ಇನ್ಮುಂದೆ ಕಪ್ಪು ನನದಲ್ಲ

ಬಣ್ಣದಲ್ಲೇನಿದೆ ಬಿಡಿ...

Team Udayavani, Oct 23, 2019, 4:11 AM IST

inmunde

ಮೊನ್ನೆ ಪರಿಚಯಸ್ಥರಲ್ಲಿಗೆ ಹೋಗಿ ಹೊರಡಲು ಅನುವಾದಾಗ, ಆ ಮನೆಯ ಬೆಳೆದ ಮಕ್ಕಳು ನಮಸ್ಕರಿಸಿದರು. ಅವರ ಸಂಸ್ಕಾರಕ್ಕೆ ಮೆಚ್ಚಿದೆ. ಆದರೆ ನಡು ಹರೆಯದ ಅವರ ಅಪ್ಪ-ಅಮ್ಮನೂ ಕಾಲಿಗೆ ಬೀಳಲು ಮುಂದಾದಾಗ ಮಾತ್ರ ಬೆಚ್ಚಿದೆ! ಅಯ್ಯೋ ಇದೇನಿದು? ಅಂತ ಗಾಬರಿಯಾಯ್ತು.

ಐದಾರು ವರ್ಷಗಳ ಹಿಂದಿರಬಹುದು. ಅದೇಕೋ ಒಂದು ಸಂಜೆ, ನನ್ನ ಕೇಶವಿನ್ಯಾಸವನ್ನು ಕೊಂಚ ಬದಲಾಯಿಸಿಕೊಳ್ಳೋಣ ಅಂತ ಕನ್ನಡಿಯ ಮುಂದೆ ನಿಂತು ವಿವಿಧ ಬಗೆಯ ಪ್ರಯೋಗಗಳನ್ನು ಮಾಡುತ್ತಿದ್ದೆ. ವಿವಿಧ ಕೋನಗಳಿಂದ ನಿರುಕಿಸುತ್ತಿದ್ದೆ. ಅರೆ ಅದೇನು?! ಬೆಳ್ಳಿಯ ಎಳೆಯೊಂದು ಫ‌ಳ್ಳನೆ ಮಿಂಚಿದಂತಾಯಿತು! ಎದೆ ಧಸಕ್ಕೆಂದಿತು. ಕೂದಲು ನೆರೆಯುವಷ್ಟು ವಯಸ್ಸಾಯಿತೇ ನನಗೆ? ಎಂದು ಕನ್ನಡಿಯಲ್ಲಿ ಮತ್ತೆ ಮತ್ತೆ ಮುಖ ನೋಡಿಕೊಂಡೆ.

ಮುಖದಲ್ಲಿ ಎಲ್ಲೂ ಸುಕ್ಕುಗಳು ಕಾಣಿಸಲಿಲ್ಲ. ತುಸು ಸಮಾಧಾನವಾಯಿತು. ಆದರೂ, ಆ ಬಿಳಿ ಕೂದಲನ್ನು ಕಿತ್ತೂಗೆಯುವಷ್ಟು ರೋಷ ಉಕ್ಕಿ ಬಂತು. ಆದರೆ, ಕಿತ್ತರೆ ರಕ್ತಬೀಜಾಸುರನಂತೆ ಮತ್ತಷ್ಟು ಹುಟ್ಟಿಕೊಳ್ಳುತ್ತವೆಂದು ಎಲ್ಲೋ ಕೇಳಿದ ನೆನಪು. ಹಾಗಾಗಿ, ಅದನ್ನು ಹಾಗೆಯೇ ಇರಗೊಟ್ಟೆ. ಅದನ್ನು ಆದಷ್ಟು ಕರಿಕೂದಲಿನೊಳಗೆ ಕಾಣದಂತೆ ಬಂಧಿಸಿಟ್ಟೆ. ಬಳಿಕ ಕಾಣಿಸಿಕೊಂಡ ಒಂದೊಂದೇ ಬಿಳಿ ಎಳೆಗಳನ್ನು ಹಾಗೆಯೇ ಬಚ್ಚಿಡುವಲ್ಲಿ ಸಫ‌ಲಳಾಗಿದ್ದೆ.

ಅದರೀಗ ಬೆಳ್ಳಿ ಬಳಗ ಹೆಚ್ಚಾಗತೊಡಗಿದೆ. ಮರೆಮಾಚಿದಷ್ಟೂ ಜಿದ್ದಿಗೆ ಬಿದ್ದಂತೆ ಎಲ್ಲೆಂದರಲ್ಲಿ ಬಿಳಿಯೆಳೆಗಳು ಇಣುಕತೊಡಗಿವೆ. ಸಾಲದ್ದಕ್ಕೆ, “ಲೇ, ತಲೆಗೆ ಸ್ವಲ್ಪ ಕಪ್ಪು ಬಣ್ಣ ಹಾಕ್ಕೋಬಾರದಾ? ನಿನಗೇನಂಥಾ ವಯಸ್ಸಾಗಿದೆ?’ ಎಂಬ ಹಿತೈಷಿಗಳ ಆಗ್ರಹ. ಮೊನ್ನೆ ಪರಿಚಯಸ್ಥರಲ್ಲಿಗೆ ಹೋಗಿ ಹೊರಡಲನುವಾಗುವಾಗ, ಆ ಮನೆಯ ಬೆಳೆದ ಮಕ್ಕಳು ನಮಸ್ಕರಿಸಿದರು. ಸಂಸ್ಕಾರಕ್ಕೆ ಮೆಚ್ಚಿದೆ. ಆದರೆ ನಡು ಹರೆಯದ ಅವರ ಅಪ್ಪ-ಅಮ್ಮನೂ ಕಾಲಿಗೆ ಬೀಳಲು ಮುಂದಾದಾಗ ಮಾತ್ರ ಬೆಚ್ಚಿದೆ! ಅಯ್ಯೋ ಇದೇನಿದು?

ಒಂದು ಸಲಕ್ಕೆ ಕಕ್ಕಾಬಿಕ್ಕಿಯಾದರೂ, ಮರುಕ್ಷಣವೇ ಇದು ನನ್ನ ಬೆಳ್ಳಿ ಬೆಡಗಿನ ಮಹಿಮೆಯೆಂದು ಅರ್ಥವಾಯಿತು. ಬಹಳ ಪಿಚ್ಚೆನಿಸಿತು. ಇನ್ನು ಬಿಳಿಕೂದಲನ್ನು ಹೀಗೇ ಬಿಡಬಾರದೆಂದು ನಿರ್ಧರಿಸಿದೆ. ಮದ್ದರೆಯುವುದೇ ಪರಿಹಾರವೆಂದು ಮನಗಂಡೆ. ಸರಿ, ತಲೆಗೆ ಮಸಾಲೆ ಅರೆಯುವ ಕಾಯಕ, ಮದರಂಗಿ ಕಾರ್ಯಕ್ರಮದೊಂದಿಗೆ ಶುಭಾರಂಭವಾಯಿತು. ಚಹಾ ಪುಡಿಯ ಕಷಾಯದೊಂದಿಗೆ ಮದರಂಗಿ ಮಿಶ್ರ ಮಾಡಿ, ಕಬ್ಬಿಣದ ಬಾಣಲೆಯಲ್ಲಿ ಒಂದು ರಾತ್ರಿ ನೆನೆಸಿ ಇಟ್ಟೆ.

ದೋಸೆಯ ಹಿಟ್ಟನ್ನು ಹುದುಗಲಿಡುವಷ್ಟೇ ಶ್ರದ್ಧೆಯಿಂದ ಈ ಮಿಶ್ರಣವನ್ನು ಕಲಸಿಟ್ಟೆ. ಮರುದಿನ ತಲೆಗೆಲ್ಲ ಲೇಪಿಸಿ ತಾಸುಗಟ್ಟಲೆ ಇಡುವ ಕಷ್ಟವನ್ನು ಸಹಿಸಿಕೊಂಡು ಅಭ್ಯಂಜನ ಮಾಡಿದೆ. ನನ್ನ ಕೂದಲಿನ ಮೂಲ ಬಣ್ಣ ಮರಳಿ ಬಂದಿರಬಹುದೆಂಬ ಖುಷಿಯಿಂದ ಕನ್ನಡಿಯಲ್ಲಿ ನನ್ನನ್ನೇ ನಾನು ನೋಡಿಕೊಂಡೆ. ಬಿಳಿಕೂದಲೆಲ್ಲ ವಿಚಿತ್ರ ಹಳದಿಯಾಗಿ ಬದಲಾಗಿತ್ತು! ತಲೆಗೆ ಅಲ್ಲಲ್ಲಿ ಕಿಚ್ಚಿಟ್ಟಂತೆ ಕಂಡಿತು. ನಿರಾಸೆಯಾಯಿತು.

ನನ್ನ ಬಣ್ಣದ ಕೂದಲು ನಮ್ಮ ಬಳಗದ ಬಾಯಿಗೊಂದು ಆಹಾರವಾಯಿತು. ಪುಕ್ಕಟೆ ಸಲಹೆಗಳು ಹರಿದುಬರತೊಡಗಿದವು. ಚಹಾ ಬೇಡ, ಕಾಯಿ ನೀರಲ್ಲಿ ಕಲಸು; ಲೋಳೆಸರ ಹಾಕು; ಮೆಂತ್ಯ ಹಾಕು… ಕೂದಲು ಸೊಂಪಾಗಿ ಬೆಳೆಯುತ್ತದೆ…  ಹೀಗೇ ಸಲಹೆಗಳು. ಕೂದಲೇನೋ ಸೊಂಪಾಗಿಯೇ ಬೆಳೆಯಿತು, ಆದರೆ ಅದೇ ಕಪ್ಪು-ಕೆಂಪು. ಕರಿಬೇವಿನ ಸೊಪ್ಪನ್ನು ಹಾಕಬೇಕೆನ್ನುವ ಸಲಹೆಯೂ ಬಂತು. ಆದರೆ, ಇದನ್ನು ಜಾರಿಗೊಳಿಸಿದಾಗ ಮಾತ್ರ ನಮ್ಮ ಮನೆಯ ಅಡುಗೆ ಪರಿಮಳವಿಲ್ಲದೇ ಮಂಕಾಗತೊಡಗಿತು.

ಅಡುಗೆಗಾಗಿ ತಂದ ಕರಿಬೇವಿನ ಸೊಪ್ಪು, ನನ್ನ ಮೆಹಂದಿ ಮಸಾಲೆಯಲ್ಲಿ ಸೇರತೊಡಗಿತು. ಅವುಗಳ ಪರಿಣಾಮ ಮಾತ್ರ ನಾ ಕಾಣೆ. ನನ್ನ ತಲೆಗೆ ಕೆಂಪನೆಯ ಶಾಲು ಸುತ್ತಿದಂತಿತ್ತು. ಕರಿಬೇವಿನ ಸೊಪ್ಪನ್ನು ಕಪ್ಪಗೆ ಹುರಿದು ಹಾಕೆಂದರು. ಹಾಗೆ ಮಾಡಿದ ಮೇಲೂ ನನ್ನ ಕೂದಲು ಮೊದಲಿನ ಬಣ್ಣ ಪಡೆಯಲೇ ಇಲ್ಲ. ಫೇಸ್‌ ಬುಕ್‌ ಜಾಲಾಡಿಸುತ್ತಿರುವಾಗ ಈ ಬಗ್ಗೆ ಯಾರ್ಯಾರೋ ಹಂಚಿಕೊಂಡ ವಿವರಣೆಗಳು ಅಲ್ಲಲ್ಲಿ ಕಾಣಸಿಗುತ್ತಿರುತ್ತವೆ.

ಅವೇ ಮದರಂಗಿ ಸೊಪ್ಪು, ಚಹಾದ ಕಷಾಯ, ಬೀಟ್ರೂಟ್‌, ನೆಲ್ಲಿಕಾಯಿ ಹುಡಿ ಇತ್ಯಾದಿಗಳನ್ನು ಬಳಸಿ ಎಂಬುದೆಲ್ಲ ನಾನು ಈ ಮೊದಲೇ ಪ್ರಯೋಗಿಸಿದ ಪರಿಹಾರಗಳು. ಅದರಲ್ಲಿ ನಾನು ಬಳಸದೇ ಬಿಟ್ಟಿದ್ದ ಯಾವುದಾದರೊಂದು ಸಾಮಗ್ರಿ ಕಂಡಿತೆಂದರೆ, ಕೂಡಲೆ ಮಿಶ್ರಣ ತಯಾರು ಮಾಡಿ ಪ್ರಯೋಗಿಸುತ್ತಿದ್ದೆ, ಕೂದಲು ಕಪ್ಪಾಗುವ ಯುರೇಕಾ ಕ್ಷಣ ಬಂದರೂ ಬರಬಹುದೆನ್ನುವ ಭರವಸೆಯಿಂದ. ನನ್ನ ತಲೆ ದಿನದಿಂದ ದಿನಕ್ಕೆ ಕೆಂಪೇರತೊಡಗಿದಾಗ, ನನ್ನ ಬಳಗದವರು, ಅವರವರು ಉಪಯೋಗಿಸುವ ಹತ್ತಾರು ಬ್ರ್ಯಾಂಡ್‌ಗಳ ಹೇರ್‌ ಡೈ ಹೆಸರನ್ನು ಹೇಳತೊಡಗಿದರು.

“ಎಷ್ಟು ವರ್ಷಗಳಿಂದ ಉಪಯೋಗಿಸ್ತಾ ಇದ್ದೇನೆ, ನೋಡು,’ ಎಂದು ತಮ್ಮ ಕಾಡಿಗೆ ಕಪ್ಪಿನ ಕೇಶರಾಶಿಯ ಸಾಕ್ಷಿಯಾಗಿ ಹೇಳುತ್ತಿದ್ದರು. ಆದರೆ, ನನಗೆ ಮಾರುಕಟ್ಟೆಯಲ್ಲಿ ಸಿಗುವ ಬಣ್ಣಗಳೆಂದರೆ ಕೊಂಚ ಭಯ. ಅವುಗಳೊಳಗಿರುವ ರಾಸಾಯನಿಕಗಳು ನನಗೆ ಒಗ್ಗಿಲ್ಲವೆಂದರೆ, ಏನಾದರೂ ವ್ಯತಿರಿಕ್ತ ಪರಿಣಾಮವಾದರೆ ಎಂಬ ಆತಂಕ. ಕೆಲವೊಮ್ಮೆ ಉಪಯೋಗಿಸಿದ್ದೂ ಇದೆ. ಆದರೆ, ಅವುಗಳನ್ನು ದೀರ್ಘ‌ಕಾಲ ಬಳಸಲು ಮನಸ್ಸಾಗುತ್ತಿಲ್ಲ.

ಹುಂ… ಕೊನೆಗೂ, ಈ ಕಪ್ಪು-ಬಿಳುಪಿನ ಜಿದ್ದಾಜಿದ್ದಿಯಲ್ಲಿ ಸೋಲೊಪ್ಪಿಕೊಂಡಿದ್ದೇನೆ. ಆದರೆ ಒಂದಂತೂ ನಿಜ. ಬಿಳಿಕೂದಲಿರಲಿ ಅಥವಾ ಬಿಳಿಕೂದಲಿಲ್ಲದಿರಲಿ, ನನ್ನೊಳಗಿನ ಉತ್ಸಾಹ, ಚೈತನ್ಯ ಮಾತ್ರ ಅದೇ. ಒಂದಿನಿತೂ ಕುಂದಿಲ್ಲ. ಯಾಕೋ ನನ್ನ ಕೂದಲಿನಂತೆ ನನ್ನ ಅಲೋಚನೆಗಳೂ ಮಾಗತೊಡಗಿವೆ ಎಂದು ಈಗೀಗ ಅನಿಸತೊಡಗಿದೆ. Graceful ageing. ಏನಂತೀರ?

* ಸಾಣೂರು ಇಂದಿರಾ ಆಚಾರ್ಯ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.