ಶ್ಯ್… ಅವಳು ನಿದ್ದೆ ಮಾಡಲಿ


Team Udayavani, May 15, 2019, 6:00 AM IST

11

ಮನೆಯಲ್ಲಿ ಎಲ್ಲರಿಗಿಂತ ಲೇಟಾಗಿ ಮಲಗಿ, ಎಲ್ಲರಿಗಿಂತ ಬೇಗ ಏಳುವವಳು ಅಮ್ಮ. ನಿತ್ಯವೂ ಎಂಟು ಗಂಟೆ ನಿದ್ದೆ ಮಾಡಲೇಬೇಕು ಅಂತ ಯಾರೇ ಹೇಳಿದರೂ, ಕೆಲಸದೊತ್ತಡ ಅವಳ ಸಿಹಿನಿದ್ರೆಗೆ ಬ್ರೇಕ್‌ ಹಾಕಿ ಬಿಡುತ್ತದೆ. ಎಂಟು ಗಂಟೆ ಬಿಡಿ, ಐದಾರು ಗಂಟೆ ನಿದ್ದೆ ಮಾಡಿದರೆ ಅದೇ ಹೆಚ್ಚು ಅಂತಾರೆ ಹಲವು ಅಮ್ಮಂದಿರು.

ಆದರೆ, ಅವರಿಗೆ ಗೊತ್ತಿರಲಿಕ್ಕಿಲ್ಲ; ಮನೆಯಲ್ಲಿ ಇತರರಿಗಿಂತ ಅವರಿಗೇ ನಿದ್ದೆಯ ಅವಶ್ಯಕತೆ ಜಾಸ್ತಿ ಇದೆ ಅಂತ. ನ್ಯಾಷನಲ್‌ ಸ್ಲಿಪ್‌ ಫೌಂಡೇಶನ್‌ ಹೇಳುವ ಪ್ರಕಾರ, ಪುರುಷರಿಗಿಂತ ಮಹಿಳೆಯರೇ ಕನಿಷ್ಠ ಪಕ್ಷ 20 ನಿಮಿಷ ಜಾಸ್ತಿ ನಿದ್ದೆ ಮಾಡಬೇಕಂತೆ. ಯಾಕೆ ಗೊತ್ತಾ?

ಅವರು ಜಾಸ್ತಿ ಕೆಲಸ ಮಾಡ್ತಾರೆ
ಅಡುಗೆ, ಮನೆ, ಮಕ್ಕಳು, ಗಂಡ, ಆಫೀಸು ಕೆಲಸ ಹೀಗೆ ಮಹಿಳೆಯರು ಯಾವಾಗಲೂ ಬ್ಯುಸಿ ಇರ್ತಾರೆ. ಅವರಿಗೆ ಕೆಲಸವೂ ಜಾಸ್ತಿ, ಕೆಲಸದೊತ್ತಡವೂ ಜಾಸ್ತಿ. ಹಾಗಾಗಿ, ಸಹಜವಾಗಿಯೇ ಮಹಿಳೆಯರಿಗೆ ಹೆಚ್ಚು ವಿಶ್ರಾಂತಿಯ ಅಗತ್ಯವಿರುತ್ತದೆ.

ನಿದ್ರಾಹೀನತೆಯ ಸಮಸ್ಯೆ
ನಿದ್ರಾಹೀನತೆಯ ಸಮಸ್ಯೆಯು ಪುರುಷರಿಗಿಂತ ಮಹಿಳೆಯರನ್ನೇ ಹೆಚ್ಚಾಗಿ ಕಾಡುತ್ತದಂತೆ. ದಿಂಬಿಗೆ ತಲೆಯಿಟ್ಟ ಕೂಡಲೇ ಮಹಿಳೆ­ಯರಿಗೆ ನಿದ್ದೆ ಬರುವುದಿಲ್ಲ. ನಾಳಿನ ಅಡುಗೆ, ಬಾಕಿ ಉಳಿದ ಕೆಲಸ ಅಂತೆಲ್ಲಾ ತಲೆಬಿಸಿ ಮಾಡಿಕೊಂಡು ಅವರು ನಿದ್ದೆಕೆಡಿಸಿಕೊಳ್ತಾರೆ. ಅದನ್ನು ಸರಿದೂಗಿಸಲು ಸ್ವಲ್ಪ ಜಾಸ್ತಿ ನಿದ್ದೆ ಮಾಡಬೇಕು ಅನ್ನುತ್ತದೆ ಸಂಶೋಧನೆ.

ಹಾರ್ಮೋನು ಬದಲಾವಣೆ
ತಿಂಗಳ ಮುಟ್ಟು, ಗರ್ಭಾವಸ್ಥೆ, ಮೆನೋಪಾಸ್‌… ಹೀಗೆ ಸ್ತ್ರೀಯರ ಹಾರ್ಮೋನುಗಳಲ್ಲಿ ಬದಲಾವಣೆ ಆಗುತ್ತಲೇ ಇರುತ್ತದೆ. ಆ ಬದಲಾವಣೆ ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿ, ನಿದ್ರಾಹೀನತೆಯ ಸಮಸ್ಯೆಯನ್ನು ತಂದೊಡ್ಡಬಹುದು. ಹಾಗಾಗಿ ಅವರು ಸ್ವಲ್ಪ ಜಾಸ್ತಿ ವಿಶ್ರಾಂತಿ ಪಡೆಯಬೇಕು.

ತೂಕ ಹೆಚ್ಚಳ
ಪುರುಷರಷ್ಟು ಸುಲಭವಾಗಿ ಮಹಿಳೆಯರು ಮೈ ತೂಕ ಇಳಿಸಿಕೊಳ್ಳಲಾರರು. ಇದಕ್ಕೆ ನಿದ್ರಾಹೀನತೆಯೂ ಒಂದು ಕಾರಣ. ಸರಿಯಾಗಿ ನಿದ್ರೆ ಮಾಡದಿದ್ದರೆ, ದೇಹದಲ್ಲಿ “ಕಾರ್ಟಿಸೋಲ್‌’ ಎಂಬ ಸ್ಟ್ರೆಸ್‌ ಹಾರ್ಮೋನ್‌ ಬಿಡುಗಡೆಯಾಗುತ್ತದೆ. ಅದು ಹಸಿವೆಯನ್ನು ಹೆಚ್ಚಿಸಿ, ದೇಹದ ತೂಕ ಹೆಚ್ಚುವಂತೆ ಮಾಡುತ್ತದೆ.

  • ಗುಡ್‌ನೈಟ್‌ ಟಿಪ್ಸ್‌
    ನಿದ್ದೆಯ ಟೈಮ್‌ ಟೇಬಲ್‌ ಹಾಕಿಕೊಳ್ಳಿ. 10-6 ಅಂದರೆ, ಪ್ರತಿದಿನವೂ ಹತ್ತಕ್ಕೆ ಮಲಗಿ, ಆರಕ್ಕೆ ಏಳಿ. ಒಂದೊಂದು ದಿನ ಒಂದೊಂದು ಸಮಯ ಬೇಡ.
    ಮಲಗುವ ಮುನ್ನ ಐದು ನಿಮಿಷ ಧ್ಯಾನ ಮಾಡಿ. ಎಲ್ಲ ಚಿಂತೆಗಳಿಂದ ಮನಸ್ಸನ್ನು ಮುಕ್ತಗೊಳಿಸಿ.
    ಮಲಗುವುದಕ್ಕಿಂತ ಒಂದು ಗಂಟೆ ಮುಂಚೆಯೇ ಮೊಬೈಲ್‌, ಲ್ಯಾಪ್‌ಟಾಪ್‌, ಟಿ.ವಿ. ಆಫ್ ಮಾಡಿಬಿಡಿ. ಅವುಗಳು ಹೊರಸೂಸುವ ನೀಲಿ ಬೆಳಕು ನಿದ್ರೆಗೆ ಮಾರಕ.
    ಹಾಸಿಗೆ, ಬೆಡ್‌ಶೀಟ್‌ ಸ್ವಚ್ಛವಾಗಿಟ್ಟುಕೊಳ್ಳಿ.
    ಊಟದ ನಂತರ ಕಾಫಿ, ಟೀ ಸೇವಿಸಬೇಡಿ.

ಯಾರು, ಎಷ್ಟು ನಿದ್ದೆ ಮಾಡ್ಬೇಕು?
ವಯಸ್ಸು          ಗಂಟೆ
0-19            9-10
20-64          7-9
64 ಮೇಲ್ಪಟ್ಟು    7-8

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.