ಹೂವಿನ ಫೇಸ್‌ಪ್ಯಾಕ್‌


Team Udayavani, Feb 8, 2017, 10:38 AM IST

flower.jpg

ಮೊದಲೆಲ್ಲ ಹೂವು ಅಂದ್ರೆ ಹೂವಿನಂಥ ಹುಡುಗಿಯ ಕಣ್ಣರಳುತ್ತಿತ್ತು. ಅರಿವಿಲ್ಲದಂತೇ ಕೈ ಹೂವನ್ನು ಕಿತ್ತು ಮುಡಿಗಿಟ್ಟುಕೊಳ್ಳುತ್ತಿತ್ತು. ಈಗ ಹೂ ಮುಡಿಯೋ ಹುಡುಗಿಯರು ಬಹಳ ಕಡಿಮೆ. ಆದರೂ ಹೂ ಕಂಡರೆ ಮುಖ ತಿರುಗಿಸಲ್ಲ ನಮ್ಮ ಹುಡುಗಿಯರು. ಅವರಿಗೆ ಹೂವು ಕಣ್ಣೆದುರಿಗಿದ್ದರೆ ಖುಷಿ, ತನಗೆ ಕಾಣದಂತೆ ತಲೆಗೆ ಮುಡಿಯಲು ಬೇಜಾರು. ಈಗ ಹುಡುಗಿಯರಿಗೆ. ಹೆಂಗಸರಿಗೆ, ವಯಸ್ಸಾದವರಿಗೆ, ಟೋಟಲ್ಲಾಗಿ ಎಲ್ಲ ವಯೋಮಾನದ ಹೆಣ್ಣುಜಾತಿಗೆ ಇಷ್ಟವಾಗುವಂತ ಹೂಗಳ ಫೇಸ್‌ಪ್ಯಾಕ್‌ಗಳು ಬಂದಿವೆ. ಹೂವಿನ ಕಂಪು ಸವಿಯುತ್ತ ನೀವು ಫೇಶಿಯಲ್‌ ಮಾಡಿಸಿಕೊಳ್ಳಬಹುದು. 

1. ಗುಲಾಬಿ ಫೇಸ್‌ ಪ್ಯಾಕ್‌
ಎರಡು ತಾಜಾ ಗುಲಾಬಿಯ ಪಕಳೆಗಳನ್ನು 15 ಚಮಚ ನೀರಿನಲ್ಲಿ ಅರ್ಧ ಗಂಟೆ ನೆನೆಸಬೇಕು. ಬಳಿಕ ಅದನ್ನು ರುಬ್ಬಿ 2 ಚಮಚ ಜೇನು ಬೆರೆಸಿ ಪೇಸ್ಟ್‌ ತಯಾರಿಸಬೇಕು. ಇದನ್ನು ತುದಿಬೆರಳುಗಳಿಂದ ಮುಖಕ್ಕೆ ಲೇಪಿಸಿ
ಫೇಸ್‌ಪ್ಯಾಕ್‌ ಮಾಡಬೇಕು. ತದನಂತರ ಈ ಫೇಸ್‌ಪ್ಯಾಕ್‌ ಮೇಲೆ ಹಾಲಿನಲ್ಲಿ ಅದ್ದಿದ ಗುಲಾಬಿಯ ಪಕಳೆಗಳನ್ನು ಹಚ್ಚಬೇಕು.

20 ನಿಮಿಷಗಳ ಬಳಿಕ ತೊಳೆದರೆ ಮುಖ ಶುಭ್ರ ಮೃದು ಕಾಂತಿಯುತವಾಗುತ್ತದೆ. ವಾರಕ್ಕೆ ಮೂರು ಸಾರಿಯಂತೆ 6-8 ವಾರ ಬಳಸಿದರೆ ಮುಖದ ಚರ್ಮ ಬೆಳ್ಳಗಾಗುತ್ತದೆ.

2. ಮೊಡವೆ ನಿವಾರಕ ಮಲ್ಲಿಗೆಯ ಫೇಸ್‌ಪ್ಯಾಕ್‌
 ಎರಡು ಹಿಡಿ ಮಲ್ಲಿಗೆಯನ್ನು 1/4 ಕಪ್‌ ಹಾಲಿನಲ್ಲಿ ನೆನೆಸಿ ಅದರಲ್ಲಿಯೇ 8 ಬಾದಾಮಿಯನ್ನು ನೆನೆಸಿಡಬೇಕು.ಅರ್ಧ ಗಂಟೆಯ ಬಳಿಕ ಎಲ್ಲವನ್ನು ಚೆನ್ನಾಗಿ ರುಬ್ಬಿ ಲೇಪ ತಯಾರಿಸಬೇಕು. ಮುಖಕ್ಕೆ ಚೆನ್ನಾಗಿ ಲೇಪಿಸಿ ಮೃದುವಾಗಿ ಮಾಲೀಶು ಮಾಡಬೇಕು. 20 ನಿಮಿಷಗಳ ಬಳಿಕ ಬೆಚ್ಚಗಿನ ನೀರಿನಲ್ಲಿ ತೊಳೆದು ತೆಗೆಯಬೇಕು. ಹೀಗೆ ವಾರಕ್ಕೆ ಎರಡರಿಂದ ಮೂರು ಬಾರಿ ಮಲ್ಲಿಗೆಯ ಫೇಸ್‌ಪ್ಯಾಕ್‌ ಮಾಡಿದರೆ 1-2 ತಿಂಗಳಲ್ಲಿ ಮೊಡವೆ ಕಲೆ ಮೊದಲಾದವು ನಿವಾರಣೆಯಾಗಿ ಮುಖ ಶುಭ್ರವಾಗಿ ಹೊಳೆಯುತ್ತದೆ.

3. ಚೆಂಡು ಹೂವು
ಮುಖ ಬೆಳ್ಳಗಾಗಲು ಬ್ಲೀಚಿಂಗ್‌ ಮಾಡುವುದು ಸಾಮಾನ್ಯ. ಆದರೆ ಕೆಮಿಕಲ್‌ ಬ್ಲೀಚಿಂಗ್‌ಗೆ ಬದಲಾಗಿ ಚೆಂಡು ಹೂವನ್ನೇ ಬಳಸಿ ನೈಸರ್ಗಿಕವಾಗಿ ಬ್ಲೀಚಿಂಗ್‌ ಪರಿಣಾಮ ಪಡೆಯಬಹುದು!

ಒಂದು ದೊಡ್ಡ ತಾಜಾ ಚೆಂಡು ಹೂವಿನ ಎಸಳುಗಳನ್ನು ನಾಲ್ಕು ಚಮಚ ದಪ್ಪ ಮೊಸರಲ್ಲಿ 15 ನಿಮಿಷ ನೆನೆಸಿಡಬೇಕು. ತದನಂತರ ಅದನ್ನು ಅರೆಯಬೇಕು. ಈ ಮಿಶ್ರಣಕ್ಕೆ ಕತ್ತರಿಸಿ ಅರೆದ ಹಸಿ ಆಲೂಗಡ್ಡೆಯ ಪೇಸ್ಟ್‌ ಮೂರು ಚಮಚ ಬೆರೆಸಬೇಕು. ಎರಡನ್ನೂ ಚೆನ್ನಾಗಿ ಬೆರೆಸಿ, ಮುಖಕ್ಕೆ ಲೇಪಿಸಿ ತುದಿ ಬೆರಳುಗಳಿಂದ ಮಾಲೀಶು ಮಾಡಬೇಕು. ಒಂದು ಗಂಟೆಯ ಬಳಿಕ ತಣ್ಣೀರಿನಲ್ಲಿ ತೊಳೆದರೆ ನೈಸರ್ಗಿಕ ಬ್ಲೀಚಿಂಗ್‌ ಪರಿಣಾಮ ಉಂಟಾಗುತ್ತದೆ. ಇದನ್ನು ಎರಡು ದಿನಕ್ಕೊಮ್ಮೆಯಂತೆ 1-2 ತಿಂಗಳು ಬಳಸಬಹುದು. 

4. ಪಾರಿಜಾತ ಹೂವಿನ ಫೇಸ್‌ಪ್ಯಾಕ್‌ 
15 ಪಾರಿಜಾತ ಹೂವುಗಳನ್ನು 5 ಚಮಚ ಕಿತ್ತಳೆ ರಸದಲ್ಲಿ ಅರೆದು ಅದಕ್ಕೆ ಎರಡು ಚಮಚ ಶುದ್ಧ ಜೇನುತುಪ್ಪ ಬೆರೆಸಿ, ಎರಡು ಚಿಟಿಕೆ ಅರಸಿನ ಹುಡಿ ಸೇರಿಸಿ ಕಲಕಬೇಕು. ಇದನ್ನು ಮುಖಕ್ಕೆ ಲೇಪಿಸಿ ಅರ್ಧ ಗಂಟೆಯ ಬಳಿಕ ತೊಳೆದರೆ ಮೊಗದ ಚರ್ಮ ಶುಭ್ರ ಕಾಂತಿಯುತವಾಗುವುದರ ಜೊತೆಗೆ ತುರಿಕೆ ಗುಳ್ಳೆಗಳಿದ್ದರೂ ನಿವಾರಣೆಯಾಗುತ್ತದೆ.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.