ಅಮ್ಮನ ಬದುಕೇ ಜೀವನಪಾಠ

ಆಕೆ, ಅಪ್ಪನ ಪಾತ್ರದಲ್ಲೂ ಗೆದ್ದಳು!

Team Udayavani, Feb 5, 2020, 6:35 AM IST

feb-10

ಅಮ್ಮ ಓದಿದ್ದು 8ನೇ ತರಗತಿಯಾದರೂ, ಆಕೆಯ ಯೋಚನೆಗಳು ಯಾವ ಆಧುನಿಕ ಮಹಿಳೆಗಿಂತ ಕಡಿಮೆಯಿರಲಿಲ್ಲ. ನಮ್ಮ ಪ್ರಾಮಾಣಿಕತೆ ನಮ್ಮನ್ನು ಕಾಪಾಡುತ್ತದೆ, ಸತ್ಯಕ್ಕೆ ಬೆಲೆ ಇದೆ ಎಂದು ಹೇಳುತ್ತಾ, ತನ್ನ ಪಾಡಿಗೆ ತಾನು ಕೆಲಸ ಮಾಡುತ್ತಾ ಹೋದಳು.

ನನ್ನಪ್ಪನ ಕುಡಿತದ ಚಟ ಎಲ್ಲೆ ಮೀರಿತ್ತು. ಕುಡಿದು ಬಂದು ತನ್ನ ಪಾಡಿಗೆ ತಾನಿರದೆ, ಅಮ್ಮನಿಗೆ ಮಾನಸಿಕವಾಗಿ, ದೈಹಿಕವಾಗಿ ಹಿಂಸೆ ನೀಡುವುದೇ ಅಪ್ಪನ ಕೆಲಸವಾಗಿತ್ತು. ಇಷ್ಟಲ್ಲದೆ, ಕುಟುಂಬದ ಜವಾಬ್ದಾರಿ ಹೊರಲೂ ಅಪ್ಪ ಸಿದ್ಧವಿರಲಿಲ್ಲ, ಅಮ್ಮ, ನಾನೇ ದುಡಿದು ಜವಾಬ್ದಾರಿ ನಿಭಾಯಿಸುತ್ತೇನೆ ಅಂದರೂ ಇಲ್ಲಸಲ್ಲದ ಹಿಂಸೆ, ಕಿರುಕುಳ ನೀಡುತ್ತಿದ್ದ.

ಇಂಥ ಕೌಟುಂಬಿಕ ವಾತಾವರಣದಿಂದ ಬೇಸತ್ತ ನನ್ನಮ್ಮನಿಗೆ ನಾವು ಮೂವರು ಮಕ್ಕಳು. ಅದೊಂದು ದಿನ ನಾನು, ನನ್ನಣ್ಣ ಗಟ್ಟಿ ಮನಸ್ಸು ಮಾಡಿ, “ನಿನಗೆ ಗಂಡ ಬೇಕಾದರೆ ಈ ನರಕದಲ್ಲೇ ಇರು. ನಾವು ಅನಾಥಾಶ್ರಮಕ್ಕೆ ಹೋಗಿ ಸೇರಿಕೊಳ್ಳುತ್ತೇವೆ’ ಅಂತ ಹೇಳಿಬಿಟ್ಟೆವು. ಆಗ ಅಮ್ಮ ದುಃಖ ತಡೆಯಲಾರದೆ ಅತ್ತುಬಿಟ್ಟಿದ್ದಳು. “ನನಗೆ ನೀವೇ ಸರ್ವಸ್ವ. ನಿಮ್ಮಪ್ಪನ ಬಗ್ಗೆ ನಿಮಗೇ ಗೊತ್ತಿದೆ ಅಲ್ವಾ?’ ಅಂದಾಗ, ಅಮ್ಮನನ್ನು ಬಿಟ್ಟು ಹೋಗಲು ಮನಸ್ಸಾಗಲಿಲ್ಲ. ಸಣ್ಣವರಾದ ನಾವು, ಏನು ಮಾಡಲೂ ತೋಚದೆ, ಅಸಹಾಯಕರಾಗಿ ಅಮ್ಮನನ್ನು ತಬ್ಬಿಕೊಂಡೆವು.

ಮುಂದೆ, ಅಪ್ಪನ ಕಾಟ ತಡೆಯಲಾರದೆ, ನಾವು ಅಮ್ಮನ ಜೊತೆಗೆ ಹುಬ್ಬಳ್ಳಿಗೆ ಬಂದೆವು. ನಂತರ, ಚಿಕ್ಕಪ್ಪ-ಚಿಕ್ಕಮ್ಮನ ಸಹಾಯ ಪಡೆದು ಬೆಂಗಳೂರು ತಲುಪಿದೆವು. ಆಗ ನಮ್ಮ ಜೊತೆಗಿದ್ದುದು ಹೊಸ ಜೀವನ ಕಟ್ಟಿಕೊಳ್ಳುವ ಕನಸು ಮಾತ್ರ.

ಬೆಂಗಳೂರು ನಮಗೆ ಹೊಸತು. ಅಮ್ಮ ಹದಿನೈದು ದಿನಗಳ ಕಾಲ, ಸ್ನೇಹಿತೆಯೊಬ್ಬರ ಮನೆಯಲ್ಲಿದ್ದು, ನಂತರ ಗಾರ್ಮೆಂಟ್ಸ್‌ ಫ್ಯಾಕ್ಟರಿ ಒಂದರಲ್ಲಿ ಟೈಲರ್‌ ಆಗಿ ಕೆಲಸಕ್ಕೆ ಸೇರಿಕೊಂಡಳು. ಆಗ ಅವಳ ತಿಂಗಳ ಸಂಬಳ ನಾಲ್ಕು ಸಾವಿರಕ್ಕಿಂತೂ ಕಡಿಮೆ. ಅದರಲ್ಲಿಯೇ ನಮ್ಮ ಜೀವನ ಸಾಗತೊಡಗಿತು. ಮಕ್ಕಳ ಜವಾಬ್ದಾರಿ, ಮನೆಯ ನಿರ್ವಹಣೆ, ಕಾಡುವ ಒಂಟಿತನ, ದುಡಿಯಲೇಬೇಕಾದ ಅನಿವಾರ್ಯ, ಇವೆಲ್ಲಾ ಅಮ್ಮನನ್ನು ಅದೆಷ್ಟು ಹೈರಾಣಾಗಿಸಿರಬಹುದು ಅಂತ ಈಗ ನೆನಪಿಸಿಕೊಂಡರೆ ದುಃಖವಾಗುತ್ತದೆ. ತೀರಾ ತುರ್ತು ಸಂದರ್ಭ ಬಿಟ್ಟು ಉಳಿದ ಯಾವ ದಿನವೂ ಆಕೆ ರಜೆ ಪಡೆದುಕೊಳ್ಳಲೇ ಇಲ್ಲ. ನಾವೀಗ ಬೆಂಗಳೂರಿಗೆ ಬಂದು ಒಂಬತ್ತು ವರ್ಷಗಳಾಗಿವೆ. ಈಗ ಆರ್ಥಿಕ ಪರಿಸ್ಥಿತಿ ಸ್ವಲ್ಪ ಸುಧಾರಿಸಿದ್ದರೂ, ಅಮ್ಮನ ಕಾಯಕ ಚಕ್ರ ಇನ್ನೂ ಸುತ್ತುತ್ತಲೇ ಇದೆ.

ಉಡುಗೆ ಮಾಸಿದರೂ, ಹರಿದರೂ, ತನಗಾಗಿ ಅಂತ ಆಕೆ ಒಂದು ಕರವಸ್ತ್ರವನ್ನು ಕೂಡಾ ಖರೀದಿಸಿದವಳಲ್ಲ. ಆದರೆ, ತನ್ನ ಮಕ್ಕಳು ನಾಲ್ಕಾರು ಜನರೊಂದಿಗೆ ಓಡಾಡುವಾಗ ಒಳ್ಳೆಯ ಬಟ್ಟೆ ತೊಡಬೇಕು ಅಂತ ನಮಗೆಲ್ಲಾ ಹೊಸ ಬಟ್ಟೆ ಕೊಡಿಸುತ್ತಿದ್ದಳು. ಗಂಡನನ್ನು ತೊರೆದು ಬಂದ ನನ್ನಮ್ಮನಿಗೆ ಆದ ಅವಮಾನಗಳಿಗೇನು ಕೊರತೆಯೇ? ಮಹಿಳೆಯೊಬ್ಬಳು ಎಷ್ಟೇ ನಿಯತ್ತಾಗಿ ದುಡಿದು ತಿಂದರೂ, ಕಾಲೆಳೆಯುವ ಜನರು ಇದ್ದೇ ಇರುತ್ತಾರೆ. ಅವರೆಲ್ಲ, “ಗಂಡ ಬಿಟ್ಟವಳು’, “ಒಂಟಿ ಹೆಂಗಸು’ ಅಂತೆಲ್ಲಾ ಬಾಯಿಗೆ ಬಂದಂತೆ ಮಾತನಾಡಿದರೂ, ಅಮ್ಮನ ಉತ್ತರ ಮೌನವೇ ಆಗಿರುತ್ತಿತ್ತು. ಅಮ್ಮ ಓದಿದ್ದು 8ನೇ ತರಗತಿಯಾದರೂ, ಆಕೆಯ ಯೋಚನೆಗಳು ಯಾವ ಆಧುನಿಕ ಮಹಿಳೆಗಿಂತ ಕಡಿಮೆಯಿರಲಿಲ್ಲ. ನಮ್ಮ ಪ್ರಾಮಾಣಿಕತೆ ನಮ್ಮನ್ನು ಕಾಪಾಡುತ್ತದೆ, ಸತ್ಯಕ್ಕೆ ಬೆಲೆ ಇದೆ ಎಂದು ಹೇಳುತ್ತಾ, ತನ್ನ ಪಾಡಿಗೆ ತಾನು ಕೆಲಸ ಮಾಡುತ್ತಾ ಹೋದಳು. ನಾವಿಂದು ನೆಮ್ಮದಿಯಾಗಿ ತುತ್ತು ಅನ್ನ ತಿನ್ನುತ್ತಿರುವುದಕ್ಕೆ ಅವಳೇ ಕಾರಣ. “ಗಂಡನನ್ನು ಬಿಟ್ಟವಳು ಅಂತ ಸಮಾಜ ದೂಷಿಸುತ್ತದೆ’ ಅಂತ ಹೆದರಿ ಅಲ್ಲೇ ಉಳಿದಿದ್ದರೆ, ಇವತ್ತು ನಾವು ಬದುಕಿರುತ್ತಿದ್ದೆವೋ ಇಲ್ಲವೋ.

ಅಮ್ಮನಾಗಿ, ಅಪ್ಪನ ಸ್ಥಾನವನ್ನೂ ತುಂಬಿದ ಆಕೆ, ಸ್ನೇಹಿತೆಯಾಗಿಯೂ ಜೊತೆಗಿದ್ದಾಳೆ. ಗೆದ್ದಾಗ ಬೆನ್ನು ತಟ್ಟಿ, ಸೋತಾಗ ಧೈರ್ಯ ತುಂಬಿ, ಗೊಂದಲಕ್ಕೀಡಾದಾಗ ಸಲಹೆ-ಸೂಚನೆಗಳನ್ನು ನೀಡಿದ್ದಾಳೆ. ಉದ್ಯೋಗ ಪಡೆಯಲು ಅಗತ್ಯವಿರುವಷ್ಟು ವಿದ್ಯಾಭ್ಯಾಸ ಕೊಡಿಸಿದ್ದಾಳೆ. ಯಾರಿಗೂ ಕೇಡು ಬಯಸಬೇಡಿ, ಆಗಷ್ಟೇ ನಿಮಗೆ ಒಳ್ಳೆಯದಾಗುವುದು ಅಂತ, ಜೀವನ ಪಾಠವನ್ನೂ ಹೇಳಿದ್ದಾಳೆ. ಅದೆಷ್ಟೋ ಜನ, ಜೀವನಮೌಲ್ಯಗಳನ್ನು ಕಲಿಯಲು ಕಾರ್ಯಾಗಾರ, ಅಧ್ಯಾತ್ಮಿಕ ಕೇಂದ್ರ, ಕಲಿಕಾ ಕೇಂದ್ರಗಳಿಗೆ ಹೋಗುತ್ತಾರಂತೆ. ಆದರೆ, ನಮಗೆ ಅವುಗಳ ಅಗತ್ಯವೇ ಇಲ್ಲ. ಆಕೆಯ ಬದುಕೇ ನಮಗೆ ಜೀವನ ಪಾಠ.

-ವಿದ್ಯಾ ಹೊಸಮನಿ

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.