ಆರೋಗ್ಯವರ್ಧಕ ದಾಳಿಂಬೆ


Team Udayavani, Sep 25, 2019, 5:00 AM IST

r-4

ಕವಿಗಳು, ಸುಂದರ ದಂತಪಂಕ್ತಿಗಳನ್ನು ದಾಳಿಂಬೆ ಕಾಳಿಗೆ ಹೋಲಿಸಿ, ಕಾವ್ಯದ ಸೊಗಸನ್ನು ಮತ್ತಷ್ಟು ಹೆಚ್ಚಿಸುತ್ತಾರೆ. ದಾಳಿಂಬೆ ಕಾಳು ನಮ್ಮ ಆರೋಗ್ಯವನ್ನು, ಸೌಂದರ್ಯವನ್ನು ಕೂಡಾ ಹೆಚ್ಚಿಸುತ್ತದೆ. ದಾಳಿಂಬೆಯ ಕಾಳುಗಳು ಮಾತ್ರವಲ್ಲ, ಹಣ್ಣಿನ ಸಿಪ್ಪೆ ಮತ್ತು ಎಲೆಯೂ ಆರೋಗ್ಯಕರ ಮತ್ತು ಸೌಂದರ್ಯವರ್ಧಕ ಗುಣಗಳನ್ನು ಹೊಂದಿದೆ.

– ದಾಳಿಂಬೆ ಹಣ್ಣಿನ ಸೇವನೆಯಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರುವುದಲ್ಲದೆ, ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
-ಈ ಹಣ್ಣಿನ ರಸದಲ್ಲಿ ಸಿಟ್ರಿಕ್‌ ಮತ್ತು ಮಾಲಿಕ್‌ ಆಮ್ಲ ಅಧಿಕವಾಗಿವೆ.
-ದಾಳಿಂಬೆ ಎಲೆಗಳನ್ನು ನುಣ್ಣಗೆ ಅರೆದು ಸುಟ್ಟ ಗಾಯಗಳಿಗೆ ಲೇಪಿಸುವುದರಿಂದ ಉರಿ ಕಡಿಮೆಯಾಗುತ್ತದೆ.
– ದಾಳಿಂಬೆ ಹಣ್ಣಿನ ರಸ ಸೇವಿಸುವುದರಿಂದ ಹೃದಯ ಹಾಗೂ ಮೂತ್ರಪಿಂಡಗಳ ಕೆಲಸ ಸರಾಗವಾಗುತ್ತದೆ.
-ದಾಳಿಂಬೆಯ ಚಿಗುರಿನಿಂದ ಹಲ್ಲುಜ್ಜಿದರೆ ಅಥವಾ ಬಾಯಲ್ಲಿ ಹಾಕಿಕೊಂಡು ಜಗಿದರೆ ಹಲ್ಲುನೋವು ಮತ್ತು ಒಸಡಿನ ರಕ್ತಸ್ರಾವ ನಿಯಂತ್ರಣಗೊಳ್ಳುವುದು.
-ದಾಳಿಂಬೆ ಕಾಳುಗಳನ್ನು ನುಣ್ಣಗೆ ಅರೆದು, ಉಗುರು ಬೆಚ್ಚಗಿನ ನೀರಿನಲ್ಲಿ ಕದಡಿ ಕುಡಿಯುವುದರಿಂದ ಆಮಶಂಕೆ, ಅತಿಸಾರ ಭೇದಿ ನಿಲ್ಲುತ್ತದೆ.
-ಒಂದು ಚಮಚದಷ್ಟು ದಾಳಿಂಬೆ ರಸಕ್ಕೆ ಅಷ್ಟೇ ಪ್ರಮಾಣದ ಜೇನುತುಪ್ಪ ಬೆರೆಸಿ ಪ್ರತಿನಿತ್ಯವೂ ಸೇವಿಸುತ್ತಿದ್ದರೆ ಕಣ್ಣಿನ ನರಗಳು ಶಕ್ತಿ ಪಡೆಯುತ್ತವೆ.
-ಎರಡು ಚಮಚದಷ್ಟು ದಾಳಿಂಬೆ ರಸಕ್ಕೆ ಒಂದು ಚಮಚದಷ್ಟು ಜೇನುತುಪ್ಪ ಬೆರೆಸಿ ಕುಡಿದರೆ ತಲೆನೋವು ಕಡಿಮೆಯಾಗುವುದು.
-ದಾಳಿಂಬೆ ಕಾಳುಗಳನ್ನು ತೆಗೆದ ನಂತರ ಉಳಿಯುವ ದಿಂಡನ್ನು ಬೇಯಿಸಿ ಕಷಾಯ ತಯಾರಿಸಿ, ಅದಕ್ಕೆ ಸ್ವಲ್ಪ ಉಪ್ಪು ಬೆರೆಸಿ ಬಾಯಿ ಮುಕ್ಕಳಿಸಿದರೆ ಬಾಯಿ ಹುಣ್ಣು-ಗಂಟಲಿನ ಕಿರಿಕಿರಿ ಹೋಗುತ್ತದೆ.
-ದಾಳಿಂಬೆ ಹಣ್ಣಿನ ದಿಂಡನ್ನು ಬೇಯಿಸಿ, ಮೆಂತ್ಯೆಯ ಕಷಾಯದೊಂದಿಗೆ ಬೆರಸಿ 2 ಚಮಚದಷ್ಟು ಜೇನುತುಪ್ಪ ಬೆರೆಸಿ ಕುಡಿದರೆ ಆಮಶಂಕೆ ಗುಣವಾಗುತ್ತದೆ.

-ಹರ್ಷಿತಾ ಹರೀಶ್‌ ಕುಲಾಲ್‌   

ಟಾಪ್ ನ್ಯೂಸ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.