ಮಕ್ಕಳಾಟಿಕೆ
Team Udayavani, Jan 4, 2019, 12:30 AM IST
ಅಳುವ ಕಂದನ ಕೈಗೆ ಆಟಿಕೆ ಕೊಟ್ಟು ಸುಮ್ಮನಾಗಿಸುವ ಕಾಲ ಈಗಿಲ್ಲ. ಮಗು ಅತ್ತರೆ, ಊಟ ಮಾಡದಿದ್ದರೆ, ಹಠ ಮಾಡುತ್ತಿದ್ದರೆ, ಮಲಗಲು ಕೇಳದಿದ್ದರೆ, ಎಲ್ಲದಕ್ಕೂ ಒಂದೇ ಪರಿಹಾರ. ಕೈಗೆ ಮೊಬೈಲ್ ಕೊಟ್ಟು , ಯಾವುದೋ ವಿಡಿಯೋ ಹಾಕಿ ಮಗುವನ್ನು ಸುಮ್ಮನಾಗಿಸುವುದು. ಹೀಗೆ ಅಮ್ಮನ ಪ್ರೋತ್ಸಾಹದಿಂದಲೇ ಮೊಬೈಲ್ ಸಾಂಗತ್ಯಕ್ಕೆ ಬೀಳುವ ಮಗುವಿಗೆ, ಮುಂದೆ ಬೇರೆಲ್ಲ ಆಟಿಕೆಗಳಿಗಿಂತ ಮೊಬೈಲೇ ಹೆಚ್ಚು ಆಕರ್ಷಕ ಎನಿಸುತ್ತದೆ. ಮುಂದೆ, ಬೇರೆಲ್ಲ ಆಟಿಕೆಗಳನ್ನು ಬದಿಗೊತ್ತಿ, ಮೊಬೈಲ್ ಗೀಳನ್ನು ಹತ್ತಿಸಿಕೊಳ್ಳುತ್ತದೆ ಮಗು. ಹೀಗಾಗಬಾರದು ಅಂತಾದರೆ, ಮಗುವಿಗೆ ಆಟಿಕೆಯೊಡನೆ ಸಮಯ ಕಳೆಯುವುದನ್ನು ಕಲಿಸಬೇಕು. ವಿಡಿಯೋ ಗೇಮ್ಗಳಿಂದ ಹೊರತಾದ ಪ್ರಪಂಚವನ್ನು ಮಕ್ಕಳ ಎದುರು ತೆರೆದಿಡಬೇಕು. ಯಾಕೆಂದರೆ, ಮಕ್ಕಳ ಭಾವನಾತ್ಮಕ, ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಆಟಿಕೆಗಳು ಸಹಕಾರಿ ಎನ್ನುತ್ತಾರೆ ತಜ್ಞರು. ಮಗುವಿಗೆ ಕೊಡಿಸುವ ಆಟಿಕೆಗಳು ಹೇಗಿರಬೇಕು ಎಂದರೆ…
.ಪುಟ್ಟ ಇಟ್ಟಿಗೆಗಳಂಥ (ಬಿಲ್ಡಿಂಗ್ ಬ್ಲಾಕ್ಸ್) ವಸ್ತುಗಳಿಂದ ಕಟ್ಟಡ ನಿರ್ಮಿಸುವ ಆಟ ಗೊತ್ತೇ ಇದೆ. ಈ ಆಟ, ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಸೃಜನಶೀಲತೆ, ಚುರುಕುತನ, ಗಣಿತದ ಸಾಮರ್ಥ್ಯವನ್ನು ಬೆಳೆಸುವ ಈ ಆಟಿಕೆಗಳನ್ನು ಮಕ್ಕಳಿಗೆ ಕೊಡಿಸಿ, ಆಟವಾಡುವುದನ್ನು ಪ್ರೋತ್ಸಾಹಿಸಿ.
.ಭಾಷಾ ಜ್ಞಾನವನ್ನು ಹೆಚ್ಚಿಸುವ, ಕಲಿಕೆಗೆ ಸಹಾಯವಾಗುವಂಥ ಆಟಿಕೆಗಳನ್ನು ಕೊಡಿಸಿ. ಅಕ್ಷರಗಳನ್ನು ಜೋಡಿಸಿ ಪದ ರಚಿಸುವುದು, ವಸ್ತುಗಳನ್ನು, ಬಣ್ಣಗಳನ್ನು ಗುರುತಿಸುವುದು ಮುಂತಾದವು.
.ಶಾಲೆಗೆ ಹೋಗುವ ಮಕ್ಕಳಿಗೆ ಪದಬಂಧ, ಸುಡುಕೊ ಮುಂತಾದ ಜ್ಞಾನವರ್ಧಕ ಆಟಗಳನ್ನು ಆಡಿಸಬಹುದು. ಹೆತ್ತವರು ಜೊತೆಗಿದ್ದು, ಸಲಹೆ-ಸೂಚನೆಗಳನ್ನು ನೀಡುತ್ತಿದ್ದರೆ ಮಕ್ಕಳಲ್ಲೂ ಆಸಕ್ತಿ ಹೆಚ್ಚುತ್ತದೆ.
.ಕಲ್ಪನಾ ಶಕ್ತಿಯನ್ನು ಹೆಚ್ಚಿಸುವಂಥ ಆಟಿಕೆಗಳು ಮಕ್ಕಳ ಬೆಳವಣಿಗೆಗೆ ಸಹಕಾರಿ. ಚೌಕಾಕಾರದ ಖಾಲಿ ಪೆಟ್ಟಿಗೆಗಳು, ಅಡುಗೆ ಸೆಟ್, ಡಾಕ್ಟರ್ ಕಿಟ್… ಹೀಗೆ ಭವಿಷ್ಯದ ಕಲ್ಪನೆಗಳನ್ನು , ಕನಸುಗಳನ್ನು ಮೂಡಿಸುವ ಹಲವಾರು ಆಟಿಕೆಗಳಿವೆ.
.ನಾವೆಲ್ಲ ಸಣ್ಣವರಿದ್ದಾಗ ಆಡುತ್ತಿದ್ದ ಬುಗುರಿ, ಚನ್ನೆಮಣೆ, ಚದುರಂಗ, ಪಗಡೆ, ಹಾವು-ಏಣಿಯಂಥ ಆಟಗಳನ್ನು ಮಕ್ಕಳಿಗೆ ಕಲಿಸಬಹುದು. ಈ ಆಟಗಳು ಮೊಬೈಲ್ ಗೇಮ್ಗಳ ಸ್ವರೂಪ ಪಡೆದಿದ್ದರೂ, ಎಲ್ಲರೂ ಒಟ್ಟಾಗಿ ಕುಳಿತು ಆಡುವುದರಿಂದ ಮಕ್ಕಳ ಸಂವಹನ ಶಕ್ತಿ ಹೆಚ್ಚುತ್ತದೆ.
.ಜಿಗಿಯುವ ಗೊಂಬೆಗಳು, ಚೆಂಡು ಮುಂತಾದ ಆಟಿಕೆಗಳು ಮಕ್ಕಳನ್ನು ದೈಹಿಕವಾಗಿ ಫಿಟ್ ಆಗಿಸುತ್ತವೆ. ಮನೆಯ ಹೊರಗೆ, ಸಮವಯಸ್ಕರ ಜೊತೆ ಇಂಥ ಆಟಗಳನ್ನು ಆಡಿದಾಗ ಅವರಲ್ಲಿ ಕ್ರೀಡಾ ಮನೋಭಾವವೂ ಮೂಡುತ್ತದೆ.
.ಆ್ಯಕ್ಷನ್ ಗೇಮ್ಗಳು (ಸೈನಿಕರು, ಸಣ್ಣಪುಟ್ಟ ಆಯುಧಗಳ ಆಟಿಕೆ ಸೆಟ್ಗಳು) ಮಕ್ಕಳಲ್ಲಿ ಹಿಂಸಾತ್ಮಕ ಭಾವನೆ ಬೆಳೆಸುತ್ತವೆ ಎಂಬ ಆತಂಕ ಕೆಲವರದ್ದು. ಆದರೆ, ಅಂಥ ಆಟಿಕೆಗಳು ಕಲ್ಪನಾಶಕ್ತಿ ಮತ್ತು ಸಾಹಸ ಮನೋಭಾವವನ್ನು ಹೆಚ್ಚಿಸುತ್ತವೆ ಎಂಬುದೂ ಸುಳ್ಳಲ್ಲ.
ಪುಷ್ಪಲತಾ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಕೃಷಿ ಸಚಿವರಿಂದ ಬಿಡುಗಡೆಕಾರ್ಲಕಜೆ ಅಕ್ಕಿ
ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು
2ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ, 447 ಫಲಾನುಭವಿಗಳಲ್ಲಿ ಅಡ್ಡಪರಿಣಾಮ ಪತ್ತೆ: ಕೇಂದ್ರ
ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ