ಎಲೆಗಳಿಂದ ಸೌಂದರ್ಯ


Team Udayavani, Jan 19, 2018, 6:00 AM IST

Beauty-with-leaves.jpg

ಸಾಮಾನ್ಯವಾಗಿ ನಾವು ಆರೋಗ್ಯ ಮತ್ತು  ಸೌಂದರ್ಯವನ್ನು ರಕ್ಷಿಸಿಕೊಳ್ಳಲು, ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕಯುಕ್ತವಾದ ಕ್ರೀಮ್‌ಗಳಿಗೆ ಮೊರೆಹೋಗುತ್ತೇವೆ. ಆದರೆ ನಮ್ಮ ಮನೆಯಲ್ಲಿಯೇ ದೊರೆಯುವ, ನಿಸರ್ಗದತ್ತವಾದ ಎಲೆಗಳನ್ನು ಬಳಸಿ, ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡಿಕೊಳ್ಳಬಹುದು. 

ಅವುಗಳಲ್ಲಿ ತುಳಸಿಎಲೆ, ಬೇವು, ಪುದೀನಾ, ವೀಳ್ಯದೆಲೆ, ಬಿಲ್ವಪತ್ರೆ, ಗೋರಂಟಿ, ಮೆಂತ್ಯದ ಎಲೆಗಳು ಆರೋಗ್ಯವನ್ನು ಮತ್ತು ಸೌಂದರ್ಯದ ರಕ್ಷಣೆಯನ್ನು ಮಾಡುತ್ತವೆ. 

ತುಳಸಿ ಎಲೆ: ಮುಖದ ಮೇಲೆ ಮೊಡವೆಗಳ ಕಾಟದಿಂದ ಒದ್ದಾಡುವವರು ತುಳಸಿ ಎಲೆಗಳನ್ನು ಜಜ್ಜಿ, ರಸಹಿಂಡಿ, ಪ್ರತಿದಿನ ಮುಖಕ್ಕೆ ಸವರಿಕೊಳ್ಳುತ್ತಿದ್ದರೆ ಎರಡು ತಿಂಗಳೊಳಗಾಗಿಯೇ ಮೊಡವೆಗಳ ಕಾಟ ನಿವಾರಣೆಯಾಗುತ್ತದೆ. 

ಬೇವು, ತುಳಸಿ, ಪುದೀನಾ ಎಲೆಗಳು: ಈ ಎಲೆಗಳನ್ನು ಒಣಗಿಸಿ ಪುಡಿ ಮಾಡಿಟ್ಟುಕೊಳ್ಳಬೇಕು, ಈ ಪುಡಿಗಳ ಮಿಶ್ರಣಕ್ಕೆ ಜೇನು, ನಿಂಬೆರಸ ಬೆರೆಸಿ ಮುಖಕ್ಕೆ ಹಚ್ಚಿಕೊಳ್ಳುತ್ತಿದರೆ, ಜಿಡ್ಡು ನಿವಾರಣೆಯಾಗಿ ಮುಖ ಕಾಂತಿಯುತವಾಗುತ್ತದೆ. 

ವೀಳ್ಯದೆಲೆ : ತುಟಿಗಳು ಸದಾ ಕೆಂಪಗಿದ್ದು ಹೊಳೆಯುತ್ತಿರಬೇಕೆಂದರೆ, ವೀಳ್ಯದೆಲೆಗಳು ಉಪಯುಕ್ತ. ಇವು ತುಟಿಗಳನ್ನು ಒಡೆಯಗೊಡುವುದಿಲ್ಲ. ಜೊತೆಗೆ ತುಟಿಗಳ ಕಪ್ಪನ್ನು ನಿವಾರಿಸುತ್ತದೆ. 

ಬೇವಿನೆಲೆಗಳು: ದಿನಾಲೂ ಎಳೇ ಬೇವಿನೆಲೆಗಳನ್ನು ಮೆಲ್ಲುವುದರಿಂದ ದಂತಗಳು ಆರೋಗ್ಯವಾಗಿ, ದೃಢವಾಗಿರುವುದರೊಂದಿಗೆ, ಬೆಳ್ಳಗೆ ಹೊಳೆಯತೊಡಗುತ್ತವೆ. ಹುಳುಕು ಹಲ್ಲುಗಳು ನಿವಾರಣೆಯಾಗುತ್ತವೆ. ಬೇವಿನೆಲೆಗಳ ಕಷಾಯ ಮುಖದ ಮೇಲಿನ ಮೊಡವೆಗಳನ್ನು ತಡೆಗಟ್ಟುತ್ತದೆ. ಮುಖದ ಮೇಲಿನ ಕಪ್ಪು$ಮಚ್ಚೆಗಳು, ಗುಳ್ಳೆಗಳಂಥವು ನಿವಾರಣೆಯಾಗಬೇಕೆಂದರೆ, ಬೇವಿನೆಲೆಗಳನ್ನು ಒಣಗಿಸಿ ಪುಡಿಮಾಡಿ ರೋಜ್‌ವಾಟರ್‌, ನಿಂಬೆರಸ ಬೆರೆಸಿ ಬಳಸಬೇಕು.
 
ಬಿಲ್ವಪತ್ರೆ: ಈ ಎಲೆಗಳನ್ನು ಮೆತ್ತಗೆ ರುಬ್ಬಿ ರಸ ಹಿಂಡಬೇಕು. ಸ್ನಾನ ಮಾಡುವಾಗ ರಸವನ್ನು ಮೈಗೆ ಹಚ್ಚಿಕೊಳ್ಳುವುದರಿಂದ, ಚರ್ಮದ ದುರ್ಗಂಧ ನಿವಾರಣೆಯಾಗುವುದಲ್ಲದೆ, ಚರ್ಮದ ಕಾಂತಿ ಹೆಚ್ಚುತ್ತದೆ. 

ಗೋರಂಟಿ ಎಲೆಗಳು: ಕೈಗಳಿಗೆ ಗೋರಂಟಿ ಎಲೆಗಳನ್ನು ಹಚ್ಚಿಕೊಳ್ಳುವುದರಿಂದ, ಅಂಗೈಗಳು ಅಂದವಾಗಿ ಮೃದುವಾಗುತ್ತವೆ. ಕೈ ಉಗುರುಗಳು ಬಿರುಕು ಬಿಡುವುದಿಲ್ಲ . ಅವುಗಳ ಬಿರುಸು ಕಡಿಮೆಯಾಗುತ್ತದೆ. 

ಮೆಂತ್ಯದ ಎಲೆಗಳು: ಇವುಗಳನ್ನು ಚೆನ್ನಾಗಿ ರುಬ್ಬಿ , ಸ್ವಲ್ಪ$ ನೀರಿನೊಂದಿಗೆ ಬೆರೆಸಿ, ಆ ಮಿಶ್ರಣದಿಂದ ಕೂದಲುಗಳಿಗೆ ಚೆನ್ನಾಗಿ ಮಸಾಜ್‌ ಮಾಡುವುದರಿಂದ ಕೂದಲುಗಳ ಬಿರುಸುತನ ಕಡಿಮೆಯಾಗುವುದರೊಂದಿಗೆ, ಮೃದುವಾಗಿ ಆಕರ್ಷಣೀಯವಾಗುತ್ತದೆ.

– ಸುಮಾ ಹನುಮಂತ ಭಟ್‌

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.