ವಿಶ್ವಸಂಸ್ಥೆಯಲ್ಲಿ ದಿಯಾ ಝಲಕ್‌!


Team Udayavani, May 17, 2019, 6:02 AM IST

Bollywood-actress-Dia-Mirza

ಬಾಲಿವುಡ್‌ ನಾಯಕ ನಟರು, ನಾಯಕಿಯರು ಬೇರೆ ಬೇರೆ ಖಾಸಗಿ ಕಂಪೆನಿಗಳಿಗೆ, ಸಂಘ ಸಂಸ್ಥೆಗಳಿಗೆ, ವಾಣಿಜ್ಯ ಉದ್ದೇಶದ ಚಟುವಟಿಕೆಗಳಿಗೆ ಪ್ರಚಾರ ರಾಯಭಾರಿಗಳಾಗುವುದು ಹೊಸದೇನಲ್ಲ. ಆದರೆ, ಸದುದ್ದೇಶದ ಕಾರ್ಯಗಳಿಗೆ ತಮ್ಮ ಸಮಯ ನೀಡುವುದು, ಅದರಿಂದ ಯಾವುದೇ ಫ‌ಲಾಪೇಕ್ಷೆ ಇಲ್ಲದೆ ಪ್ರಚಾರ ರಾಯಭಾರಿ ಆಗುವುದು, ಆ ಕಾರ್ಯಗಳನ್ನು ಪ್ರಚಾರಪಡಿಸುವುದಕ್ಕೆ ಅನೇಕ ಸ್ಟಾರ್ ಹಿಂದೇಟು ಹಾಕುತ್ತಾರೆ.

ಈಗ ಯಾಕೆ ಸ್ಟಾರ್‌ಗಳ ರಾಯಭಾರದ ಬಗ್ಗೆ ಮಾತು ಅಂತೀರಾ? ಅದಕ್ಕೂ ಒಂದು ಕಾರಣವಿದೆ. ಅಂದ ಹಾಗೆ, ಆ ಕಾರಣ ಬಾಲಿವುಡ್‌ ನಟಿ ದಿಯಾ ಮಿರ್ಜಾ. ವಿಷಯ ಏನಪ್ಪ ಅಂದ್ರೆ, ವಿಶ್ವಸಂಸ್ಥೆಯ ಬಹು ಮಹತ್ವಾಕಾಂಕ್ಷೆಯ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ ಅಭಿಯಾನಕ್ಕೆ ಬಾಲಿವುಡ್‌ ನಟಿ ದಿಯಾ ಮಿರ್ಜಾ ಪ್ರಚಾರ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.

ಜಾಗತಿಕ ಹವಾಮಾನ ಬದಲಾವಣೆ ನಿಯಂತ್ರಣ ಕುರಿತು ಪ್ಯಾರಿಸ್‌ ಒಪ್ಪಂದದಲ್ಲಿ ಉಲ್ಲೇಖವಾಗಿರುವ ಸುಸ್ಥಿರ ಅಭಿವೃದ್ಧಿಗೆ (ಎಸ್‌ಡಿಜಿ) ನಿಗದಿಪಡಿಸಿರುವ ಗುರಿಗಳ ಸಾಧನೆಗೆ ರಾಷ್ಟ್ರಗಳನ್ನು ಪ್ರೇರೇಪಿಸುವುದು ಅಭಿಯಾನದ ಉದ್ದೇಶವಾಗಿದೆ. ಯುರೋಪಿಯನ್‌, ಏಷ್ಯಾನ್‌ ಖಂಡಗಳ ಪ್ರಮುಖ ಜನಪ್ರಿಯ ತಾರೆಯರನ್ನು ಈ ಅಭಿಯಾನದಲ್ಲಿ ರಾಯಭಾರಿಯನ್ನಾಗಿ ನೇಮಿಸಲಾಗುತ್ತಿದ್ದು, ಇನ್ನುಳಿದಂತೆ ಇ ಕಾಮರ್ಸ್‌ ಕ್ಷೇತ್ರದ ಅಲಿಬಾಬಾ ಸಂಸ್ಥೆಯ ಮುಖ್ಯಸ್ಥ ಜಾಕ್‌ ಮಾ ಪೆಂಗ್‌ ಲೀ, ಬ್ರಿಟಿಷ್‌ ನಟ ರಿಚರ್ಡ್‌ ಕರ್ಟಿಸ್‌ ಸೇರಿದಂತೆ 17 ಖ್ಯಾತನಾಮರನ್ನು ವಿಶ್ವಸಂಸ್ಥೆಯ ಈ ಅಭಿಯಾನಕ್ಕೆ ರಾಯಭಾರಿಗಳನ್ನಾಗಿ ನೇಮಿಸಲಾಗಿದೆ. ಇಂಥಾದ್ದೊಂದು ಅಪರೂಪದ ಅವಕಾಶ ಈ ಬಾರಿ ದಿಯಾ ಮಿರ್ಜಾ ಅವರನ್ನು ಹುಡುಕಿಕೊಂಡು ಬಂದಿದೆ.

ಇನ್ನು ಈ ಬಗ್ಗೆ ವಿಶ್ವಸಂಸ್ಥೆ ಮಹಾ ಕಾರ್ಯದರ್ಶಿ ಆಂಟೋನಿಯೋ ಗುಟರೆಸ್‌ ದಿಯಾ ಮಿರ್ಜಾ ಅವರ ಅಧಿಕೃತ ರಾಯಭಾರಿ ನೇಮಕ ಆದೇಶಕ್ಕೆ ಸಹಿ ಹಾಕಿದ್ದಾರೆ ಎಂದು ವಿಶ್ವಸಂಸ್ಥೆಯ ವಕ್ತಾರ ಕಚೇರಿ ಪ್ರಕಟಣೆ ಹೊರಡಿಸಿದೆ.

ಈ ಬಗ್ಗೆ ಮಾತನಾಡಿರುವ ನಟಿ ದಿಯಾ ಮಿರ್ಜಾ ವಿಶ್ವಸಂಸ್ಥೆಯು ನನಗೆ ನೀಡಿರುವ ಅಭೂತಪೂರ್ವ ಗೌರವಕ್ಕೆ ನಾನು ಆಭಾರಿಯಾಗಿದ್ದೇನೆ. ವಿಶ್ವಸಂಸ್ಥೆಯ ಬಹು ಮಹತ್ವಾಕಾಂಕ್ಷೆಯ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಯ ಈ ಅಭಿಯಾನಕ್ಕೆ (ಎಸ್‌ಡಿಜಿ) ನಾನು ಸೂಕ್ತ ನ್ಯಾಯ ಒದಗಿಸಲಿದ್ದೇನೆ ಎಂದು ಟ್ವೀಟ್‌ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.