ಜೋಪಾನ…ಇದು ಜೀವ ಮೂಡುವ ಸಮಯ


Team Udayavani, Jan 15, 2020, 4:18 AM IST

mk-3

ಗರ್ಭಿಣಿಯರ ದೇಹ ಮತ್ತು ಮನಸ್ಸು, ಅತ್ಯಂತ ಸೂಕ್ಷ್ಮ. ಇನ್ನೊಂದು ಜೀವವನ್ನು ಒಡಲೊಳಗೆ ಇಟ್ಟುಕೊಂಡಿರುವ ಆ ಅವಧಿಯಲ್ಲಿ ಗರ್ಭಿಣಿಯು ತನ್ನ ಆರೋಗ್ಯದತ್ತ ಹೆಚ್ಚಿನ ಕಾಳಜಿ ವಹಿಸಬೇಕು. ಈ ಸಮಯದಲ್ಲಿ ದೇಹ ಮತ್ತು ಮನಸ್ಸಿನಲ್ಲಿ ಅನೇಕ ಬದಲಾವಣೆಗಳು ಆಗುವುದರಿಂದ, ಆಗಾಗ್ಗೆ ವೈದ್ಯಕೀಯ ಪರೀಕ್ಷೆ ಹಾಗೂ ಸಲಹೆಗಳನ್ನು ಪಡೆಯಬೇಕಾಗುತ್ತದೆ.

ಯೋಗ-ಧ್ಯಾನ-ವ್ಯಾಯಾಮ
-ಗರ್ಭಿಣಿಯರು ಪ್ರತಿನಿತ್ಯ ಯೋಗ, ಧ್ಯಾನ ಮಾಡಿದರೆ, ದೇಹದ ಜಡತ್ವ ಹೋಗಲಾಡಿಸಿ, ಮನಸ್ಸಿನ ಹಿಡಿತ ಸಾಧಿಸಲು ಸಾಧ್ಯ.

-ಮೊದಲ ಮೂರು ತಿಂಗಳು ಬಹಳ ಮಹತ್ವದ್ದಾಗಿದ್ದು,ಯೋಗಾಸನ ಮಾಡುವಾಗ ಬಹಳ ಜಾಗರೂಕರಾಗಿರಬೇಕು. ಈ ತ್ತೈಮಾಸಿಕದಲ್ಲಿ ಸರಳ ಉಸಿರಾಟದ ವ್ಯಾಯಾಮ, ವಿಶ್ರಾಂತಿ ಹಾಗೂ ಧ್ಯಾನ ಅನುಸರಿಸಬೇಕು. ಇವು ವಾಂತಿ, ತಲೆ ಸುತ್ತುವಿಕೆ, ಆಯಾಸ ಮುಂತಾದ ತೊಂದರೆಗಳನ್ನು ನಿವಾರಿಸಲು ಸಹಕಾರಿ.

-ಎರಡನೇ ಮತ್ತು ಮೂರನೇ ತ್ತೈಮಾಸಿಕ ಅವಧಿಯಲ್ಲಿ ಯೋಗಾಸನ ಮಾಡುವಾಗ ಮೆತ್ತನೆಯ ದಿಂಬು, ಕುಶನ್‌, ಕುರ್ಚಿಗಳನ್ನು ಬಳಸುವುದು ಆರಾಮದಾಯಕ. ಇವು ಗರ್ಭಿಣಿಯರಲ್ಲಿ ಕಂಡು ಬರುವ ಕಾಲು ಸೆಳೆತ, ಬೆನ್ನು ನೋವನ್ನು ನಿವಾರಿಸುತ್ತವೆ. ದೇಹದಲ್ಲಿ ರಕ್ತ ಸಂಚಾರವು ಸರಾಗವಾಗಿ, ಹೆರಿಗೆ ಸಂದರ್ಭದ ನೋವು ಕಡಿಮೆಯಾಗುವುದರ ಜತೆಗೆ ಸಹಜ ಹೆರಿಗೆಗೆ ಸುಲಭ ದಾರಿಯಾಗುತ್ತದೆ.

-ಗರ್ಭಿಣಿಯರು ಹೆಚ್ಚಿನ ಭಾರ ಎತ್ತುವ ಹಾಗೂ ಹೊಟ್ಟೆಯ ಮೇಲೆ ಮಲಗಿ ಮಾಡುವ ವ್ಯಾಯಾಮಗಳನ್ನು ಮಾಡಬಾರದು. ಕಷ್ಟವಿರುವ ಯಾವುದೇ ಭಂಗಿಗಳನ್ನು ಮಾಡುವ ಪ್ರಯತ್ನ ಬೇಡ.

-ಧ್ಯಾನ ಮಾಡುವುದರಿಂದ ಧನಾತ್ಮಕ ವಿಚಾರಗಳತ್ತ ಮನಸ್ಸು ಹರಿಯಲು ಸಾಧ್ಯವಾಗಿ ಒತ್ತಡವೂ ಕಡಿಮೆಯಾಗುತ್ತದೆ.

ಆಹಾರ ಕ್ರಮ
-ಗರ್ಭಿಣಿಯರಿಗೆ ಪ್ರತಿನಿತ್ಯ 200-300 ಗ್ರಾಂ ಕ್ಯಾಲರಿ ಶಕ್ತಿ ಹೆಚ್ಚಾಗಿ ಬೇಕಾಗಿರುತ್ತದೆ. ಸಸ್ಯಾಹಾರ ಕ್ರಮದಿಂದ ಹೆಚ್ಚಿನ ಪ್ರೋಟೀನ್‌ ಸಿಗುವುದರೊಂದಿಗೆ ದೇಹಕ್ಕೆ ಶಕ್ತಿಯೂ ದೊರಕುತ್ತದೆ.ಇದು ಮಗುವಿನ ಬೆಳವಣಿಗೆಗೂ ಸಹಕಾರಿ.

-ಕಬ್ಬಿಣಾಂಶದ ಆಹಾರಗಳ ಸೇವನೆಯಿಂದ ತಾಯಿಯಲ್ಲಿ ರಕ್ತ ಹೀನತೆ ನಿವಾರಿಸಬಹುದು.
-ಒಣಹಣ್ಣುಗಳು, ಧಾನ್ಯ, ಬೇಳೆ ಕಾಳುಗಳನ್ನು ಸೇವಿಸುವುದರಿಂದ ಸಾಕಷ್ಟು ಪೋಷಕಾಂಶ ದೊರಕುತ್ತದೆ.

-ವಿಟಮಿನ್‌ ಡಿ ಹಾಗೂ ಕ್ಯಾಲ್ಸಿಯಂಯುಕ್ತ ಆಹಾರಗಳು ಅವಶ್ಯಕವಾಗಿ ದೇಹಕ್ಕೆ ಸಿಗಬೇಕು.

-ಹಸಿರು ತರಕಾರಿಗಳು, ಹಾಲು, ಹಣ್ಣುಗಳನ್ನು ಸೇವಿಸಬೇಕು.

-ಹೆಚ್ಚಿನ ಪ್ರಮಾಣದಲ್ಲಿ ಎಳನೀರು, ಹಣ್ಣಿನ ರಸ, ಮಜ್ಜಿಗೆ ಕುಡಿಯುವುದರಿಂದ ವಾಂತಿ,ತಲೆ ಸುತ್ತುವಿಕೆ ನಿವಾರಿಸಬಹುದು.

-ಡಾ. ಶ್ರೀಲತಾ ಪದ್ಯಾಣ

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.