“ಸೋರಿಯಾಸಿಸ್‌’ ಬಿ ಸೀರಿಯಸ್‌


Team Udayavani, Jul 31, 2019, 5:00 AM IST

3

ಸೋರಿಯಾಸಿಸ್‌ ಎಂಬುದು ಸಾಮಾನ್ಯವಾದ ಹಾಗೂ ದೀರ್ಘ‌ ಕಾಲ ಕಾಡುವ ಚರ್ಮದ ಸಮಸ್ಯೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ಜಗತ್ತಿನಲ್ಲಿ ಶೇ.10 ರಷ್ಟು ಜನ ಇದರಿಂದ ಬಳಲುತ್ತಿದ್ದಾರೆ. ಸೋರಿಯಾಸಿಸ್‌ಗೆ ಶಾಶ್ವತ ಪರಿಹಾರ ಕಂಡು ಹಿಡಿದಿಲ್ಲವಾದರೂ, ಸಮಸ್ಯೆಯನ್ನು ತಕ್ಷಣ ಗುರುತಿಸಿದರೆ, ಅದನ್ನು ಹತೋಟಿಯಲ್ಲಿಡಬಹುದು.

ಪ್ರಮುಖ ಕಾರಣಗಳು-
– ಸ್ನಾನದ ಸಾಬೂನು, ಚರ್ಮಕ್ಕೆ ಹಚ್ಚುವ ಮಾಯಿಶ್ಚರೈಸರ್‌ಗಳನ್ನು ಆಗಾಗ ಬದಲಾಯಿಸುವುದರಿಂದ ಚರ್ಮದ ಸಮಸ್ಯೆ ಕಾಡಬಹುದು.
– ಅತಿಯಾದ ಧೂಳು, ಮಾಲಿನ್ಯ ಪ್ರದೇಶಗಳಲ್ಲಿ ಓಡಾಡುವುದರಿಂದ.
– ಅನಿಮಿಯತ, ಅಕಾಲಿಕ ಹಾಗೂ ವಿರುದ್ಧ ಆಹಾರ ಸೇವನಾ ಕ್ರಮದಿಂದ.
– ಅನುವಂಶೀಯತೆಯಿಂದಲೂ ಈ ರೋಗ ಬರುವ ಸಾಧ್ಯತೆಯಿದೆ.

ಲಕ್ಷಣಗಳು:
-ಸೋರಿಯಾಸಿಸ್‌ ಸಾಂಕ್ರಾಮಿಕ ರೋಗವಲ್ಲದಿದ್ದರೂ, ಅದು ಯಾರಿಗೆ ಇದೆಯೋ, ಅವರ ದೇಹದಲ್ಲಿ ಅದು ಹರಡುತ್ತಾ ಹೋಗುತ್ತದೆ.
-ಇದು ದೇಹದ ಯಾವ ಭಾಗದಲ್ಲೂ ಕಾಣಿಸಿಕೊಳ್ಳಬಹುದು. ಸಾಮಾನ್ಯವಾಗಿ ತಲೆ, ಕಾಲುಗಳು, ಬೆನ್ನು, ಹೊಟ್ಟೆ, ಮೊಣಕೈ, ಕೈ ಬೆರಳುಗಳ ಸಂದುಗಳಲ್ಲಿ ಕಂಡುಬರುತ್ತದೆ.
– ಸಣ್ಣ ಗಾಯ ಅಥವಾ ಬಿರುಕು ಬಿಟ್ಟಂತೆ ಪ್ರಾರಂಭವಾಗಿ ಕ್ರಮೇಣ ಇಡೀ ದೇಹದ ಮೇಲೆ ಹಬ್ಬುತ್ತದೆ. ಜೊತೆಗೆ ತುರಿಕೆಯೂ ಇರುತ್ತದೆ.
– ಕೆಲವೊಮ್ಮೆ ಅದರಿಂದ ಹುಡಿ ಉದುರಬಹುದು. ಕಡೆಗಣಿಸಿದರೆ, ಅದು ದೇಹದಲೆಲ್ಲಾ ಹಬ್ಬಬಹುದು.
ಆದ್ದರಿಂದ ಈ ಲಕ್ಷಣಗಳು ಕಂಡುಬಂದ ತಕ್ಷಣವೇ ಚಿಕಿತ್ಸೆ ಪಡೆದುಕೊಳ್ಳಿ. ಚಿಕಿತ್ಸೆಯ ಜೊತೆಗೆ, ಆಹಾರದಲ್ಲಿ ಪಥ್ಯ ಮಾಡಬೇಕು.

ಯಾವುದನ್ನು ತಿನ್ನಬಾರದು?
– ಅತಿಯಾದ ಮಾಂಸಾಹಾರ ಸೇವನೆ, ಎಣ್ಣೆಯಲ್ಲಿ ಕರಿದ ಪದಾರ್ಥಗಳು.
– ಅತಿಯಾದ ಮಸಾಲೆ ಸೇವನೆ, ಬೇಕರಿ ತಿನಿಸುಗಳು, ಉಪ್ಪು.
-ಬದನೆ, ಆಲೂಗಡ್ಡೆ, ಮೂಲಂಗಿಯಂಥ ನಂಜಿನ ತರಕಾರಿಗಳು.
– ರಾತ್ರಿ ಸಮಯದಲ್ಲಿ ಕಫ‌ ವೃದ್ಧಿಸುವಂಥ ಮೊಸರು, ಬೆಣ್ಣೆ, ಉದ್ದು, ತಂಪಾದ ಪಾನೀಯಗಳು.

ಆಹಾರ ಕ್ರಮ ಹೀಗಿರಲಿ
– ಹೊತ್ತೂತ್ತಿಗೆ ಸರಿಯಾಗಿ, ಹಿತಮಿತವಾಗಿ ಆಹಾರ ಸೇವಿಸಿ.
– ಅತಿಯಾಗಿ ತಿನ್ನುವುದರಿಂದ ಜೀರ್ಣಕ್ರಿಯೆಗೆ ತೊಂದರೆಯಾಗಿ ಆಹಾರ ವಿಷವಸ್ತುವಾಗಿ ಪರಿಣಮಿಸುತ್ತದೆ.
– ವಾರದಲ್ಲಿ ಒಂದು ಬಾರಿಯಾದರೂ ಉಪವಾಸ ಮಾಡಿದರೆ ಒಳ್ಳೆಯದು.
– ತಾಜಾ ಹಣ್ಣು-ತರಕಾರಿಗಳು, ಒಂದೆಲಗ, ಸಾಂಬ್ರಾಣಿ ಸೊಪ್ಪು ಮುಂತಾದ ಸೊಪ್ಪಿನ ಸೇವನೆಯಿಂದ ದೇಹದ ವಿಷಕಾರಿ ಅಂಶಗಳು ಹೊರ ಹೋಗುತ್ತವೆ.
– ಆಹಾರದಲ್ಲಿ ತೆಂಗಿನೆಣ್ಣೆಯ ಬಳಕೆ ಉತ್ತಮ.
– ಗೋಧಿ, ಹೆಸರುಕಾಳು ಮುಂತಾದ ಕಾಳುಗಳು ಹಾಗೂ ಬೀಜಗಳ ಸೇವನೆ ಒಳ್ಳೆಯದು.
– ಅರಿಶಿನ, ಬೆಳ್ಳುಳ್ಳಿ, ಜೇನುತುಪ್ಪ ಚರ್ಮವ್ಯಾಧಿಗಳಿಗೆ ಪರಿಹಾರ ನೀಡುವುದು.

ಜೀವನಶೈಲಿ ಹೀಗಿರಲಿ
– ಸ್ನಾನದ ನೀರಿಗೆ ಬೇವಿನ ಸೊಪ್ಪನ್ನು ಹಾಕಿ, ಬೇವಿನೆಣ್ಣೆ ಹಚ್ಚಿ ಸ್ನಾನ ಮಾಡಬಹುದು.
– ಬಿಸಿಲಿನಲ್ಲಿ ಹೆಚ್ಚಾಗಿ ಅಡ್ಡಾಡಬೇಡಿ.
– ದಿನವೂ ಮೈಗೆ ತೈಲ ಅಥವಾ ಚಂದನವನ್ನು ಲೇಪಿಸುವುದರಿಂದ ಚರ್ಮ ಆರೋಗ್ಯವಾಗಿರುತ್ತದೆ.
-ವಾರಕ್ಕೊಮ್ಮೆ ಅಭ್ಯಂಗ ಸ್ನಾನ ಹಾಗೂ ಹಬೆ ಸ್ನಾನ ಮಾಡಿದರೆ, ಚರ್ಮದ ಮೂಲಕ ವಿಷ ವಸ್ತುಗಳು ದೇಹದಿಂದ ಹೊರ ಹೋಗಲು ಸಾಧ್ಯ.

-ಡಾ. ಶ್ರೀಲತಾ ಪದ್ಯಾಣ, ಪ್ರಕೃತಿ ಚಿಕಿತ್ಸಾ ತಜ್ಞೆ

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.