ದಿಢೀರ್‌ ಮಾಡಬಹುದಾದ ಸ್ಪೆಷಲ್‌ ಸವಿರುಚಿ


Team Udayavani, Mar 18, 2020, 5:00 AM IST

cooking

ಇದು ಬೇಸಿಗೆ ಕಾಲ. ಇನ್ನೇನು ಮಕ್ಕಳಿಗೆ ರಜೆ ಶುರುವಾಗುತ್ತದೆ. ದಿನವಿಡೀ ಮನೆಯಲ್ಲೇ ಇರುವ ಮಕ್ಕಳು, “ಏನಾದ್ರೂ ತಿನ್ನೋಕೆ ಕೊಡು’ ಅಂತ ಕೇಳುತ್ತಾರೆ. ಮನೆಗೆ ಹೆಚ್ಚಿನ ಸಂಖ್ಯೆಯಲ್ಲಿ ನೆಂಟರಿಷ್ಟರು ಬರುವ ಕಾಲವೂ ಇದೇ. ಅತಿಥಿಗಳು ಬಂದಾಗ ಏನಾದ್ರೂ ಸ್ಪೆಷಲ್‌ ತಿನಿಸು ಮಾಡುವುದು ಪದ್ಧತಿ. ಇಂಥ ಸಂದರ್ಭಗಳಲ್ಲಿ ಮಾಡಬಹುದಾದ ಅಡುಗೆಗಳು ಇಲ್ಲಿವೆ.

1. ಬೆಂಡೆಕಾಯಿ ಪಕೋಡ
ಬೇಕಾಗುವ ಸಾಮಗ್ರಿ: ಸಣ್ಣಗೆ ಹೆಚ್ಚಿದ ಬೆಂಡೆಕಾಯಿ, ಕರಿಯಲು ಎಣ್ಣೆ, ಕಡಲೆ ಹಿಟ್ಟು-1 ಕಪ್‌, ಚಿಟಿಕೆ ಅಡಿಗೆ ಸೋಡಾ, ಅಚ್ಚ ಖಾರದ ಪುಡಿ- 2 ಚಮಚ, ಸಾಜೀರಾ, ಉಪ್ಪು, ಕರಿಬೇವು.

ಮಾಡುವ ವಿಧಾನ: ಒಂದು ಪಾತ್ರೆಯಲ್ಲಿ, ಕಡಲೆ ಹಿಟ್ಟು, ಖಾರದ ಪುಡಿ, ಸಾಜೀರಾ, ಉಪ್ಪು, ಅಡುಗೆ ಸೋಡಾ, ಸ್ವಲ್ಪ ಬಿಸಿ ಮಾಡಿದ ಅಡುಗೆ ಎಣ್ಣೆ ಹಾಗೂ ಸಣ್ಣಗೆ ಉದ್ದುದ್ದ ಹೆಚ್ಚಿಟ್ಟ ಬೆಂಡೆಕಾಯಿಯನ್ನು ಹಾಕಿ ಹದವಾಗಿ ಕಲೆಸಿಕೊಳ್ಳಿ. ನಂತರ, ಕಾದ ಎಣ್ಣೆಯಲ್ಲಿ ಕಂದು ಬಣ್ಣ ಬರುವವರೆಗೆ ಕರಿಯಿರಿ. ಬಿಸಿ ಬಿಸಿ ಇರುವಾಗಲೇ ತಿಂದರೆ ಬಹಳ ರುಚಿಯಾಗಿರುತ್ತದೆ.

2. ಹೀರೆಕಾಯಿ ಬಜ್ಜಿ
ಬೇಕಾಗುವ ಸಾಮಗ್ರಿ: ಸಣ್ಣಗೆ ವೃತ್ತಾಕಾರದಲ್ಲಿ ಹೆಚ್ಚಿಕೊಂಡ ಹೀರೆಕಾಯಿ- 1 ಬಟ್ಟಲು, ಕಡಲೆಹಿಟ್ಟು- ಒಂದೂವರೆ ಬಟ್ಟಲು, ಕರಿಯಲು ಎಣ್ಣೆ, 1 ಚವåಚ ಜೀರಿಗೆ, 2 ಚಮಚ ಅಚ್ಚ ಖಾರದ ಪುಡಿ, ಉಪ್ಪು, ಒಂದು ಲೋಟ ನೀರು, ಚಿಟಿಕೆ ಅಡುಗೆ ಸೋಡ.

ಮಾಡುವ ವಿಧಾನ: ಕಡಲೆ ಹಿಟ್ಟಿಗೆ, ಖಾರದ ಪುಡಿ, ಅಡುಗೆ ಸೋಡಾ, ಉಪ್ಪು, ಜೀರಿಗೆ ಪುಡಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಂಡು, ನಂತರ ನೀರು ಹಾಕಿ ದೋಸೆ ಹಿಟ್ಟಿನ ಹಂತಕ್ಕೆ ಕಲೆಸಿಕೊಳ್ಳಿ. ಆ ಹಿಟ್ಟಿನಲ್ಲಿ ಹೀರೇಕಾಯಿಯನ್ನು ಹಾಕಿ ಹತ್ತು ನಿಮಿಷ ನೆನೆಯಲು ಬಿಡಿ. ನಂತರ, ಎಣ್ಣೆಯಲ್ಲಿ ಹೊಂಬಣ್ಣ ಬರುವವರೆಗೆ ಕರಿಯಿರಿ.

3. ಅನ್ನದ ಗಂಜಿ ಹಲ್ವ
ಬೇಕಾಗುವ ಸಾಮಗ್ರಿ: 2 ಬಟ್ಟಲು ಅನ್ನದ ಗಂಜಿ, ಒಂದು ಬಟ್ಟಲು ಅಕ್ಕಿ ಹಿಟ್ಟು, ಅರ್ಧ ಚಮಚ ಏಲಕ್ಕಿ ಪುಡಿ, ಒಂದು ಬಟ್ಟಲು ಸಕ್ಕರೆ, 2-4 ಚಮಚ ತುಪ್ಪ.

ಮಾಡುವ ವಿಧಾನ: ಗಂಜಿಗೆ ಅಕ್ಕಿ ಹಿಟ್ಟು ಬೆರೆಸಿ ಚೆನ್ನಾಗಿ ಗಂಟಿಲ್ಲದಂತೆ ಮಿಶ್ರಣ ಮಾಡಿ, ಬಾಣಲೆಗೆ ಹಾಕಿ ತಳ ಬಿಡದಂತೆ ಕುದಿಸಬೇಕು. ಮಿಶ್ರಣ ಗಟ್ಟಿಯಾದ ನಂತರ ಸಕ್ಕರೆ ಹಾಕಿ ಕರಗುವವರೆಗೂ ಕೈಯಾಡಿಸುತ್ತಿರಿ. ಸಕ್ಕರೆ ಕರಗಿದ ಮೇಲೆ ತುಪ್ಪ ಹಾಕಿ ತಳಬಿಡುವವರೆಗೂ ಕುದಿಸಿ, ಏಲಕ್ಕಿ ಪುಡಿ ಹಾಕಿ ಒಲೆಯಿಂದ ಕೆಳಗಿಳಿಸಿ. ಒಂದು ಪ್ಲೇಟ್‌ಗೆ ತುಪ್ಪ ಸವರಿ ಮಿಶ್ರಣವನ್ನು ಅದಕ್ಕೆ ಹಾಕಿ, ಸ್ವಲ್ಪ ತಣ್ಣಗಾದ ಮೇಲೆ ಬೇಕಾದ ಆಕಾರದಲ್ಲಿ ಕತ್ತರಿಸಿ. ಒಂದೆರಡು ಗಂಟೆ ಹೀಗೇ ಬಿಟ್ಟರೆ, ಹಲ್ವ ತಿನ್ನಲು ಸಿದ್ಧ.

4. ಸ್ವೀಟ್‌ ಬ್ರೆಡ್‌ ರೋಸ್ಟ್‌
ಬೇಕಾಗುವ ಸಾಮಗ್ರಿ: ಕತ್ತರಿಸಿಟ್ಟ ಬ್ರೆಡ್‌ ತುಂಡು-6, ಅರ್ಧ ಬಟ್ಟಲು ಸಕ್ಕರೆ, 2 ಚಮಚ ತುಪ್ಪ, ಕರಿಯಲು ಎಣ್ಣೆ, ಅರ್ಧ ಚಮಚ ಏಲಕ್ಕಿ ಪುಡಿ, ಅರ್ಧ ಬಟ್ಟಲು ನೀರು.

ಮಾಡುವ ವಿಧಾನ: ಬ್ರೆಡ್‌ ಅಂಚನ್ನು ತೆಗೆದು ತ್ರಿಭುಜಾಕೃತಿಯಲ್ಲಿ ಕತ್ತರಿಸಿಟ್ಟುಕೊಳ್ಳಿ. ನಂತರ, ಬ್ರೆಡ್‌ ತುಂಡುಗಳನ್ನು ಕಂದು ಬಣ್ಣ ಬರುವವರೆಗೆ ಎಣ್ಣೆಯಲ್ಲಿ ಕರಿಯಿರಿ. ಒಂದು ಪಾತ್ರೆಗೆ ಸಕ್ಕರೆ, ನೀರು ಹಾಕಿ ತೆಳು ಪಾಕ ತಯಾರಿಸಿ. ಆ ಪಾಕಕ್ಕೆ ಏಲಕ್ಕಿ ಪುಡಿ ಹಾಕಿ, ಒಲೆಯಿಂದ ಕೆಳಗಿಳಿಸಿ ಬ್ರೆಡ್‌ ತುಂಡುಗಳನ್ನು 15-20 ನಿಮಿಷ ಅದರಲ್ಲಿ ಅದ್ದಿ ಇಡಿ.

– ಭಾಗ್ಯ ಆರ್‌.ಗುರುಕುಮಾರ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.