ಎಳ್ಳು ತಿನ್ನಿ ಒಳ್ಳೆ ಮಾತಾಡಿ…


Team Udayavani, Jan 15, 2020, 4:41 AM IST

mk-8

ಉತ್ತರಾಯಣದಲ್ಲಿ ಆಚರಿಸಲ್ಪಡುವ ಮಕರ ಸಂಕ್ರಾತಿ ಹಬ್ಬದಲ್ಲಿ ಎಳ್ಳಿಗೆ ವಿಶೇಷ ಸ್ಥಾನವಿದೆ. ಇದರಲ್ಲಿ ಮುಖ್ಯವಾಗಿ ಝಿಂಕ್‌, ಸೆಲೆನಿಯಮ್‌, ಕಬ್ಬಿಣ, ಮೆಗ್ನಿàಶಿಯಮ್‌, ವಿಟಮಿನ್‌ ಬಿ 6, ವಿಟಮಿನ್‌ ಇ ಇರುವುದರಿಂದ, ಎಳ್ಳಿನ ಸೇವನೆಯಿಂದ ಶರೀರದ ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ. ಮಾತ್ರವಲ್ಲದೆ, ಚಳಿಗಾಲದಲ್ಲಿ ಶರೀರಕ್ಕೆ ಅಗತ್ಯವಿರುವ ಸ್ನಿಗ್ಧತೆಯನ್ನು ದೊರಕಿಸಿ ತ್ವಚೆಯ ಸಂರಕ್ಷಣೆ ಮಾಡುತ್ತದೆ. ಸಂಕ್ರಾಂತಿಯ ಆಚರಣೆಯೊಂದಿಗೆ ತಯಾರಿಸಬಹುದಾದಂ ಕೆಲವು ವಿಶೇಷ ಅಡುಗೆಗಳ ರೆಸಿಪಿ ಇಲ್ಲಿದೆ.

1. ಕಡುಬು
ಬೇಕಾಗುವ ಸಾಮಗ್ರಿ: ಅಕ್ಕಿ ಹಿಟ್ಟು-1 ಕಪ್‌, ಕರಿ ಎಳ್ಳು-1 ಕಪ್‌, ಬೆಲ್ಲ-1ಕಪ್‌, ತೆಂಗಿನ ತುರಿ- 1/2 ಕಪ್‌, ಉಪ್ಪು, ಏಲಕ್ಕಿ ಪುಡಿ, ನೀರು-ಒಂದೂವರೆ ಕಪ್‌(ಸ್ವಲ್ಪ ಹೆಚ್ಚಾ ಬೇಕಾಗಬಹುದು)

ಮಾಡುವ ವಿಧಾನ: (ಹೂರಣ ತಯಾರಿ) ಮೊದಲು ಎಳ್ಳನ್ನು ಚೆನ್ನಾಗಿ ತೊಳೆದು ಬಟ್ಟೆಯ ಮೇಲೆ ಹರಡಿ ಆರಲು ಬಿಡಿ. ನಂತರ ಅದನ್ನು ಬಾಣಲೆಯಲ್ಲಿ ಹಾಕಿ ಚಟಪಟ ಸಿಡಿಯುವಷ್ಟು ಹುರಿದು ಮಿಕ್ಸಿಯಲ್ಲಿ ಹಾಕಿ ಪುಡಿಮಾಡಿ. ಅದೇ ಬಾಣಲೆಗೆ ಬೆಲ್ಲ ಮತ್ತು ಕಾಯಿತುರಿ ಸೇರಿಸಿ ಸಣ್ಣ ಉರಿಯಲ್ಲಿ ಮಗುಚುತ್ತಾ ಬನ್ನಿ. ಬೆಲ್ಲ ಕರಗಿ ಪಾಕ ಗಟ್ಟಿಯಾಗಿ ತಳ ಬಿಟ್ಟು ಬರುತ್ತಿದ್ದಂತೆಯೇ ಏಲಕ್ಕಿ ಪುಡಿ ಸೇರಿಸಿ ಒಲೆಯಿಂದ ಕೆಳಗಿಳಿಸಿ.

(ಹೊರಗಿನ ಹಿಟ್ಟು) ನೀರನ್ನು ಚೆನ್ನಾಗಿ ಕುದಿಸಿ ಅದಕ್ಕೆ ಉಪ್ಪು ಹಾಕಿ ಅದನ್ನು ಸ್ವಲ್ಪ ಸ್ವಲ್ಪವೇ ಅಕ್ಕಿ ಹಿಟ್ಟಿಗೆ ಸೇರಿಸುತ್ತಾ ಬನ್ನಿ. ಸೌಟಿನ ಸಹಾಯದಿಂದ ಹಿಟ್ಟನ್ನು ಮಗುಚುತ್ತಾ ಇರಿ. ಹಿಟ್ಟು ಕೈಗೆ ಅಂಟದಷ್ಟು ಗಟ್ಟಿಯಾಗಲಿ. ಹಿಟ್ಟು ಸ್ವಲ್ಪ ಹೊತ್ತು ತಣಿದ ನಂತರ ಕೈಯಲ್ಲಿ ತಟ್ಟಿ ಅದರೊಳಗೆ ಹೂರಣ ತುಂಬಿ ಕಡುಬಿನಾಕಾರದಲ್ಲಿ ಮುಚ್ಚಿ. ಈ ರೀತಿ ತಯಾರಿಸಿದ ಕಡುಬನ್ನು, ಹಬೆಯಲ್ಲಿಟ್ಟು 10-15 ನಿಮಿಷದವರೆಗೆ ಬೇಯಿಸಿದರೆ ಸಿಹಿಯಾದ ಎಳ್ಳಿನ ಕಡುಬು ಸವಿಯಲು ಸಿದ್ಧ.

2. ಎಳ್ಳನ್ನ
ಬೇಕಾಗುವ ಸಾಮಗ್ರಿ: ಅಕ್ಕಿ-2 ಕಪ್‌, ಕರಿ ಎಳ್ಳು-1/4 ಕಪ್‌, ಉದ್ದಿನ ಬೇಳೆ-1 ಚಮಚ, ಕಡಲೆ ಬೇಳೆ-1 ಚಮಚ, ಒಣ ಮೆಣಸು-2, ಉಪ್ಪು, ಒಗ್ಗರಣೆಗೆ: ಸಾಸಿವೆ, ಎಣ್ಣೆ, ಕರಿಬೇವು.

ಮಾಡುವ ವಿಧಾನ: ಅಕ್ಕಿಯನ್ನು ಚೆನ್ನಾಗಿ ತೊಳೆದು, ಉದುರುದುರಾಗಿ ಅನ್ನ ಮಾಡಿಕೊಳ್ಳಿ. ಎಳ್ಳನ್ನು ಬಾಣಲೆಗೆ ಹಾಕಿ ಹುರಿದು ತೆಗೆದಿರಿಸಿ. ನಂತರ ಉದ್ದಿನ ಬೇಳೆ ಮತ್ತು ಕಡಲೆ ಬೇಳೆಯನ್ನು ಹಾಕಿ ಹುರಿದುಕೊಳ್ಳಿ. ಒಣಮೆಣಸನ್ನು ಸ್ವಲ್ಪ ಎಣ್ಣೆ ಹಾಕಿ ಹುರಿಯಿರಿ. ಎಲ್ಲವೂ ಆರಿದ ನಂತರ ಮಿಕ್ಸಿ ಜಾರ್‌ಗೆ ಹಾಕಿ ಪುಡಿ ಮಾಡಿ. ಬಾಣಲೆಯಲ್ಲಿ ಒಗ್ಗರಣೆ ಸಿಡಿಸಿ, ಕರಿಬೇವು ಹಾಕಿ, ಅನ್ನ ಸೇರಿಸಿ, ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ. ಈಗ ಪುಡಿ ಮಾಡಿಟ್ಟ ಮಿಶ್ರಣವನ್ನೂ ಸೇರಿಸಿ ಚೆನ್ನಾಗಿ ಕಲೆಸಿ.

3.ಬರ್ಫಿ
ಬೇಕಾಗುವ ಸಾಮಗ್ರಿ: ಬಿಳಿ ಎಳ್ಳು-2 ಕಪ್‌, ಬೆಲ್ಲ-ಒಂದೂವರೆ ಕಪ್‌, ನೀರು-1/4 ಕಪ್‌, ತೆಂಗಿನ ತುರಿ -1/4 ಕಪ್‌, ತುಪ್ಪ-1/4 ಕಪ್‌, ಏಲಕ್ಕಿ, ಗೋಡಂಬಿ.

ಮಾಡುವ ವಿಧಾನ: ಎಳ್ಳನ್ನು ಪರಿಮಳ ಬರುವವರೆಗೆ ಹುರಿದು ತೆಗೆದಿರಿಸಿ (ಜಾಸ್ತಿ ಹುರಿದರೆ ಕಹಿಯಾಗುತ್ತದೆ) ಆರಿದ ನಂತರ ಮಿಕ್ಸಿ ಜಾರ್‌ಗೆ ಹಾಕಿ ತರಿತರಿಯಾಗಿ ಪುಡಿ ಮಾಡಿ. ಅದೇ ಬಾಣಲೆಗೆ ಬೆಲ್ಲ ಮತ್ತು ನೀರು ಹಾಕಿ ಚೆನ್ನಾಗಿ ಕುದಿಸಿ. ನೂಲು ಪಾಕ ಬಂದ ಕೂಡಲೇ ಎಳ್ಳಿನ ಪುಡಿ, ತೆಂಗಿನ ತುರಿ ಮತ್ತು ತುಪ್ಪವನ್ನು ಸೇರಿಸಿ ಸೌಟಿನಲ್ಲಿ ತಿರುವುತ್ತಾ ಬನ್ನಿ. ಪಾಕ ತಳ ಬಿಟ್ಟು ಬರುವಾಗ ಏಲಕ್ಕಿ ಪುಡಿ ಸೇರಿಸಿ ಒಲೆಯಿಂದ ಕೆಳಗಿಳಿಸಿ, ತುಪ್ಪ ಸವರಿದ ತಟ್ಟೆಗೆ ಹರಡಿ.ಗೋಡಂಬಿಯಿಂದ ಅಲಂಕರಿಸಿ, ಸ್ವಲ್ಪ ಆರಿದ ನಂತರ ಚಾಕುವಿನಿಂದ ಬೇಕಾದ ಆಕಾರದಲ್ಲಿ ಕತ್ತರಿಸಿ.

4. ಕೋಸಂಬರಿ
ಬೇಕಾಗುವ ಸಾಮಗ್ರಿ: ಬಿಳಿ ಎಳ್ಳು-1/2 ಕಪ್‌, ಎಳೆ ಸೌತೆ/ಮುಳ್ಳು ಸೌತೆ-1, ತೆಂಗಿನ ತುರಿ-1/4 ಕಪ್‌, ಲಿಂಬೆ ರಸ, ಕೊತ್ತಂಬರಿ, ಉಪ್ಪು, ಒಗ್ಗರಣೆಗೆ-ಸಾಸಿವೆ, ಎಣ್ಣೆ, ಹಸಿಮೆಣಸು, ಇಂಗು, ಕರಿಬೇವು.

ಮಾಡುವ ವಿಧಾನ: ಎಳ್ಳನ್ನು ಪರಿಮಳ ಬರುವವರೆಗೆ ಹುರಿದು ತೆಗೆದಿರಿಸಿ. ಸೌತೆಕಾಯಿಯನ್ನು ಸಣ್ಣದಾಗಿ ಹೆಚ್ಚಿ, ಅದಕ್ಕೆ ತೆಂಗಿನ ತುರಿ, ಕೊತ್ತಂಬರಿ ಸೊಪ್ಪು, ಲಿಂಬೆ ರಸ, ಉಪ್ಪು ಮತ್ತು ಹುರಿದಿಟ್ಟ ಎಳ್ಳನ್ನು ಸೇರಿಸಿ. ಒಗ್ಗರಣೆ ಸಿಡಿಸಿ ಅದಕ್ಕೆ ಇಂಗು, ಕರಿಬೇವು ಮತ್ತು ಹಸಿ ಮೆಣಸಿನಕಾಯಿ ಸೇರಿಸಿ. ಎಳ್ಳು-ಸೌತೆಕಾಯಿ ಮಿಶ್ರಣಕ್ಕೆ ಒಗ್ಗರಣೆ ಸೇರಿಸಿದರೆ ಆರೋಗ್ಯಕರ ಮತ್ತು ರುಚಿಕರವಾದ ಎಳ್ಳಿನ ಕೋಸಂಬರಿ ತಯಾರು.

-ಡಾ.ಹರ್ಷಿತಾ ಎಂ.ಎಸ್‌.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.