ಪಾಲಿಗೆ ಬಂದದ್ದು ಪಂಚಾಮೃತ


Team Udayavani, Feb 19, 2020, 5:15 AM IST

skin-10

ಆಗೆಲ್ಲಾ ಈಗಿನಂತೆ ನಿಶ್ಚಿತಾರ್ಥಕ್ಕೆ ನೂರಾರು ಜನರು ಬರುತ್ತಿರಲಿಲ್ಲ. ಮುಖ್ಯವಾದ ಏಳೆಂಟು ಜನರು ಬಂದು, ಹುಡುಗಿಗೆ ಉಂಗುರ ತೊಡಿಸಿ, ಹರಿವಾಣ ವಿನಿಮಯ ಮಾಡುತ್ತಿದ್ದರು. ಆ ದಿನವೂ ವರ ಮಹಾಶಯ ಬಂದಿರಲಿಲ್ಲ. ನಂತರ, ಹುಡುಗನ ಒಂದು ಫೋಟೋ ತರಿಸಿಕೊಟ್ಟರು. ಫೋಟೋ ನೋಡುತ್ತಿದ್ದಂತೆ ಒಮ್ಮೆಲೆ ದಿಗ್ಭ್ರಮೆಯಾಯಿತು…

ಎಂಬತ್ತರ ದಶಕದಲ್ಲಿ ನಡೆದ ಘಟನೆ. ಒಂದು ವರನೊಂದಿಗೆ ನನ್ನ ಜಾತಕದ ಗ್ರಹಗತಿಗಳೆಲ್ಲವೂ ತಾಳೆಯಾಗಿ, ಫೋಟೋ ಕೂಡ ಒಪ್ಪಿಗೆಯಾಗಿ, ಹುಡುಗಿಯನ್ನು ನೋಡಲು ಬರುತ್ತೇವೆಂದೂ, ಬೆಂಗಳೂರಿಗೇ ಬಂದು ತೋರಿಸಿದರೆ ಉತ್ತಮವೆಂದೂ ಪತ್ರ ಬಂದಿತ್ತು. ಹಾಗಾಗಿ, ಬೆಂಗಳೂರಿನಲ್ಲಿದ್ದ ನಮ್ಮ ನೆಂಟರ ಮನೆಗೆ ನನ್ನನ್ನು ಕರೆದುಕೊಂಡು ಹೋದರು. ಆಗಿನ ಕಾಲದಲ್ಲಿ ಹುಡುಗನ ಫೋಟೋ ಮತ್ತು ಜಾತಕವನ್ನು ಹುಡುಗಿಯ ಮನೆಯವರಿಗೆ ನೀಡುತ್ತಿರಲಿಲ್ಲ. ಹಾಗೇನಾದರೂ ಕೊಟ್ಟರೆ ಅವರ ಘನತೆಗೆ ಕುಂದು ಎಂದು ಭಾವಿಸಿದ್ದರು.

ಅಂದಿನ ದಿನಗಳಲ್ಲಿ ವಧೂಪರೀಕ್ಷೆ ಎಂದರೆ, ವರನ ಎದುರು ಹುಡುಗಿ ಪ್ರದರ್ಶನದ ಬೊಂಬೆಯಂತೆ ತಲೆಬಗ್ಗಿಸಿ ಕುಳಿತಳೆಂದರೆ ಮುಗಿಯಿತು. ಎಲ್ಲರೂ ಹೋದ ನಂತರವೇ ತಲೆಯೆತ್ತುತ್ತಿದ್ದುದು. ಮಾತನಾಡಿಸುವುದು ಹೋಗಲಿ, ಹುಡುಗನನ್ನು ಸರಿಯಾಗಿ ನೋಡುವ ಧೈರ್ಯವೂ ಇರಲಿಲ್ಲ. ಪರಿಚಯ ಮಾಡಿಕೊಡುವುದಂತೂ ದೂರದ ಮಾತು ಬಿಡಿ. ಕಾಫಿ, ತಿಂಡಿ ಸಮಾರಾಧನೆಯ ನಂತರ, ಮತ್ತೆ ತಿಳಿಸುತ್ತೇವೆ ಎಂದು ಹೇಳಿ ಹೊರಟುಬಿಟ್ಟರು. ಹುಡುಗ ಒಪ್ಪಿದರೆ ಮುಗಿಯಿತು.ಬಾಯುಪಚಾರಕ್ಕೆ ಹುಡುಗಿಯ ಒಪ್ಪಿಗೆಯನ್ನು ಕೇಳುತ್ತಿದ್ದರು. ಇಬ್ಬರು ಯುವಕರೇನಾದರೂ ಬಂದಿದ್ದರೆ, ಅವರಲ್ಲಿ ಮದುವೆಯಾಗುವ ಹುಡುಗ ಯಾರು ಎಂದು ಕೇಳುವ ಧೈರ್ಯವೂ ನಮಗಿರಲಿಲ್ಲ.

ನಾನು ಹೋಗಿ ತಂಗಿದ್ದ ಮನೆಯ ಅಡುಗೆ ಮನೆಯ ಕಿಟಕಿಯ ಬಳಿ ನಿಂತರೆ, ಅವರ ಮನೆಗೆ ಬಂದು ಹೋಗುವವರು ಕಾಣುತ್ತಿದ್ದರು. ಅವರಿಗೆ ನಾವು ಕಾಣುತ್ತಿರಲಿಲ್ಲ. ಹಾಗೆ ನಿಂತು ನೋಡುತ್ತಿ¨ªಾಗ, ಇಬ್ಬರು ಯುವಕರು, ಒಬ್ಬ ಗಂಡಸು, ಒಬ್ಬರು ಮಹಿಳೆ ಬಂದರು. ಇಬ್ಬರು ಅಕ್ಕ-ಭಾವ, ಮತ್ತೂಬ್ಬರು ಹುಡುಗನ ದೊಡ್ಡಪ್ಪನ ಮಗ ಅಂತ ಆಮೇಲೆ ಗೊತ್ತಾಯಿತು. ಆಗ ಹುಡುಗನನ್ನು ನೋಡಿದ್ದಷ್ಟೇ.

ಅವರಿಂದ ಒಪ್ಪಿಗೆ ಬಂದ ನಂತರ ನಿಶ್ಚಯ ತಾಂಬೂಲಕ್ಕೆ ಅಣಿಯಾಯಿತು. ಆಗೆಲ್ಲಾ ಈಗಿನಂತೆ ನೂರಾರು ಜನರು ಬರುತ್ತಿರಲಿಲ್ಲ. ಮುಖ್ಯವಾದ ಏಳೆಂಟು ಜನರು ಬಂದು, ಹುಡುಗಿಗೆ ಉಂಗುರ ತೊಡಿಸಿ, ಹರಿವಾಣ ವಿನಿಮಯ ಮಾಡುತ್ತಿದ್ದರು. ಆ ದಿನವೂ ವರ ಮಹಾಶಯ ಬಂದಿರಲಿಲ್ಲ. ನಂತರ ಯಾರಿಗೆ ಏನನ್ನಿಸಿತೋ ಗೊತ್ತಿಲ್ಲ, ಹುಡುಗನ ಒಂದು ಫೋಟೋ ತರಿಸಿಕೊಟ್ಟರು. ಫೋಟೋ ನೋಡುತ್ತಿದ್ದಂತೆ ಒಮ್ಮೆಲೆ ದಿಗ್ಭ್ರಮೆಯಾಯಿತು. ಯಾಟೆಂದರೆ, ನಾನು ವರ ಅಂದುಕೊಂಡಿದ್ದ ಹುಡುಗ ಅವರ ದೊಡ್ಡಪ್ಪನ ಮಗ ಅಂತೆ. ಆದರೆ ಅವರು ಹುಡುಗನ ಬಗ್ಗೆ ಕೊಟ್ಟಿದ್ದ ಮಾಹಿತಿಯೆಲ್ಲವೂ ಸರಿಯಾಗಿದ್ದು, ಇವರು ಕೂಡ ನೋಡಲು ಚೆನ್ನಾಗಿದ್ದುದರಿಂದ ಏನೂ ಸಮಸ್ಯೆಯಾಗದೆ ಮದುವೆ ಸಾಂಗೋಪಾಂಗವಾಗಿ ನಡೆದಿತ್ತು.

ಈಗಿನ ಕಾಲವಾಗಿದ್ದರೆ ಮೋಸ ನಡೆದಿದೆ ಎಂದು ಮದುವೆಯೇ ನಿಂತು ಹೋಗುವ ಸಾಧ್ಯತೆಯಿತ್ತು. ಆದರೆ ಅಂದಿನ ಕಾಲದ ನಾವು, ಹಿರಿಯರು ಹಾಕಿದ ಗೆರೆಯನ್ನು ದಾಟುತ್ತಿರಲಿಲ್ಲ. ಪಾಲಿಗೆ ಬಂದದ್ದೇ ಪಂಚಾಮೃತ’ ಎಂದು ಸ್ವೀಕರಿಸಿದ ಕಾರಣ ನಾವು ದಂಪತಿಗಳು ಚೆನ್ನಾಗಿಯೇ ಇದ್ದೇವೆ.

(ಹೆಣ್ಣು ನೋಡಲು ಗಂಡಿನ ಕಡೆಯವರು ಬರುತ್ತಾರೆಂದರೆ, ಮನೆಮಂದಿಗೆಲ್ಲಾ ಖುಷಿ, ಗಡಿಬಿಡಿ, ಆತಂಕ, ನಿರೀಕ್ಷೆಗಳೆಲ್ಲವೂ ಒಟ್ಟೊಟ್ಟಿಗೇ ಆಗುವ ಸಂದರ್ಭ. ಭಾಮೆಯನ್ನು ನೋಡಲು ಬಂದಾಗ ಮನೆಯಲ್ಲಿ ಏನೇನಾಗಿತ್ತು ಅಂತ 250 ಪದಗಳಲ್ಲಿ [email protected]ಗೆ ಬರೆದು ಕಳಿಸಿ.)

-ಪುಷ್ಪ ಎನ್‌.ಕೆ. ರಾವ್‌

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.