ಶ್ರೀದೇವಿ ಕಥಾಮೃತ

ಗರ್ಲ್-ವುಮೆನ್‌-ಸೂಪರ್‌ಸ್ಟಾರ್‌

Team Udayavani, Aug 23, 2019, 5:35 AM IST

24

ಬಾಲಿವುಡ್‌ನ‌ಲ್ಲಿ ನಿಧನದ ಬಳಿಕವೂ ಆಗಾಗ್ಗೆ ಸುದ್ದಿಯಾಗಿ ಸಿನಿಪ್ರಿಯರನ್ನು, ಬಾಲಿವುಡ್‌ ಮಂದಿಯನ್ನು ಕಾಡುತ್ತಿರುವ ನಟಿ ಶ್ರೀದೇವಿ. ಶ್ರೀದೇವಿಯ ವೈಯಕ್ತಿಕ ಬದುಕು, ಸಿನಿಮಾ ಜನಪ್ರಿಯತೆ, ಆಕೆಯ ನಿಗೂಢ ಸಾವಿನ ಬಗ್ಗೆ ಹಲವು ಅಂತೆ-ಕಂತೆಗಳು ಇಂದಿಗೂ ಹರಿದಾಡು ತ್ತಿರುವಂತೆಯೇ ಶ್ರೀದೇವಿಯ ಕುರಿತಾಗಿ ಪುಸ್ತಕವೊಂದು ಹೊರಬರಲು ಸಿದ್ಧವಾಗುತ್ತಿದೆ. ಹೌದು, ಖ್ಯಾತ ಲೇಖಕ ಮತ್ತು ಚಿತ್ರಕಥೆ ಬರಹಗಾರ ಸತ್ಯಾರ್ಥ್ ನಾಯಕ್‌ ಈಗ ಶ್ರೀದೇವಿಯ ಕುರಿತಾದ ಕೃತಿಯೊಂದನ್ನು ಹೊರತರುತ್ತಿದ್ದಾರೆ. ಸದ್ಯ ಈ ಕೃತಿಯ ಕೆಲಸಗಳು ಅಂತಿಮ ಹಂತದಲ್ಲಿದ್ದು, ಇತ್ತೀಚೆಗೆ ಈ ಕೃತಿಯ ಕವರ್‌ಪೇಜ್‌ (ಮುಖಪುಟ) ಬಿಡುಗಡೆಯಾಗಿದೆ.

ಶ್ರೀದೇವಿ ಅವರ 56ನೇ ಜನ್ಮದಿನದ ಸಂದರ್ಭದಲ್ಲಿ ಈ “ಶ್ರೀದೇವಿ’ ಕೃತಿಯ ಮುಖಪುಟವನ್ನು ಬಾಲಿವುಡ್‌ನ‌ ಖ್ಯಾತ ನಟಿ ವಿದ್ಯಾ ಬಾಲನ್‌ ಬಿಡುಗಡೆಗೊಳಿಸಿದ್ದಾರೆ. ಇದೇ ವೇಳೆ ಮಾತನಾಡಿರುವ ವಿದ್ಯಾಬಾಲನ್‌, “ಶ್ರೀದೇವಿ ಐಕಾನಿಕ್‌ ನಟಿ. ಅವರ ಜನ್ಮದಿನದಂದು ಅವರ ಬದುಕಿನ ಕುರಿತಾದ ಕೃತಿಯ ಮುಖಪುಟವನ್ನು ಲಾಂಚ್‌ ಮಾಡುವ ಅವಕಾಶ ನನಗೆ ಸಿಕ್ಕಿದ್ದಕ್ಕೆ ಸಂತೋಷವಾಗಿದೆ. ಐದು ದಶಕಗಳಲ್ಲಿ ಶ್ರೀದೇವಿಯವರ ಅದ್ಭುತ ಸಿನಿ ಜೀವನ, ಕೌಟುಂಬಿಕ ಜೀವನ ಇತ್ಯಾದಿಗಳ ಕುರಿತು ಈ ಕೃತಿಯಲ್ಲಿ ಮಾಹಿತಿ ಇರಲಿದೆ’ ಎಂದಿದ್ದಾರೆ. ಇನ್ನು “ಶ್ರೀದೇವಿ’ ಕೃತಿಗೆ “ಗರ್ಲ್-ವುಮೆನ್‌-ಸೂಪರ್‌ಸ್ಟಾರ್‌’ ಎಂಬ ಅಡಿ ಬರಹವಿದ್ದು, ಶ್ರೀದೇವಿಯ ಬಾಲ್ಯ, ಯೌವನ ಮತ್ತು ಚಿತ್ರ ಜೀವನದ ಮಹತ್ವದ ಘಟನೆಗಳನ್ನು ಈ ಕೃತಿಯಲ್ಲಿ ದಾಖಲಿಸಲಾಗಿದೆ. ಈ ಕೃತಿಯು ಶ್ರೀದೇವಿಯ ಬದುಕು ಮತ್ತು ಅವರ ಸಿನಿ ಪಯಣದ ಕುರಿತು ಬೆಳಕು ಚೆಲ್ಲಲಿದೆ ಎಂದಿದ್ದಾರೆ ಲೇಖಕ ಸತ್ಯಾರ್ಥ್ ನಾಯಕ್‌.

ಪೆಂಗ್ವಿನ್‌ ರ್‍ಯಾಂಡಮ್‌ ಹೌಸ್‌ ಇಂಡಿಯಾ ಪಬ್ಲಿಕೇಶನ್‌ ಈ ಕೃತಿಯನ್ನು ಮುದ್ರಿಸಿ ಹೊರತರುತ್ತಿದೆ. ಇನ್ನು ಶ್ರೀದೇವಿ ಅವರ ಕೃತಿ ಹೊರಬರುತ್ತಿರುವ ಬಗ್ಗೆ ಸೋಶಿಯಲ್‌ ಮೀಡಿಯಾಗಳಲ್ಲಿ ಪ್ರತಿಕ್ರಿಯಿಸುತ್ತಿರುವ ಅಭಿಮಾನಿಗಳು, ಕೃತಿಯನ್ನು ಓದಲು ಉತ್ಸುಕರಾಗಿದ್ದು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಕೋರುತ್ತಿದ್ದಾರೆ.

ಆದರೆ, ಶ್ರೀದೇವಿ ಅವರ ಬಗ್ಗೆ ಬರುತ್ತಿರುವ ಈ ಕೃತಿಯ ಬಗ್ಗೆ ಶ್ರೀದೇವಿ ಪತಿ ಬೋನಿ ಕಪೂರ್‌ ಮಾತ್ರ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿರುವುದು, ಅನೇಕರಿಗೆ ಅಚ್ಚರಿ ಮೂಡಿಸಿದೆ. ಅಂದ ಹಾಗೆ ಈ ಕೃತಿ ಇದೇ ಅಕ್ಟೋಬರ್‌ ಅಂತ್ಯಕ್ಕೆ ಬಿಡುಗಡೆಯಾಗುತ್ತಿದ್ದು, ಕೃತಿಯಲ್ಲಿ ಶ್ರೀದೇವಿ ಕುರಿತಾದ ಯಾವೆಲ್ಲ ಸಂಗತಿಗಳು ಅಡಗಿವೆ ಎಂಬ ಪ್ರಶ್ನೆಗೆ ಕೃತಿ ಹೊರಬಂದ ಮೇಲಷ್ಟೇ ಉತ್ತರ ಸಿಗಲಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.