ಸಂಕ್ರಾಂತಿ ಸಂಭ್ರಮ

ಎಳ್ಳು ಎರೆಯುವುದು ಬಲ್ಲಿರೇನಯ್ಯ?

Team Udayavani, Jan 8, 2020, 5:21 AM IST

9

ವಿಶೇಷವಾಗಿ ಐದು ವರ್ಷದ ಒಳಗಿನ ಮಕ್ಕಳಿಗೆ, ಸಂಕ್ರಾಂತಿಯಂದು ಎಳ್ಳು ಎರೆಯುವ ಆಚರಣೆ ಇದೆ. ಇದನ್ನು ಕೆಲವೆಡೆ ಎಳ್ಳು ಎರೆಯುವುದು ಅಂದರೆ, ಇನ್ನೂ ಕೆಲವೆಡೆ ಕರಿ ಎರೆಯುವುದು ಅಥವಾ ಹಣ್ಣೆರೆಯುವುದು ಎಂದೂ ಕರೆಯುತ್ತಾರೆ.

ಪ್ರತಿಯೊಂದು ರಾಶಿಯಲ್ಲಿ ಸಂಕ್ರಮಣ ನಡೆದರೂ ಕೂಡ, ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಸಂಕ್ರಮಣಗೈಯುವ ಘಳಿಗೆ ನಮ್ಮ ಸಂಸ್ಕೃತಿಯಲ್ಲಿ ಅತ್ಯಂತ ಮಹತ್ತರವಾದುದು. ಅಂದಿನಿಂದಲೇ ಉತ್ತರಾಯಣ ಆರಂಭ. ಸೌರಮಾನವೂ ಕೂಡ. ಅಂದರೆ ದೇವತೆಗಳ ಪರ್ವ. ಈ ಮಕರ ಸಂಕ್ರಾಂತಿಯು ದೇಶದ ಹಲವು ಭಾಗಗಳಲ್ಲಿ ಬೇರೆ ಬೇರೆ ಹೆಸರುಗಳಿಂದ ಕರೆಯಲ್ಪಟ್ಟಿದೆ. ಜೊತೆಗೆ, ಆಚರಣೆಯಲ್ಲೂ ಭಿನ್ನತೆಗಳನ್ನು ಕಾಣಬಹುದು. ಆದರೆ, ವಿಶೇಷವಾಗಿ ಐದು ವರ್ಷದ ಒಳಗಿನ ಮಕ್ಕಳಿಗೆ, ಸಂಕ್ರಾಂತಿಯಂದು ಎಳ್ಳು ಎರೆಯುವ ಆಚರಣೆ ಇದೆ. ಇದನ್ನು ಕೆಲವೆಡೆ ಎಳ್ಳು ಎರೆಯುವುದು ಅಂದರೆ, ಇನ್ನೂ ಕೆಲವೆಡೆ ಕರಿ ಎರೆಯುವುದು ಅಥವಾ ಹಣ್ಣೆರೆಯುವುದು ಎಂದೂ ಕರೆಯುತ್ತಾರೆ.

ಎಳ್ಳು ಎರೆಯುವ ಉದ್ದೇಶ:
ಸಂಕ್ರಾಂತಿಯಂದು ಪುಣ್ಯತೀರ್ಥಗಳಲ್ಲಿ ಅಂದರೆ ನದಿ ಸಂಗಮ, ಸಮುದ್ರ ಮುಂತಾದ ಕಡೆಗಳಲ್ಲಿ ಪವಿತ್ರ ಸ್ನಾನ ಮಾಡುವ ಪದ್ಧತಿಯಿದೆ. ಶರೀರದ ಕೊಳೆಯನ್ನು ನಿವಾರಿಸುವ ಜೊತೆಗೆ ಮಾನಸಿಕ ಕೊಳೆಯನ್ನು ನಾಶ ಮಾಡುವುದು ಸ್ನಾನದ ಉದ್ದೇಶ. ಸ್ನಾನದಷ್ಟೇ ಪ್ರಾಮುಖ್ಯತೆ ಎಳ್ಳಿಗೂ ಇದೆ. ಎಳ್ಳಿನ ನೀರಿನಿಂದ ಸ್ನಾನ ಮಾಡುತ್ತಾರೆ. ಪೀಡಾ ಪರಿಹಾರಕ್ಕಾಗಿ ಎಳ್ಳು, ಬೆಲ್ಲ, ಕೊಬ್ಬರಿ ಹಂಚುತ್ತಾರೆ. ಅಂತೆಯೇ, ಮಕ್ಕಳ ಮೇಲೆ ಎಳ್ಳನ್ನು ಸುರಿಯುವುದರಿಂದ ಬಾಲಾರಿಷ್ಟ ನಾಶವಾಗುತ್ತದೆ ಎಂಬ ನಂಬಿಕೆಯಿದೆ.

ಆಚರಣೆ ಹೇಗೆ?
ಸಂಕ್ರಾಂತಿ ದಿನ ಮಗುವಿಗೆ ಕಪ್ಪು ಬಣ್ಣದ ಹೊಸ ಬಟ್ಟೆಯನ್ನು ತೊಡಿಸಿರುತ್ತಾರೆ. ಜೊತೆಗೆ ತಾಯಿಯೂ ಕೂಡ ಕಪ್ಪು ಬಣ್ಣದ ಸೀರೆ ಉಡುವ ವಾಡಿಕೆ. ಬೇರೆ ಮಂಗಳಕಾರ್ಯದಲ್ಲಿ ಕಪ್ಪು ಬಣ್ಣಕ್ಕೆ ನಿಷೇಧವಿದ್ದರೂ, ಈ ಆಚರಣೆಯಲ್ಲಿ ಕಪ್ಪು ಬಣ್ಣಕ್ಕೆ ವಿಶೇಷ ಪ್ರಾಶಸ್ತ್ಯ. ಬಹುಶಃ ವೈಜ್ಞಾನಿಕವಾಗಿ ಕಪ್ಪು ಬಣ್ಣ ಶಾಖ ಹೀರುವುದರಿಂದ ಇದಕ್ಕೆ ಹಿರಿಯರು ಪ್ರಾಮುಖ್ಯತೆ ನೀಡಿರಬಹುದು.

ಇನ್ನೊಂದು ವಿಶೇಷತೆ ಎಂದರೆ, ಕುಸುರೆಳ್ಳಿನ ಆಭರಣ! ಈ ಆಚರಣೆಗೆಂದೇ ಮಗುವಿಗೆ ಕುಸುರೆಳ್ಳಿನಿಂದ ತಯಾರು ಮಾಡಲಾದ ಆಭರಣಗಳನ್ನು ತೊಡಿಸುತ್ತಾರೆ. ಗಂಡು ಮಗುವಿದ್ದರೆ, ಕೃಷ್ಣನಂತೆ ಕಿರೀಟ, ಹಾರ, ಬಾಜುಬಂಧ, ಬಾಳೆಯ ತರಹ ಕಡಗ, ಕೊಳಲು ಎಲ್ಲವನ್ನೂ ಕುಸುರೆಳ್ಳಿನಿಂದ ತಯಾರಿಸುತ್ತಾರೆ. ಹೆಣ್ಣು ಮಗುವಿದ್ದರೆ, ಕುಸುರೆಳ್ಳಿನ ಬಳೆ, ಸರ, ಸೊಂಟಪಟ್ಟಿ, ಬೈತಲೆ ಪಟ್ಟಿ, ಕಿವಿಯೋಲೆಗಳಿಂದ ಅಲಂಕಾರ ಮಾಡುತ್ತಾರೆ. ಮೊದಲೆಲ್ಲ, ಎಲ್ಲ ತಾಯಂದಿರೂ ಇವುಗಳನ್ನು ಮನೆಯಲ್ಲಿಯೇ ತಯಾರಿಸುತ್ತಿದ್ದರಂತೆ. ಆದರೆ, ಇತ್ತೀಚೆಗೆ ಇವು ಮಾರುಕಟ್ಟೆಯಲ್ಲಿ ಲಭ್ಯವಿದ್ದು ಒಂದು ತಿಂಗಳು ಮುಂಚಿತವಾಗಿ ಹೇಳಿ ಮಾಡಿಸಿದರಾಯಿತು. ಕೆಲ ಕಲಾವಿದರು ಈ ಆಭರಣಗಳನ್ನು ಅಕ್ಕಪಕ್ಕದ ರಾಜ್ಯಗಳಲ್ಲಿ ನೆಲೆಸಿರುವವರಿಗೆ ಹಾಗೂ ಹೊರದೇಶಗಳಿಗೂ ಕೂಡ ಕಳುಹಿಸಿದ ಉದಾಹರಣೆಗಳು ಉಂಟು. .

ಈ ಆಚರಣೆಯಲ್ಲಿ ಎಳ್ಳಿಗೆ ಪ್ರಮುಖ ಪ್ರಾಶಸ್ತ್ಯ ಇದ್ದರೂ ಕೂಡ; ಎಳ್ಳಿನ ಜೊತೆಗೆ ಕಡ್ಲೆಪುರಿ, ಕಾಶಿ ಬೋರ್‌ ಕಾಯಿ, ಹಸಿ ಬಟಾಣಿ ಕಾಯಿ, ಕಡಲೆ ಸುಲಿಗಾಯಿ, ಸಿಹಿಯಾದ ಬೆಂಡು-ಬತ್ತಾಸುಗಳನ್ನು ಸೇರಿಸಿ ಮಿಶ್ರಣ ಮಾಡಿ; ಇದನ್ನು ಮಗುವಿನ ತಲೆಯ ಮೇಲೆ ಬೆಳ್ಳಿ ಬಟ್ಟಲಿನಿಂದ ಐದು ಬಾರಿ ಎರೆಯುತ್ತಾರೆ. ಮುತ್ತು ಹವಳದ ಸಂಕೇತವಾಗಿ ಒಂದು ಮುತ್ತನ್ನೊ ಅಥವಾ ಹವಳದ ಉಂಗುರವನ್ನು ಮಿಶ್ರಣದಲ್ಲಿ ಹಾಕಿ ಎರೆಯುತ್ತಾರೆ. ಹೀಗೆ ಎರೆದ ನಂತರ ಬೀಳುವ ಸಿಹಿ ಹಾಗೂ ಇನ್ನಿತರ ಕಾಯಿಗಳನ್ನು, ಆಚರಣೆಗೆ ಬಂದ ಉಳಿದ ಮಕ್ಕಳು ಹೆಕ್ಕುವುದು ಪದ್ಧತಿ. ಬಂದ ಮಕ್ಕಳಿಗೆ ಸಿಹಿ ತಿನಿಸು ಹಾಗೂ ತಾಯಂದಿರಿಗೆ ಬಾಗಿನ ನೀಡುವುದು ವಾಡಿಕೆ.

ಈ ಆಚರಣೆ ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಲ್ಲಿ ಕಂಡುಬರುತ್ತದೆ. ಆಚರಣೆಯ ಹೆಸರು ಮತ್ತು ವಿಧಾನದಲ್ಲಿ ಕೊಂಚ ವ್ಯತ್ಯಾಸವಿದ್ದರೂ, ಮಕ್ಕಳ ಬಾಲಾರಿಷ್ಟ ನಿವಾರಣೆಗೆ ಎಳ್ಳು ಎರೆಯುವ ಸಂಪ್ರದಾಯ ಇನ್ನೂ ಉಳಿದಿದೆ.

-ಅನುಪಮಾ ಕೆ ಬೆಣಚಿನಮರ್ಡಿ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.