ಆಡಿ ಬಾ ಎನ ಕಂದ…


Team Udayavani, Nov 28, 2018, 6:00 AM IST

c-3.jpg

ಮೂರು ವರ್ಷದ ಮಗು ಮನೆಯಲ್ಲೇ ತನಗೆ ಬೇಕಾದ ಹಾಗೆ ಆಡಿಕೊಂಡು, ಬೋರ್‌ ಆದಾಗ  ತನಗೆ ಬೇಕಾದ ಕಾರ್ಟೂನ್‌ ನೋಡಿಕೊಂಡು, ಹಸಿವಾದಾಗ ತಿಂದುಕೊಂಡು, ಅಮ್ಮನ ಮಡಿಲಲ್ಲಿ ಮಲಗಿಕೊಂಡು ಸಮಯ ಕಳೆಯುತ್ತದೆ. ಆದರೆ, ಸಡನ್‌ ಆಗಿ ಅವರನ್ನು ಪ್ಲೇಹೋಮ್‌ ಕಳಿಸಬೇಕು ಅಂದಾಗ ಅವರ ಮನಸ್ಸು ಒಪ್ಪಿಕೊಳ್ಳುವುದಿಲ್ಲ. ಇನ್ನು ಆ ಮುದ್ದು ಮಗುವಿನ ಮನವೊಲಿಸಿ ಅವರನ್ನು ಪ್ಲೇಹೋಮ್‌ಗೆ ಕಳಿಸುವುದು ಕಷ್ಟದ ಕೆಲಸ…

ಬೆಳಗ್ಗಿನ ಸಮಯ. ಮನೆಯಲ್ಲಿ ಒಂದೇ ಸಮನೇ ಗಲಾಟೆ. ನನ್ನ ಮಗಳು ಪ್ಲೇ ಹೋಮ್‌ಗೆ ಹೋಗೋದಿಲ್ಲ ಅಂತ ಹಠ ಮಾಡಿ ಕೂತಿದ್ದಳು. ನಾನು ಅವಳನ್ನು ಸಮಾಧಾನ ಮಾಡಿದ್ದೇ ಮಾಡಿದ್ದು. ಏನೂ ಪ್ರಯೋಜನ ಆಗಲಿಲ್ಲ. ಅವಳಿಷ್ಟದ ಚಾಕೋಲೆಟ್‌, ಕೇಕ್‌ ತಂದು ಕೊಡುತ್ತೇನೆ, ಮುದ್ದಾದ ಬಾರ್ಬಿ ಗೊಂಬೆ ತಗೆದುಕೊಡುತ್ತೇನೆ ಎಂದು ಪ್ರೀತಿಯ ಆಮಿಷವೊಡ್ಡಿದರೂ ಒಪ್ಪಲಿಲ್ಲ. ಇವತ್ತು ಅಂತೂ ಹೋಗೋದೇ ಇಲ್ಲ ಅಂತ ಕೂತೇ ಬಿಟ್ಟಳು. ನಾಳೆ ಕೂಡ ಹೋಗದಿದ್ದರೆ ಏನ್‌ ಮಾಡೋದಪ್ಪಾ ಅಂತ ಚಿಂತಿಸುತ್ತಾ ಕೂತೆ. ಮಾರನೇ ದಿನ ಅವಳಿಗೆ ಪೂಸಿ ಹೊಡೆದೆ. “ಸ್ಕೂಲ್‌ನಲ್ಲಿ ನಿನಗೆ ತುಂಬಾ ಫ್ರೆಂಡ್ಸ್‌ ಸಿಗ್ತಾರೆ. ಅಲ್ಲಿ ಟೀಚರ್‌ ನಿಂಗೆ ಡ್ಯಾನ್ಸ್‌, ಸಾಂಗ್ಸ್‌, ರೈಮ್ಸ್‌, ಗೇಮ್ಸ್‌ ಎಲ್ಲಾನೂ ಹೇಳಿಕೊಡ್ತಾರೆ’ ಎಂದೆಲ್ಲಾ ಹೇಳಿದ ನಂತರ ಕಡೆಗೂ ಮಗಳು ಪ್ಲೇಹೋಮ್‌ಗೆ ಹೋಗಲು ಒಪ್ಪಿದಳು.

ಗಲಾಟೆ ಮಾಡೋದೇ ನನ್‌ ಬ್ಯುಸಿನೆಸ್ಸು…
ಮೂರು ವರ್ಷದ ಮಗು ಮನೆಯಲ್ಲೇ ತನಗೆ ಬೇಕಾದ ಹಾಗೆ ಆಡಿಕೊಂಡು, ಬೋರ್‌ ಆದಾಗ  ತನಗೆ ಬೇಕಾದ ಕಾಟೂìನ್‌ ನೋಡಿಕೊಂಡು, ಹಸಿವಾದಾಗ ತಿಂದುಕೊಂಡು, ಅಮ್ಮನ ಮಡಿಲಲ್ಲಿ ಮಲಗಿಕೊಂಡು ಸಮಯ ಕಳೆಯುತ್ತದೆ. ಆದರೆ, ಸಡನ್‌ ಆಗಿ ಅವರನ್ನು ಪ್ಲೇಹೋಮ್‌ ಕಳಿಸಬೇಕು ಅಂದಾಗ ಅವರ ಮನಸ್ಸು ಒಪ್ಪಿಕೊಳ್ಳುವುದಿಲ್ಲ. ಇನ್ನು ಆ ಮುದ್ದು ಮಗುವಿನ ಮನವೊಲಿಸಿ ಅವರನ್ನು ಪ್ಲೇಹೋಮ್‌ಗೆ ಕಳಿಸುವುದು ಕಷ್ಟದ ಕೆಲಸ.

ಮಗು ತನ್ನ ಮನೆಯನ್ನು ಬಿಟ್ಟರೆ ಹೊರಗೆ ತುಂಬಾ ಹೊತ್ತು ಕಳೆಯುವ ಜಾಗ ಎಂದರೆ ಪ್ಲೇಸ್ಕೂಲ್‌. ಮೊದಲನೇ ಸಲ ಮಗು ಹೆತ್ತವರನ್ನು, ಹೆಚ್ಚಾಗಿ ಸದಾಕಾಲ ಜೊತೆಗಿರುವ ಅಮ್ಮನನ್ನು ಬಿಟ್ಟು ಹಗಲು ಪೂರ್ತಿ ಕಳೆಯುವ ಜಾಗ ಪ್ಲೇಹೋಮ್‌. ಆದುದರಿಂದ ಪ್ಲೇಹೋಮ್‌ ಆರಿಸಿಕೊಳ್ಳುವಾಗ ಜಾಗ್ರತೆ ವಹಿಸಬೇಕಾದುದು ಅಗತ್ಯ. ಮಗು ಮನೆಯಲ್ಲಿ ಗಲಾಟೆ ಮಾಡುತ್ತದೆ ಎಂಬ ಕಾರಣಕ್ಕೆ ಮಗುವನ್ನು ಪ್ಲೇಹೋಮ್‌ಗೆ ಸೇರಿಸುವುದು ಔಚಿತ್ಯವಲ್ಲ. ಅಳು, ಕಿರುಚಾಟ, ಹಠ ಇವೆಲ್ಲಾ ಮಗುವಿನ ಸ್ವಭಾವ. ಅದನ್ನು ನಿರ್ವಹಿಸಲು ಕಲಿಯಬೇಕೇ ಹೊರತು, ಪಲಾಯನ ಮಾಡುವುದನ್ನಲ್ಲ.

ಪ್ಲೇಹೋಮ್‌ ಮೇಲೆ ಪ್ರೀತಿ ಹುಟ್ಟಿಸಿ…
“ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ?’ ಎಂಬ ಗಾದೆ ಇದೆ. ಗಿಡವಾಗಿದ್ದಾಗ ಬೇಕಾದ ಆಕಾರಕ್ಕೆ ಬದಲಿಸಬಹುದು, ಒಮ್ಮೆ ಮರವಾದ ನಂತರ ಏನೇ ಮಾಡಿದರೂ ಅಲುಗಾಡಿಸಲು ಸಾಧ್ಯವಿಲ್ಲ ಎನ್ನುವುದು ಅದರರ್ಥ. ಅಂತೆಯೇ ಚಿಕ್ಕಂದಿನಲ್ಲಾದ ಗಾಯ ದೊಡ್ಡವರಾದ ಮೇಲೂ ಮಕ್ಕಳನ್ನು ಕಾಡಬಲ್ಲುದು. ಹೀಗಾಗಿ ಮಗುವಿನ ಮನಸ್ಸಿಗೆ ಘಾಸಿಯಾಗದಂತೆ ನೋಡಿಕೊಳ್ಳುವುದು ಪಾಲಕರ ಕರ್ತವ್ಯ.  ಪ್ಲೇಹೋಮ್‌ಗೆ ಸೇರಿಸುವಾಗಲೂ ಈ ವಿಚಾರ ಗಮನದಲ್ಲಿಟ್ಟುಕೊಳ್ಳಬೇಕು. ಒಂದು ವೇಳೆ ಪ್ಲೇಹೋಮ್‌ ಬಗ್ಗೆ ತಿರಸ್ಕಾರ ಭಾವನೆ ಒಂದು ಸಲ ಮೂಡಿದರೆ ಅದನ್ನು ಬೇಗ ಅಳಿಸಲು ಸಾಧ್ಯವಿಲ್ಲ. ಮುಂದೆ ಶಾಲೆಗೆ ಸೇರಿಸುವಾಗಲೂ ತೊಂದರೆ ಎದುರಾಗಬಹುದು. ಹೀಗಾಗಿ ಪ್ಲೇಹೋಮ್‌ ಎಂದರೆ ಸಜೆಯಲ್ಲ, ಅದೊಂದು ಮಜಭರಿತ ಜಾಗ ಎಂಬ ಭಾವನೆ ಅವರಲ್ಲಿ ಮೂಡಿಸಬೇಕು. ಅದು ಸಾಧ್ಯವಾದಾಗ ಮಕ್ಕಳ ಬಾಲ್ಯ ಸುಂದರವೂ ಸುಮಧುರವೂ ಆಗುವುದು.

ತಂಟೆ ತಪ್ಪಿಸಲು ಪ್ಲೇಹೋಂ ದಾರಿಯಲ್ಲ…
ಮನೆಯಲ್ಲಿದ್ದರೆ ಯಾವ ಕೆಲಸವನ್ನೂ ಮಾಡಲು ಬಿಡುವುದಿಲ್ಲವೆಂದೋ, ತುಂಟಾಟ ಸಹಿಸಲಾಗದು ಎಂಬ ಕಾರಣಕ್ಕೋ ಮಗುವನ್ನು ಕಣ್ಮುಚ್ಚಿ ಪ್ಲೇ ಹೋಂಗೆ ಸೇರಿಸುವುದು ಸರಿಯಲ್ಲ. 

ಪ್ಲೇಹೋಮ್‌ ಸೇರಿಸುವ ಮೊದಲು 
– ಪ್ಲೇಹೋಮ್‌ನಲ್ಲಿ ಮಕ್ಕಳಿಗೆ ಭದ್ರತೆ, ಸುರಕ್ಷತೆ ಇದೆಯಾ ಎಂಬುದನ್ನು ಮೊದಲು ಖಚಿತಪಡಿಸಿಕೊಳ್ಳಬೇಕು 
– ಅಲ್ಲಿನ ಚಟುವಟಿಕೆಗಳು ಮಗುವಿನ ಬೆಳವಣಿಗೆಗೆ ಪೂರಕವಾಗಿದೆಯೇ ಎಂದು ಗಮನಿಸಬೇಕು. 
– ಶಿಕ್ಷಕರು ಮಗುವಿಗೆ ಕಲಿಸುವ ರೀತಿ ತಿಳಿಯಬೇಕು. 
– ಮಗು ಇತರೆ ಮಕ್ಕಳೊಡನೆ ಹೇಗೆ ಹೊಂದಿಕೊಳ್ಳುತ್ತದೆ ಎಂಬುದನ್ನು ತಿಳಿದಿರಬೇಕು. 

– ಸುಲಭಾ ಆರ್‌. ಭಟ್‌

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.