ನಾನೀಗ ಟೀಚರಮ್ಮ…

ಹವ್ಯಾಸಿ ಶಿಕ್ಷಕಿಯ ಕಥೆ

Team Udayavani, Nov 6, 2019, 4:05 AM IST

naneega-tea

ನಲವತ್ತೈದು ವರ್ಷಗಳ ಹಿಂದಿನ ಮಾತು. ತೀರಾ ಸಣ್ಣ ಹಳ್ಳಿಯಲ್ಲಿ ಹುಟ್ಟಿದರೂ, ಹಿರಿಯರ ಬೆಂಬಲದಿಂದ ಉತ್ತಮ ವಿದ್ಯಾಭ್ಯಾಸ ಪಡೆಯುವ ಭಾಗ್ಯ ನನ್ನದಾಯ್ತು. ವಿಜ್ಞಾನ ಪದವಿಯಲ್ಲಿ ಉನ್ನತ ಶ್ರೇಣಿ ಪಡೆದರೂ, ನೌಕರಿಗಾಗಿ ನಡೆಸಿದ ಪ್ರಯತ್ನ ಫ‌ಲಕಾರಿ ಆಗಲಿಲ್ಲ. ಮನೆಗೆ ದಿನಪತ್ರಿಕೆ ಬರುತ್ತಿರಲಿಲ್ಲ, ರೇಡಿಯೋ ಇರಲಿಲ್ಲ. ಸುಮ್ಮನೆ ಕುಳಿತಿರಲಾಗದೆ, ನಾನು ಕಲಿತ ಖಾಸಗಿ ಶಾಲೆಯಲ್ಲಿಯೇ, ತಾತ್ಕಾಲಿಕ ನೆಲೆಯಲ್ಲಿ ಹೈಸ್ಕೂಲು ಮಕ್ಕಳ ಮೇಲ್ವಿಚಾರಣೆಯ ಕೆಲಸಕ್ಕೆ ಸೇರಿಕೊಂಡೆ.

ಸ್ವಲ್ಪ ಸಮಯದ ಬಳಿಕ, ದೂರವಾಣಿ ಇಲಾಖೆಯಲ್ಲಿ ನೌಕರಿ ದೊರೆಯಿತು. ಅಲ್ಲಿ ಮೂವತ್ತೆಂಟು ವರ್ಷಗಳ ಕಾಲ, ತಾಂತ್ರಿಕ, ಮೇಲ್ವಿಚಾರಣೆ, ಆಡಳಿತದಂಥ ವಿವಿಧ ಮುಖ್ಯ ಹುದ್ದೆಗಳನ್ನು ನಿರ್ವಹಿಸಿ, ಸಂತೃಪ್ತಿಯಿಂಲೇ ನಿವೃತ್ತಿ ಹೊಂದಿದೆ. ಆ ಬಳಿಕ ಅನಾಯಾಚಿತವಾಗಿ ಶಿಕ್ಷಕಿಯಾಗುವ ಸುಯೋಗ ಒದಗಿ ಬಂತು. ವೃತ್ತಿಯಲ್ಲದಿದ್ದರೂ, ಪ್ರವೃತ್ತಿಯಲ್ಲಿ ನಾನೀಗ ಶಿಕ್ಷಕಿ ಅನ್ನಲು ಖುಷಿಯಾಗುತ್ತದೆ. ನಿಜವಾಗಿ ನೋಡಿದರೆ, ಮಕ್ಕಳಿಗೆ ಪಾಠ ಮಾಡಿದ ಯಾವುದೇ ಅನುಭವ ನನಗಿಲ್ಲ.

ಹೀಗೇ ಒಮ್ಮೆ, ನನ್ನ ನೆಚ್ಚಿನ ಉಪನ್ಯಾಸಕಿಯ (ಅವರು ನನಗೆ ಗಣಿತ ಕಲಿಸಿದವರು)ಬಳಿ, ನಿವೃತ್ತಿಯ ನಂತರದ ಅವಕಾಶಗಳ ಬಗ್ಗೆ ಕೇಳುತ್ತಿದ್ದೆ. ಆಗ ಅವರು, “ಅನಾಥಾಶ್ರಮದ ಹತ್ತನೇ ತರಗತಿಯ ಮಕ್ಕಳಿಗೆ ಗಣಿತಕ್ಕೆ ಪ್ರತ್ಯೇಕ ಪಾಠದ ಅಗತ್ಯವಿದೆ. ನೀನ್ಯಾಕೆ ಅವರಿಗೆ ಪಾಠ ಮಾಡಬಾರದು?’ ಅಂದರು. ನಾನು ಗಾಬರಿಯಿಂದ, “ಮೇಡಂ, ನಾನು ಕಲಿತಿದ್ದು ನಲ್ವತ್ತು ವರ್ಷಗಳ ಹಿಂದೆ. ಈಗ ಅದೆಲ್ಲಾ ನೆನಪಿನಲ್ಲೂ ಇಲ್ಲ’ ಎಂದೆ. ಆಗ ಅವರು, “ಪರ್ವಾಗಿಲ್ಲ.. ಪ್ರಾರಂಭಿಸಿದರೆ ಎಲ್ಲಾ ನೆನಪಿಗೆ ಬರ್ತದೆ. ಹೆದರಬೇಡ’ ಅಂತ ಧೈರ್ಯ ತುಂಬಿದರು.

ನಿವೃತ್ತಿಯ ನಂತರ ಸುಮ್ಮನೆ ಮನೆಯಲ್ಲಿ ಕೂರುವ ಬದಲು, ಇದನ್ನೊಮ್ಮೆ ಟ್ರೈ ಮಾಡೋಣ ಅಂತ ನಾನೂ ಒಪ್ಪಿಕೊಂಡೆ. ಪಾಠದ ಮೊದಲನೇ ದಿನ..ಯಾವುದೇ ಪೂರ್ವ ತಯಾರಿ ಇಲ್ಲದೆ ಹೋಗಿದ್ದೆ. ಸರಿಯಾದ ಬೆಳಕಿನ ವ್ಯವಸ್ಥೆಯಿಲ್ಲದ ದೊಡ್ಡದಾದ ಹಾಲ…ನಲ್ಲಿ ಹನ್ನೊಂದು ಮಕ್ಕಳು ನೆಲದ ಮೇಲೆ ಸಾಲಾಗಿ ಕುಳಿತಿದ್ದರು. “ನಮಸ್ತೇ ಮಾತಾಜಿ’ ಅಂತ ಒಕ್ಕೊರಲಿನಿಂದ ಸ್ವಾಗತಿಸಿದರು. ಮಕ್ಕಳೆಲ್ಲರ ಪರಿಚಯ ಮಾಡಿಕೊಂಡಿದ್ದಾಯ್ತು.

ನನಗೋ, ಆತಂಕದಿಂದ ಎದೆ ಹೊಡೆದುಕೊಳ್ಳುತ್ತಿತ್ತು. ಮಕ್ಕಳೊಂದಿಗೆ ಗಂಭೀರವಾಗಿರಲೋ, ಬೇಡವೋ ಒಂದೂ ತಿಳಿಯುತ್ತಿರಲಿಲ್ಲ. ಮಕ್ಕಳಿಗೂ ನಾನು ಹೊಸಬಳಾದ್ದರಿಂದ, ಸಹಜವಾಗಿಯೇ ಸ್ವಲ್ಪ ಹೆದರಿದ್ದರು. ಅವರಂತೆಯೇ ನಾನೂ ಹೆದರಿದ್ದೆ. ಆದರೂ, ನಗುತ್ತಾ ಮಾತಾಡಿ, ನನ್ನ ಪರಿಚಯ ಮಾಡಿಕೊಂಡೆ. ನಾನು ಶಿಕ್ಷಕಿಯಾಗಿ ಕೆಲಸ ಮಾಡಿಲ್ಲವೆಂದೂ, ಆದರೆ ಪ್ರಯತ್ನ ಪಟ್ಟು ಕಲಿಸುವೆನೆಂದೂ, ಪಾಠ ಅರ್ಥವಾಗದಿದ್ದಲ್ಲಿ ಯಾರು ಬೇಕಾದರೂ ತಕ್ಷಣ ಕೇಳಬಹುದೆಂದೂ ಮನದಟ್ಟು ಮಾಡಿಸಿದೆ. ಮಕ್ಕಳಿಗೆ ಸಮಾಧಾನವಾಯ್ತು.

ಜೀವನದಲ್ಲಿ ಮೊದಲ ಬಾರಿಗೆ, ಬೋರ್ಡ್‌ನಲ್ಲಿ ಬರೆದು ಮಕ್ಕಳಿಗೆ ಪಾಠ ಮಾಡುವ ಅವಕಾಶ ನೀಡಿದ್ದಕ್ಕೆ ಮನದಲ್ಲೇ ದೇವರಿಗೆ ವಂದಿಸಿ, ಉತ್ಸಾಹದಿಂದ ಆರಂಭಿಸಿದೆ. ಗಣಿತದ ಸೂತ್ರಗಳು, ಗಣಿತವನ್ನು ಸರಳವಾಗಿ ಹೇಳಿಕೊಡುವ ವಿಧಾನ ಇತ್ಯಾದಿಗಳು ತನ್ನಿಂದ ತಾನಾಗಿಯೇ ಹೊಳೆಯುತ್ತಾ ಹೋಗಿದ್ದು ಮಾತ್ರ ದೈವಕೃಪೆಯೇ ಇರಬೇಕು. ಒಂದು ಪಾಠವಾದ ಕೂಡಲೇ ಮಕ್ಕಳಲ್ಲಿ ಅರ್ಥವಾಯಿತೇ ಇಲ್ಲವೇ ಎಂದು ವಿಚಾರಿಸಿದಾಗ, ಸರಿಯಾಗಿ ಅರ್ಥವಾಯ್ತೆಂದು ಎಲ್ಲರೂ ಹೇಳಿದಾಗಲೇ ಸಮಾಧಾನವಾಗಿದ್ದು. ಜೊತೆಗೇ ಒಂದು ಅವರ್ಣನೀಯ ಧನ್ಯತಾ ಭಾವ.

ಶಾಲೆಯ ರಜಾದಿನಗಳಲ್ಲಿ ಮಾತ್ರ ಆಶ್ರಮಕ್ಕೆ ಹೋಗಿ, 2-3 ಗಂಟೆಗಳಷ್ಟು ಹೊತ್ತು ಪಾಠ ಮಾಡುತ್ತಿದ್ದೆ. ಸಮಯಾವಕಾಶ ಕಡಿಮೆ ಇದ್ದುದರಿಂದ, ಪೂರ್ತಿ ಮಾಡಲಾಗದಿದ್ದರೂ, ಮಕ್ಕಳಿಗೆ ಅವರ ಕ್ಲಾಸಿನಲ್ಲಿ ಅರ್ಥವಾಗದ ಭಾಗಗಳನ್ನು ವಿವರಿಸುತ್ತಿದ್ದೆ. ಪರೀಕ್ಷೆಗಳಲ್ಲಿ ಉತ್ತಮ ಅಂಕಗಳು ಬಂದಾಗ ಎಲ್ಲರಿಗೂ ಆಗಾಗ ಪೆನ್ನು, ಪುಸ್ತಕಗಳ ಉಡುಗೊರೆ ಕೊಟ್ಟು ಹುರಿದುಂಬಿಸುವುದೂ ನಡೆದಿತ್ತು.  ಮಧ್ಯದಲ್ಲೊಮ್ಮೆ, ನನ್ನ ಹುಟ್ಟಿದ ದಿನಾಂಕವನ್ನು ಅದು ಹೇಗೋ ತಿಳಿದು, ಮಕ್ಕಳೆಲ್ಲರೂ ಅವರದೇ ರೀತಿಯಲ್ಲಿ ಶುಭಾಶಯ ಕೋರಿದರು. ಆ ದಿನ ಮಾತ್ರ ತುಂಬಾ ಭಾವುಕಳಾಗಿಬಿಟಿದ್ದೆ.

ಕೋಣೆಯನ್ನು, ಬಣ್ಣ ಬಣ್ಣದ ನಾಲ್ಕೈದು ಬಲೂನುಗಳನ್ನು ಕಟ್ಟಿ ಅಲಂಕರಿಸಿದ್ದರು. ಮಕ್ಕಳು ತುಂಬಾ ಸಂಕೋಚದಿಂದ, ತಮ್ಮ ಕೈಯಾರೆ ಬಿಡಿಸಿದ ಚಿತ್ರ, ಅಲ್ಲೇ ಸಿಕ್ಕಿದ ಹೂ, ಹುಲ್ಲುಗಳ ಚಂದದ ಗುತ್ಛ, ಪೆನ್ನು, ಇತ್ಯಾದಿಗಳನ್ನು ಬೇಡವೆಂದರೂ ಕೊಟ್ಟು ಆಶೀರ್ವಾದ ಪಡೆದರು. ಆ ಮಕ್ಕಳೆಲ್ಲರೂ ಕಷ್ಟಪಟ್ಟು ಅಭ್ಯಾಸ ಮಾಡಿ, ಅಂತಿಮ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿ ಪಡೆದುದು ಹೆಮ್ಮೆಯ ಸಂಗತಿ. ನನ್ನ ಈ ಅರೆ ಶಿಕ್ಷಕಿ ಕಾರ್ಯವು ಈಗ ಐದನೇ ವರ್ಷಕ್ಕೆ ಕಾಲಿಟ್ಟಿದೆ. ಮನೆ ಹತ್ತಿರದ ಕೆಲ ಮಕ್ಕಳೂ, ತಿಳಿಯದ ವಿಷಯಗಳನ್ನು ಅರಿತುಕೊಳ್ಳಲು ಬರುತ್ತಿರುತ್ತಾರೆ.

ಎಷ್ಟೇ ಹೊತ್ತಿಗೆ ಬಂದರೂ, ಖುಷಿಯಿಂದ, ಅರ್ಥವಾಗುವಂತೆ ವಿವರಿಸುತ್ತೇನೆ. ಇಪ್ಪತ್ತು ಕಿ.ಮೀ. ದೂರದ ಗುರುಕುಲದಲ್ಲಿ ಆಗಾಗ್ಗೆ ಹೋಗಿ ಪಾಠ ಮಾಡಿ ಬರುತ್ತೇನೆ.  ಹೊಟ್ಟೆಪಾಡಿಗಾಗಿ ಸಾವಿರ ಕೆಲಸಗಳನ್ನು ಮಾಡಬಹುದು. ಆದರೆ, ತುಂಬು ಹೃದಯದಿಂದ ಮಾಡುವ ಶಿಕ್ಷಕ ವೃತ್ತಿಯಲ್ಲಿ ಸಿಗುವ ಸಂತೃಪ್ತಿ ಬೇರೆ ಯಾವುದರಲ್ಲಿಯೂ ಸಿಗದು. ನಾಲ್ಕು ದಶಕಗಳ ಕಾಲ ನಾನು ಮಾಡಿದ ಬೇರೆಲ್ಲ ಕೆಲಸಕ್ಕಿಂತ, ನಿವೃತ್ತಿ ನಂತರ ಮಾಡುತ್ತಿರುವ ಈ ಕೆಲಸ ನನಗೆ ಬಹಳ ನೆಮ್ಮದಿ ನೀಡಿದೆ.

* ಶಂಕರಿ ಶರ್ಮ

ಟಾಪ್ ನ್ಯೂಸ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.