

ಈ ವ್ಯವಸ್ಥೆ ವಾಣಿಜ್ಯ ಉದ್ದೇಶಕ್ಕೂ ಬಳಕೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದರಿಂದ, ಬಾಡಿಗೆ ತಾಯ್ತನಕ್ಕೊಂದು ಕಾನೂನಿನ ಚೌಕಟ್ಟು ಹಾಕಲಾಯ್ತು. ಮಗುವನ್ನು ಪಡೆಯುವ ದಂಪತಿಯ ಬಂಧುವೇ ಬಾಡಿಗೆ ತಾಯಿಯಾಗಬೇಕೆಂಬ ನಿಯಮ ಇದುವರೆಗೂ ಜಾರಿಯಲ್ಲಿತ್ತು. ಅದರಿಂದ ಕೆಲವು ಸಮಸ್ಯೆಗಳು ಉದ್ಭವಿಸಿದ್ದರಿಂದ, ಆ ನಿಯಮಕ್ಕೂ ತಿದ್ದುಪಡಿ ತಂದು ಪ್ರಸ್ತುತ ಹೊಸ ಬಾಡಿಗೆ ತಾಯ್ತನ (ನಿಯಂತ್ರಣ) ಮಸೂದೆಯು ಸಂಸತ್ತಿನಲ್ಲಿ ಅಂಗೀಕಾರ ಪಡೆದುಕೊಂಡಿದೆ. ಆದರೆ, ಈಗಿನ ಬದಲಾವಣೆಯಿಂದ ಒಳಿತಾಗಲಿದೆಯೋ, ಕೆಡುಕಾಗಲಿದೆಯೋ ಎಂಬುದೇ ಎಲ್ಲರ ಮುಂದಿರುವ ಪ್ರಶ್ನೆ.

ಮೊದಲು ಏನಿತ್ತು?
ಒಂದು ಕಾಲದಲ್ಲಿ ವಿದೇಶಿಯರು ಕೂಡ ಬಾಡಿಗೆ ತಾಯಿಗಾಗಿ ಭಾರತಕ್ಕೆ ಬರುತ್ತಿದ್ದರು. ಇಲ್ಲಿನ ಮಹಿಳೆಯರು ಆರ್ಥಿಕ ಅಗತ್ಯಕ್ಕಾಗಿ ಬಾಡಿಗೆ ತಾಯಿಯಾಗಲು ಒಪ್ಪಿಕೊಳ್ಳುತ್ತಿದ್ದರು. ಆದ್ದರಿಂದ ಇದು ವಾಣಿಜ್ಯ ಉದ್ದೇಶ ಹೊಂದಿದೆ ಎಂಬ ಆರೋಪ ಕೇಳಿ ಬಂತು. ಆ ಬಳಿಕ, ಮಗು ಪಡೆಯಲಿಚ್ಛಿಸುವ ದಂಪತಿಯ ಬಂಧುಗಳೇ ಬಾಡಿಗೆ ತಾಯಿ ಆಗಬೇಕು ಅಂತಾಯ್ತು. ಆದರೆ ಈ ವ್ಯವಸ್ಥೆಯಲ್ಲಿ ದಂಪತಿಯ ಖಾಸಗಿತನಕ್ಕೆ ತೊಡಕಾಗುತ್ತಿತ್ತು ಮತ್ತು ಬಾಡಿಗೆ ತಾಯಿಯಾಗುವ ಮಹಿಳೆಯರ ಕೊರತೆಯೂ ಕಾಡಲಾರಂಭಿಸಿತು.

ಏನು ಬದಲಾಯ್ತು?
-ಬಾಡಿಗೆ ತಾಯ್ತನ ಮಸೂದೆಯಲ್ಲಾದ ತಿದ್ದುಪಡಿಯಲ್ಲಿ, ಬಾಡಿಗೆ ತಾಯಿಯಾಗುವವರು ದಂಪತಿಯ ಬಂಧುವೇ ಆಗಬೇಕು ಎಂಬ ನಿರ್ಬಂಧ ರದ್ದು ಪಡಿಸಲಾಗಿದೆ. ಆರೋಗ್ಯವಂತಳಾದ ಯಾವ ಮಹಿಳೆಯೂ ಬಾಡಿಗೆ ತಾಯಿಯಾಗಬಹುದು. ಆದರೆ, ವಾಣಿಜ್ಯ ಉದ್ದೇಶ ಇರಬಾರದು ಎಂದೂ ಹೇಳಲಾಗಿದೆ. ಆದರೆ, ವಾಣಿಜ್ಯ ಉದ್ದೇಶವನ್ನು ಗುರುತಿಸುವುದು ಮತ್ತು ತಡೆಯುವುದು ಹೇಗೆ ಎಂಬುದೇ ಈಗಿರುವ ಪ್ರಶ್ನೆ.

-ಹಿಂದೆ ದಂಪತಿಯು ಮದುವೆಯಾಗಿ 5 ವರ್ಷ ತುಂಬುವ ಮೊದಲು ಬಾಡಿಗೆ ತಾಯಿ ಮೂಲಕ ಮಗು ಪಡೆಯಲು ಅವಕಾಶ ಇರಲಿಲ್ಲ. ಹೊಸ ಬದಲಾವಣೆಯಲ್ಲಿ ಈ ನಿರ್ಬಂಧವನ್ನೂ ರದ್ದುಪಡಿಸಲಾಗಿದೆ. ಇದು ಕೂಡ ಕೆಲವು ಒಳಿತು, ಕೆಡುಕಿಗೆ ಕಾರಣವಾಗಲಿದೆ. ಎಷ್ಟೋ ಬಾರಿ ದೀರ್ಘ‌ ಕಾಲದ ಚಿಕಿತ್ಸೆ ಬಳಿಕ ದಂಪತಿಗೆ ಮಗುವಾದ ಉದಾಹರಣೆಗಳಿವೆ. ಆದ್ದರಿಂದ ಇನ್ನು ಮುಂದೆ ಇಂಥ ಚಿಕಿತ್ಸೆಯತ್ತ ದಂಪತಿ ಗಮನ ಹರಿಸದೆ, ಸಣ್ಣಪುಟ್ಟ ಕಾರಣಕ್ಕೂ ಬಾಡಿಗೆ ತಾಯಿ ವ್ಯವಸ್ಥೆಯನ್ನು ಅವಲಂಬಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

-ಮಗುವನ್ನು ಪಡೆಯುವ ದಂಪತಿಯ ಖಾಸಗಿತನಕ್ಕೆ ಹೊಸ ಬದಲಾವಣೆಯಿಂದ ಅನುಕೂಲವಾಗಿದೆ. ಬಂಧುಗಳೇ ಬಾಡಿಗೆ ತಾಯಿಯಾದರೆ, ಆ ಮಗುವನ್ನು ಜೀವನಪೂರ್ತಿ ನೋಡುತ್ತಿರಬೇಕಾದ್ದರಿಂದ ಮಾನಸಿಕ ತೊಳಲಾಟಕ್ಕೆ ಸಿಲುಕಬೇಕಿತ್ತು. ಮಗುವನ್ನು ಪಡೆದ ದಂಪತಿಗೂ ಒಂದು ರೀತಿಯ ಕಿರಿಕಿರಿ. ಬಂಧುವೇ ಅಲ್ಲದ ಮಹಿಳೆಯಿಂದ ಮಗುವನ್ನು ಪಡೆದುಕೊಂಡರೆ ಇಂಥ ಸಮಸ್ಯೆಯಿಲ್ಲ. ಎಷ್ಟೋ ಸಂದರ್ಭದಲ್ಲಿ ಹತ್ತಿರದ ಬಂಧುಗಳಿಂದಲೂ ಬಾಡಿಗೆ ತಾಯಿ ವಿಷಯವನ್ನು ದಂಪತಿ ರಹಸ್ಯವಾಗಿಡಲು ಬಯಸುತ್ತಾರೆ. ಅಂಥವರಿಗೂ ಈಗಿನ ಹೊಸ ಬದಲಾವಣೆಯಿಂದ ತುಂಬಾ ಅನುಕೂಲವಾಗಿದೆ.

– ವಿಧವೆ, ವಿಚ್ಛೇದಿತೆಯರೂ ಬಾಡಿಗೆ ತಾಯಿಯ ಮೂಲಕ ಮಗುವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಮಗು ಪಡೆಯುವ ಏಕೈಕ ಉದ್ದೇಶಕ್ಕಾಗಿ ಮತ್ತೂಂದು ಮದುವೆಯಾಗಬೇಕೆಂದಿಲ್ಲ.

ಕುಟುಂಬ ವ್ಯವಸ್ಥೆಗೆ ಅಪಾಯವೇ?
ಸದುದ್ದೇಶದಿಂದ ಬದಲಾವಣೆಗೆ ಒಳಗಾಗಿರುವ ಬಾಡಿಗೆ ತಾಯ್ತನ (ನಿಯಂತ್ರಣ) ಮಸೂದೆಯು ಕಾಯ್ದೆಯಾದ ಬಳಿಕ , ಈ ವ್ಯವಸ್ಥೆ ಮೂಲಕವೇ ಮಗುವನ್ನು ಪಡೆಯಲು ಆರ್ಥಿಕವಾಗಿ ಸದೃಢರಾಗಿರುವವರು ಹೆಚ್ಚು ಆಸಕ್ತಿ ತೋರಿಸಿಯಾರೇ? ಹೆರಿಗೆ ಕಿರಿಕಿರಿ ತಪ್ಪಿಸಿಕೊಳ್ಳಲು ಈ ವ್ಯವಸ್ಥೆ ಬಳಕೆಯಾದೀತೇ? ಆ ಮೂಲಕ ನಿಜವಾದ ತಾಯ್ತನದ ಸುಖ, ಅನುಭವದಿಂದ ನಮ್ಮ ಮುಂದಿನ ತಲೆಮಾರು ವಂಚಿತರಾಗಿ ಅದರ ನೇರವಾದ ಪರಿಣಾಮ ಕುಟುಂಬ ವ್ಯವಸ್ಥೆಯ ಮೇಲೆ ಆಗಲಿದೆಯೇ? ಆದಾಯದ ಮಾರ್ಗವಾಗಿ ಬಳಕೆಯಾದೀತೇ? ಇದೊಂದು ದೊಡ್ಡ ವ್ಯವಹಾರವಾಗಿ ಬದಲಾಗಲಿದೆಯೇ ಮುಂತಾದ ಪ್ರಶ್ನೆಗಳೂ ಈಗ ಉತ್ತರಕ್ಕಾಗಿ ಕಾಯುತ್ತಿವೆ.

-ಪುತ್ತಿಗೆ ಪದ್ಮನಾಭ ರೈ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.