ಹೂವನು ಮಾರುತ ಹೂವಾಡಗಿತ್ತಿ…


Team Udayavani, Aug 21, 2019, 5:38 AM IST

4

“ವಯಸ್ಸನ್ನ ನೋಡಿಕೊಂತಾ ಕೂತರೆ ಹೊಟ್ಟೆಪಾಡು ನಡೀಬೇಕಲ್ಲ? ಹೊಟ್ಟೆಗೆ ಒಂದೊತ್ತಿನ ಊಟ ಹಾಕೋರಿಲ್ಲ ಈಗ. ಇದ್ದ ಆಯಸ್ಸನ್ನೆಲ್ಲ ಮಕ್ಕಳ ಬೆಳವಣಿಗೆಗೆ ಮುಡಿಪಾಗಿಟ್ಟಾಯ್ತು. ಹೆತ್ತವರಿಗೆ ವಯಸ್ಸಾಯ್ತು ಅಂತ ಮಕ್ಕಳು ಕಡೆಗಣಿಸಿದರೆ…? ಹಾಗಾಗಿ ನಮ್ಮ ಪಾಡು ನಾವು ನೋಡಿಕೋಬೇಕು’- ಅಂತ ನಿಟ್ಟುಸಿರಾದರು ರಮಾಬಾಯಿ.

ದೇಹದಲ್ಲಿ ಶಕ್ತಿ ಇರುವವರೆಗೆ ಸ್ವಾವಲಂಬಿಯಾಗಿಯೇ ಬದುಕುತ್ತೇನೆ ಅಂತ, ಹೂಗಳನ್ನು ಬೆಳೆದು, ಹೂ ವ್ಯಾಪಾರದಲ್ಲಿ ತೊಡಗಿಸಿಕೊಂಡಿರುವ ರಮಾಬಾಯಿಯ ವಯಸ್ಸು ಎಪ್ಪತ್ತಿರಬಹುದು!

ಮನೆಯ ಕೆಲಸ ಮುಗಿಸಿ, ಮನೆಯಂಗಳದಲ್ಲಿ ಅಂದರೆ ಅರ್ಧ ಗುಂಟೆ ಜಾಗದಲ್ಲಿ ಗಲಾಟೆ ಹೂ, ಬಟನ್‌ ರೋಸ್‌ಗಳನ್ನ ಬೆಳೆಯುವ ರಮಾಬಾಯಿ, ವಿಜಯಪುರದ ಗೋಳಗುಮ್ಮಟದ ಎದುರಿಗೆ ನಡೆಯುವ ಸಂತೆಯಲ್ಲಿ ಹೂವು ಮಾರಲು ಬರುತ್ತಾರೆ. ಸಮೀಪದ ಮದಬಾವಿಯವರಾದ ಇವರು, ಪ್ರತಿದಿನ ಗಂಡನ ಜೊತೆ ಎರಡು ಚೀಲದಷ್ಟು ಹೂಗಳನ್ನು ತಂದು ವ್ಯಾಪಾರ ಮಾಡುತ್ತಾರೆ.

ಹಬ್ಬಗಳು ಬಂದಾಗ, ಗಲಾಟೆ ಹೂ ಮತ್ತು ಬಟನ್‌ ರೋಸ್‌ನ ವ್ಯಾಪಾರ ಜೋರಾಗಿರುತ್ತದೆ. ಬೇರೆ ದಿನಗಳಲ್ಲಿ ಒಂದು ಕೆ.ಜಿಗೆ 60- ರಿಂದ 80 ರೂ. ಇದ್ದರೆ, ಹಬ್ಬದ ದಿನಗಳಲ್ಲಿ ದರ 80-160ರೂ.ವರೆಗೆ ಮಾರಲಾಗುತ್ತದೆ. ಪ್ರತಿದಿನ 400-600 ರೂ. ಸಂಪಾದಿಸುವ ರಮಾಬಾಯಿ, ಹೂಗಳನ್ನ ಮಾರಿಯೇ ತಮ್ಮ ಜೀವನದ ಖರ್ಚು-ವೆಚ್ಚ ನಿಭಾಯಿಸುತ್ತಾರೆ.

ಇವರಿಗೆ ಇಬ್ಬರು ಗಂಡು ಮಕ್ಕಳು. ಇಬ್ಬರೂ ಮಕ್ಕಳು ನೌಕರಿಯ ನಿಮಿತ್ತ ಬೇರೆ ಊರಿನಲ್ಲಿದ್ದಾರೆ. ವಯಸ್ಸಾದ ಮೇಲೆ ಮಕ್ಕಳಿಗೆ ಭಾರವಾಗಬಾರದು ಎಂದು, ಮನೆ ಮುಂದಿನ ಜಾಗದಲ್ಲಿ ಹೂ ಗಿಡಗಳನ್ನು, ಲಿಂಬೆಗಿಡಗಳನ್ನು ನೆಟ್ಟಿದ್ದಾರೆ.

ಮಕ್ಕಳಿಗ್ಯಾಕೆ ಭಾರವಾಗಬೇಕು?
“ಮಕ್ಕಳು ಯಾವುದೇ ರೀತಿ ಕೊರತೆ ಮಾಡಿಲ್ಲ. ಖರ್ಚಿಗೆ ಹಣ ಕೂಡಾ ಕಳಿಸುತ್ತಾರೆ. ಆದರೆ, ನಮ್ಮ ಖರ್ಚನ್ನು ನಾವೇ ನೋಡಿಕೊಳ್ಳಬೇಕು ಅನ್ನುವುದು ನಮ್ಮ ನಿರ್ಧಾರ. ಮಕ್ಕಳು ಕಳುಹಿಸಿದ್ದನ್ನ ಬ್ಯಾಂಕಿನಲ್ಲಿ ಇಡುತ್ತೇವೆ. ಮುಂದೆ ಅವರ ಹಣ ಅವರಿಗೇ ಸಿಗುವ ಹಾಗೆ ಮಾಡಿದ್ದೇವೆ’ ಎನ್ನುತ್ತಾರೆ ರಮಾಬಾಯಿ.

ನಮ್ಮ ಯಜಮಾನರಿಗೂ ಹೊಲ ಇತ್ತು. ಆದರೆ, ಮಕ್ಕಳ ವಿದ್ಯಾಭ್ಯಾಸ, ನೌಕರಿ, ಮದುವೆಗೆ ಅಂತ ಇದ್ದ ಬದ್ದ ಹೊಲವನ್ನೆಲ್ಲ ಮಾರಿಬಿಟ್ಟೆವು. ಈಗ, ನಾವಿಬ್ಬರೂ ಹವ್ಯಾಸದಿಂದ ಬೆಳೆಸಿದ ಗಿಡಗಳೇ ಜೀವನಕ್ಕೆ ಆಧಾರವಾಗಿವೆ.
-ರಮಾಬಾಯಿ, ಹೂ ವ್ಯಾಪಾರಿ

-ವಿದ್ಯಾಶ್ರೀ ಗಾಣಿಗೇರ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.