ಪೂಜಾ ಸಮಯ


Team Udayavani, Dec 13, 2019, 5:04 AM IST

sa-11

ದಕ್ಷಿಣದಿಂದ ಉತ್ತರಕ್ಕೆ ಹೋಗಿ ಬಾಲಿವುಡ್‌ ಅಂಗಳದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಮಿಂಚುತ್ತಿರುವ ನಟಿಯರ ಸಂಖ್ಯೆ ಸಾಕಷ್ಟು ದೊಡ್ಡದಿದೆ. ಇನ್ನು, ಇತ್ತೀಚೆಗೆ ಈ ಸಾಲಿನಲ್ಲಿ ಕನ್ನಡದ ನಟಿಯರು ಕೂಡ ಹೆಚ್ಚಾಗಿ ಗುರುತಿಸಿಕೊಳ್ಳುತ್ತಿದ್ದಾರೆ ಎಂಬುದೇ ಖುಷಿಯ ಸಂಗತಿ. ಈ ಸಾಲಿಗೆ ಈಗ ಮತ್ತೂಬ್ಬಳು ಕನ್ನಡದ ಚೆಲುವೆ ಪೂಜಾ ಹೆಗ್ಡೆ ಹೆಸರು ಕೂಡ ಸೇರ್ಪಡೆಯಾಗುತ್ತಿದೆ.

ಹೌದು, ಸದ್ಯ ಕನ್ನಡಕ್ಕಿಂತ ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಬ್ಯುಸಿಯಾಗಿರುವ ಪೂಜಾ ಹೆಗ್ಡೆ, ಈಗ ಬಾಲಿವುಡ್‌ನ‌ಲ್ಲೂ ಬೇಡಿಕೆಯ ನಾಯಕ ನಟಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ ಎಂಬುದು ಈ ಹೊತ್ತಿನ ಸುದ್ದಿ. ಬಾಲಿವುಡ್‌ನ‌ಲ್ಲಿ ಈಗಾಗಲೇ ಹೃತಿಕ್‌ ರೋಷನ್‌, ಅಕ್ಷಯ್‌ ಕುಮಾರ್‌ ಮೊದಲಾದ ಸ್ಟಾರ್‌ ನಟರ ಜೊತೆ ಗುರುತಿಸಿಕೊಂಡು ಸೈ ಎನಿಸಿಕೊಂಡಿರುವ ಪೂಜಾ ಹೆಗ್ಡೆ, ಇತ್ತೀಚೆಗಷ್ಟೆ ಹೌಸ್‌ಫ‌ುಲ್‌-4 ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಅದಾದ ನಂತರ ತೆಲುಗು ಚಿತ್ರರಂಗದಲ್ಲಿ ಬ್ಯುಸಿಯಾದ ಪೂಜಾ ಹೆಗ್ಡೆ, ಈಗ ಸಲ್ಮಾನ್‌ ಖಾನ್‌ ಅಭಿನಯದ ಮುಂದಿನ ಚಿತ್ರ ಕಿಕ್‌-2 ಗೂ ನಾಯಕಿಯಾಗಿದ್ದಾರೆ ಎಂಬ ಸುದ್ದಿ ಬಾಲಿವುಡ್‌ ಅಂಗಳದಲ್ಲಿ ಜೋರಾಗಿ ಹರಿದಾಡುತ್ತಿದೆ.

ಇನ್ನು ಕಿಕ್‌-2 ಚಿತ್ರದಲ್ಲಿ ಪೂಜಾ ಹೆಗ್ಡೆ ಜೊತೆಗೆ ಜಾಕ್ವಲೀನ್‌ ಫೆರ್ನಾಂಡೀಸ್‌ ಹಾಗೂ ಕೃತಿ ಸನೂನ್‌ ಹೆಸರುಗಳು ಕೂಡ ಕೇಳಿ ಬಂದಿದ್ದವು. ಆದರೆ, ಈ ಇಬ್ಬರು ನಟಿಯರಿಗೆ ಪೈಪೋಟಿ ನೀಡಿ ಕೊನೆಗೂ ಪೂಜಾ ಚಿತ್ರಕ್ಕೆ ಆಯ್ಕೆ ಆಗಿದ್ದಾರೆ ಎನ್ನಲಾಗಿದೆ. ಸಲ್ಮಾನ್‌ಖಾನ್‌ ಅಭಿನಯದ ದಬಾಂಗ್‌-3 ಚಿತ್ರ ಸದ್ಯ ಬಿಡುಗಡೆಗೆ ತಯಾರಾಗಿದ್ದು, ಕನ್ನಡದಲ್ಲೂ ತೆರೆಗೆ ಬರುತ್ತಿರುವ ಈ ಚಿತ್ರದಲ್ಲಿ ನಟ ಸುದೀಪ್‌ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಬಾಂಗ್‌ -3 ನಂತರ ಸಲ್ಮಾನ್‌ ಖಾನ್‌ ರಾಧೆ ಚಿತ್ರದಲ್ಲಿ ನಟಿಸುತ್ತಿದ್ದು, ಅದಾದ ಬಳಿಕ ಕಿಕ್‌-2 ತೆರೆಗೆ ಬರುತ್ತಿದೆ. ಒಟ್ಟಾರೆ ಚಿತ್ರರಂಗಕ್ಕೆ ಕಾಲಿಟ್ಟ ಮೂರ್‍ನಾಲ್ಕು ವರ್ಷಗಳಲ್ಲೇ ದಕ್ಷಿಣಭಾರತದಿಂದ ಉತ್ತರಭಾರತದ ಚಿತ್ರರಂಗದವರೆಗೂ ಗುರುತಿಸಿಕೊಳ್ಳುತ್ತಿರುವ ಪೂಜಾ ಹೆಗ್ಡೆ, ಕಿಕ್‌-2 ನಲ್ಲಿ ತೆರೆಯ ಮೇಲೆ ಹೇಗೆ ಕಾಣುತ್ತಾರೆ ಅನ್ನೋ ಕುತೂಹಲ ಪ್ರೇಕ್ಷಕರಲ್ಲಿದೆ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.