ಮಾವಿನ ಬಗ್ಗೆ ಮನದ ಮಾತು…


Team Udayavani, Apr 21, 2021, 12:00 PM IST

ಮಾವಿನ ಬಗ್ಗೆ ಮನದ ಮಾತು…

ಮಾವಿನ ನಂಟು ಶುರುವಾಗೋದೇ ಬಾಲ್ಯದಿಂದ. ಹಣ್ಣಿನ ಚಿತ್ರಗಳಿಗೆ ಬಣ್ಣ ತುಂಬಿ ಎಂದು ಕೊಡುವ ನರ್ಸರಿ ಡ್ರಾಯಿಂಗ್‌ಪುಸ್ತಕದಲ್ಲಿ ಮಾವಿನ ಚಿತ್ರ ಇಲ್ಲದೆ ಇರಲುಸಾಧ್ಯವೇ? M ಅಕ್ಷರದಿಂದ ಹೇಳುವ ಪದಗಳಲ್ಲಿಮ್ಯಾಂಗೊ ಅನ್ನುವ ಪದ ಇಲ್ಲದೆ ಹೋಗುವುದೆ?ಇದು ಮಾವಿನ ಬಗೆಗಿನ ಬೀಜ ಮನಸ್ಸಿನಲ್ಲಿ ಮೊಳಕೆಯಾಗುವ ಪರಿ.

ಹೀಗೆ ಬೆಳೆಯುತ್ತಿದಂತೆ ಮುಂದೆ ಮರಗಳ ಹೆಸರಿನ ಪಟ್ಟಿ ಮಾಡುತ್ತಾ ಮಾವಿನ ಮರದ ಸೇರ್ಪಡೆ ಆಗುತ್ತದೆ. ಪದ್ಯಕ್ಕೆ ಬರುವುದಾದರೆ “ಹತ್ತು ಹತ್ತು ಇಪ್ಪತ್ತು, ತೋಟಕೆ ಹೋದನು ಸಂಪತ್ತು’ ಎಂಬ ಪದ್ಯದಲ್ಲಿ ಪುಟ್ಟ ಹುಡುಗ ತೋಟಕ್ಕೆ ನುಗ್ಗಿ ಮಾವಿನ ಹಣ್ಣ ನ್ನು ಕೀಳುವಸಾಹಸ ಮಾಡುವ ಪದ್ಯದಲ್ಲಿ ಸಂಖ್ಯೆಗಳ ಪರಿಚಯವು ಮಾವಿನ ಹಣ್ಣಿನ ಆಸೆಯೊಂದಿಗೆ ಸೇರಿ ಹೋಗಿದೆ.

ಇನ್ನು ಸತ್ಯದ ಕಥೆಯನ್ನು ಪುಣ್ಯ ಕೋಟಿ ಗೋವಿನ ಹಾಡಿನ ಮೂಲಕ ಹೇಳಲಾಗುವ “ಧರಣಿ ಮಂಡಲ ಮಧ್ಯದೊಳಗೆ’ ಎಂಬ ಗೀತೆಯಲ್ಲಿ ಗೊಲ್ಲನು ಕೊಳಲನೂದುತ ಕೂರುವುದು ಮಾವಿನ ಮರದ ಕೆಳಗೆ ತಾನೆ? ಇದನ್ನುಹೇಳುವ ಆ ಹಾಡಿನ ಸಾಲುಗಳು “ಎಳೆಯ ಮಾವಿನ ಮರದ ಕೆಳಗೆ, ಕೊಳಲನೂದುತ ಗೊಲ್ಲಗೌಡನು’ ಎಂಬ ಸಾಲುಗಳನ್ನು ಓದು ತ್ತಾ, “ವಸಂತ ಕಾಲ ಬಂದಾಗ ಮಾವು ಚಿಗುರಲೇಬೇಕು, ಕೋಗಿಲೆ ಹಾಡಲೆ ಬೇಕು’ ಎಂಬ ಹಾಡುಗಳನ್ನು ಕೇಳುತ್ತಾ ಮಾವಿನ ಮರದ ಚಿತ್ರಣ ಮನದಲ್ಲಿ ಚಿಗುರೊಡೆಯುವುದು.

ಆಂಜನೇಯ ತಂದ ಹಣ್ಣು!? :

ಮಾವಿನ ಹಣ್ಣಿನ ಬಗೆಗಿನ ಕಥೆಗಳು, ಗಾದೆಗಳು ಅನೇಕ. ಕ್ರಿಸ್ತಪೂರ್ವ ನಾಲ್ಕನೇ ಶತಮಾನದಲ್ಲಿ ಅಲೆಕ್ಸಾಂಡರ್‌ ನಮ್ಮ ದೇಶಕ್ಕೆ ಬಂದಾಗ ಅವನಿಗೆ ಈ ಹಣ್ಣು ತುಂಬ ಇಷ್ಟವಾಗಿತ್ತಂತೆ. ಇನ್ನೊಂದು ದಂತಕಥೆಯ ಪ್ರಕಾರ, ಮಾವಿನ ಹಣ್ಣನ್ನು ಲಂಕೆ ಯಿಂದ ನಮ್ಮ ದೇಶಕ್ಕೆ ತಂದದ್ದು ಆಂಜನೇಯನಂತೆ. ಅಶೋಕವನದಲ್ಲಿ ಸೀತೆ ಯನ್ನು ಕಂಡು ಉಂಗುರವನ್ನು ಕೊಟ್ಟ ಮೇಲೆ ಸಂತೋಷದಿಂದ ಮರದಿಂದ ಮರಕ್ಕೆ ಹಾರಿ ಸಿಕ್ಕ ಹಣ್ಣುಗಳನ್ನೆಲ್ಲಾ ತಿಂದನಂತೆ. ಎಲ್ಲಕ್ಕಿಂತ ಮಾವಿನಹಣ್ಣು ತುಂಬ ಪ್ರಿಯವಾಗಿದ್ದರಿಂದ ಅದರ ಬೀಜಗಳನ್ನು ನಮ್ಮ ದೇಶಕ್ಕೆ ತಂದುಹಾಕಿದನಂತೆ. ಹೀಗೆ, ಪುರಾಣ ಕಥೆಗಳಲ್ಲೂ ಹಲವು ಕಡೆ ಮಾವಿನ ಉಲ್ಲೇಖವಿದೆ.

ಬಯಕೆ ಹುಟ್ಟಿಸುವುದು ಇದೇ ಮಾವು! :  ಮಗುವಿಗೆ ಹಲ್ಲು ಬರುವ ಮುನ್ನವೇ, ಮಾವಿನ ಸವಿ ನಾಲಿಗೆಗೆ ತಲುಪಿರುತ್ತದೆ. ವಿಟಮಿನ್‌ ಎ, ಫೈಬರ್‌,ಪೊಟಾಸಿಯಂ ಹಾಗೂಇನ್ನೂ ಹಲವು ಪೌಷ್ಟಿಕಾಂಶಗಳು ಈ ಹಣ್ಣಿನಲ್ಲಿ ಹೇರಳವಾಗಿ ಇರುವುದರಿಂದ ವೈದ್ಯರು ಇದನ್ನು ಮಕ್ಕಳಿಗೆ ಚಿಕ್ಕವರಿರುವಾಗಲೇ ತಿನ್ನಿಸಬಹುದು ಎಂದು ಹೇಳುತ್ತಾರೆ. ಬೆಳೆಯುತ್ತಾ ಇದೇ ಹಣ್ಣಿನ ಸೀಕರ್ಣೆ, ಮಿಲ್ಕ್ ಶೇಕ್‌, ಬರ್ಫಿ ಹೀಗೆ ಹತ್ತು ಹಲವು ಮಾವಿನ ತಿನಿಸುಗಳು ಪ್ರಿಯವಾಗಿ ಬಿಡುತ್ತದೆ. ಪಾಯಸ, ಕೋಸಂಬರಿ, ಚಿತ್ರಾನ್ನದಿಂದ ಹಿಡಿದು ಐಸ್‌ಕ್ರೀಮ್‌ ತನಕ ಮಾವಿನಕಾಯಿ, ಹಣ್ಣಿನ ಬಳಕೆ ಮಾಡಬಹುದು. ಮಾವಿನ ಕಾಯಿಗೆ ಉಪ್ಪು, ಖಾರ ಹಚ್ಚಿ ಶಾಲಾ, ಕಾಲೇಜುಗಳ ಮುಂದೆ ಗಾಡಿಗಳಲ್ಲಿ ಮಾರುತ್ತಿದ್ದರೆ ನಮಗೆ ಬಾಯಲ್ಲಿ ನೀರೂರುವುದಂತೂ ಖಂಡಿತ. ಮಾವಿನ ಚಾಕಲೇಟ್‌, ಮ್ಯಾಂಗೋ ಟಾಫಿಸ್‌ ಚೀಪಿ ತಿನ್ನಲು ಚಂದ. ಬಸುರಿಯರಿಗೆ ಬಯಕೆ ಹುಟ್ಟಿಸುವುದು ಇದೇ ಮಾವಲ್ಲವೇ? ಉಪ್ಪಿನ ಕಾಯಿಗಳಲ್ಲೂ ಇದರದ್ದೇ ಕಾರುಬಾರು.

ಮಾವಿನ ಎಲೆಗಳು ಶುಭ ಸಮಾರಂಭಗಳಲ್ಲಿ ಕಳಶಕ್ಕೆ ಸೇರಿ, ಮನೆಯ ಮುಂದಿನ ತೋರಣವಾಗಿ, ಚಪ್ಪರದಲ್ಲಿಯೂ ಶೋಭಿಸುತ್ತವೆ. ಮಾವಿನ ಮರದ ತೊಗಟೆ, ಹೂ, ಎಲೆ, ಹಣ್ಣು, ಬೀಜ ಎಲ್ಲದರಲಿಯೂ ಔಷಧೀಯ ಗುಣಗಳಿದ್ದು ಆಯುರ್ವೇದ ಔಷಧಗಳಲ್ಲಿ ಬಳಕೆಯಾಗುತ್ತದೆ. ಬಾದಾಮಿ, ರಸಪುರಿ, ತೋತಾಪುರಿ, ಮಲ್ಲಿಕಾ, ಮಲಗೋವಾ, ನೀಲಂ, ಸಿಂಧು, ಆಮ್ರಪಾಲಿ..ಹೀಗೆ ಹಲವಾರು ಮಾವಿನ ಹಣ್ಣಿನ ತಳಿಗಳಿದ್ದು, ಪ್ರತಿಯೊಂದೂ ತನ್ನದೇ ಆದ ರುಚಿ ಹೊಂದಿರುತ್ತದೆ. ಒಟ್ಟಿನಲ್ಲಿ ಎರಡನೇ ಕಲ್ಪವೃಕ್ಷ ಮಾವಿನ ಮರ ಎಂದರೆ ಅತಿಶಯೋಕ್ತಿ ಆಗಲಾರದು. ­

 

-ಶ್ರೀಲಕ್ಷ್ಮೀ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಯುಗಾದಿ ಮರಳಿ ಬರುತಿದೆ…

ಯುಗಾದಿ ಮರಳಿ ಬರುತಿದೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.