ಕಾಲು ದಾರೀಲಿ ಬದುಕಿನ ಅಂಬಾರಿ

ಮೆಟ್ಟನ್ನೇ ಮೆಟ್ಟಿಲಾಗಿಸಿಕೊಂಡ ಗಂಗಮ್ಮ

Team Udayavani, Jun 12, 2019, 5:50 AM IST

h-3

ದೊಡ್ಡ ದೊಡ್ಡ ಅಂಗಡಿಗಳಲ್ಲಿ, ನೂರಾರು ರೂಪಾಯಿ ಕೊಟ್ಟು, ಚೌಕಾಸಿ ಮಾಡದೆ ಚಪ್ಪಲಿ ಖರೀದಿಸುವ ನಾವು, ಅದೇ ಚಪ್ಪಲಿ ಹರಿದು ಹೋದಾಗ, ಚಮ್ಮಾರರ ಬಳಿ ಐದ್ಹತ್ತು ರೂಪಾಯಿಗೆ ಚೌಕಾಸಿಗೆ ಇಳಿಯುತ್ತೇವೆ. ಆದ್ರೆ, ಹರಿದ ಚಪ್ಪಲಿಯಿಂದಲೇ ಬದುಕು ಹೊಲಿಯುವ ಅವರ ಬಗ್ಗೆ ಒಮ್ಮೆಯಾದ್ರೂ ಯೋಚಿಸಿದ್ದೇವಾ?

ಗಡಿಬಿಡಿಯಲ್ಲಿ ಎಲ್ಲಿಗೋ ಹೊಗೋವಾಗ ಚಪ್ಪಲಿ ಕಿತ್ತು ಹೋದರೆ, ಮೊದಲು ಹುಡುಕೋದು ಚಮ್ಮಾರರನ್ನು. ರಸ್ತೆ ಬದಿಯಲ್ಲೊಂದು ಟೆಂಟ್‌ ಕಟ್ಟಿಕೊಂಡು, ಚಪ್ಪಲಿ ಹೊಲಿಯುವವರಲ್ಲಿ ಗಂಡಸರೇ ಹೆಚ್ಚು. ಚಮ್ಮಾರಿಕೆ ಮಾಡುತ್ತಿರೋ ಕೆಲವೇ ಕೆಲವು ಮಹಿಳೆಯರಲ್ಲಿ, ಐವತ್ತೈದು ವರ್ಷದ ಗಂಗಮ್ಮ ಅವರೂ ಒಬ್ಬರು. ವಿಜಯಪುರದ ಗಾಂಧಿ ಚೌಕದ ಬಳಿಯ ಸರಕಾರಿ ಕಾಲೇಜಿನ ಹತ್ತಿರ ಇವರು ಚಪ್ಪಲಿ ಹೊಲಿಯುತ್ತಿರುತ್ತಾರೆ.

ಬೆಳಗ್ಗೆದ್ದು ಚಮ್ಮಾರಿಕೆಯ ಸಾಮಗ್ರಿಗಳನ್ನು ಹಿಡಿದು ರಸ್ತೆ ಬದಿ ಕೂರುವ ಗಂಗಮ್ಮನನ್ನು, ವಾಹನದ ಧೂಳು, ಕರ್ಕಶ ಶಬ್ದ, ಬಿಸಿಲು, ಮಳೆಗಳ್ಯಾವುವೂ ಬಾಧಿಸುವುದೇ ಇಲ್ಲ. ಯಾಕೆಂದರೆ, ದುಡಿಯಲೇಬೇಕಾದ ಅನಿವಾರ್ಯ. ದಿನವಿಡೀ ಕುಳಿತರೂ 200 ರೂ. ಸಿಕ್ಕಿದರೆ ಅದೇ ಹೆಚ್ಚು ಎನ್ನುವ ಗಂಗಮ್ಮ, 35 ವರ್ಷಗಳಿಂದ ಹೊಟ್ಟೆಪಾಡಿಗೆ ಈ ಕೆಲಸ ಮಾಡುತ್ತಿದ್ದಾರೆ. 36 ವರ್ಷಗಳ ಹಿಂದೆ ನಾಪತ್ತೆಯಾದ ಗಂಡ ಈಕೆಗಾಗಿ ಬಿಟ್ಟು ಹೋಗಿದ್ದು ಚಮ್ಮಾರಿಕೆಯನ್ನು ಮಾತ್ರ.

ಗಂಡ ಎಲ್ಲಿ ಹೋದ ಅಂತ ತಿಳಿಯದ ಗಂಗಮ್ಮನಿಗೆ ಜೀವನ ಸಾಕು ಅನ್ನಿಸಿತ್ತು. ಆದರೆ, ಮಡಿಲಲ್ಲಿ ಮೂವರು ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳು ಇದ್ದರಲ್ಲ; ಅವರ ಮುಖ ನೋಡಿ, ಬದುಕು ನಡೆಸಲು ನಿರ್ಧರಿಸಿದ ಆಕೆ, ಗಂಡನ ಕುಲಕಸುಬಾದ ಚಮ್ಮಾರಿಕೆಯಲ್ಲಿ ತೊಡಗಿದರು. ಮುಂದೆ ಅದೇ ವೃತ್ತಿಯಿಂದ ಸಂಸಾರ ತೂಗಿಸುತ್ತಾ, ಹೆಣ್ಣುಮಕ್ಕಳ ಮದುವೆಯನ್ನೂ ಮಾಡಿ ದಿಟ್ಟೆ ಈಕೆ. ಈಗ ಗಂಡು ಮಕ್ಕಳೂ ಚಮ್ಮಾರಿಕೆಯಲ್ಲಿ ತೊಡಗಿಕೊಂಡು, ತಾಯಿಗೆ ನೆರವಾಗುತ್ತಿದ್ದಾರೆ.

ಸರ್ಕಾರಕ್ಕೆ ಬಾಡಿಗೆ
ಪ್ರತಿದಿನ ತಾವು ಕುಳಿತುಕೊಳ್ಳುವ ಸ್ಥಳದ ಬಾಡಿಗೆಯನ್ನು ಸರ್ಕಾರಕ್ಕೆ ಕೊಡಬೇಕು. ವ್ಯಾಪಾರವಾಗಲಿ, ಬಿಡಲಿ, ಸರ್ಕಾರ ಅದನ್ನು ಕೇಳುವುದಿಲ್ಲ. ಒಂದು ಚಪ್ಪಲಿ ಹೊಲಿದಿದ್ದಕ್ಕೆ 10-15 ರೂ. ಆಗುತ್ತೆ. ಆದ್ರೆ, ಕೆಲವರು ಅದರಲ್ಲೂ ಚೌಕಾಸಿಗಿಳಿದು 5 ರೂಪಾಯನ್ನಷ್ಟೇ ಕೊಟ್ಟು ಹೋಗ್ತಾರಂತೆ. ದಿನಕ್ಕೆ 10-12 ಮಂದಿ ಬಂದರೆ ಅದೇ ಹೆಚ್ಚು. ಉಳಿದ ಸಮಯದಲ್ಲಿ ಚರ್ಮ ತಂದು, ಎರಿ ಮಣ್ಣು ಹಚ್ಚಿ, ಸುತ್ತಲು ಮೊಳೆ ಬಡಿದು, ದಿನಕ್ಕೆ ಒಂದು ಜೋಡಿ ಚಪ್ಪಲಿ ತಯಾರಿಸ್ತಾರೆ. ಆ ಚಪ್ಪಲಿಗಳನ್ನು ರೈತರು, ಕುರಿಗಾಹಿಗಳು ಖರೀದಿಸ್ತಾರಂತೆ. ಕೆಲವೊಮ್ಮೆ ಚರ್ಮದ ಚಪ್ಪಲಿಗಳನ್ನು ಅಂಗಡಿಗೂ ಮಾರುತ್ತಾರೆ. ಗಂಗಮ್ಮ ಓದಿದ್ದು ಮೂರನೇ ಕ್ಲಾಸ್‌ವರೆಗೆ ಮಾತ್ರ. ಓದುವ ಆಸೆಯಿದ್ದರೂ, ಬಡತನ ಎಂಬ ಶತ್ರು ಓದಲು ಬಿಡಲಿಲ್ಲ ಎಂದು ವಿಷಾದಿಸುತ್ತಾರವರು.

“ಸುತ್ತಮುತ್ತ ಗಂಡಸರೇ ಚಪ್ಪಲಿ ಹೊಲಿಯೋದು. ಅವರ ಮಧ್ಯೆ ನಾನೊಬ್ಬಳೇ ಮಹಿಳೆ. ನನಗೆ ಚಪ್ಪಲಿ ಹೊಲಿಯೋದರ ಬಗ್ಗೆ ಯಾವುದೇ ನಾಚಿಕೆಯಿಲ್ಲ. ನಾಚಿಕೆ ಅಂತ ಸುಮ್ಮನಿದ್ದಿದ್ದರೆ ಇಷ್ಟೊತ್ತಿಗೆ ನಾನೂ, ನನ್ನ ಮಕ್ಕಳೂ ಕೆರೆ, ಬಾವಿ ನೋಡಿಕೊಳ್ಳಬೇಕಾಗುತ್ತಿತ್ತು. ಕಷ್ಟ ಎಲ್ರಿಗೂ ಬರುತ್ತೆ, ಛಲದಿಂದ ದುಡೀಬೇಕು ಅಷ್ಟೆ’
-ಗಂಗಮ್ಮ ಮಾನೆ

-ವಿದ್ಯಾಶ್ರೀ ಗಾಣಿಗೇರ

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.