ವರ್ಕಿಂಗ್ ಲೇಡಿಯ ಸಮಾಚಾರ

ಅನುಕಂಪ, ಅವಕಾಶವಾದಿತನದ ಆಚೆ ನಿಂತು...

Team Udayavani, May 15, 2019, 6:00 AM IST

3

ಆರಂಭದಲ್ಲಿ, ಕೆಲಸ ಸಿಕ್ಕಿದ್ರೆ ಸಾಕು ಅನ್ನುವ ಕೆಲವು ಹೆಣ್ಣುಮಕ್ಕಳು, ಆನಂತರದಲ್ಲಿ ಒಂದೇ ಸ್ಥಳದಲ್ಲಿ ಕೆಲಸ ಮಾಡಬೇಕು ಎಂಬ ವಾದ ಹೂಡುತ್ತಾರೆ. ಕುಟುಂಬ ನಿರ್ವಹಣೆ, ಅತ್ತೆಯ ಆರೋಗ್ಯ, ಮಕ್ಕಳ ವಿದ್ಯಾಭ್ಯಾಸದ ನೆಪ ಹೇಳಿ ವರ್ಗಾವಣೆಯಿಂದ ಬಚಾವ್‌ ಆಗಲು ಯೋಚಿಸುತ್ತಾರೆ. ಹಾಗಾದ್ರೆ, ಪುರುಷರಿಗೆ ಈ ಸಮಸ್ಯೆ ಕಾಡುವುದೇ ಇಲ್ವಾ?

ಗೆಳತಿ ರಮಾಳ ಪತಿ ಸರಕಾರಿ ಇಲಾಖೆಯೊಂದಲ್ಲಿ ಹಿರಿಯ ಉದ್ಯೋಗಿ. ಅವರ ಕೆಲಸದ ಅವಿಭಾಜ್ಯ ಅಂಗವಾಗಿ ಆಗಾಗ ವರ್ಗಾವಣೆಯಾಗುತ್ತದೆ. ಹಾಗಾಗಿ, ಬೆಂಗಳೂರು, ಮೈಸೂರು, ಮಡಿಕೇರಿ, ಚಿತ್ರದುರ್ಗ, ಭದ್ರಾವತಿ, ಚಿಕ್ಕಮಗಳೂರು… ಹೀಗೆ ಹಲವಾರು ಜಿಲ್ಲೆಗಳಲ್ಲಿ ಮನೆಮಾಡಿ ಪುನಃ ಮೈಸೂರಿಗೆ ಬಂದಿಳಿದಳು ರಮಾ. ಅವಳನ್ನು ನೋಡಿ ನಾನು, “ನಿಮ್ಮ ಜೀವನವೇ ಚೆನ್ನ ಬಿಡಿ, ಕರ್ನಾಟಕವಿಡೀ ಸುತ್ತಿ ಮರಳಿ ಗೂಡಿಗೆ ಬಂದ್ರಾ?’ ಅಂತ ಕೇಳಿದೆ.

“ಅಯ್ಯೋ, ನಮ್ಮ ಸುತ್ತಾಟದ ಸಂಭ್ರಮ ಏನೂ ಅಂತ ಕೇಳ್ತೀರಾ? ಒಂದು ಊರಿಗೆ ಹೋಗಿ ಅಲ್ಲಿಯ ಮನೆಗೆ ಸೆಟ್‌ ಆಗುವಷ್ಟರಲ್ಲಿ, ಇನ್ನೊಂದು ಕಡೆಗೆ ಪೋಸ್ಟಿಂಗ್‌ ಆರ್ಡರ್‌ ಬರುತ್ತೆ. ಇದಕ್ಕೆ ಮುಖ್ಯ ಕಾರಣ, ಯಜಮಾನರ ಬ್ರ್ಯಾಂಚ್‌ನಲ್ಲಿ ಕೆಲಸ ಮಾಡೋ ಲೇಡೀಸ್‌. ಅವರಿಗೆ ಸಂಬಳ ಬೇಕು, ಪ್ರಮೋಶನ್‌ ಬೇಕು, ಆದರೆ ಟ್ರಾನ್ಸ್ ಫ‌ರ್‌ ಆರ್ಡರ್‌ ಬರೋ ಸೂಚನೆ ಸಿಕ್ಕ ಕೂಡಲೇ, ತನ್ನ ಸಂಸಾರ ತಾಪತ್ರಯವನ್ನೆಲ್ಲ ಬಾಸ್‌ ಮುಂದೆ ಹೇಳಿ ಅಳ್ಳೋದು ಅಥವಾ ಯಾರೋ ದೊಡ್ಡ ಮನುಷ್ಯರ ಕೈಲಿ ಹೇಳ್ಸೋದು. ಒಟ್ಟಿನಲ್ಲಿ ಒಂದೇ ಕಡೆ ಇರಬೇಕು. ಅವ್ರ ಸಂಸಾರಕ್ಕೆ ಯಾವುದೇ ರೀತಿ ತೊಂದ್ರೆ ಆಗ್ಬಾರ್ದು ಅಷ್ಟೆ. ಆದರೆ ನಮ್ಮೆಜಮಾನ್ರಿಗೆ ಹೀಗೆಲ್ಲಾ ರಿಯಾಯಿತಿ ಕೇಳ್ಳೋಕಾಗಲ್ಲ ನೋಡಿ. ಬ್ಯಾಗ್‌ ಎತ್ಕೊಂಡು ಹೊರಡೋದೇ ಆಗುತ್ತೆ…

…ಕಷ್ಟ ಆಗೋದು ನಮ್ಗೆ ಕಣ್ರೀ. ಒಂದು ಮನೇಲಿ ಎಡಗಡೆಗೆ ಕಿಚನ್‌ ಇದ್ರೆ, ಇನ್ನೊಂದು ಮನೇಲಿ ಬಲಗಡೆಗೆ ಇರುತ್ತೆ. ನಿದ್ದೆಗಣ್ಣಲ್ಲಿ ಲೈಟ್‌ ಆನ್‌ ಮಾಡಲು ಹೋದರೆ ಒಂದು ಮನೇಲಿ ತಲೆ ಪಕ್ಕ ಸ್ವಿಚ್‌ ಇದ್ರೆ ಇನ್ನೊಂದು ಮನೇಲಿ ಕಾಲಡಿ ಸ್ವಿಚ್‌ ಇರುತ್ತೆ. ಒಂದೂರಿನಿಂದ ಗಂಟುಮೂಟೆ ಕಟ್ಟಿಕೊಂಡು ಇನ್ನೊಂದು ಕಡೆ ಹೋಗುವಾಗ ಎಷ್ಟೊಂದು ವಸ್ತುಗಳನ್ನು ಕೊಂಡೊಯ್ಯಲೂ ಆಗದೆ, ಬಿಸಾಕಲೂ ಆಗದೆ ಪೀಕಲಾಟಕ್ಕೆ ಬರುತ್ತೆ. ಮಕಿಗೂ ಸ್ಕೂಲ್‌ ಬದಲಾವಣೆ ಆಗುತ್ತಿರುತ್ತೆ. ಮಹಿಳೆಯರಿಗೆ ಕೆಲಸದಲ್ಲಿ ಸಮಾನತೆ ಬೇಕು ಅಂತಾದ್ರೆ, ಜವಾಬ್ದಾರಿ, ವರ್ಗಾವಣೆ ನೀತಿಯಲ್ಲೂ ಸಮಾನತೆ ಬೇಡ್ವಾ? ಪುರುಷರಿಗೂ ಸಂಸಾರ ತಾಪತ್ರಯ ಇರಲ್ವಾ, ಅವರ ಹೆಂಡ್ತೀರು ಮಹಿಳೆಯರೇ ಅಲ್ವಾ? ಅವ್ರ ಮಕಿÛಗೂ ಶಾಲೆ ಬದಲಾಯಿಸಲು, ಹೊಸ ಪರಿಸರಕ್ಕೆ ಹೊಂದಿಕೊಳ್ಳಲು ಕಷ್ಟ ಆಗಲ್ವಾ? ಈ ಸಡಗರಕ್ಕೆ ನಾನು ಇದ್ದ ಕೆಲ್ಸ ಬಿಡೋ ಹಾಗಾಯ್ತು. ಇನ್ನು ಮುಂದೆ ನಮ್ಮೆಜಮಾನ್ರಿಗೆ ಟ್ರಾನ್ಸ್ ಫ‌ರ್‌ ಆದರೆ ನಾನಂತೂ ಎಲ್ಲಿಗೂ ಬರಲ್ಲ ಅಂತ ಹೇಳಿದ್ದೀನಿ’… ಅಂತ ಸಿಡಿಮಿಡಿಯಿಂದ ಮಾತಾಡಿದರು ರಮಾ. ಅವರ ಮಾತು ಆಕ್ರೋಶಭರಿತವಾಗಿದ್ದರೂ, ಅದು ಚಿಂತನಾರ್ಹ ವಿಚಾರವೇ ಅನ್ನಿಸಿತು.

ಅವಕಾಶವಾದಿಗಳಾಗಬೇಡಿ…
ಉದ್ಯೋಗಸ್ಥ ಮಹಿಳೆಗೆ ಆಫೀಸ್‌ ಹಾಗೂ ಮನೆ, ಎರಡನ್ನೂ ಸಂಭಾಳಿಸಬೇಕಾದ ಅನಿವಾರ್ಯತೆ ಇದ್ದೇ ಇದೆ. ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ನನಗೆ, ಆಗಾಗ ವೃತ್ತಿ ಸಂಬಂಧಿ ಪ್ರಯಾಣವಿರುತ್ತಿತ್ತು. ಮಗು ನೋಡಿಕೊಳ್ಳಲು ಹಾಗೂ ಮನೆಯ ಕೆಲಸಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಪ್ರಯಾಣ ಮಾಡುತ್ತಿದ್ದೆ. ಪುರುಷರಾಗಿರಲಿ, ಸ್ತ್ರೀಯರಾಗಿರಲಿ, ವೃತ್ತಿಯನ್ನು ಒಪ್ಪಿಕೊಂಡ ಮೇಲೆ, ಅದರ ಕಾರ್ಯಬಾಹುಳ್ಯ, ಅವಶ್ಯಕತೆ ಹಾಗೂ ಜವಾಬ್ದಾರಿಗಳಿಗೆ ಗಮನ ಕೊಡಲೇಬೇಕು. ತೀರಾ ಅಸಾಧ್ಯ ಎನಿಸಿದರೆ, ಸಂಸ್ಥೆಯ ನಿಯಮಗಳಿಗೆ ಅನುಸಾರವಾಗಿ ಬೇರೆ ಅವಕಾಶಗಳನ್ನು ಪಡೆಯುವುದು, ದೀರ್ಘಾವಧಿ ರಜೆ ಪಡೆದು ಪರ್ಯಾಯ ವ್ಯವಸ್ಥೆಗೆ ಅನುವು ಮಾಡುವುದು ಅಥವಾ ಸ್ವಯಂ ನಿವೃತ್ತಿ ಪಡೆಯುವುದು… ಹೀಗೆ ತನಗೂ, ಉದ್ಯೋಗದಾತರಿಗೂ ತೊಂದರೆಯಾಗದ ರೀತಿಯಲ್ಲಿ ಬದಲಾವಣೆಗೆ ಸಿದ್ಧರಾಗುವುದು ಶ್ರೇಯಸ್ಕರ.

ಅದು ಪ್ರಕೃತಿದತ್ತ… ಅನುಕಂಪವೇಕೆ?
ಅವಶ್ಯಕತೆಗೆ ತಕ್ಕಂತೆ ಉದ್ಯೋಗದ ಸ್ಥಳದಲ್ಲಿ ಇರಬೇಕಾದುದು ಮತ್ತು ನಿರೀಕ್ಷಿತ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರ ಮೇಲೆ ಉದ್ಯೋಗಿಗಳ ಕಾರ್ಯಕ್ಷಮತೆಯನ್ನು ಅಳೆಯಲಾಗುತ್ತದೆ. ಪ್ರಕೃತಿದತ್ತವಾಗಿ ಸ್ತ್ರೀಯರಿಗೆ ಬಸಿರು, ಬಾಣಂತನ ಹಾಗೂ ಮಕ್ಕಳ ಲಾಲನೆ- ಪಾಲನೆಯ ಹೆಚ್ಚುವರಿ ಜವಾಬ್ದಾರಿಗಳು ಇರುವುದರಿಂದ ಎಳೆಯ ವಯಸ್ಸಿನ ಮಹಿಳಾ ಉದ್ಯೋಗಿಗಳಿಗೆ ರಜೆಯ ಅವಶ್ಯಕತೆ ಹೆಚ್ಚು. ಕನಿಷ್ಠ, ತಮ್ಮ ಮಕ್ಕಳು ಶಾಲೆಗೆ ಹೋಗುವ ಹಂತ ತಲುಪಿದ ಮೇಲೆ, ಉದ್ಯೋಗದ ಸ್ಥಳದಲ್ಲಿ “ಮಹಿಳೆ’ ಎಂಬ ಅಥವಾ ಕುಟುಂಬ ನಿರ್ವಹಣೆಯ ನೆಪವೊಡ್ಡಿ ಅನುಕಂಪ ಗಿಟ್ಟಿಸುವ ಪ್ರಯತ್ನ ಮಾಡುವುದು ಅಷ್ಟೊಂದು ಸಮಂಜಸವಲ್ಲ.

ಹೇಮಮಾಲಾ ಬಿ., ಮೈಸೂರು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.