ಮ್ಯಾಂಗೋ ಮೂಡ್‌


Team Udayavani, Jul 14, 2018, 3:17 PM IST

14-july-15.jpg

ಮ್ಯಾಂಗೋ ಜ್ಯೂಸ್‌

ಬೇಕಾಗುವ ಸಾಮಗ್ರಿಗಳು
ಮಾವಿನಕಾಯಿ ತುರಿ- 2 ಕಪ್‌, ಬೆಲ್ಲದ ತುರಿ- 2 ಕಪ್‌, ಏಲಕ್ಕಿ ಪುಡಿ- 1 ಚಮಚ, ಕಾಳುಮೆಣಸಿನ ಪುಡಿ- 1/2 ಚಮಚ, ಜಾಯಿಕಾಯಿ ಪುಡಿ- 1/4 ಚಮಚ, ಜೀರಿಗೆ ಪುಡಿ- 1 ಚಮಚ, ಉಪ್ಪು-1/2 ಚಮಚ.  
ಮಾಡುವ ವಿಧಾನ
ಮಾವಿನಕಾಯಿ ತುರಿಗೆ ಬೆಲ್ಲ, ಜೀರಿಗೆ ಪುಡಿ, ಕಾಳುಮೆಣಸಿನ ಪುಡಿ, ಜಾಯಿಕಾಯಿ ಪುಡಿ ಸೇರಿಸಿ ಬೇಯಿಸಿ. ತಣಿದ ಮೇಲೆ, ಶೋಧಿಸಿ, ಏಲಕ್ಕಿ ಪುಡಿ, ಉಪ್ಪು ಹಾಕಿ, ಚೆನ್ನಾಗಿ ಕಲಕಿದರೆ ಮಾವಿನಕಾಯಿ ಜ್ಯೂಸ್‌ ತಯಾರು. 

ಸಲಾಡ್‌
ಬೇಕಾಗುವ ಸಾಮಗ್ರಿಗಳು
ಮಾವಿನಕಾಯಿ ಹೋಳುಗಳು- 1/2 ಕಪ್‌, ಟೊಮೆಟೋ ಹೋಳುಗಳು- 1/2 ಕಪ್‌, ಸಣ್ಣಗೆ ಕತ್ತರಿಸಿದ ಸೌತೆಕಾಯಿ-
1/2 ಕಪ್‌, ಕತ್ತರಿಸಿದ ಈರುಳ್ಳಿ- 1/2 ಕಪ್‌, ತೆಂಗಿನಕಾಯಿ ತುರಿ- 1/2 ಕಪ್‌, ಹಸಿಮೆಣಸಿನಕಾಯಿ- 4- 5, ಶುಂಠಿ ತುರಿ- 1/2 ಚಮಚ, ಜೀರಿಗೆ- 1 ಚಮಚ, ಉಪ್ಪು- ರುಚಿಗೆ ತಕ್ಕಷ್ಟು, ಕತ್ತರಿಸಿದ ಕೊತ್ತಂಬರಿ ಸೊಪ್ಪು- 4 ಚಮಚ.
ಮಾಡುವ ವಿಧಾನ
ಈರುಳ್ಳಿ ಹೋಳುಗಳನ್ನು ಸ್ವಲ್ಪ ಎಣ್ಣೆಯಲ್ಲಿ ಬಾಡಿಸಿ. ತೆಂಗಿನಕಾಯಿ ತುರಿ, ಹಸಿಮೆಣಸಿನಕಾಯಿ, ಶುಂಠಿ ತುರಿ, ಜೀರಿಗೆಗಳನ್ನು ಸೇರಿಸಿ ಅರೆದಿರಿಸಿ. ಮಾವಿನಕಾಯಿ ಹೋಳುಗಳು, ಟೊಮೆಟೋ, ಸೌತೆಕಾಯಿ ಹೋಳುಗಳು, ಈರುಳ್ಳಿ, ಉಪ್ಪು, ಅರೆದ ಮಿಶ್ರಣ ಸೇರಿಸಿ, ಚೆನ್ನಾಗಿ ಕಲಕಿ, ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಯಾದ ಮಾವಿನಕಾಯಿ ಸಲಾಡ್‌ ರೆಡಿ.

ಗೊಜ್ಜು
ಬೇಕಾಗುವ ಸಾಮಗ್ರಿಗಳು
ಮಾವಿನಕಾಯಿ ತುರಿ- 2 ಕಪ್‌, ಖಾರದ ಪುಡಿ- 3 ಚಮಚ, ತೆಂಗಿನಕಾಯಿ ತುರಿ- 1/2 ಕಪ್‌, ಎಳ್ಳಿನ ಪುಡಿ- 3 ಚಮಚ, ಸಾಸಿವೆ- 1/2 ಚಮಚ, ಬೆಲ್ಲದ ತುರಿ- 4 ಚಮಚ, ಹುಣಸೆ ಹಣ್ಣು- 1 ಇಂಚಿನಷ್ಟು, ಉಪ್ಪು- ರುಚಿಗೆ ತಕ್ಕಷ್ಟು, ಒಗ್ಗರಣೆಗೆ- ಎಣ್ಣೆ- 4 ಚಮಚ, ಸಾಸಿವೆ- 1 ಚಮಚ, ಇಂಗು- 1/4 ಚಮಚ, ಅರಿಸಿನ- 1/2 ಚಮಚ, ಒಣಮೆಣಸಿನಕಾಯಿ ತುಂಡುಗಳು- 3- 4, ಕರಿಬೇವಿನ ಎಲೆಗಳು- 7-8. 
ಮಾಡುವ ವಿಧಾನ
ಮಾವಿನಕಾಯಿ ತುರಿಯನ್ನು ಸ್ವಲ್ಪ ಎಣ್ಣೆಯಲ್ಲಿ ಹುರಿದಿರಿಸಿ. ತೆಂಗಿನಕಾಯಿ ತುರಿ, ಹುಣಸೆ ಹಣ್ಣು, ಖಾರದ ಪುಡಿ, ಎಳ್ಳು ಪುಡಿ, ಸಾಸಿವೆ ಕಾಳುಗಳನ್ನು ಸೇರಿಸಿ ನುಣ್ಣಗೆ ಅರೆದಿರಿಸಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ, ಸಾಸಿವೆ- ಇಂಗು- ಅರಿಸಿನ- ಒಣಮೆಣಸಿನಕಾಯಿ- ಕರಿಬೇವಿನ ಎಲೆಗಳನ್ನು ಹಾಕಿ ಒಗ್ಗರಣೆ ಮಾಡಿ. ಒಗ್ಗರಣೆಗೆ, ಅರೆದ ಮಸಾಲೆ, ಮಾವಿನಕಾಯಿ ತುರಿ, ಉಪ್ಪು, ಬೆಲ್ಲ ಸೇರಿಸಿ ಕುದಿಸಿದರೆ ಮಾವಿನಕಾಯಿ ಗೊಜ್ಜು ರೆಡಿ.

ಉಸ್ಲಿ
ಬೇಕಾಗುವ ಸಾಮಗ್ರಿಗಳು ಮಾವಿನಕಾಯಿ ತುರಿ- 1 ಕಪ್‌, ಮೊಳಕೆ ತರಿಸಿದ ಹೆಸರುಕಾಳು- 2 ಕಪ್‌, ತೆಂಗಿನಕಾಯಿ ತುರಿ- 1/2 ಕಪ್‌, ಕಾಳುಮೆಣಸಿನ ಪುಡಿ- 1/2 ಚಮಚ, ಜೀರಿಗೆ ಪುಡಿ- 1 ಚಮಚ, ಕತ್ತರಿಸಿದ ಕರಿಬೇವಿನ ಸೊಪ್ಪು- 3 ಚಮಚ, ಕತ್ತರಿಸಿದ ಕೊತ್ತಂಬರಿ ಸೊಪ್ಪು- 3 ಚಮಚ, ಕತ್ತರಿಸಿದ ಹಸಿಮೆಣಸಿನಕಾಯಿ-5- 6, ಉಪ್ಪು- ರುಚಿಗೆ ತಕ್ಕಷ್ಟು, ಎಣ್ಣೆ- 4 ಚಮಚ, ಸಾಸಿವೆ- 1 ಚಮಚ, ಉದ್ದಿನ ಬೇಳೆ- 3 ಚಮಚ, ಅರಿಸಿನ- 1/2 ಚಮಚ, ಇಂಗು- 1/4 ಚಮಚ. 
ಮಾಡುವ ವಿಧಾನ
ಮೊಳಕೆ ತರಿಸಿದ ಹೆಸರುಕಾಳುಗಳನ್ನು ಬೇಯಿಸಿ ನೀರು ಬಸಿದಿಡಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ, ಸಾಸಿವೆ- ಉದ್ದಿನಬೇಳೆ- ಅರಿಸಿನ- ಇಂಗು ಸೇರಿಸಿ ಒಗ್ಗರಣೆ ತಯಾರಿಸಿ. ಒಗ್ಗರಣೆಗೆ, ಹಸಿಮೆಣಸಿನಕಾಯಿ, ಮಾವಿನಕಾಯಿ ತುರಿ, ಕರಿಬೇವಿನ ಸೊಪ್ಪು ಹಾಕಿ ಬಾಡಿಸಿ, ಬೇಯಿಸಿದ ಹೆಸರು ಕಾಳು, ಜೀರಿಗೆ ಪುಡಿ, ಕಾಳುಮೆಣಸಿನಪುಡಿ, ಉಪ್ಪು ಸೇರಿಸಿ ಕಲಕಿ, ಒಲೆಯಿಂದ ಕೆಳಗಿರಿಸಿ, ತೆಂಗಿನಕಾಯಿ ತುರಿ ಹಾಗೂ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ, ಪುಷ್ಟಿದಾಯಕ ಮಾವಿನಕಾಯಿ- ಹೆಸರು ಕಾಳಿನ ಉಸ್ಲಿ ತಯಾರು. ತಿಂಡಿಯಾಗಿ ಇಲ್ಲವೆ ಚಪಾತಿಯೊಂದಿಗೆ ತಿನ್ನಲು ಬಲು ರುಚಿ.

ಮುರಬ್ಬ
ಬೇಕಾಗುವ ಸಾಮಗ್ರಿಗಳು

ಸಿಪ್ಪೆ ತೆಗೆದು ಕತ್ತರಿಸಿದ ಮಾವಿನಕಾಯಿ ಹೋಳುಗಳು- 2 ಕಪ್‌, ಸಕ್ಕರೆ- 2 ಕಪ್‌, ಏಲಕ್ಕಿ ಪುಡಿ- 1/2 ಚಮಚ, ಕೇಸರಿ ದಳ-5- 6, ಲವಂಗದ ಪುಡಿ- 1/2 ಚಮಚ.
ಮಾಡುವ ವಿಧಾನ
ಮಾವಿನಕಾಯಿ ಹೋಳುಗಳನ್ನು ಹಬೆಯಲ್ಲಿ ಬೇಯಿಸಿ. ತಣಿದ ಮೇಲೆ, ಬಟ್ಟೆಯ ಮೇಲೆ ಹರಡಿ, ನೀರಿನ ಪಸೆ ಆರುವವರೆಗೆ ಒಣಗಿಸಿ. ಬಾಣಲೆಯಲ್ಲಿ, ಅರ್ಧ ಕಪ್‌ ನೀರು ಕಾಯಿಸಿ, ಸಕ್ಕರೆ ಹಾಕಿ ಗಟ್ಟಿಯಾಗುವರೆಗೆ ಕಲಕಿ. ಪಾಕ ಗಟ್ಟಿಯಾದ ಮೇಲೆ, ಮಾವಿನಕಾಯಿ ಹೋಳುಗಳು, ಏಲಕ್ಕಿ ಪುಡಿ, ಕೇಸರಿ ದಳ, ಲವಂಗದ ಪುಡಿ ಹಾಕಿ ಕಲಕಿ. ತಣಿದ ಮೇಲೆ, ಪಸೆ ಇಲ್ಲದ ಬಾಟಲಿಯಲ್ಲಿ ಶೇಖರಿಸಿ. 

ಜಯಶ್ರೀ ಕಾಲ್ಕುಂದ್ರಿ 

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.