ಪ್ರೇಮ ಪಲ್ಲಕಿಯಿಂದ ಮದುವೆ ಮಂಟಪಕ್ಕೆ


Team Udayavani, Feb 14, 2020, 5:02 AM IST

8aliabhatthu-a

ಈ ವರ್ಷದ ಆರಂಭದಿಂದಲೂ ಅನೇಕ ಬಾಲಿವುಡ್‌ ಸಿನಿಪ್ರಿಯರ ಚಿತ್ತ ನೆಟ್ಟಿರುವುದು ನಟಿ ಆಲಿಯಾ ಭಟ್‌ ಮೇಲೆ. ಇದಕ್ಕೆ ಕಾರಣ ಆಲಿಯಾ ಭಟ್‌ ಇದೇ ವರ್ಷ ನಟ ರಣ್‌ಬೀರ್‌ ಕಪೂರ್‌ ಅವರನ್ನು ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ. ಹೌದು, 2017ರಿಂದ ರಣ್‌ಬೀರ್‌ ಕಪೂರ್‌ ಮತ್ತು ಆಲಿಯಾ ಭಟ್‌ ಯಾವುದೇ ಪಾರ್ಟಿ, ಫ‌ಂಕ್ಷನ್‌ಗಳಿಗೆ ಹೋದರೂ- ಒಟ್ಟಿಗೆ ಹಾಜರ್‌ ಆಗುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಬಾಲಿವುಡ್‌ನ‌ಲ್ಲಿ ನಟಿ ಆಲಿಯಾ ಭಟ್‌ ಮತ್ತು ರಣ್‌ಬೀರ್‌ ಕಪೂರ್‌ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಆಗಾಗ್ಗೆ ಹರಿದಾಡುತ್ತಿದ್ದು, ಈ ವರ್ಷ ಈ ಜೋಡಿ ಸಪ್ತಪದಿ ತುಳಿಯೋದು ಗ್ಯಾರೆಂಟಿ ಎನ್ನಲಾಗುತ್ತಿದೆ.

ರಣ್‌ಬೀರ್‌ ಕಪೂರ್‌ ತಂದೆ ರಿಷಿ ಕಪೂರ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದು , ಕಳೆದ ವರ್ಷವಷ್ಟೆ ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಭಾರತಕ್ಕೆ ವಾಪಸ್‌ ಆಗಿದ್ದರು. ಆದರೆ, ಸೋಂಕಿನಿಂದ ರಿಷಿ ಕಪೂರ್‌ ಮತ್ತೆ ಅನಾರೋಗ್ಯಕ್ಕೆ ತುತ್ತಾಗಿ ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯವಿರುವುದರಿಂದ, ಆದಷ್ಟು ಬೇಗ ರಿಷಿ ಕಪೂರ್‌ ಮಗನ ಮದುವೆಯನ್ನು ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಬಾಲಿವುಡ್‌ನ‌ಲ್ಲಿ ಕೇಳಿಬಂದಿದೆ.

ಬಾಲಿವುಡ್‌ ಮೂಲಗಳ ಪ್ರಕಾರ, ಸದ್ಯ ಬಾಲಿವುಡ್‌ನ‌ಲ್ಲಿ ಪ್ರೇಮ ಪಕ್ಷಿಗಳು ಅಂತಾನೇ ಕರೆಸಿಕೊಳ್ಳುತ್ತಿರುವ ಆಲಿಯಾ ಭಟ್‌ ಮತ್ತು ರಣಬೀರ್‌ ಕಪೂರ್‌ ಇದೇ ವರ್ಷ ವೈವಾಹಿಕ ಬದುಕಿಗೆ ಅಡಿಯಿಡಲು ನಿರ್ಧರಿಸಿದ್ದಾರೆ. ಈಗಾಗಲೇ ಎರಡೂ ಕುಟುಂಬದವರು ಕೂತು ಮದುವೆ ದಿನಾಂಕವನ್ನು ನಿಗದಿ ಮಾಡಿದ್ದಾರೆ ಎನ್ನಲಾಗಿದೆ. ಇದೇ ವರ್ಷದ ಕೊನೆಗೆ ಅಂದರೆ, ಡಿಸೆಂಬರ್‌ 18ರಂದು ಆಲಿಯಾ ಭಟ್‌ ಮತ್ತು ರಣಬೀರ್‌ ಕಪೂರ್‌ ಮದುವೆ ಮುಂಬೈನಲ್ಲಿ ನಡೆಯಲಿದೆ. ವಿವಾಹ ಶಾಸ್ತ್ರಗಳು ಮನೆಯಲ್ಲಿ ನೆರವೇರಲಿದ್ದು, ಆರತಕ್ಷತೆ ಸಮಾರಂಭ ಐಷಾರಾಮಿ ಹೊಟೇಲ್‌ನಲ್ಲಿ ಜರುಗಲಿದೆ ಎಂಬ ಸುದ್ದಿ ಬಾಲಿವುಡ್‌ ತುಂಬೆಲ್ಲ ಗಿರಕಿ ಹೊಡೆಯುತ್ತಿದೆ.

ಆಲಿಯಾ ಭಟ್‌ ಮತ್ತು ರಣಬೀರ್‌ ಕಪೂರ್‌ ಅಭಿನಯದ ಬ್ರಹ್ಮಾಸ್ತ್ರ ಚಿತ್ರ ಈ ವರ್ಷ ಡಿಸೆಂಬರ್‌ 4ರಂದು ಬಿಡುಗಡೆ ಆಗಲಿದೆ. ಈ ಚಿತ್ರ ರಿಲೀಸ್‌ ಆದ ನಂತರ ಅಂದ್ರೆ, ಡಿಸೆಂಬರ್‌ 18 ರಂದು ಇಬ್ಬರೂ ವಿವಾಹ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಸದ್ಯ ಬಾಲಿವುಡ್‌ನ‌ಲ್ಲಿ ಹರಿದಾಡುತ್ತಿರುವ ಸುದ್ದಿ ನಿಜವೇ ಆಗಿದ್ದರೆ, ಇದೇ ವರ್ಷಾಂತ್ಯಕ್ಕೆ ಆಲಿಯಾ ಭಟ್‌ ಮತ್ತು ರಣ್‌ಬೀರ್‌ ಕಪೂರ್‌ ವಿವಾಹ ಮಹೋತ್ಸವ ನಡೆಯಲಿದೆ. ಆದರೆ, ಮದುವೆಯ ಬಗ್ಗೆ ಇಷ್ಟೆಲ್ಲ ಸುದ್ದಿಗಳು ಬಾಲಿವುಡ್‌ನ‌ಲ್ಲಿ ಸದ್ದು ಮಾಡುತ್ತಿದ್ದರೂ, ಈ ಬಗ್ಗೆ ಸ್ವತಃ ಆಲಿಯಾ ಭಟ್‌ ಆಗಲಿ ರಣಬೀರ್‌ ಕಪೂರ್‌ ಆಗಲಿ ಅವರ ಕುಟುಂಬದವರಾಗಲಿ ಇನ್ನೂ ಏನನ್ನೂ ಖಚಿತಪಡಿಸಿಲ್ಲ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.