ಓಹ್‌, ಅವಳಾ? ಅವ್ಳು ಹೌಸ್‌ವೈಫ್ ಅಷ್ಟೆ…


Team Udayavani, Aug 21, 2019, 5:14 AM IST

9

ಬೇರೆ ಎಲ್ಲರ ದುಡಿಮೆಗೆ ಬ್ರೇಕ್‌, ಸ್ಯಾಲರಿ ಎಲ್ಲವೂ ಇದೆ. ಆದರೆ, ಹೌಸ್‌ವೈಫ್ ಅನ್ನೋ ಕೆಲಸಕ್ಕೆ ಬ್ರೇಕ್‌, ಸ್ಯಾಲರಿ ಯಾವುದೂ ಇಲ್ಲ. ದಿನವಿಡೀ ಬರೀ ಕೆಲ್ಸ ಕೆಲ್ಸ ಕೆಲ್ಸ ಅಷ್ಟೆ. ಅಷ್ಟೆಲ್ಲಾ ಕೆಲಸ ಮಾಡಿದರೂ, ಪ್ರತಿಯಾಗಿ ಸಿಗುವುದು ಬೈಗುಳ, ಗೊಣಗಾಟ ಮಾತ್ರ.

ಅಪ್ಪ-ಅಮ್ಮ ಏನ್ಮಾಡ್ತಾರೆ ಎಂಬ ಪ್ರಶ್ನೆ ಬಂದಾಗ ಅಪ್ಪನ ಉದ್ಯೋಗವನ್ನು ಹೆಮ್ಮೆಯಿಂದ ಹೇಳುವವರೆಲ್ಲರೂ ಅಮ್ಮನ ಬಗ್ಗೆ ಹೇಳಲು ಹಿಂಜರಿಯುತ್ತಾರೆ. ಯಾಕೆಂದರೆ, ಹೆಚ್ಚು ಮಂದಿಯ ಅಮ್ಮಂದಿರು ಹೌಸ್‌ವೈಫ್ ಅಥವಾ ಹೋಮ್‌ಮೇಕರ್‌ ಆಗಿದ್ದಾರೆ ಎಂಬ ಕಾರಣಕ್ಕೆ. ಅಡುಗೆ ಮಾಡೋದು, ಪಾತ್ರೆ ತೊಳೆಯೋದು, ಕಸ ಗುಡಿಸೋದು, ಬಟ್ಟೆ ಒಗೆಯೋದು ಅಷ್ಟೇ ತಾನೆ? ಇನ್ನೇನು ಕೆಲಸ ಎಂಬ ಉಡಾಫೆ. ಆದರೆ, ಒಂದು ಮಾತಂತೂ ನೂರಕ್ಕೆ ನೂರು ನಿಜ. ಹೋಮ್‌ಮೇಕರ್‌ ಆಗುವುದು ಅಷ್ಟು ಸುಲಭವಲ್ಲ.

ಅಮ್ಮ, ಹೆಂಡತಿ, ತಾಯಿ ಇಲ್ಲದ ಒಂದೆರಡು ದಿನ ಆ ಮನೆ ಹೇಗಿರುತ್ತೆ ಅಂತ ಹಲವರಿಗೆ ಗೊತ್ತಿರಬಹುದು. ಒಂದೇ ದಿನದಲ್ಲಿ ಒಂದು ವಾರ ಕಸ ಗುಡಿಸದ ಮನೆಯಂತೆ ಪಾಳು ಬಿದ್ದಿರುತ್ತದೆ. ಒಬ್ಬರಿಗೆ ಮಾತ್ರ ಅಡುಗೆ ಮಾಡಿಕೊಂಡಿದ್ದರೂ ಇಪ್ಪತ್ತು ಮಂದಿಗೆ ಅಡುಗೆ ಮಾಡಿದಂತೆ ಪಾತ್ರೆಗಳು ಸಿಂಕ್‌ನಲ್ಲಿ ರಾಶಿ ಬಿದ್ದಿರುತ್ತವೆ. ಇನ್ನು ಬಟ್ಟೆಗಳ ಅವಸ್ಥೆಯೋ ದೇವರಿಗೇ ಪ್ರೀತಿ. ಒಂದೆಡೆ ಇಟ್ಟ ವಸ್ತುಗಳು ಎಲ್ಲೆಲ್ಲೋ ಚದುರಿ ಬಿದ್ದು, ಇದು ನಮ್ಮನೆಯೋ ಅಥವಾ ಬೇರೆಯವರ ಮನೆಯೋ ಅನ್ನುವಷ್ಟರ ಮಟ್ಟಿಗೆ ಬದಲಾವಣೆ ಆಗಿರುತ್ತದೆ. ಮನೆಯಲ್ಲಿರುವಷ್ಟು ದಿನ ಹೆಂಗಸರನ್ನು ಬೈಯುವವರು, ಅವಳೊಮ್ಮೆ ವಾಪಸ್‌ ಮನೆಗೆ ಬಂದಿºಟ್ರೆ ಸಾಕಪ್ಪ ಎಂದು ಎಂದುಕೊಳ್ಳುತ್ತಾರೆ. ಇಷ್ಟೆಲ್ಲ ಪಡಿಪಾಟಲು ಅನುಭವಿಸಿದ್ರೂ ಹೆಂಡ್ತಿ ಮನೆಗೆ ಮರಳಿ ಬಂದಾಗ ಮಾತ್ರ ಮತ್ತದೇ ಉಡಾಫೆಯ ಮಾತು. “ನಿಂಗೇನು ಕೆಲ್ಸ? ದಿನವಿಡೀ ಮನೆಯಲ್ಲೇ ಇರ್ತೀಯಾ. ಒಂದಿನ ಆಫೀಸ್‌ಗೆ ಹೋಗಿ ಕೆಲ್ಸ ಮಾಡು ಗೊತ್ತಾಗುತ್ತೆ’ ಎಂದುಬಿಡುತ್ತಾರೆ. ಆದರೆ, ನಮ್ಮ ದುಡಿಮೆಗೆ ಬ್ರೇಕ್‌, ಸ್ಯಾಲರಿ ಎಲ್ಲವೂ ಇದೆ ಎಂಬುವುದು ಅವರಿಗೆ ಅರ್ಥವಾಗುವುದಿಲ್ಲ. ಹೌಸ್‌ವೈಫ್ ಕೆಲಸಕ್ಕೆ ಬ್ರೇಕ್‌, ಸ್ಯಾಲರಿ ಯಾವುದೂ ಇಲ್ಲ. ದಿನವಿಡೀ ಬರೀ ಕೆಲ್ಸ… ಕೆಲ್ಸ… ಕೆಲ್ಸ ಅಷ್ಟೆ. ಪ್ರತಿಯಾಗಿ ಸಿಗುವುದು ಬೈಗುಳ, ಗೊಣಗಾಟ ಮಾತ್ರ.

ಮುಂಜಾನೆ ಎಲ್ಲರೂ ಸುಖನಿದ್ದೆಯಲ್ಲಿದ್ದರೆ, ಅಲಾರಂ ಸದ್ದಿಗೆ ಗಡಿಬಿಡಿಯಿಂದ ಏಳಬೇಕು. ಸ್ನಾನ ಮುಗಿಸಿ, ದೇವರ ಪೂಜೆ ಮಾಡಬೇಕು. ಬೆಳಗ್ಗಿನ ತಿಂಡಿ, ಗಂಡನ ಲಂಚ್‌ ಬಾಕ್ಸ್‌ಗೆ ಮಧ್ಯಾಹ್ನದ ಊಟ ತಯಾರಿಸಬೇಕು. ಈ ಮಧ್ಯೆಯೇ “ಬೆಳಗ್ಗೆ ಬೆಳಗ್ಗೆ ಏನು ಪಾತ್ರೆ ಸೌಂಡ್‌ ಮಾಡ್ತೀಯಾ’ ಎಂಬ ಬೈಗುಳ ಸಹ ತಪ್ಪಲ್ಲ. ತಿಂಡಿ ಬಿಸಿಯಾಗಿದ್ರಂತೂ, “ಇಷ್ಟು ಬಿಸಿಬಿಸಿ ತಿನ್ನೋದು ಹೇಗೆ, ಬೆಳಗ್ಗೆ ಬೇಗ ಎದ್ದು ಮಾಡೋಕೆ ಆಗಲ್ವಾ’ ಅನ್ನೋ ಕಿರುಚಾಟ ಬೇರೆ. ಎಲ್ಲವನ್ನೂ ಕೇಳಿಸಿಕೊಂಡೂ ಕೇಳಿಸಿಕೊಳ್ಳದಂತೆ ಬಟ್ಟೆಗಳನ್ನು ನೀಟಾಗಿ ಐರನ್‌ ಮಾಡಿಕೊಟ್ಟು ಎಲ್ಲೆಲ್ಲೋ ಇಟ್ಟ ವಾಚ್‌, ಫೈಲ್‌ಗ‌ಳನ್ನು ಹುಡುಕಿಕೊಡಬೇಕು.

ಲೇಟಾಗ್ತಿದೆ ಅನ್ನೋ ಮಕ್ಕಳನ್ನು ಬ್ಯಾಗ್‌ ತುಂಬಿಸಿ ಕಳುಹಿಸಬೇಕು. ಎಲ್ಲರನ್ನೂ ಕಳುಹಿಸಿ ಉಸ್ಸಪ್ಪಾ ಅನ್ನೋ ಹೊತ್ತಿಗೆ ಬೆಳಗ್ಗೆಯೇ ಮಾಡಿದ ತಿಂಡಿ ತಣ್ಣಗಾಗಿದ್ದರೂ ಮೃಷ್ಟಾನ್ನವೆನಿಸುತ್ತದೆ. ಮತ್ತೆ ಕಸ ಗುಡಿಸಿ, ಬಟ್ಟೆಗಳನ್ನು ಒಗೆಯೋ ಹೊತ್ತಿಗೆ ಮಧ್ಯಾಹ್ನ. ಈ ಮಧ್ಯೆ ಹುಷಾರಿಲ್ಲ ಎಂದ ಅಮ್ಮ, ಊರಲ್ಲಿ ಸಿಕ್ಕಾಪಟ್ಟೆ ಮಳೆ ಎಂದ ಅತ್ತೆ ಮತ್ತು ಕುಟುಂಬದ ಎಲ್ಲರಿಗೂ ಫೋನ್‌ ಮಾಡಿ ಮಾತನಾಡಬೇಕು. ಮಧ್ಯಾಹ್ನದ ಊಟ ಮುಗಿಸಿ ಸ್ಪಲ್ಪ ಮಲಗುವಾ ಅನ್ನೋ ಹೊತ್ತಿಗೆ ಇನ್ಯಾರೋ ಬಂದು ಬಿಟ್ಟಿರುತ್ತಾರೆ. “ಅಯ್ಯೋ ನಂಗೆ ಸಾಕಾಯ್ತು’ ಅಂದ್ರೂ ಮನೆಗೆ ಬಂದವರ ಮುಖಕ್ಕೆ ರಪ್ಪನೆ ಬಾಗಿಲು ಹಾಕಲಾಗುವುದಿಲ್ಲವಲ್ಲ. ಹಲ್ಲು ಕಿರಿದು ಮನೆಯೊಳಗೆ ಕರೆದು ಸತ್ಕರಿಸಬೇಕು. ಅವರಿದ್ದಷ್ಟೂ ಹೊತ್ತು ಮಾತನಾಡುತ್ತ ಕೂರಬೇಕು. ಕೆಲಸ ರಾಶಿ ಬಿದ್ದಿದ್ದರೂ, ನಂಗೆ ಮನೆ ತುಂಬಾ ಕೆಲಸವಿದೆ, ನೀವಿನ್ನು ಹೊರಡಿ ಎನ್ನಲಾಗುವುದಿಲ್ಲ. ಸಂಜೆ ಮರಳಿ ಗಂಡ, ಮಕ್ಕಳು ಮನೆಗೆ ಬಂದಾಗ ಮತ್ತೆ ಟೀ, ಕಾಫಿ ಏನಾದರೂ ಸ್ನ್ಯಾಕ್ಸ್‌. ಮತ್ತೆ ರಾತ್ರಿಗೆ ಅಡುಗೆ. ಸೀರಿಯಲ್‌ ನೋಡಬೇಕೆಂದುಕೊಂಡರೂ ಅಡುಗೆ ಕೋಣೆಯಿಂದ ಅಲ್ಪಸ್ಪಲ್ಪ ಇಣುಕಿದ್ದಷ್ಟೇ ಬಂತು. ಅಷ್ಟರಲ್ಲೆ ಸೀರಿಯಲ್‌ ಮುಗಿದಿರುತ್ತದೆ. ಎಲ್ಲರೂ ಊಟ ಮಾಡಿ ಮಲಗುವ ಕೋಣೆ ಸೇರಿದರೆ, ಎಲ್ಲಾ ಪಾತ್ರೆ ತೊಳೆದು ಹೌಸ್‌ವೈಫ್ ರೂಮು ಸೇರೋ ಹೊತ್ತಿಗೆ ಎಲ್ಲರೂ ಸುಖನಿದ್ರೆಯಲ್ಲಿರುತ್ತಾರೆ. ಗೃಹಿಣಿ ಅನ್ನಿಸಿಕೊಂಡಾಕೆ, ಬೆಳಗ್ಗಿನಿಂದ ರಾತ್ರಿಯವರೆಗೆ ಹೀಗೆ ನಾನ್‌ ಸ್ಟಾಪ್‌ ದುಡಿದರೂ, ಅಮ್ಮ ಏನ್ಮಾಡ್ತಾಳೆ ಎಂದು ಕೇಳಿದರೆ ಹೇಳುವುದು- ಅವಳಿಗೇನೂ ಕೆಲಸವಿಲ್ಲ. ಜಸ್ಟ್‌ ಹೌಸ್‌ ವೈಫ್ ಅಷ್ಟೆ!

ಇದೆಲ್ಲದರ ನಡುವೆ ಗಂಡ, ಮಕ್ಕಳು ಹುಷಾರು ತಪ್ಪಿದರೂ ಅವಳೇ ಮೊದಲ ಡಾಕ್ಟರ್‌. ತರಕಾರಿ ಮುಗಿದರೆ ಅವಳೇ ಸರ್ವೆಂಟ್‌, ಸಿಕ್ಕಾಪಟ್ಟೆ ಕಳೆ ಬೆಳೆದಿರುವ ಗಾರ್ಡನ್‌ಗೆ ಅವಳೇ ಮಾಲಿ. ಮನೆಯಲ್ಲಿರುವ ಎಲ್ಲಾ, ಎಲ್ಲರ ಸಮಸ್ಯೆಗಳಿಗೂ ಅವಳಲ್ಲಿ ಪರಿಹಾರ ಇದ್ದೇ ಇದೆ. ಮನೆಯ ಜೀವಾಳವೇ ಆಗಿರುವ ಅವಳು ಇಲ್ಲದಿದ್ದರೆ ಆಧಾರಸ್ತಂಭವೇ ಇಲ್ಲದಂತೆ. ಮನೆಯ ಸಂಪೂರ್ಣ ಚಿತ್ರಣವೇ ಬದಲಾಗಿಬಿಡುತ್ತದೆ. ತನ್ನೆಲ್ಲ ಖುಷಿಯನ್ನು ಬದಿಗಿರಿಸಿ ಆಕೆ ಇಷ್ಟೆಲ್ಲ ಮಾಡಿದರೂ ಅವಳು ಮನೆಯಲ್ಲಿದ್ದಾಳೆ, ಏನೂ ಮಾಡುತ್ತಿಲ್ಲ ಅನ್ನೋ ದೂರು. ಆದರೆ, ಒಂದು ಮಾತಂತೂ ನಿಜ. ಹೋಮ್‌ ಮೇಕರ್‌ ಆಗುವುದು ಅಷ್ಟು ಸುಲಭವಲ್ಲ. ನಮ್ಮೆಲ್ಲ ಪ್ರೀತಿ, ಸಮಯ, ಶ್ರಮವನ್ನು ಮತ್ತೂಬ್ಬರಿಗಾಗಿ ಮೀಸಲಿಡಲು ಎಲ್ಲರಿಂದಲೂ ಸಾಧ್ಯವಿಲ್ಲ. ಹಾಗಾಗಿ, ಮನೆಯೊಡತಿಯನ್ನು ದೂರುವ ಮುನ್ನ ಇನ್ನೊಮ್ಮೆ, ಮತ್ತೂಮ್ಮೆ, ಮಗದೊಮ್ಮೆ ಯೋಚಿಸಿ. ಆಕೆಯ ನಿಸ್ವಾರ್ಥ ಸೇವೆಗೆ ಎಂದಿಗೂ ಬೆಲೆ ಕಟ್ಟಲು ಸಾಧ್ಯವಿಲ್ಲ.

ವಿನುತಾ ಪೆರ್ಲ

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.