ಎಲ್ಲಿ ಜಾರಿತೋ ನಿದಿರೆ…


Team Udayavani, Jul 5, 2017, 3:45 AM IST

nidire.jpg

ಹೆಣ್ಣನ್ನು ತ್ಯಾಗಮಯಿ ಎಂದು ಅರ್ಥೈಸುವುದುಂಟು. ಅವಳ ಈ ತ್ಯಾಗದ ಅಧ್ಯಾಯದಲ್ಲಿ ನಿದ್ರೆಯದ್ದೇ ದೊಡ್ಡ ಅಧ್ಯಾಯ. ಅವಳಾÂವತ್ತೂ ಸೊಂಪಾಗಿ ನಿದ್ದೆ ಮಾಡಿದ ಉದಾಹರಣೆ ನೀವು ಹುಡುಕಿದರೂ ಸಿಗುವುದಿಲ್ಲ. ಹೆಣ್ಣು ಕಣªಣಿಯೇ ನಿದ್ದೆ ಹೋಗುವುದು ಬಹುಶಃ ತನ್ನ ಮದುವೆಯವರೆಗೆ ಮಾತ್ರವೇ ಇರಬಹುದೇನೋ. ನಿದ್ದೆಯ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಂಡೇ ಅವಳು ಬದುಕನ್ನು ಸವೆಸುತ್ತಾಳೆ…

ಅಬ್ಟಾ! ಕಣ್ಣೆವೆಗಳು ದಣಿಯುವಷ್ಟು ನಿದ್ದೆ ಮಾಡಬೇಕು. ಬಾಲ್ಯದಲ್ಲಿ ಮಲಗಿ ನಿದ್ರಿಸಿ ಕನಸಿನ ಲೋಕದಲ್ಲಿ ಪಯಣಿಸಿ ಬಂದ ಹಾಗೆ. ಚಂದಿರನೂರು, ಅಲ್ಲಿರುವ ಸಹಸ್ರಾರು ತಾರೆಯರು, ಮಿರಮಿರನೆ ಮಿಂಚುವ ಅಪ್ಸರೆಯರ ನಡುವೆ ನಾವು ಎನಿಸುವಷ್ಟರ ಮಟ್ಟಿಗಿನ ನಿದ್ದೆಯೊಂದು ಬಂದು ಆವರಿಸಿ ಬಿಡಬೇಕು. ಯಾವ ಗದ್ದಲ, ಗೊಂದಲ, ಆತಂಕಗಳ ಹಂಗಿರದೇ ನಿರ್ಭಿಡೆಯಿಂದ ನಿದ್ರಿಸುವುದು ಸಾಧ್ಯವಾಗಬೇಕು. ಬೆಳಗ್ಗೆ ಎದ್ದು ದಡಬಡಿಸಿ ಮನೆಗೆಲಸ ಮುಗಿಸಿಕೊಂಡು, ಮಕ್ಕಳ ಊಟದ ಬುತ್ತಿ ಕಟ್ಟಿ ವ್ಯಾನ್‌ ಬರುವಷ್ಟರಲ್ಲಿ ಅವರನ್ನು ರೆಡಿ ಮಾಡಿಸಿ ಅವರಿಗಿಂತಲೂ ಮೊದಲು ನಾನು ರೆಡಿಯಾಗಿ… ಉಫ್! ಬದುಕು ಬರೀ ನಡೆಯುತ್ತಿಲ್ಲ, ಓಡುತ್ತಿದೆ ಎಂಬ ಧಾವಂತದ ನಡುವೆಯೂ ಕನಸು ಬೀಳಲೂ ಬಿಡುವು ಕೊಡದಂತೆ ನಿದ್ರಿಸಬೇಕು! ಆಹಾ, ಹಾಗೆ ಬರುವ ನಿದ್ದೆಯ ಕಲ್ಪನೆಯೂ ಎಷ್ಟು ಸೊಗಸು!

ಹೆಣ್ಣು ಕಣªಣಿಯೇ ನಿದ್ದೆ ಹೋಗುವುದು ಬಹುಶಃ ತನ್ನ ಮದುವೆಯವರೆಗೆ ಮಾತ್ರವೇ ಇರಬಹುದೇನೋ. ಅದರಲ್ಲೂ ತೀರಾ ಕಟ್ಟುಕಟ್ಟಳೆಯ, ಸಾಂಪ್ರದಾಯಿಕ ಮನೆಗಳಾದರೆ ನಸುಕು ಹರಿಯುವ ಮೊದಲೇ ಎದ್ದೇಳಬೇಕು. ನೆನಪಿದೆ ನನಗೆ, ನಾವು ಚಿಕ್ಕವರಿದ್ದಾಗಲೆಲ್ಲ ಬೆಳಗ್ಗೆ ಆರೂವರೆಯ ನಂತರವೂ ಮಲಗಿದ್ದರೆ, ಅಪ್ಪ ಥೇಟ್‌ ಶಾಲೆಯಲ್ಲಿ ಹಾಜರಿ ಕರೆದಂತೆ ನಮ್ಮ ಹೆಸರು ಕರೆಯಲಾರಂಭಿಸುತ್ತಿದ್ದರು. ಅಪ್ಪಿತಪ್ಪಿ ಜ್ವರ ಬಂದಿದ್ದರೆ ಮಾತ್ರ ಹಗಲು ಮಲಗಲು ಅವಕಾಶ. ಹಾಗಾಗಿ “ದೇವರೇ, ಒಮ್ಮೆ ಜ್ವರ ಬರಬಾರದೇ?’ ಎಂದು ಹಂಬಲಿಸುತ್ತಿದ್ದುದೂ ಇತ್ತು. ಆದರೆ, ಆ ಜ್ವರ ಬಂದರಾದರೋ ನಿದ್ದೆಯ ಮಾತುಗಳಿರಲಿ, ಮಲಗಿರುವುದೇ ದೊಡ್ಡ ಹಿಂಸೆ. 

ಅದೇನೇ ಇರಲಿ, ಮದುವೆಯ ನಂತರದ ಹಲವು ಜವಾಬ್ದಾರಿಗಳ ನಡುವೆ ನಿದ್ದೆಗೆಡುವುದೂ ಒಂದು ಸಾಧನೆಯೇ. ವಿದ್ಯಾರ್ಥಿ ದೆಸೆಯಲ್ಲಿ ಪರೀಕ್ಷೆಗೆ ಓದಲೆಂದು ನಿದ್ದೆಗೆಟ್ಟಂತಲ್ಲ, ಅದಕ್ಕಾದರೂ ಒಂದು ಅರ್ಥವಿರುತ್ತದೆ. ಕಡೆಯಪಕ್ಷ ಪಟ್ಟ ಪ್ರಯತ್ನಕ್ಕೆ ಉತ್ತಮ ಅಂಕಗಳು ಬಂದಿರುತ್ತವೆ. ಆ ಸಂಭ್ರಮದಲ್ಲಿ ನಿದ್ದೆಗೆಡುವ ಕಷ್ಟ ಮರೆತು ಹೋಗುತ್ತದೆ. ಅಲ್ಲಿ ಸಾಧನೆಯ ಹಂಬಲವಿರುತ್ತದೆ. ಸಾಧಿಸಿದ ಖುಷಿಯಿರುತ್ತದೆ. ಆದರೆ, ಒಂದೊಮ್ಮೆ ವೈವಾಹಿಕ ಬದುಕಿಗೆ ಕಾಲಿಟ್ಟ ನಂತರ ನಮ್ಮ ನಿದ್ದೆಯ ಮೇಲಿನ ಅಧಿಕಾರ ಸಂಪೂರ್ಣವಾಗಿ ನಮ್ಮ ಕೈಜಾರಿ ಹೋಗಿರುತ್ತದೆ. ಬೆಳಗ್ಗೆ ಅಮ್ಮ “ಕಾಫಿ ರೆಡಿ’ ಎಂದು ಕೂಗಿದ ಮೇಲೆ ಎದ್ದೇಳುವ ಅಭ್ಯಾಸವಿದ್ದವರಾದರೂ ಮದುವೆಯ ನಂತರ ಎಲ್ಲರಿಗಿಂತ ಮೊದಲೇ ಏಳಲೇಬೇಕು. ಹಾಲು ಕಾಯಿಸಿ ಕಾಫಿ/ ಟೀ ತಯಾರಿಸುವ ಕೆಲಸ ಅವಳದೇ. 

ಗರ್ಭದಲ್ಲಿ ಶಿಶುವೊಂದು ರೂಪು ತಾಳಿದ ಮೇಲೆ ನಿದ್ದೆಯ ಕಥೆ ದೇವರಿಗೇ ಪ್ರೀತಿ. ಹಗಲೆಲ್ಲ ಕೆಲಸ ಮಾಡುವಾಗಲೂ ತೂಗಿ ಬರುವ ನಿದ್ದೆ ರಾತ್ರಿಯಾದಂತೆ ಕಣ್ಣೆವೆಗಳೊಡನೆ ಠೂ ಬಿಟ್ಟವರಂತೆ ದೂರವಾಗುತ್ತದೆ. ಆ ಸಂದರ್ಭದಲ್ಲಿ ಮಗುವಿನಂತೆಯೇ ರಚ್ಚೆ ಹಿಡಿಯುವ ಮನಸ್ಸು, ನಮಗೇನಾಗುತ್ತಿದೆ ಎಂಬುದು ಅರ್ಥವಾಗದ ಭಾವನೆಗಳ ಹೊಯ್ದಾಟ. ಎಲ್ಲರ ಮೇಲೂ ಸಿಡಿಮಿಡಿಗುಟ್ಟಿ ರೇàಗುವಂತೆ ಬದಲಾಗುವ ಭಾವ… ಇವೆಲ್ಲದರ ಜೊತೆಗೆ ಅಮ್ಮನ ಉದರ ತನ್ನ ಬಯಲೆಂಬಂತೆಯೇ ಫ‌ುಟ್‌ಬಾಲ್‌ ಆಡುವ ಶಿಶು! ಅಬ್ಟಾ, ಹಾಗೂ ಹೀಗೂ ನಿದ್ದೆ ಹತ್ತಿತೋ ಮಧ್ಯರಾತ್ರಿಯಲ್ಲಿ ಧಡಕ್ಕನೆ ಎಚ್ಚರವಾಗಿರುತ್ತದೆ, ಮೀನಖಂಡದಲ್ಲಿ ಹೇಳಲಾಗದ ನೋವು, ಸೆಳೆತ. ಕಾಲು ಮಡಚಲೂ ಆಗದು, ಬಿಡಿಸಲೂ ಆಗದು. ಇದರ ಜೊತೆಗೆ ವೈದ್ಯರು ಬೇರೆ ನಿರ್ಬಂಧ ವಿಧಿಸಿರುತ್ತಾರೆ, ಸದಾ ಎಡಗಡೆಗೇ ತಿರುಗಿಕೊಂಡು ಮಲಗಿ ಎಂಬುದಾಗಿ. ನಮಗಿಷ್ಟ ಬಂದಂತೆ ಬೋರಲಾಗಿಯೋ ಮಕಾಡೆಯೋ ಮಲಗಿ ನಿದ್ದೆಯ ಮಜಾ ಅನುಭವಿಸುತ್ತಿದ್ದವರಿಗೀಗ ಮಲಗುವ ಭಂಗಿಯಲ್ಲಿಯೂ ಬದಲಾವಣೆ.

ಮಗು ಒಡಲಿಂದ ಮಡಿಲಿಗೆ ಬಂದ ಮೇಲೆ ಬದುಕು ಇನ್ನೂ ಬದಲಾಗುತ್ತದೆ. ಇನ್ನು ಮೇಲಿಂದ ನಾವೇನೇ ಪಣ ತೊಟ್ಟರೂ ರಾತ್ರಿ ಮಲಗಿದವರು ಬೆಳಗ್ಗೆಯೇ ಏಳುವುದು ಎಂಬಂತಿಲ್ಲ. ಮನೆಗೆಲಸ ಮುಗಿಸಿ ಇನ್ನೇನು ಲೈಟ್‌ ಆಫ್ ಮಾಡಿದೆವು ಎಂಬಷ್ಟರಲ್ಲಿ ಜೋಲಿಯೊಳಗಿನ ಮಗು ಕುಸುಕುಸು ಎನ್ನಲಾರಂಭಿಸುತ್ತದೆ. ಅದಕ್ಕೆ ಪೂರ್ತಿ ಎಚ್ಚರ! ಅಕಸ್ಮಾತ್‌ ಮಗು ನಿದ್ದೆ ಮಾಡಿದರೂ ನಾವು ನಮ್ಮ ಪಾಡಿಗೆ ಗೊರಕೆ ಹೊಡೆಯಲಾಗುವುದಿಲ್ಲ. ಕಡೆಯಪಕ್ಷ ನಾಲ್ಕು ಬಾರಿಯಾದರೂ ಎದ್ದೇಳುವುದು ಅನಿವಾರ್ಯ. ಅಲಾರಾಂ ಹಾಡಲಾರಂಭಿಸಿದರೆ, ನಿದ್ದೆಯ ಮೂಡ್‌ನ‌ಲ್ಲಿ ಅದರ ತಲೆಯ ಮೇಲೊಂದು ಮೊಟಕಿ ಹಾಗೆಯೇ ಮುಸುಕೆಳೆದೇವು, ಆದರೆ ಕಂದಮ್ಮನನ್ನು ಕಾಳಜಿ ಮಾಡಲೇಬೇಕಲ್ಲ! ಅದರ ಸಲುವಾಗಿ ಬದಲಾಗಲೇಬೇಕು. ಮೊದಲ ಮಗುವನ್ನಾದರೂ ಹೇಗಾದರೂ ಸಂಭಾಳಿಸಿಯೇವು, ಆದರೆ ಎರಡನೆಯ ಮಗುವಾಗುವಾಗ ಎಲ್ಲವನ್ನೂ, ಎಲ್ಲರನ್ನೂ ನಿಭಾಯಿಸುವ ಹೊಣೆಯೂ ನಮ್ಮದೇ ಆಗಿರುತ್ತದೆ. ಆ ಅವಧಿಯಂತೂ ಬಹಳ ಕಠಿಣ. ಮನೆಯಲ್ಲಿ ಹಿರಿಯ ಜೀವವೊಂದು ಇದ್ದರೆ ಪರವಾಗಿಲ್ಲ, ಸ್ವಲ್ಪವಾದರೂ ನೆಮ್ಮದಿ ದೊರಕೀತು, ಇಲ್ಲದೇ ಇದ್ದರೆ ಅವಳ ಕಥೆಯೇ ಬದಲಾಗಿರುತ್ತದೆ.

ದುಡಿಯುವ ಮಹಿಳೆಯ ಉದಾಹರಣೆ ತೆಗೆದುಕೊಳ್ಳಿ. ಹಗಲಿಡೀ ಹೊರಗಿನ ದುಡಿಮೆ. ಬಿಡುವಿನ ವೇಳೆಯೆಂಬುದೇ ಕಡಿಮೆ. ಬೆಳಗ್ಗೆ ಎದ್ದಲ್ಲಿಂದ ರಾತ್ರಿ ಹನ್ನೊಂದರವರೆಗೂ ಅವಳ ಕಾಲಿನ ಚಕ್ರ ಸುತ್ತುತ್ತಲೇ ಇರಬೇಕು. ಮನೆಯಲ್ಲಿ ಗಂಡಸರು ಹಗಲು ವಿಶ್ರಾಂತಿ ಪಡೆದಂತೆ ಹೆಣ್ಣಿಗೆ ವಿಶ್ರಾಂತಿಯ ಅವಕಾಶವಿರುವುದಿಲ್ಲ. ಆಫೀಸಿಂದ ಬಂದ ತಕ್ಷಣ ಸುಸ್ತಾಗಿದೆಯೆಂದು ದಿನಂಪ್ರತಿ ಹೆಣ್ಣು ಮಲಗಿದರೆ ಅವಳ ಕುರಿತ ಅಭಿಪ್ರಾಯವೇ ಬದಲಾಗುತ್ತದೆ. ಎಷ್ಟೇ ದಣಿದಿರಲಿ, ಶರೀರ ಮೊಂಡು ಮಾಡುತ್ತಿರಲಿ, ಅವಳದೇ ಆದ ಜವಾಬ್ದಾರಿಗಳಿಗೆ ಅವಳು ತಲೆಕೊಡಲೇಬೇಕು. ಅವಳು ಯಂತ್ರವಾಗಿ ಬಿಡುತ್ತಾಳೆ.

ಮಕ್ಕಳ ವಿದ್ಯಾಭ್ಯಾಸದ ಹಂತದಲ್ಲೂ ಅವರನ್ನು ಬೆಳಗ್ಗೆ ಎಬ್ಬಿಸಬೇಕೆಂದರೆ, ಅಮ್ಮನೂ ಎದ್ದೇಳಬೇಕು. ಮಕ್ಕಳು ಓದುತ್ತಿದ್ದಾರೆಂಬುದನ್ನು ಖಾತ್ರಿ ಪಡಿಸಿಕೊಳ್ಳುವುದು ಅವಳದೇ ಕರ್ತವ್ಯ. ಏನೇ ವ್ಯತ್ಯಾಸವಾದರೂ ಮೊದಲು ಹಂಗಿಸಲ್ಪಡುವವಳೂ ಅವಳೇ. ಬರಬರುತ್ತಾ ನಿದ್ದೆಯೂ ಅವಳೊಂದಿಗೆ ಮುನಿಸಿಕೊಂಡು ದೂರವಾಗಿರುತ್ತದೆ. ಅವಳ ಯಾವ ತ್ಯಾಗಗಳಿಗೂ ಬೆಲೆಯಿಲ್ಲವೆಂಬಂತೆ ಬದುಕು ಅವಳನ್ನು ಕಿಚಾಯಿಸಲಾರಂಭಿಸಿದರೆ, ದಿನದಿನವೂ ಹೈರಾಣಾಗುವ ಸರದಿ ಅವಳದೇ ಆಗಿರುತ್ತದೆ. ತನ್ನ ಮೂಲಭೂತ ಅಗತ್ಯಗಳಲ್ಲೊಂದಾದ ನಿದ್ದೆಯ ವಿಚಾರದಲ್ಲೇ ಹೊಂದಾಣಿಕೆ ಮಾಡಿಕೊಂಡು ಬದುಕು ಸವೆಸಿದರೂ “ಕುಟುಂಬಕ್ಕಾಗಿ, ಮನೆಗಾಗಿ ನೀನೇನು ಮಾಡಿದೆ?’ ಎಂಬ ಪ್ರಶ್ನೆ ಅವಳನ್ನು ಸದಾ ಬಾಧಿಸುತ್ತದೆ. ಹೆಂಡತಿ ಸದಾ ತಮಾಷೆಯ ವಸ್ತುವೆಂಬಂತೆ, ಬದುಕಿನ ಅತಿದೊಡ್ಡ ಸಮಸ್ಯೆಯೆಂಬಂತೆ ಪ್ರತಿಪಾದಿಸಿ ಹಾಸ್ಯ ಸಂದೇಶಗಳನ್ನು ನಿರಂತರವಾಗಿ ರವಾನೆ ಮಾಡುವವರಿಗೆ ತಾವು ಮದುವೆಯಾಗಿರುವ ಕಾರಣಕ್ಕೇ ಅವಳ ಬದುಕಲ್ಲಾದ ಬದಲಾವಣೆಗಳು ಕೊಂಚವೂ ಕಾಣಲಾರದೇ?

– ಆರತಿ ಪಟ್ರಮೆ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.